ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಕನಕಪುರ ರಸ್ತೆಯ ರೆಸಾರ್ಟ್ ಬಂಧನದಲ್ಲಿ ಬಿಗ್ ಬಾಸ್ ಓಟಿಟಿ ಫೈನಲಿಸ್ಟ್
ಬೆಂಗಳೂರು ಕನಪುರ ರಸ್ತೆಯ ಪೈಪ್ ಲೈನ್ ರೋಡಿನಲ್ಲಿರುವ ಐಷಾರಾಮಿ ರೆಸಾರ್ಟ್ ನಲ್ಲಿ ಸಾನ್ಯ, ರೂಪೇಶ್, ರಾಕೇಶ್ ಹಾಗೂ ಆರ್ಯವರ್ಧನ್ ಗುರೂಜಿ ಅವರನ್ನು ಇರಿಸಲಾಗಿದೆ. ಅಲ್ಲದೆ ಯಾರನ್ನೂ ಸಂಪರ್ಕಿಸದಂತೆ ತಾಕೀತು ಮಾಡಲಾಗಿದೆ. ರೆಸಾರ್ಟ್ಗೆ ಹೋಗುವ ದಾರಿಯಲ್ಲಿ ಕಾವೇರಿ ನೀರು ಯೋಜನೆ ಕಾಮಗಾರಿ ನಡೆಯುತ್ತಿರುವುದರಿಂದ ಅಲ್ಲಿಗೆ ಹೋಗುವುದು ಅಸಾಧ್ಯ ಎನ್ನುವ ಕಾರಣಕ್ಕಾಗಿ ಆ ರೆಸಾರ್ಟ್ ಅನ್ನು ಆಯ್ಕೆ ಮಾಡಿಕೊಂಡಿದ್ದಾರಂತೆ.
ಇತ್ತೀಚೆಗೆ ಸಾನ್ಯ ಐಯ್ಯರ್ ಇದೇ ರೆಸಾರ್ಟ್ ನಲ್ಲಿ ತಮ್ಮ ಹುಟ್ಟುಹಬ್ಬವನ್ನು ಸೆಲೆಬ್ರೇಟ್ ಮಾಡಿದ್ದರು. ಮನೆಯವರಿಗೆ ರೆಸಾರ್ಟ್ ಎಂಟ್ರಿಗೆ ಅವಕಾಶ ನೀಡಿರಲಿಲ್ಲ. ಹೀಗಾಗಿ ರಾಕೇಶ್,ರೂಪೇಶ್, ಆರ್ಯವರ್ಧನ್ ಸಮ್ಮುಖದಲ್ಲೇ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿದ್ದಾರೆ.
