ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಆರೋಗ್ಯ ಚೇತರಿಕೆಗೆ ಹೋರಾಡಿದ ನನ್ನ ಗಂಡ ನಿಜವಾದ ಹೋರಾಟಗಾರ: ರಾಜು ಶ್ರೀವಾತ್ಸವ್ ಪತ್ನಿ ಶಿಖಾ
ಆಗಸ್ಟ್ 10ರಂದು ರಾಜು ಶ್ರೀವತ್ಸವ್ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಗೆ ದಾಖಲಾದ ದಿನದಿಂದಲೂ ರಾಜು ಅವರನ್ನು ಉಳಿಸಿಕೊಳ್ಳಲು ವೈದ್ಯರು ಸಾಕಷ್ಟು ಶ್ರಮ ಹಾಕಿದ್ದರು. ಆದರೆ ಅವರು ಕೋಮದಿಂದ ಹೊರ ಬರಲೇ ಇಲ್ಲ. ವೈದ್ಯರು ತಮ್ಮೆಲ್ಲ ಪ್ರಯತ್ನಗಳನ್ನು ಮಾಡಿದರೂ, ರಾಜು ಅವರನ್ನು ಉಳಿಸಿಕೊಳ್ಳಲು ಆಗಲಿಲ್ಲ ಎಂದು ವೈದ್ಯರು ಹೇಳಿದ್ದರು.
ಸಾಕಷ್ಟು ವರ್ಷಗಳಿಂದ ಹಾಸ್ಯನಟರಾಗಿ ಬಾಲಿವುಡ್ ನಲ್ಲಿ ಗುರುತಿಸಿಕೊಂಡಿದ್ದ ರಾಜು ಶ್ರೀವತ್ಸವ್ ಅಪಾರ ಅಭಿಮಾನಿಗಳನ್ನು ಹೊಂದಿದ್ದರು. ಅಲ್ಲದೆ ರಾಜು ಅವರು ಗ್ರೇಟ್ ಇಂಡಿಯನ್ ಲಾಫ್ಟರ್ ಚಾಲೇಂಜ್’ ಹಾಸ್ಯ ಕಾರ್ಯಕ್ರಮದ ಮೂಲಕ ಸಾಕಷ್ಟು ಜನಪ್ರಿಯತೆ ಘಳಿಸಿದ್ದರು. ಇತ್ತೀಚೆಗೆ ರಾಜು ಶ್ರೀವತ್ಸವ್ ರಾಜಕೀಯದಲ್ಲೂ ಗುರುತಿಸಿಕೊಂಡಿದ್ದರು.
ರಾಜು ಶ್ರೀವತ್ಸವ್ ಭಾರತೀಯ ಜನತ ಪಾರ್ಟಿಯ ಸದಸ್ಯನಾಗಿದ್ದು ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿದ್ದರು. ರಾಜು ಶ್ರೀವಾತ್ಸವ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದು, ರಾಜು ಶ್ರೀವಾತ್ಸವ್ ರಂತಹ ಅದ್ಭುತ ವ್ಯಕ್ತಿ ಇಷ್ಟು ಬೇಗ ನಮ್ಮನ್ನಗಲಿದ್ದಾರೆ. ಆದರೆ ಅಪಾರ ಜನರ ಮನಸ್ಸಿನಲ್ಲಿ ಅಮರರಾಗಿದ್ದಾರೆ. ಅವರ ಸೇವೆಗಾಗಿ ನಾನು ಧನ್ಯವಾದ ಅರ್ಪಿಸುತ್ತೇನೆ ಎಂದಿದ್ದಾರೆ.
ಖ್ಯಾತ ಹಾಸ್ಯನಟ ರಾಜು ಶ್ರೀವಾತ್ಸವ್ ನಿಧನದಿಂದ ತೀವ್ರ ದುಂಖಿತನಾಗಿದ್ದೇನೆ. ರಾಜು ಶ್ರೀವಾತ್ಸವ್ ಪ್ರಬುದ್ಧ ಕಲಾವಿದರಲ್ಲದೆ, ಉತ್ಸಾಹ ಭರಿತ ವ್ಯಕ್ತಿಯಾಗಿದ್ದರು. ಸಾಮಾಜಿಕ ಕ್ಷೇತ್ರದಲ್ಲೂ ತುಂಬಾ ಕ್ರಿಯಾಶೀಲರಾಗಿದ್ದರು. ಅವರ ಕುಟುಂಬಕ್ಕೆ ಈ ದುಃಖವನ್ನು ಸಹಿಸಿಕೊಳ್ಳುವ ಶಕ್ತಿ ದೇವರು ನೀಡಲಿ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ.Raju Srivastava brightened our lives with laughter, humour and positivity. He leaves us too soon but he will continue to live in the hearts of countless people thanks to his rich work over the years. His demise is saddening. Condolences to his family and admirers. Om Shanti. pic.twitter.com/U9UjGcfeBK
— Narendra Modi (@narendramodi) September 21, 2022
सुप्रसिद्ध हास्य कलाकार, राजू श्रीवास्तव जी के निधन से मुझे गहरा दुःख हुआ है। वे एक मंझे हुए कलाकार होने के साथ-साथ एक बेहद ज़िंदादिल इंसान भी थे। सामाजिक क्षेत्र में भी वे काफ़ी सक्रिय रहते थे। उनके शोकाकुल परिवार एवं प्रशंसकों के प्रति मैं अपनी संवेदना व्यक्त करता हूँ।ॐ शान्ति!
— Rajnath Singh (@rajnathsingh) September 21, 2022
