ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
‘ರಂಗಿನ ರಾಟೆ’ ಟ್ರೈಲರ್ ಬಿಡುಗಡೆ ಮಾಡಿದ ನಟಿ ರಾಗಿಣಿ
ಇದೊಂದು ಕಾಡಿನಲ್ಲಿ ನಡೆಯುವ ಕಥೆ. ನನ್ನ ಜೊತೆಗಿರುವವರು ಅನಿವಾರ್ಯ ಕಾರಣದಿಂದ ಕಷ್ಟಕ್ಕೆ ಸಿಲುಕಿ ಕೊಳ್ಳುತ್ತಾರೆ. ಅವರನೆಲ್ಲಾ ಕಷ್ಟದಿಂದ ಪಾರು ಮಾಡುವ ಪಾತ್ರ ನನ್ನದು ಎಂದು ತಮ್ಮ ಪಾತ್ರದ ಬಗ್ಗೆ ರಾಜೀವ್ ರಾಥೋಡ್ ವಿವರಿಸಿದರು.
ನಿರ್ದೇಶಕ ಮುರಳಿ ಮೋಹನ್ ಸಹ ತಮಗೆ ಈ ಚಿತ್ರದಲ್ಲಿ ಉತ್ತಮ ಪಾತ್ರ ಸಿಕ್ಕಿರುವುದಾಗಿ ಹೇಳಿಕೊಂಡರು. ನಿರ್ಮಾಪಕಿ ಕವಿತಾ ಅರುಣ್ ಕುಮಾರ್, ಸಹನಾಯಕಿ ಸ್ವಪ್ನ ಶೆಟ್ಟಿಗಾರ್, ಸಂತೋಷ್ ಮಳವಳ್ಳಿ ಸೇರಿದಂತೆ ಚಿತ್ರತಂಡದ ಅನೇಕ ಸದಸ್ಯರು ಚಿತ್ರದ ಕುರಿತು ಮಾತನಾಡಿದರು. ಆಗಮಿಸಿದ್ದ ಅನೇಕ ಗಣ್ಯರು ಚಿತ್ರತಂಡಕ್ಕೆ ಶುಭ ಕೋರಿದರು.
ಆರ್ಮುಗಂ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ರವಿ ಸುವರ್ಣ ಛಾಯಾಗ್ರಹಣ ಹಾಗೂ ಚಂದ್ರು ಓಬ್ಬಯ್ಯ ಅವರ ಸಂಗೀತ ನಿರ್ದೇಶನವಿದೆ. ರಾಜೀವ್ ರಾಥೋಡ್, ಮುರಳಿ ಮೋಹನ್ (ಸಂತ), ದುನಿಯಾ ರಶ್ಮಿ, ಸಂತೋಷ್ ಮಳವಳ್ಳಿ, ಭವ್ಯ, ರಾಂಕಲ್ ಚಂದ್ರು, ಸ್ವಪ್ನ ಶೆಟ್ಟಿಗಾರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
