• March 14, 2026

ಶೂಟಿಂಗ್ ಶುರು ಮಾಡಿದ ಸಾವರ್ಕರ್ ಸಿನಿಮಾ ತಂಡ: ನಟನೆಯ ಜೊತೆಗೆ ನಿರ್ದೇಶನದ ಜವಬ್ದಾರಿ ಹೊತ್ತ ರಣದೀಪ್

ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ನಿಲುವಿನ ಬಗ್ಗೆ ದೇಶಾದ್ಯಂತ ಬಿಸಿ ಬಿಸಿ ಚರ್ಚೆ ಆಗುತ್ತಿದೆ. ಈ ಮಧ್ಯೆ ಬಾಲಿವುಡ್ ಸಿನಿಮಾ ರಂಗದಲ್ಲಿ ವೀರ ಸಾವರ್ಕರ್ ಬಯೋಪಿಕ್ ತೆರೆಗೆ ಬರಲು ರೆಡಿಯಾಗುತ್ತಿದೆ. ಈಗಾಗ್ಲೆ ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿ ಸಾಕಷ್ಟು ಕುತೂಹಲ ಮೂಡಿಸಿದ್ದು ಇದೀಗ ಶೂಟಿಂಗ್ ಆರಂಭವಾಗಿದೆ. ನಟ ರಣದೀಪ್ ಹೂಡ ಸಾವರ್ಕರ್ ಸಿನಿಮಾದ ನಟನೆಯ ಜೊತೆಗೆ ನಿರ್ದೇಶನದ ಜವಬ್ದಾರಿಯನ್ನೂ ಹೊತ್ತಿದ್ದಾರೆ. ಈ ಬಗ್ಗೆ ರಣದೀಪ್ ಹೂಡ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದು ಈ ಸಿನಿಮಾದಲ್ಲಿ ನಟಿಸುವುದರ ಜೊತೆಗೆ ನಿರ್ದೇಶನವನ್ನು ಮಾಡುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಕೈಯಲ್ಲಿ ಕ್ಲಾಪ್ ಬೋರ್ಡ್ ಹಿಡಿದುಕೊಂಡು ನಿರ್ಮಾಪಕರ ಜೊತೆ ಫೋಟೋ ತೆಗೆಸಿಕೊಂಡಿರುವ ರಣದೀಪ್ ಹೂಡ, ಸಾವರ್ಕರ್ ಚಿತ್ರಕ್ಕೆ ಚಾಲನೆ ನೀಡಲಾಗಿದೆ. ಈ ಸಿನಿಮಾದ ನಿರ್ದೇಶನದ ಜವಾಬ್ದಾರಿ ನನ್ನ ಹೆಗಲ ಮೇಲೆ ಬಿದ್ದಿದೆ ಎಂದೂ ಬರೆದುಕೊಂಡಿದ್ದಾರೆ. ಈ ಸಿನಿಮಾ ನನ್ನಷ್ಟೇ ಎಲ್ಲರನ್ನೂ ಪ್ರಭಾವಿಸಲಿದೆ ಎಂದು ಬರೆದುಕೊಂಡಿದ್ದಾರೆ. ಈ ಹಿಂದೆ ವೀರ ಸಾವರ್ಕರ್ ಸಿನಿಮಾ ಮಾಡಿದರೆ ಕೊಲ್ಲುವುದಾಗಿ ನಿರ್ಮಾಪಕರಿಗೆ ಬೆದರಿಕೆ ಹಾಕಿದ್ದಾರಂತೆ. ಈ ಕುರಿತು ಚಿತ್ರದ ನಿರ್ಮಾಪಕರು ಅಂಬೋಲಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈಗಾಗಲೇ ಸಿನಿಮಾದ ಸಿದ್ಧತೆ ನಡೆಸಿದ್ದೇವೆ. ನಾಯಕರ ಆಯ್ಕೆಯಾಗಿದೆ. ವೀರ ಸಾವರ್ಕರ್ ಹುಟ್ಟು ಹಬ್ಬದ ದಿನದಂದು ಫಸ್ಟ್ ಲುಕ್ ಕೂಡ ರಿಲೀಸ್ ಮಾಡಲಾಗಿದೆ. ಇನ್ನೇನು ಶೂಟಿಂಗ್ ಗೆ ಹೊರಡುವ ಸಂದರ್ಭದಲ್ಲಿ ಕಿಡಿಗೇಡಿಗಳು ಸಾಮಾಜಿಕ ಜಾಲತಾಣದ ಮೂಲಕ ಕೊಲೆ ಬೆದರಿಕೆ ಹಾಕಲಾಗಿದೆ. ಹಾಗಾಗಿ ತಮಗೆ ರಕ್ಷಣೆ ಬೇಕೆಂದು ಸಂದೀಪ್ ಸಿಂಗ್ ದೂರಿನಲ್ಲಿ ದಾಖಲಿಸಿದ್ದರು. ಪೇಸ್ ಬುಕ್ ನಲ್ಲಿ ಕೊಲೆ ಬೆದರಿಕೆ ಹಾಕಿದ ದುಷ್ಕರ್ಮಿಗಳು ಸಿಧು ಮೂಸೆ ವಾಲ ಹತ್ಯೆಯನ್ನು ನೆನಪಿಸಿಕೊಳ್ಳಿ. ಅದೇ ರೀತಿಯಲ್ಲೇ ನಿನ್ನನ್ನೂ ಕೊಲೆ ಮಾಡಲಾಗುವುದು. ಸ್ವಲ್ಪ ದಿನ ಕಾಯಿರಿ ಎಂದು ಸಂದೇಶವನ್ನು ಪೋಸ್ಟ್ ಮಾಡಿದ್ದಾರಂತೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now