ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಆಸ್ಪತ್ರೆಯಿಂದ ನೇರವಾಗಿ ಪತಿಯ ಮನೆಗೆ ಹೋದ ದಿವ್ಯಾ ಶ್ರೀಧರ್: ಅಮ್ಜದ್ ಖಾನ್ ವಿರುದ್ಧ ತಿರುಗಿ ಬಿದ್ದ ನಟಿ
ನಿನ್ನೆಯಷ್ಟೇ ದಿವ್ಯಾ ಶ್ರೀಧರ್ ಪ್ರಕರಣಕ್ಕೆ ಕರ್ನಾಟಕ ಮಹಿಳಾ ಆಯೋಗ ಪ್ರವೇಶ ಮಾಡಿದೆ. ಕರ್ನಾಟಕದ ನಟಿ ದಿವ್ಯಾ ಶ್ರೀಧರ್ ಗೆ ಸೂಕ್ತ ನ್ಯಾಯ ಒದಗಿಸುವಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ಆಗ್ರಹಿಸಿದ್ದು, ಈ ಕುರಿತಂತೆ ತಮಿಳು ನಾಡು ಮಹಿಳಾ ಆಯೋಗದ ಜೊತೆ ದೂರವಾಣಿ ಮೂಲಕವೂ ಮಾತನಾಡಿದ್ದಾರೆ.
ಅಮ್ಜದ್ ಹಾಗೂ ದಿವ್ಯಾ ಶ್ರೀದರ್ ಆಕಾಶ ದೀಪ ಧಾರವಾಹಿಯಲ್ಲಿ ಒಟ್ಟಿಗೆ ನಟಿಸಿದ್ದರು. ಬಳಿಕ ಇಬ್ಬರ ಮಧ್ಯೆ ಪ್ರೀತಿ ಮೂಡಿ ಬಳಿಕ ಲಿವಿಂಗ್ ಟುಗೇದರ್ ನಲ್ಲಿದ್ದರು. ಕಳೆದ ಜೂನ್ ತಿಂಗಳಲ್ಲಿ ಹಸೆ ಮಣೆ ಏರಿದ್ದ ಜೋಡಿಗಳ ಮಧ್ಯೆ ಮನಸ್ತಾಪ ಮೂಡಿದ್ದು ಇಬ್ಬರು ಆರೋಪ, ಪ್ರತ್ಯಾರೋಪ ಮಾಡಿದ್ದಾರೆ.
