ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಕೇಂದ್ರ ಸಚಿವ ಅನುರಾಗ್ ಠಾಕೂರ್ ಭೇಟಿ ಮಾಡಿದ ನಿರ್ಮಾಪಕ ವಿಜಯ್ ಕಿರಗಂದೂರು
‘ಅನುರಾಗ್ ಠಾಕೂರ್ ಜೊತೆ ಭಾರತೀಯ ಸಿನಿಮಾ ರಂಗದ ಕುರಿತು ಚರ್ಚಿಸಲಾಯಿತು. ನಮ್ಮ ನೆಲದ ಸಂಸ್ಕೃತಿಯನ್ನು ಬಿಂಬಿಸುವಂತಹ, ಅದನ್ನು ಮುಂದುವರೆಸಿಕೊಂಡು ಹೋಗುವ ಸಾಧ್ಯತೆಯ ಕುರಿತಾಗಿ ಮಾತನಾಡಲಾಯಿತು. ಭಾರತೀಯ ಸಿನಿಮಾ ರಂಗದ ಕುರಿತಾದ ಸೂಕ್ಷ್ಮ ಒಳನೋಟ ಈ ವಿಷಯದಲ್ಲಿ ಇತ್ತು’ ಎಂದು ವಿಜಯ್ ಕಿರಗಂದೂರು ಬರೆದುಕೊಂಡಿದ್ದಾರೆ.
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ನಿನ್ನಿಂದಲೆ ಸಿನಿಮಾದ ಮೂಲಕ ಚಿತ್ರ ನಿರ್ಮಾಣ ಸಂಸ್ಥೆ ಹುಟ್ಟುಹಾಕಿದ ವಿಜಯ್ ಕಿರಗಂದೂರು ಇಂದು ಪವಭಾಷೆಯ ಬಿಗ್ ಬಜೆಟ್ ಸಿನಿಮಾಗಳಿಗೂ ಬಂಡವಾಳ ಹೂಡುತ್ತಿದ್ದಾರೆ. ಬ್ಯಾಕ್ ಟು ಬ್ಯಾಕ್ ಹಿಟ್ ಸಿನಿಮಾಗಳನ್ನು ನೀಡಿರುತ್ತಿರುವ ಹೊಂಬಾಳೆ ಫಿಲ್ಸ್ಮ್ ಇದೀಗ ಕಾಂತಾರದ ಮೂಲಕ ಕಮಾಲ್ ಮಾಡುತ್ತಿದೆ.
