• March 15, 2026

ಗಂಧದ ಗುಡಿ ಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ ಸಿಎಂ ಬೊಮ್ಮಾಯಿ

ಪುನೀತ್ ರಾಜ್ ಕುಮಾರ್ ನಟನೆಯ ಕೊನೆಯ ಸಿನಿಮಾ ಗಂಧದ ಗುಡಿ ಚಿತ್ರದ ಪ್ರಿ ರಿಲೀಸ್ ಕಾರ್ಯಕ್ರಮ ಪುನೀತ್ ಪರ್ವ ಹೆಸರಿನಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಾಕಷ್ಟು ಅದ್ಧೂರಿಯಾಗಿ ನಡೆಯಿತು. ಪುನೀತ್ ಪರ್ವ ಕಾರ್ಯಕ್ರಮಕ್ಕೆ  ಅನೇಕ ಚಿತ್ರರಂಗದ ಗಣ್ಯರು ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಿಎಂ ಬಸವರಾಜ್ ಬೊಮ್ಮಾಯಿ ‘ಗಂಧದ ಗುಡಿ’ ಚಿತ್ರಕ್ಕೆ ಕರ್ನಾಟಕದಲ್ಲಿ ತೆರಿಗೆ ವಿನಾಯಿತಿ ಘೋಷಿಸಿದ್ದಾರೆ. ನಿಸರ್ಗ, ಕಾಡು , ಪ್ರಾಣಿಗಳೊಂದಿಗೆ ತೆಗೆದಿರುವ ಸಿನಿಮಾ ಗಂಧದ ಗುಡಿ. ಇದು ಕರ್ನಾಟಕ ಸಸ್ಯ ಸಂಪತನ್ನು ತೋರಿಸಿರುವ ಚಿತ್ರ. ಈ ಚಿತ್ರಕ್ಕೆ ಸರ್ಕಾರ ಖಂಡಿತ ತೆರಿಗೆ ವಿನಾಯಿತಿ ಘೋಷಿಸುತ್ತದೆ ಎಂದು ಬೊಮ್ಮಾಯಿ ಹೇಳಿದ್ದಾರೆ.     ಅಪ್ಪು ಅವರಿಂದ ಸ್ಪೂರ್ತಿಗೆ ಒಳಗಾದ ಯುವ  ಸಮುದಾಯದ ನೋಡಿದಾಗ ಸಂತಸವಾಗುತ್ತಿದೆ. ಆದ್ರೇ ಸಣ್ಣ ವಯಸ್ಸಿನಲ್ಲಿ ನಮ್ಮನ್ನು ಬಿಟ್ಟು ಹೋಗಿದ್ದಾರೆ. ಅಪ್ಪು ಬಹಳಷ್ಟು ವರ್ಷ ಬದುಕಿ ಬಾಳ ಬೇಕಿತ್ತು.ಈ ನೋವು ಈಗಲೂ ಕಾಡುತ್ತಿದೆ. ಇದೀಗ ಪುನೀತ್ ಪರ್ವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವು ಸಂತಸ ಹಾಗೂ ಹೆಮ್ಮೆ ತಂದಿದೆ. ನವೆಂಬರ್ ಒಂದರಂದು ಅಪ್ಪುಗೆ ಕರ್ನಾಟಕ ರತ್ನ ನೀಡಲಿದ್ದೆವೆ .  ಅದು ಎಲ್ಲ ಯುವಕರಿಗೆ ಪ್ರೇರಣೆ ಎಂದು ಭಾವಿಸುತ್ತೇನೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.   ಇದೇ ಅ.28ರಂದು ಗಂಧದ ಗುಡಿ ಸಿನಿಮಾ ತೆರೆಗೆ ಬರ್ತಿದೆ. ಅತ್ತ ದೊಡ್ಮನೆ ಕುಟುಂಬ ಅದ್ದೂರಿಯಾಗಿ ಚಿತ್ರದ ಪ್ರಿಲೀಸ್ ಕಾರ್ಯಕ್ರಮ ಮಾಡುತ್ತಿದ್ದರೆ ಇತ್ತ ಅಭಿಮಾನಿಗಳು ಸಿನಿಮಾ ಬಿಡುಗಡೆಗೆ ಭರ್ಜರಿ ತಯಾರಿ ಮಾಡಿಕೊಳ್ಳುತ್ತಿದ್ದಾರೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now