• March 20, 2026

ಆಚಾರ, ನಂಬಿಕೆಗಳ ಬಗ್ಗೆ ಮಾತಾಡೋಕೆ ನನಗೆ ಅರ್ಹತೆ ಇಲ್ಲ: ರಿಷಬ್ ಶೆಟ್ಟಿ

ಕಾಂತಾರ ಸಿನಿಮಾ ನೋಡಿದ ಬಳಿಕ ನಟ ಚೇತನ್ ದೈವಾರಾಧನೆ ಬಗ್ಗೆ ಹೇಳಿಕೆ ನೀಡಿದ್ದು ದೊಡ್ಡ ಚರ್ಚೆ ಹುಟ್ಟುಹಾಕಿದೆ. ಭೂತಕೋಲದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಚೇತನ್ ವಿರುದ್ಧ ಸಾಕಷ್ಟು ಮಂದಿ ಗುಡುಗಿದ್ದಾರೆ. ಇದೀಗ ಚೇತನ್ ಹೇಳಿಕೆಯ ಕುರಿತಾಗಿ ನಟ ಕಂ ನಿರ್ದೇಶಕ ರಿಷಬ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ. ಚೇತನ್ ಹೇಳಿಕೆಯ ವಿರುದ್ಧ ಸಾಕಷ್ಟು ಮಂದಿ ತಿರುಗಿ ಬಿದ್ದಿದ್ದಾರೆ. ಅಲ್ಲದೆ ಈ ಬಗ್ಗೆ ಸಾಕಷ್ಟು ಕಡೆಗಳಲ್ಲಿ ದೂರು ಕೂಡ ದಾಖಲಾಗಿದೆ. ಅಲ್ಲದೆ ಹಿಂದೂ ವೇದಿಕೆಯ ಮಂದಿ ಚೇತನ್ ಮನೆ ಮುಂದೆ ಧರಣಿ ನಡೆಸಿದ್ದಾರೆ. ಇದೀಗ ಚೇತನ್ ನೀಡಿರುವ ಹೇಳಿಕೆಗೆ ರಿಷಬ್ ಶೆಟ್ಟಿ ಪ್ರತಿಕ್ರಿಯಿಸಿದ್ದಾರೆ. ಚೇತನ್ ಹೇಳಿಕೆಯ ಕುರಿತು ನಾನು ಯಾವುದೇ ಪ್ರತಿಕ್ರಿಯೆ ನೀ ಡುವುದಿಲ್ಲ. ಈ ಆಚರಣೆ , ನಂಬಿಕೆ ತಲೆಮಾರು ಹಲವಾರು ವರ್ಷಗಳಿಂದ ನಡೆದುಕೊಂಡು ಬರುತ್ತಿದೆ. ಇದರ ಬಗ್ಗೆ ಮಾತಾಡೋಕೆ ನನಗೆ ಅರ್ಹತೆ ಇಲ್ಲ. ದೈವ ನರ್ತಕರು ಹಾಗೂ ಅದನ್ನು ಪಾಲಿಸಿಕೊಂಡು ಹೋಗುವವರಿಗೆ ಮಾತ್ರ ಈ ಬಗ್ಗೆ ಮಾತನಾಡುವುದಕ್ಕೆ ಅರ್ಹತೆ ಇರುವುದು. ಅವರುಗಳು ಈಗಾಗಲೇ ಮಾತಾಡಿದ್ದಾರೆ. . ಹೀಗಾಗಿ ಈ ಬಗ್ಗೆ ನಾನು ಹೆಚ್ಚೇನು ಕಾಮೆಂಟ್‌ ಮಾಡಲ್ಲ ಎಂದಿದ್ದಾರೆ. ಕಾಂತಾರ ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿರುವ ಕಾಂತಾರ ಸಿನಿಮಾ ದೇಶ ವಿದೇಶದಲ್ಲೂ ಸದ್ದು ಮಾಡುತ್ತಿದೆ.  ಹೀಗಿರುವಾಗ ಭೂತಕೋಲ ಹೀಂದೂ ಸಂಸ್ಕೃತಿಯಲ್ಲ ಎಂದು ವಿವಾದಾತ್ಮಕ ಹೇಳಿಕೆ ನೀಡಿ, ತುಳುನಾಡಿನ ದೈವ ನಂಬುವವರ ಕೆಂಗಣ್ಣಿಗೆ ಗುರಿಯಾಗಿದ್ದರು. ಈ ಬಗ್ಗೆ ಈಗಾಗ್ಲೆ ಸಾಕಷ್ಟು ಮಂದಿ ಪ್ರತಿಕ್ರಿಯೆ ನೀಡಿದ್ದಾರೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now