• March 15, 2026

‘ಯುವರತ್ನ’ನಿಲ್ಲದೆ ಒಂದು ವರ್ಷ: 365 ದಿನವೂ ಕಣ್ಣೀರಲ್ಲೇ ಕಳೆದ ಅಭಿಮಾನಿಗಳು

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ ಒಂದು ವರ್ಷ ಕಳೆದಿದೆ. ಅಪ್ಪು ಇಲ್ಲದ ನೋವಿನಲ್ಲೆ 365 ದಿನ ಕಳೆದಿರೋ ಅಭಿಮಾನಿಗಳು ಇಂದು ನೋವು, ಕಣ್ಣೀರಿನ ನಡುವೆಯೇ ಮೊದಲ ವರ್ಷದ ಪುಣ್ಯ ತಿಥಿ ಆಚರಿಸುತ್ತಿದ್ದಾರೆ. ಅಪ್ಪು ಅವರ ಮೊದಲ ವರ್ಷದ ಪುಣ್ಯ ತಿಥಿ ಹಿನ್ನೆಲೆ ಕಂಠೀರವ ಸ್ಟುಡಿಯೋದಲ್ಲಿ ಸಿದ್ದತೆ ಮಾಡಿಕೊಳ್ಳಲಾಗಿದೆ. ಬೆಳಗ್ಗೆ 9 ಗಂಟೆಯ ಬಳಿಕ ಅಪ್ಪು ಕುಟುಂಬಸ್ಥರು ಕಂಠೀರವ ಸ್ಟುಡಿಯೋಗೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ. ಈ ವೇಳೆ ಅಪ್ಪು ಇಷ್ಟ ಪಡುತ್ತಿದ್ದ ತಿಂಡ ತಿನಿಸುಗಳನ್ನು ಇಟ್ಟು ಪೂಜೆ ಮಾಡಲಿದ್ದಾರೆ. ಕಂಠೀರವ ಸ್ಡುಡಿಯೋದಲ್ಲಿ ಪೂಜೆ ಸಲ್ಲಿಸಿದರ ಬಳಿಕ ಅಪ್ಪು ಕುಟುಂಬಸ್ಥರು ಮನೆಯಲ್ಲೂ ಪೂಜೆ ಹಮ್ಮಿಕೊಂಡಿದ್ದಾರೆ. ಕಂಠೀರವ ಸ್ಟುಡಿಯೋದಲ್ಲಿರುವ ಅಪ್ಪು ಸಮಾಧಿಗೆ ಕುಟುಂಬಸ್ಥರು ಪೂಜೆ ಸಲ್ಲಿಸಿದ ಬಳಿಕ ಅಭಿಮಾನಿಗಳಿಗೆ ಸಮಾಧಿ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ. ಅಪ್ಪು ಸಮಾಧಿಗೆ ಭೇಟಿ ನೀಡುವ ಪ್ರತಿಯೊಬ್ಬರಿಗೂ ಊಟದ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ ಪುನೀತ್ ಹೆಸರಿಲ್ಲಿ ಸಾಕಷ್ಟು ಕಡೆಗಳಲ್ಲಿ ಸಮಾಜಮುಖಿ ಕೆಲಸಗಳನ್ನು ಮಾಡಲಿದ್ದಾರೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now