• June 2, 2026

ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ: ಕಾರ್ಯಕ್ರಮದ ಅವ್ಯವಸ್ಥೆ ಕುರಿತು ವ್ಯಂಗ್ಯವಾಡಿದ ಡಿಕೆಶಿ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ನವೆಂಬರ್ 1ರಂದು ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಆದರೆ ಕಾರ್ಯಕ್ರಮದ ಅವ್ಯವಸ್ಥೆಯ ಬಗ್ಗೆ ಕಾಂಗ್ರೆಸ್ ಪಕ್ಷದ ಮುಖಂಡ ಡಿ.ಕೆ. ಶಿವಕುಮಾರ್ ಆಕ್ರೋಶ ಹೊರ ಹಾಕಿದ್ದಾರೆ. ಸುಸಜ್ಜಿತ ವೇದಿಕೆಯಲ್ಲಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿಲ್ಲವಲ್ಲ ಎಂದು ಸರಕಾರವನ್ನು ವ್ಯಂಗ್ಯವಾಡಿದ್ದಾರೆ. ‘ನಿನ್ನೆ ಯಾಕೆ ಸ್ಟೇಜ್ ಹಾಗಾಯ್ತು, ಸ್ಟೇಜ್ ಕಥೆ ಏನಾಯ್ತು ಎಂದು ಪ್ರಶ್ನೆ ಮಾಡಿರುವ  ಅವರು, ಸ್ಟೇಜ್ ಆರ್ಗನೈಸೆಷನ್ ಬಗ್ಗೆ ಕಿಡಿಕಾರಿದ್ದಾರೆ. ‘ವೆರಿ ಸಾರಿ ಫಾರ್ ಸ್ಟೇಜ್ ಆರ್ಗನೈಸೆಷನ್. ನಿನ್ನೆ ಆದ ಅವ್ಯವಸ್ಥೆ ಬಗ್ಗೆ ನೀವೇ ವಿಶ್ಲೇಷಣೆ ಮಾಡಿ, ಬಳಿಕ ನಾವು ಮಾತಾಡ್ತೇವೆ’ ಎಂದು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ್ದಾರೆ. ರಾಜಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿದ ಕಾಲದಲ್ಲಿ ನಾನೂ ಇದ್ದೆ. ಎಂತಹ ಕಾರ್ಯಕ್ರಮ ಅದು ಎಂದು ಡಾ.ರಾಜ್ ಕುಮಾರ್ ಅವರಿಗೆ ಅದ್ಧೂರಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಿದ್ದನ್ನು ಡಿ.ಕೆ. ಶಿವಕುಮಾರ್ ನೆನಪಿಸಿಕೊಂಡರು. ಪುನೀತ್ ರಾಜ್ ಕುಮಾರ್ ಅವರ ಸಿನಿ ಸೇವೆ ಹಾಗೂ ಸಮಾಜ ಸೇವೆಯನ್ನು ಪರಿಗಣಿಸಿ ಕರ್ನಾಟಕ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಿತು. ವಿಧಾನ ಸೌಧದ ಮುಂದೆ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಸೂಪರ್ ಸ್ಟಾರ್ ರಜನಿಕಾಂತ್, ಜೂನಿಯರ್ ಎನ್ ಟಿ ಆರ್ , ಸುಧಾಮೂರ್ತಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now