• January 1, 2026

ಯಂಗ್ ರೆಬೆಲ್ ಸ್ಟಾರ್ ಗೆ ಜೋಡಿಯಾದ ಕಾಂತಾರದ ಬೆಡಗಿ ಸಪ್ತಮಿ ಗೌಡ

ಕಾಂತಾರ ಸಿನಿಮಾದ ಬಳಿಕ ನಟಿ ಸಪ್ತಮಿ ಗೌಡಗೆ ಸಖತ್ ಡಿಮ್ಯಾಂಡ್ ಕ್ರಿಯೇಟ್ ಆಗಿದೆ. ಕನ್ನಡದ ಜೊತೆಗೆ ಪರಭಾಷೆಯಲ್ಲೂ ಸಪ್ತಮಿ ಗೌಡಗೆ ಆಫರ್ ಗಳು ಬರುತ್ತಿವೆ. ಸದ್ಯ ಸಪ್ತಮಿ ಗೌಡ ಯಂಗ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಗೆ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಕನ್ನಡದ ಖ್ಯಾತ ನಟ ಕೃಷ್ಣ ಸದ್ಯ ಅಭಿಷೇಕ್ ಅಂಬರೀಶ್ ನಟನೆಯ ಮುಂದಿನ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಚಿತ್ರಕ್ಕೆ ಕಾಳಿ ಎಂದು ಹೆಸರಿಡಲಾಗಿದ್ದು ಸಿನಿಮಾದ ಟೈಟಲ್ ಹಾಗೂ ಹಲವು ವಿಷಯಗಳ ಕುರಿತು ಕೃಷ್ಣ ಈಗಾಗಲೇ ಮಾಹಿತಿ ನೀಡಿದ್ದಾರೆ. ಇದೇ ಚಿತ್ರದಲ್ಲಿ ಅಭಿಷೇಕ್ ಗೆ ಜೋಡಿಯಾಗಿ ನಟಿಸಲು ಸಪ್ತಮಿ ಗೌಡ ಅವರನ್ನು ಕೇಳಲಾಗಿದೆಯಂತೆ. ಸಪ್ತಮಿ ಗೌಡ ಅವರನ್ನು ಭೇಟಿ ಮಾಡಿರುವ ಕೃಷ್ಣ ಸಿನಿಮಾದ ಕಥೆ ಮತ್ತು ಪಾತ್ರದ ಕುರಿತು ತಿಳಿಸಿದ್ದಾರೆ. ಚಿತ್ರದ ಕಥೆಯೂ ಸಪ್ತಮಿಗೆ ಇಷ್ಟವಾಗಿದ್ದು ಚಿತ್ರದಲ್ಲಿ ನಟಿಸುವುದು ಆಲ್ ಮೋಸ್ಟ್ ಕನ್ಪಾರ್ಮ್ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಚಿತ್ರತಂಡವಾಗಲಿ, ಸಪ್ತಮಿ ಆಗಲಿ ಯಾವುದೇ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ. ಕಾವೇರಿ ನದಿ ಗಲಾಟೆಯಲ್ಲಿ ನಡೆದ ನೈಜ ಪ್ರೇಮಕಥೆಯನ್ನು ಕಾಳಿ ಸಿನಿಮಾದಲ್ಲಿ ತೋರಿಸಲು ನಿರ್ದೇಶಕ ಕೃಷ್ಣ ಮುಂದಾಗಿದ್ದಾರೆ. ಅಭಿಷೇಕ್ ಈ ಚಿತ್ರದಲ್ಲಿ ರಗಡ್ ಲುಕ್ ನಲ್ಲಿ ಕಾಣಿಸಿಕೊಳ್ಳಲಿದ್ದು, ಈಗಾಗಲೇ ಫಸ್ಟ್ ಲುಕ್ ಕೂಡ ರಿಲೀಸ್ ಆಗಿದೆ. ಸದ್ಯ ಅಭಿಷೇಕ್ ಬ್ಯಾಡ್ ಮ್ಯಾನರ್ಸ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದು, ಸದ್ಯದಲ್ಲೇ ಕಾಳಿ ಸಿನಿಮಾದ ಶೂಟಿಂಗ್ ಆರಂಭವಾಗಲಿದೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now