ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ನನ್ನ ಸಂಪೂರ್ಣ ಬೆಂಬಲ: ಸುಮಲತಾ
ಮೋದಿ ನೇತೃತ್ವದಲ್ಲಿ ದೇಶ ಅಭಿವೃದ್ಧಿಯಾಗುತ್ತಿದೆ. ನಾನು ಭಾರತೀಯ ಎಂದು ತಲೆ ಎತ್ತುವಂತೆ ಮೋದಿ ಮಾಡಿದ್ದಾರೆ. ಯಡಿಯೂರಪ್ಪ ಅವರು ಸಿಎಂ ಆದಾಗ ಕೆಆರ್ಎಸ್ನಲ್ಲಿ ಬಾಗಿನ ಅರ್ಪಿಸಿದ್ದರು. ಅದಕ್ಕೂ ಮೊದಲು ದೆಹಲಿಯಲ್ಲಿ ನನ್ನ ಭೇಟಿ ಮಾಡಿ ಮಂಡ್ಯಗೆ ಏನು ಮಾಡಬೇಕೆಂದು ನನ್ನ ಕೇಳಿದ್ದರು. ಆಗ ಮೈಶುಗರ್ ಕಾರ್ಖಾನೆ ಓಪನ್ ಮಾಡಿಸಿ ಎಂದೆ. ಆಗ ಪರ ವಿರೋಧ ಎಲ್ಲವೂ ಬಂದಿತ್ತು. ಆದರೂ ಯಡಿಯೂರಪ್ಪ ಅವರು ಸುಮಲತಾ ಹೇಳಿದ್ದಾರೆ ಎಂದು ಮೈಶುಗರ್ ಓಪನ್ ಮಾಡಿಸಿದರು. ಬೊಮ್ಮಾಯಿ ಅವರು 50 ಕೋಟಿಯನ್ನು ನೀಡಿದರು. ಈ ಅಭಿವೃದ್ಧಿ ಆಗಿದ್ದು ಬಿಜೆಪಿಯಿಂದ. ನನಗೆ ಬಿಜೆಪಿ ಬೆಂಬಲ ನೀಡಿದೆ. ಅಭಿವೃದ್ಧಿ ಆಗಬೇಕು ಅಂದರೆ ಬಿಜೆಪಿ ಬೇಕು. ಅದಕ್ಕೆ ನಾನು ನರೇಂದ್ರ ಮೋದಿ ನೇತೃತ್ವದ ಬಿಜೆಪಿಯನ್ನು ಬೆಂಬಲಿಸುತ್ತಿದ್ದೇನೆ ಎಂದು ತಿಳಿಸಿದರು.
ಈ ವೇಳೆ ಬಿಜೆಪಿ ಸೇರುತ್ತೀರಾ ಎಂಬ ಪ್ರಶ್ನೆಗೆ, ನಾನು ಪಕ್ಷೇತರ ಸದಸ್ಯೆ ಆಗಿದ್ದೇನೆ. ಪಕ್ಷೇತರ ಸದಸ್ಯರು ಜಯಗಳಿಸಿದ 6 ತಿಂಗಳ ಒಳಗಡೆ ಸೇರಿದರೆ ಮಾತ್ರ ಅದು ಮಾನ್ಯವಾಗುತ್ತದೆ. ಈ ಕಾನೂನು ಸಮಸ್ಯೆ ಇರುವ ಕಾರಣ ನಾನು ಈಗ ಬಿಜೆಪಿ ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.
