ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ವಿದ್ಯಾರ್ಥಿಗಳ ಬದುಕಿನ “ಜಸ್ಟ್ ಪಾಸ್” ಚಿತ್ರದ ಟೀಸರ್ ರೀಲೀಸ್
ನಟನಾಗಬೇಕೆಂಬ ಆಸೆಹೊತ್ತು ಬೆಂಗಳೂರಿಗೆ ಬಂದವನು ನಾನು ಎಂದು ಮಾತನಾಡಿದ ನಿರ್ಮಾಪಕ ಕೆ.ವಿ.ಶಶಿಧರ್, ನನಗೆ ಯಾವ ಚಿತ್ರದಲ್ಲೂ ನಟಿಸಲು ಅವಕಾಶ ಸಿಗಲಿಲ್ಲ. ಆನಂತರ ಬೇರೆ ಉದ್ಯಮ ಆರಂಭಿಸಿದೆ. ಈಗ ನಿರ್ಮಾಪಕನಾಗಿ ಚಿತ್ರರಂಗಕ್ಕೆ ಬಂದಿದ್ದೇನೆ. ಸಾಕಷ್ಟು ಹೊಸ ಪ್ರತಿಭೆಗಳಿಗೆ ನಮ್ಮ ಚಿತ್ರದಲ್ಲಿ ಅವಕಾಶ ನೀಡಿದ್ದೇವೆ. ಜನವರಿ ಕೊನೆಗೆ ಚಿತ್ರವನ್ನು ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು.
ಅರ್ಜುನ ನನ್ನ ಪಾತ್ರದ ಹೆಸರು. “ಜಸ್ಟ್ ಪಾಸ್” ವಿದ್ಯಾರ್ಥಿ ಎಂದು ನಾಯಕ ಶ್ರೀ ತಮ್ಮ ಪಾತ್ರದ ಬಗ್ಗೆ ಹೇಳಿದರು.
ತಾವು ಮೊದಲ ಬಾರಿಗೆ ಪ್ರಾಂಶುಪಾಲರ ಪಾತ್ರ ಮಾಡಿರುವುದಾಗಿ ಹಿರಿಯ ನಟ ರಂಗಾಯಣ ರಘು ತಿಳಿಸಿದರು.
ಚಿತ್ರದ ನಾಯಕಿ ಪ್ರಣತಿ, ನಟ ಗೋವಿಂದೇ ಗೌಡ ಮುಂತಾದ ಕಲಾವಿದರು, ನಿರ್ಮಾಪಕರ ಸಹೋದರ ಕೆ.ವಿ.ಶ್ರೀಧರ್, ಸಂಗೀತ ನಿರ್ದೇಶಕ ಹರ್ಷವರ್ಧನ್ ರಾಜ್, ನಿರ್ದೇಶಕರೊಂದಿಗೆ ಸಂಭಾಷಣೆ ಬರೆಯಲು ಜೊತೆಯಾಗಿರುವ ರಘು ನಿಡುವಳ್ಳಿ ಹಾಗೂ ಛಾಯಾಗ್ರಾಹಕ ಸುಜಯ್ ಕುಮಾರ್ “ಜಸ್ಟ್ ಪಾಸ್” ಚಿತ್ರದ ಕುರಿತು ಮಾತನಾಡಿದರು.
