• February 10, 2026

ರಾಷ್ಟ್ರ ಲಾಂಛನದಲ್ಲಿ ಘರ್ಜಿಸುತ್ತಿರುವ ಆ ಸಿಂಹವೇ ಮೋದಿ: ಟೀಕಾಕಾರರಿಗೆ ಜಗ್ಗೇಶ್ ತಿರುಗೇಟು

ಇಷ್ಟು ವರ್ಷ ಲಾಂಛನದಲ್ಲಿರುವ ಸಿಂಹ ಬಾಯಿ ಮುಚ್ಚಿತ್ತು. ಈಗ ಬಹಳ ಸ್ವಾಭಿಮಾನದಿಂದ ಬಾಯಿ ತೆರೆದಿದ್ದು, ಮತ್ತೇ ಘರ್ಜಿಸುತ್ತಿದೆ. ಆ ಘರ್ಜಿಸುತ್ತಿರುವ ಸಿಂಹವೇ ಮೋದಿ ಎಂದು ರಾಷ್ಟ್ರ ಲಾಂಛನ ತಿರುಚಿದ ಆರೋಪ ಮಾಡಿದವರಿಗೆ ರಾಜ್ಯಸಭಾ ಸದಸ್ಯ ತಿರುಗೇಟು ನೀಡಿದ್ದಾರೆ. ರಾಷ್ಟ್ರೀಯ ಲಾಂಚನ ತಿರುಚಿದ ಬಗ್ಗೆ ಮಾತನಾಡಿದ ಜಗ್ಗೇಶ್, ಆರೋಪಗಳು ಶಿವ, ಬ್ರಹ್ಮ, ಕೃಷ್ಣನನ್ನೇ ಬಿಟ್ಟಿಲ್ಲ. ಶಮಂತಕ ಮಣಿ ವಿಚಾರದಲ್ಲಿ ಕೃಷ್ಣನನ್ನೇ ಕಳ್ಳ ಎಂದರು. ಅಂತಹದರಲ್ಲಿ ಪ್ರಧಾನಿ ಮೋದಿಯನ್ನು ಬಿಡ್ತಾರಾ? ಎಂದು ಪ್ರಶ್ನಿಸಿದರು.   ರಾಷ್ಟ್ರದ ಜನ ಎದೆಯುಬ್ಬಿಸಿ ಹೇಳುವಂತಹ ಉತ್ತಮ ಧೀಮಂತ ನಾಯಕ ಸಿಕ್ಕಿದ್ದಾನೆ. ಘರ್ಜಿಸುತ್ತಿರುವ ಆ ಸಿಂಹವೇ ಮೋದಿ. ಅಶೋಕ ಲಾಂಛನದ ಮೂಲ ಬೇಕಾದವರು ಮ್ಯೂಸಿಯಂನಲ್ಲಿ ನೋಡಲಿ. ಮ್ಯೂಸಿಯಂನಲ್ಲಿ ಇರುವ ಹಾಗೆ ಯಥಾವತ್ ಲಾಂಛನವನ್ನು ಸೆಂಟ್ರಲ್ ವಿಸ್ತಾದಲ್ಲಿ ಮಾಡಲಾಗಿದೆ. ಮೋದಿ ಅವರನ್ನು ಆರಾಧಿಸುವವರ ಸಂಖ್ಯೆ 98% ಇದ್ದರೆ, ರೋಧಿಸುವವರ ಸಂಖ್ಯೆ 2% ಇದೆ. ಅದಕ್ಕೆ ಏನೂ ಮಾಡೋಕೆ ಆಗಲ್ಲ ಎಂದರು. ಆಕರ್ಷಕ ಮತ್ತು ವಿಶ್ವಾಸದ ಮುಖದಿಂದ ಕೂಡಿರುವ ಅಶೋಕನ ಸಿಂಹದ ಬದಲಿಗೆ ಭಯಾನಕ ಹಾಗೂ ಉಗ್ರವತಾರದ ಸಿಂಹದ ಭಂಗಿ ಹೊಂದಿರುವ ಲಾಂಛನವನ್ನು ಬದಲಾಯಿಸುವ ಮೂಲಕ ದೇಶದ ರಾಷ್ಟ್ರ ಲಾಂಛನವನ್ನು ವಿರೂಪಗೊಳಿಸಲಾಗಿದೆ ಎಂದು ಕಾಂಗ್ರೆಸ್ ಹಾಗೂ ಸಾಮಾಜಿಕ ಹೋರಾಟಗಾರರು ಆಕ್ಷೇಪಿಸಿದ್ದಾರೆ. ಹೊಸ ಪಾರ್ಲಿಮೆಂಟ್ ಕಟ್ಟಡದ ಮೇಲಿನ ರಾಷ್ಟ್ರ ಲಾಂಛವನ್ನು ಪರಿಶೀಲನೆ ಮಾಡಿ ಇಲ್ಲವೆ ದುರಸ್ತಿ ಮಾಡಿ ಎಂಬ ಮಾತುಗಳು ಕೇಳಿ ಬರ್ತಿದೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now