• January 1, 2026

ಶಸ್ತ್ರಚಿಕಿತ್ಸೆ ಬಳಿಕ ಚೇತರಿಸಿಕೊಂಡ ದಿಗಂತ್

ಗೋವಾದಲ್ಲಿ ಸಮ್ಮರ್ ಸಾಲ್ಟ್ ಮಾಡುವ ವೇಳೆ ಕುತ್ತಿಗೆಗೆ ಪೆಟ್ಟು ಮಾಡಿಕೊಂಡು ಬಳಿಕ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ದಿಗಂತ್ ಇದೀಗ ಚೇತರಿಸಿಕೊಂಡಿದ್ದಾರೆ. ದೂದ್ ಪೇಡೆ ಚೇತರಿಸಿಕೊಳ್ಳಲು ಎಷ್ಟು ದಿನಗಳಾಗಬಹುದು ಎಂದು ಕಂಗಾಲಾಗಿದ್ದ ಅಭಿಮಾನಿಗಳು ಇದೀಗ ದಿಗಂತ್ ಲವಲವಿಕೆ ಇಂದ ಇರೋದು ನೋಡಿ ನಿಟ್ಟುಸಿರು ಬಿಟ್ಟಿದ್ದಾರೆ. ಶಸ್ತ್ರ ಚಿಕಿತ್ಸೆಯ ಬಳಿಕ ಚೇತರಿಸಿಕೊಂಡಿರುವ ದಿಗಂತ್ ಗಾಳಿಪಟ 2 ಚಿತ್ರದ ಆಡಿಯೋ ಲಾಂಚ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಕಾರ್ಯಕ್ರಮದಲ್ಲಿ ದಿಗಂತ್ ಲವಲವಿಕೆಯಿಂದ ಓಡ್ತಾಡ್ತಿದ್ದು ಅಭಿಮಾನಿಗಳು ಖುಷಿಯಾಗಿದ್ದಾರೆ. ಯೋಗರಾಜ್ ಭಟ್ ನಿರ್ದೇಶನದ 2008ರಲ್ಲಿ ತೆರೆಕಂಡ ಗಾಳಿಪಟ ಸಿನಿಮಾ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಗೋಲ್ಡನ್ ಸ್ಟಾರ್ ಗಣೇಶ್, ದಿಗಂತ್ ಹಾಗೂ ರಾಜೇಶ್ ಕೃಷ್ಣನ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now