ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಸ್ವಯಂ ಕೃಷಿ ಸಿನಿಮಾದ ನಟ ಹಾಗೂ ನಿರ್ಮಾಪಕ ವೀರೇಂದ್ರ ಬಾಬು ಅವರನ್ನು ಬೆಂಗಳೂರಿನ ಕೊಡಿಗೆ ಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಮುಂಬರುವ ಎಂಎಲ್ ಎ ಹಾಗೂ ಎಂಪಿ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಬಸವರಾಜ್ ಘೋಷಾಲ್ ಎಂಬುವವರಿಂದ 1.88 ಕೋಟಿ ರೂ ಪಡೆದು ವಂಚಿಸಿದ್ದು ಈ ಪ್ರಕರಣದಲ್ಲಿ ವೀರೇಂದ್ರ ಬಾಬು ಅವರನ್ನು ಬಂಧಿಸಲಾಗಿದೆ.
ಇದರ ಜೊತೆಗೆ ರಾಷ್ಟ್ರ ಜನಹಿತ ಪಕ್ಷದ ಜೊತೆ ಕರ್ನಾಟಕ ರಕ್ಷಣಾ ಪಡೆಯನ್ನು ಕಟ್ಟಿಕೊಂಡಿದ್ದ ವೀರೇಂದ್ರ ಬಾಬು ಇಲ್ಲೂ ಸಾಕಷ್ಟು ವಂಚನೆ ನಡೆಸಿರೋದು ಬೆಳಕಿಗೆ ಬಂದಿದೆ. ಈ ಸಂಘಟನೆಗಳಿಗೆ ತಾಲೂಕು ಹಾಗೂ ಜಿಲ್ಲಾ ಅಧ್ಯಕ್ಷ ಸ್ಥಾನ ನೀಡುವುದಾಗಿ ಹೇಳಿ ಹಲವರಿಂದ ಹಣ ಪಡೆದು ವಂಚಿಸಿರುವ ವಿಚಾರವು ಇದೀಗ ಬೆಳಕಿಗೆ ಬಂದಿದೆ.
ಕೆಲ ವರ್ಷಗಳ ಹಿಂದೆ ಸ್ವಯಂ ಕೃಷಿ ಹೆಸರಿನಲ್ಲಿ ಸಾಕಷ್ಟು ಸಂಸ್ಥೆಗಳನ್ನು ಹುಟ್ಟುಹಾಕಿದ್ದ ವೀರೇಂದ್ರ ಬಾಬು ಅಲ್ಲೂ ಅನೇಕರಿಗೆ ವಂಚಿಸಿದ್ದರು. ಈ ಹಿನ್ನೆಲೆಯಲ್ಲಿ ಹೈದರಾಬಾದ್ ನಲ್ಲಿ ಪೊಲೀಸರು ಅವರನ್ನು ಅರೆಸ್ಟ್ ಮಾಡಿದ್ದರು. ಇದೀಗ ಮತ್ತೆ ಮೋಸ ಮಾಡಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.
