• March 14, 2026

ಮಾಧ್ಯಮ ಪ್ರತಿನಿಧಿಗಳ ಕ್ಷಮೆ ಯಾಚಿಸಿದ ಕಿಚ್ಚ ಸುದೀಪ್

ಕಳೆದೆರಡು ದಿನಗಳಿಂದ ಕಿಚ್ಚ ಸುದೀಪ್ ಜ್ವರದಿಂದ ಬಳಲುತ್ತಿದ್ದಾರೆ. ಹೀಗಾಗಿ ಸುದೀಪ್ ಭಾಗವಹಿಸಬೇಕಿದ್ದ ಪ್ರೆಸ್ ಮೀಟ್ ಗಳು ಕ್ಯಾನ್ಸಲ್ ಆಗಿದೆ. ಪ್ರೆಸ್ ಮೀಟ್ ಕ್ಯಾನ್ಸಲ್ ಆಗಿರುವ ಬಗ್ಗೆ ಸುದೀಪ್ ಸೋಷಿಯಲ್ ಮೀಡಿಯಾದಲ್ಲಿ ಕ್ಷಮೆ ಯಾಚಿಸಿದ್ದಾರೆ. ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರುತ್ತಿದೆ. ಇದೇ ಜುಲೈ 28ರಂದು ಸಿನಿಮಾ ತೆರೆಗೆ ಬರುತ್ತಿದ್ದು ಸಿನಿಮಾದ ಪ್ರಚಾರ ಕಾರ್ಯದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ಬ್ಯಾಕ್ ಟು ಬ್ಯಾಕ್ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿರೋದ್ರಿಂದ ಸುದೀಪ್ ಆಯಾಸಗೊಂಡಿದ್ದು ಜ್ವರದಿಂದ ಬಳಲುತ್ತಿದ್ದಾರೆ. ಹೀಗಾಗಿ ಚೆನ್ನೈ, ಕೊಚ್ಚಿ ಹಾಗೂ ಹೈದರಾಬಾದ್ ನಲ್ಲಿ ಆಯೋಜಿಸಲಾಗಿದ್ದ ಪ್ರೇಸ್ ಮೀಟ್ ಕ್ಯಾನ್ಸಲ್ ಆಗಿದೆ. ಈ ಬಗ್ಗೆ ಟ್ವೀಟ್ ಮೂಲಕ ಸುದೀಪ್ ಕ್ಷಮೆಯಾಚಿಸಿದ್ದಾರೆ. ಪತ್ರಿಕಾಗೋಷ್ಠಿಯನ್ನು ರದ್ದುಗೊಳಿಸಿದ್ದಕ್ಕೆ ಕೊಚ್ಚಿ, ಚೆನ್ನೈ ಮತ್ತು ಹೈದರಾಬಾದ್ ಮಾಧ್ಯಮದ ಗೆಳೆಯರಿಗೆ ಕ್ಷಮೆ ಕೇಳುತ್ತೇನೆ. ಹುಷಾರಿಲ್ಲದ ಕಾರಣದಿಂದಾಗಿ ನನಗೆ ಪ್ರಯಾಣ ಮಾಡುವುದು  ಕಷ್ಟಸಾಧ್ಯ. ಹಾಗಾಗಿ ಬರಲಾಗುತ್ತಿಲ್ಲ. ಮುಂದಿನ ದಿನಗಳಲ್ಲಿ ಮತ್ತೆ ದಿನಾಂಕ ನಿಗದಿಪಡಿಸಿ, ನಿಮ್ಮೊಂದಿಗೆ ಮಾತನಾಡಲು ಉತ್ಸುಕನಾಗಿದ್ದೇನೆ. ಆದಷ್ಟು ಬೇಗ ಸಿಗೋಣ ಎಂದು ಕಿಚ್ಚ ಟ್ವೀಟ್ ಮಾಡಿದ್ದಾರೆ. ಕಳೆದ ಎರಡು ದಿನಗಳಿಂದ ಸುದೀಪ್ ಗೆ ಜ್ವರದಿಂದ ಬಳಲಿತ್ತಿದ್ದಾರೆ.ಹೀಗಾಗಿ ಅಭಿಮಾನಿಗಳು ಸುದೀಪ್ ಅವರಿಗೆ ಎರಡನೇ ಭಾರಿ ಕೋವಿಡ್ ಪಾಸಿಟಿವ್ ಆಗಿದೆ ಎಂದುಕೊಂಡಿದ್ದರು. ಬಳಿಕ ನಿರ್ಮಾಪಕ ಜಾಕ್ ಮಂಜ ಸ್ಪಷ್ಟನೆ ನೀಡಿದ್ದು ಸುದೀಪ್ ಅವರಿಗೆ ಜ್ವರ ಕಾಣಿಸಿಕೊಂಡಿದೆ ಅಷ್ಟೇ. ಕೋವಿಡ್ ಅಲ್ಲ ಎಂದು ಕ್ಲಾರಿಟಿ ನೀಡಿದ್ದರು.    

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now