ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
68ನೇ ರಾಷ್ಟ್ರಪ್ರಶಸ್ತಿ ಕನ್ನಡ ಸಿನಿಮಾ ವಿಜೇತರಿಗೆ ವಾಣಿಜ್ಯ ಮಂಡಳಿ ವತಿಯಿಂದ ಸನ್ಮಾನ
ಅತ್ಯುತ್ತಮ ಕಲೆ ಹಾಗೂ ಸಾಂಸ್ಕೃತಿಕ ಸಿನಿಮಾ ವಿಭಾಗದಲ್ಲಿ ಗಿರೀಶ್ ಕಾಸರವಳ್ಳಿ ನಿರ್ದೇಶನದ ನಾದದ ನವನೀತ ಸಿನಿಮಾ ಹಾಗೂ ತುಳು ಭಾಷೆಯ ಜೀಟಿಗೆ ಸಿನಿಮಾ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿತ್ತು. ಈ ಸಿಮಾಗಳ ವಿಜೇತರಿಗೆ ಸನ್ಮಾನ ಕಾರ್ಯಕ್ರಮವನ್ನು ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ಡೊಳ್ಳು ಸಿನಿಮಾ ನಿರ್ಮಾಪಕರಾದ ಪವನ್ ಒಡೆಯಾರ್ ಹಾಗೂ ಅಪೇಕ್ಷಾ ಪರೋಹಿತ್, ಚಿತ್ರದ ನಿರ್ದೇಶಕ ಸಾಗರ್ ಪುರಾಣಿಕ್ ಹಾಗೂ ತಲೆದಂಡ ಚಿತ್ರದ ನಿರ್ಮಾಪಕಿ ಡಾ.ಹೇಮಾಮಾಲಿನಿ ಕೃಪಾಕರ್ ಸೇರಿದಂತೆ ಈ ಬಾರಿಯ ಪ್ರಶಸ್ತಿ ವಿಜೇತರನ್ನು ಸನ್ಮಾನಿಸಲಾಯಿತು.
ಸನ್ಮಾನ ಕಾರ್ಯಕ್ರಮದಲ್ಲಿ ಫಿಲ್ಮ್ ಚೇಂಬರ್ ಅಧ್ಯಕ್ಷರಾದ ಭಾ ಮಾ ಹರೀಶ್, ಮಾಜಿ ಅಧ್ಯಕ್ಷ ಚಿನ್ನೇಗೌಡರು ಸೇರಿದಂತೆ ಪದಾಧಿಕಾರಿಗಳು ಭಾಗಿ ಆಗಿದ್ದರು.
