• March 14, 2026

ಸಲ್ಮಾನ್ ಖಾನ್ ಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ ಸುದೀಪ್

ನಿರ್ದೇಶಕನಾಗ್ಬೇಕು ಎಂದುಕೊಂಡು ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಕಿಚ್ಚ ಸುದೀಪ್ ಆ ಬಳಿಕ ಹಿರೋ ಆಗಿ ಮಿಂಚಿದ್ದರು. ಹಿರೋ ಆಗಿ ಸ್ಯಾಂಡಲ್ ವುಡ್ ನಲ್ಲಿ ಸಕ್ಸಸ್ ಆದ ಸುದೀಪ್ ಆ ಬಳಿಕ ನಿರ್ದೇಶಕನಾಗಿಯೂ ಸೈ ಎನಿಸಿಕೊಂಡರು. ಇದೀಗ ಸುದೀಪ್ ಮತ್ತೆ ಯಾವಾಗ ನಿರ್ದೇಶನಕ್ಕೆ ಇಳಿಯುತ್ತಾರೆ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿದ್ದು ಇದೀಗ ಅದಕ್ಕೆ ಸುದೀಪ್ ಉತ್ತರ ನೀಡಿದ್ದಾರೆ. ನಟ ಕಿಚ್ಚ ಸುದೀಪ್ ಸ್ಯಾಂಡಲ್ ವುಡ್ ಜೊತೆಗೆ ಪರಭಾಷೆಯಲ್ಲಿಯೂ ಉತ್ತಮ ಸಂಬಂಧ ಹೊಂದಿದ್ದಾರೆ. ಬಾಲಿವುಡ್ ಸ್ಟಾರ್ ನಟ ಸಲ್ಮಾನ್ ಖಾನ್ ಸುದೀಪ್ ರ ಆಪ್ತ ಗೆಳೆಯ. 2019ರಲ್ಲಿ ತೆರೆಗೆ ಬಂದ ಸಲ್ಮಾನ್ ಖಾನ್ ನಟನೆಯ ದಬಾಂಗ್ 3 ಚಿತ್ರದಲ್ಲಿ ಸುದೀಪ್ ವಿಲನ್ ಪಾತ್ರದಲ್ಲಿ ಮಿಂಚಿದ್ದರು. ಚಿತ್ರದ ಶೂಟಿಂಗ್ ಸಂದರ್ಭದಲ್ಲಿ ಸುದೀಪ್ ಹಾಗೂ ಸಲ್ಮಾನ್ ನಡುವೆ ಆತ್ಮೀಯತೆ ಬೆಳೆದಿತ್ತು. ಈ ಸಂದರ್ಭದಲ್ಲಿ ಸಲ್ಮಾನ್ ಖಾನ್ ಗೆ ಸುದೀಪ್ ಕಾರನ್ನು ಉಡುಗೊರೆಯಾಗಿ ನೀಡಿದ್ದರು. ಸದ್ಯ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾ ಭರ್ಜರಿ ಯಶಸ್ಸು ಕಾಣುತ್ತಿದೆ. ಈ ಸಿನಿಮಾವನ್ನು ಹಿಂದಿಯಲ್ಲಿ ಸಲ್ಮಾನ್ ಖಾನ್ ಪ್ರಸೆಂಟ್ ಮಾಡುತ್ತಿದ್ದಾರೆ. ಹೀಗಾಗಿ ಸುದೀಪ್ ಹಾಗೂ ಸಲ್ಮಾನ್ ಕಾಂಬಿನೇಷನ್ ನ ಮುಂದಿನ ಸಿನಿಮಾ ಯಾವುದು ಅನ್ನೋ ಪ್ರಶ್ನೆಗೆ ಸುದೀಪ್ ಉತ್ತರಿಸಿದ್ದಾರೆ. ‘ಕಳೆದ ವರ್ಷವೇ ಇದಕ್ಕೆ ಪ್ರಕ್ರಿಯೆ ಆರಂಭ ಆಗಿದೆ. ನೀವು ಇನ್ನೂ ಸ್ವಲ್ಪ ಸಮಯ ಇದಕ್ಕಾಗಿ ಕಾಯಬೇಕಾಗುತ್ತದೆ. ನಾನು ಸಲ್ಮಾನ್ ಖಾನ್ ಅವರಿಗೆ ಕಥೆ ಹೇಳಬೇಕು. ಅವರು ಅದಕ್ಕೆ ಓಕೆ ಹೇಳಬೇಕು. ನಂತರ ಅವರು ಸೆಟ್​ಗೆ ಬರಬೇಕು. ನಾವು ಈ ಬಗ್ಗೆ ಚರ್ಚೆ ಮಾಡುತ್ತಲೇ ಇರುತ್ತೇವೆ. ಅವರು ಹಲವು ಪ್ರಾಜೆಕ್ಟ್​ಗಳಲ್ಲಿ ಬ್ಯುಸಿ ಇದ್ದಾರೆ. ಸರಿಯಾದ ಸಮಯಕ್ಕೆ ಎಲ್ಲವೂ ಆಗಲಿದೆ’ ಎಂದು ಸುದೀಪ್ ಹೇಳಿದ್ದಾರೆ. ಈ ಮೂಲಕ ಸದ್ಯದಲ್ಲೇ ಸುದೀಪ್ ನಿರ್ದೇಶನಕ್ಕೆ ಇಳಿಯಲ್ಲಿದ್ದು ಸಲ್ಮಾನ್ ಜೊತೆ ಸಿನಿಮಾ ಮಾಡೋದು ಕನ್ಪಾರ್ಮ್ ಆಗಿದೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now