• June 4, 2026

ವಿಜಯ್ ರಾಘವೇಂದ್ರ ಹಾಗೂ ಹರ್ಷಿಕಾ ನಟನೆಯ ‘ಕಾಸಿನ ಸರ’ ಚಿತ್ರದ ಮುಹೂರ್ತ

ಸ್ಯಾಂಡಲ್ ವುಡ್ ಸಿನಿ ರಂಗದಲ್ಲಿ ವಿಭಿನ್ನ ಪಾತ್ರಗಳ ಮೂಲಕ ಪ್ರೇಕ್ಷಕರ ಮನ ಗೆದ್ದಿರುವ ನಟಿ ಹರ್ಷಿಕಾ ಪೂಣಚ್ಚ ಇದೀಗ ಮತ್ತೊಂದು ವಿಭಿನ್ನ ಪಾತ್ರದ ಮೂಲಕ ಅಭಿಮಾನಿಗಳ ಮನ ಗೆಲ್ಲೋಕೆ ರೆಡಿಯಾಗಿದ್ದಾರೆ. ಕೊಡಗಿನ ಕುವರಿಗೆ ನಟ ವಿಜಯ್ ರಾಘವೇಂದ್ರ ಸಾಥ್ ನೀಡುತ್ತಿದ್ದಾರೆ. ಹಿರಿಯ ನಿರ್ದೇಶಕ ನಂಜುಂಡೇಗೌಡ ನಿರ್ದೇಶನದ ಕಾಸಿನ ಸರ ಸಿನಿಮಾದಲ್ಲಿ ನಟಿ ಹರ್ಷಿಕಾ ಪೂಣಚ್ಚ ಬಣ್ಣ ಹಚ್ಚುತ್ತಿದ್ದಾರೆ. ಈ ಚಿತ್ರದ ಮುಹೂರ್ತ ಇತ್ತೀಚೆಗಷ್ಟೇ ನೆರವೇರಿದ್ದು ಸಚಿವ ಎಸ್ ಟಿ ಸೋಮಶೇಖರ್ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಕಾಸಿನ ಸರ ಸಿನಿಮಾದಲ್ಲಿ ಹರ್ಷಿಕಾ ಸಂಪಿಗೆ ಪಾತ್ರದಲ್ಲಿ ಕಾಣಿಸಿಕೊಳ್ತಿದ್ದಾರೆ. ಇದುವರೆಗೂ ಮಾಡಿರದ ಕೃಷಿಯಲ್ಲಿ ತೊಡಗಿಸಿಕೊಳ್ಳುವ ಯುವತಿಯ ಪಾತ್ರದಲ್ಲಿ ಹರ್ಷಿಕಾ ನಟಿಸಲಿದ್ದಾರೆ. ಚಿತ್ರದಲ್ಲಿ ನಟ ವಿಜಯ್ ರಾಘವೇಂದ್ರ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ದೊಡ್ಡ ನಾಗಯ್ಯ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಗ್ರಾಮೀಣ ಭಾಗದ ಕಥೆಯಾದ್ದರಿಂದ ಚೆನ್ನಪಟ್ಟಣ್ಣ, ಮಳವಳ್ಳಿ ಮುಂತಾದ ಕಡೆ 40 ದಿನಗಳ ಚಿತ್ರೀಕರಣ ನಡೆಯಲಿದೆ. ಕಾಸಿನ ಸರ ಚಿತ್ರದ ಮುಹೂರ್ತದ ಸಂದರ್ಭದಲ್ಲಿ ಛಾಯಗ್ರಾಹಕ ವೇಣುಗೋಪಾಲ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಬಾ.ಮಾ.ಹರೀಶ್, ಹಿರಿಯ ನಿರ್ಮಾಪಕರಾದ ಚಿನ್ನೇಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now