ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಅರ್ಜುನ್ ಕಪೂರ್ ಸಾರ್ವಜನಿಕರಿಗೆ ಬೆದರಿಕೆ ಹಾಕುವ ಬದಲು ನಟನೆ ಬಗ್ಗೆ ಗಮನ ಕೊಡಲಿ: ನರೋತ್ತಮ್ ಮಿಶ್ರಾ
ಸಿನಿಮಾ ರಂಗದಲ್ಲಿ ಬಾಯ್ ಕಾಟ್ ಬೆಳಯಲು ಬಿಡಬಾರದು. ಚಿಗುರಿನಲ್ಲೇ ಚಿವುಟಿ ಹಾಕಬೇಕು. “ನಾವು ತುಂಬ ಸಮಯದಿಂದ ಮೌನವಾಗಿದ್ದು ತಪ್ಪು ಮಾಡಿದೆವು. ನಮ್ಮ ಶಿಸ್ತನ್ನು ವೀಕ್ನೆಸ್ ಆಗಿ ಪರಿಗಣಿಸಲಾಗಿದೆ. ನಾವು ತುಂಬ ಸಹಿಸಿಕೊಂಡಿದ್ದು, ಅದನ್ನೇ ಜನರು ಬಳಸಿಕೊಂಡಿದ್ದಾರೆ. ನಾವೆಲ್ಲ ಒಟ್ಟಾಗಿ ಪ್ರಾಮಾಣಿಕತೆಯಿಂದ ಏನಾದರೂ ಮಾಡಬೇಕು. ಈಗ ಏನು ಬರೆಯಲಾಗುತ್ತಿದೆಯೋ, ಏನು ಹ್ಯಾಶ್ಟ್ಯಾಗ್ ಕ್ರಿಯೇಟ್ ಮಾಡಲಾಗುತ್ತಿದೆಯೋ ಅದು ರಿಯಾಲಿಟಿಯಿಂದ ತುಂಬ ದೂರ ಇದೆ” ಎಂದು ಅರ್ಜುನ್ ಕಪೂರ್ ಅಸಮಧಾನ ಹೊರ ಹಾಕಿದ್ದರು.
ಅರ್ಜುನ್ ಹೇಳಿಕೆಗೆ ಪ್ರತಿಕ್ರಿಯಿಸಿದ ಬಿಜೆಪಿಯ ನರೋತ್ತಮ್ ಮಿಶ್ರಾ, “ನಟ ಅರ್ಜುನ್ ಕಪೂರ್ ಅವರು ಸಮಾಜಕ್ಕೆ ಧಮ್ಕಿ ಹಾಕೋದು ಸರಿಯಲ್ಲ. ಸಾರ್ವಜನಿಕರಿಗೆ ಬೆದರಿಕೆ ಹಾಕುವ ಬದಲು, ನಟನೆ ಬಗ್ಗೆ ಗಮನ ಕೊಡಲಿ. ತಮ್ಮ ಸಿನಿಮಾಗಳಲ್ಲಿ ಹಿಂದೂ ಧರ್ಮವನ್ನು ಗುರಿಯಾಗಿಟ್ಟುಕೊಂಡು ಕೆಲ ಗ್ಯಾಂಗ್ ಸಾರ್ವಜನಿಕರಿಗೆ ಬಾಯ್ಕಾಟ್ ವಿಚಾರವಾಗಿ ಬೆದರಿಕೆಯನ್ನು ಏಕೆ ಹಾಕುತ್ತಾರೆ?” ಎಂದು ಪ್ರಶ್ನೆ ಮಾಡಿದ್ದಾರೆ.
