• January 2, 2026

ಅನಿರುದ್ಧ್ ಇಲ್ಲದೆ ನಡೆಯಿತು ‘ಜೊತೆ ಜೊತೆಯಲಿ’ ಧಾರವಾಹಿ ಶೂಟಿಂಗ್

ಝೀ ಕನ್ನಡದ ಖ್ಯಾತ ಧಾರವಾಹಿ ಜೊತೆ ಜೊತೆಯಲ್ಲಿ ತಂಡದಿಂದ ನಟ ಅನಿರುದ್ಧ್ ಅವರನ್ನು ಕೈ ಬಿಡಲಾಗಿದೆ. ಅನಿರುದ್ಧ್ ಹಾಗೂ ಧಾರವಾಹಿ ತಂಡದಲ್ಲಿ ಮನಸ್ತಾಪ ಶುರುವಾಗಿದ್ದು ಇಂದು ಅನಿರುದ್ಧ್ ಇಲ್ಲದೆ ಚಿತ್ರೀಕರಣ ಮಾಡಲಾಗಿದೆ. ಅಲ್ಲದೆ ಅನಿರುದ್ಧ್ ನಿರ್ವಹಿಸುತ್ತಿದ್ದ ಆರ್ಯವರ್ಧನ್ ಪಾತ್ರಕ್ಕೆ ಹೊಸ ಕಲಾವಿದರನ್ನು ಧಾರವಾಹಿ ತಂಡ ಹುಡುಕುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಜೊತೆ ಜೊತೆಯಲಿ ಧಾರವಾಹಿಯ ನಿರ್ದೇಶಕ ಹಾಗೂ ನಿರ್ಮಾಪಕ ಆರೂರು ಜಗದೀಶ್, ‘ಜೊತೆ ಜೊತೆಯಲಿ ಧಾರಾವಾಹಿಗೆ ಕಥೆಯೇ ಹೀರೋ ಹಾಗೂ ಹಿರೋಯಿನ್. ಯಾರೇ ಇರಲಿ, ಇರದೇ ಇರಲಿ ಧಾರಾವಾಹಿ ನಡೆಯಲೇಬೇಕು. ಈ ಧಾರಾವಾಹಿ ನಂಬಿಕೊಂಡು ನನ್ನನ್ನೂ ಸೇರಿದಂತೆ ಹಲವರು ಇದ್ದಾರೆ. ಹಾಗಾಗಿ ಚಿತ್ರೀಕರಣ ಮುಂದುವರೆಸಲೇಬೇಕಿದೆ’ ಎಂದಿದ್ದಾರೆ. ಈ ಮೂಲಕ ಅನಿರುದ್ಧ್ ಇಲ್ಲದೆಯೂ ಧಾರವಾಹಿ ಮುಂದುವರೆಯುತ್ತದೆ ಎಂಬುದನ್ನು ಸ್ಪಷ್ಟವಾಗಿ ಹೇಳಿದ್ದಾರೆ. ಕಳೆದ ಕೆಲ ದಿನಗಳಿಂದ ಅನಿರುದ್ಧ್ ಸೆಟ್ ನಲ್ಲಿ ಅಸಹಕಾರ ತೋರಿದ್ದಾರೆ ಎನ್ನಲಾಗುತ್ತಿದೆ. ಇತ್ತೀಚೆಗೆ ಅನಿರುದ್ಧ್ ವರ್ತನೆ ಮತ್ತಷ್ಟ ಬದಲಾಗಿದ್ದು ಇದರಿಂದ ಧಾರವಾಹಿ ತಂಡ ಬೇಸತ್ತುಹೋಗಿದೆ. ಇದೇ ಕಾರಣದಿಂದ ಅನಿರುದ್ಧ್ ರನ್ನು ಧಾರವಾಹಿ ತಂಡದಿಂದ ಕೈ ಬಿಡುವ ಕುರಿತು ಮಾತುಕತೆ ನಡೆಯುತ್ತಿದೆ. ಇನ್ನೂ ಈ ಬಗ್ಗೆ ಪ್ರತಿಕ್ರಿಯಿಸಿರುವ ಅನಿರುದ್ಧ್ ಒಂದು ವೇಳೆ ಧಾರವಾಹಿಯಿಂದ ಕೈ ಬಿಟ್ಟರೆ ಪತ್ರಿಕಾಗೋಷ್ಠಿ ಮಾಡುವುದಾಗಿ ಹೇಳಿದ್ದಾರೆ. ಈ ಬಗ್ಗೆ ನಿರ್ಮಾಪಕ ಜಗದೀಶ್ ಹಾಗೂ ನಿರ್ದೇಶಕ ಆರೂರು ಜಗದೀಶ್ ಕೂರಿಸಿಕೊಂಡು ವಾಹಿನಿಯು ಮಾತನಾಡಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now