ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಆಲಿಯಾ ಭಟ್, ರಣಬೀರ್ ಕಪೂರ್ ನಟನೆಯ ಬ್ರಹ್ಮಾಸ್ತ್ರಕ್ಕೂ ಬಾಯ್ಕಾಟ್ ಬಿಸಿ
ಈಗಾಗಲೇ ಬಿಡುಗಡೆ ಆಗಿರುವ ಟ್ರೈಲರ್ ನಲ್ಲಿ ಹಿಂದೂ ದೇವರುಗಳಿಗೆ ರಣಬೀರ್ ಅವಮಾನ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತವಾಗಿತ್ತು. ಬಳಿಕ ಸಿನಿಮಾ ನಿರ್ದೇಶಕರು ಅದಕ್ಕೆ ಸ್ಪಷ್ಟನೆಯನ್ನೂ ನೀಡಿದ್ದರು. ಇತ್ತೀಚೆಗೆ ಬಾಯ್ಕಾಟ್ ಕುರಿತಂತೆ ಆಲಿಯಾ ಭಟ್ ಆಡಿದ ಮಾತುಗಳು ಹಲವರ ಕಂಗೆಣ್ಣಿಗೆ ಗುರಿಯಾಗಿತ್ತು. ಬಾಯ್ಕಾಟ್ ಮಾಡುವವರ ವಿರುದ್ಧ ಗುಡುಗಿದ್ದ ಆಲಿಯಾ, ನನ್ನ ಸಿನಿಮಾ ನೋಡದೇ ಇದ್ದರೆ ಬಿಡಿ ಎನ್ನುವ ಅರ್ಥದಲ್ಲಿ ಮಾತನಾಡಿದ್ದರು. ಬಲವಂತವಾಗಿ ನೋಡಿ ಅಂತ ಹೇಳುತ್ತಿರುವವರು ಯಾರು ಎಂದು ಎಂದಿದ್ದರು.
ಸದ್ಯ ಟ್ರೈಲರ್ ನಲ್ಲಿ ಉಂಟಾದ ವಿವಾದ ಹಾಗೂ ಆಲಿಯಾ ಭಟ್ ಹೇಳಿಕೆಯಿಂದ ಸಿನಿ ಪ್ರೇಕ್ಷಕರು ರೊಚ್ಚಿಗೆದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಬ್ರಹ್ಮಾಸ್ತ್ರ ಸಿನಿಮಾವನ್ನು ಬಾಯ್ ಕಾಟ್ ಮಾಡಬೇಕು ಎನ್ನುವ ಮಾತುಗಳು ಕೇಳಿ ಬರ್ತಿದೆ.
