• March 14, 2026

ಕಾಶಿಯಾತ್ರೆಗೆ ಹೊರಟು ನಿಂತ ನಟ ಪ್ರಮೋದ್ ಶೆಟ್ಟಿ

2014ರಲ್ಲಿ ತೆರೆಕಂಡ ಉಳಿದವರ ಕಂಡಂತೆ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ಪ್ರತಿಭಾವಂತ ನಟ ಪ್ರಮೋದ್ ಶೆಟ್ಟಿ.ಇದುವರೆಗೂ ಸಾಕಷ್ಟು ಸಿನಿಮಾಗಳಲ್ಲಿ ಕಾಣಿಸಿಕೊಂಡು ಅಭಿಮಾನಿಗಳ ಮನ ಗೆದ್ದ ಪ್ರಮೋದ್ ಶೆಟ್ಟಿ ಇದೇ ಮೊದಲ ಭಾರಿಗೆ ನಾಯಕನಾಗಿ ಸಿನಿಮಾವೊಂದಕ್ಕೆ ಬಣ್ಣ ಹಚ್ಚಿದ್ದಾರೆ. ವಿನಯ್ ಶಾಸ್ತ್ರಿ ನಿರ್ದೇಶನದ ಕಾಶಿಯಾತ್ರೆ ಸಿನಿಮಾದಲ್ಲಿ ಪ್ರಮೋದ್ ನಾಯಕನಾಗಿ ಕಾಣಿಸಿಕೊಂಡಿದ್ದಾರೆ.ಇತ್ತೀಚೆಗಷ್ಟೇ ಪ್ರಮೋದ್ ಹುಟ್ಟುಹಬ್ಬ ಆಚರಿಸಿಕೊಂಡಿದ್ದು ಈ ಹಿನ್ನೆಲೆಯಲ್ಲಿ ಚಿತ್ರತಂಡ ಉಡುಗೊರೆಯಾಗಿ ಕಾಶಿಯಾತ್ರೆ ಸಿನಿಮಾದ ಟೀಸರ್ ರಿಲೀಸ್ ಮಾಡಿದೆ. ಟೀಸರ್ ನಲ್ಲಿ ಯಾಶಿಯಾತ್ರೆಗೆ ಹೊರಟು ನಿಂತಿರುವ ಮದುಮಗನ ವೇಷದಲ್ಲಿ ಪ್ರಮೋದ್ ಕಾಣಿಸಿಕೊಂಡಿದ್ದು ಅಭಿಮಾನಿಗಳು ಫುಲ್ ಖುಷಿಯಾಗಿದ್ದಾರೆ. ಈ ಮೊದಲು ಕಿರುಚಿತ್ರಗಳನ್ನು ನಿರ್ದೇಶಿಸಿ ಅನುಭವ ಇರುವ ವಿನಯ್ ಶಾಸ್ತ್ರಿ ಇದೇ ಮೊದಲ ಬಾರಿಗೆ ಹಿರಿತೆರೆಯ ಸಿನಿಮಾಗೆ ಆಕ್ಷನ್ ಕಟ್ ಹೇಳ್ತಿದ್ದಾರೆ. gunnybag studios ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ವಿಶ್ವಿ ಸಂಗೀತ ನಿರ್ದೇಶನ ಹಾಗೂ ಸುನೀತ್ ಹಲಗೇರಿ ಅವರ ಛಾಯಾಗ್ರಹಣವಿದೆ‌. ಸೆಪ್ಟೆಂಬರ್ 12ರಿಂದ ಬೆಂಗಳೂರು ಹಾಗೂ ಮೈಸೂರಿನಲ್ಲಿ “ಕಾಶಿಯಾತ್ರೆ” ಚಿತ್ರದ ಚಿತ್ರೀಕರಣ ಆರಂಭವಾಗಲಿದ್ದು, ಪ್ರಮೋದ್ ಶೆಟ್ಟಿ, ಟಿ.ಎಸ್.ನಾಗಾಭರಣ, ಚಿತ್ತರಂಜನ್ ಕಶ್ಯಪ್, ಸ್ವರ ಶೆಟ್ಟಿ ಮುಂತಾದವರು ಈ ಚಿತ್ರದಲ್ಲಿ ಕಾಣಿಸಿಕೊಳ್ತಿದ್ದಾರೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now