• March 15, 2026

ಕೆಜಿಎಫ್ 2 ಬಳಿಕ ಸ್ಯಾಂಡಲ್ ವುಡ್ ಗೆ ಮತ್ತೆ ಸಂಜಯ್ ದತ್: ಧ್ರುವ ಸರ್ಜಾ ಮುಂದೆ ಅಬ್ಬರಿಸಲು ರೆಡಿಯಾದ ‘ಅಧೀರ’

ಕೆಜಿಎಫ್ ಚಾಫ್ಟರ್ 2 ಬಳಿಕ ನಟ ಸಂಜಯ್ ದತ್ ಸಿನಿ ಜರ್ನಿಯ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ. ಕಳೆದ ಕೆಲ ವರ್ಷಗಳಿಂದ ಸಿನಿಮಾ ರಂಗದಿಂದ ಕೊಂಚ ದೂರವಾಗಿದ್ದ ಸಂಜಯ್ ದತ್ ಕೆಜಿಎಫ್ ಚಾಪ್ಟರ್ 2 ಬಳಿಕ ಮತ್ತೆ ಆಕ್ಟೀವ್ ಆಗಿದ್ದಾರೆ. ಅಧೀರನ ಪಾತ್ರ ಪ್ರೇಕ್ಷಕರನ್ನು ಮೋಡಿ ಮಾಡಿದ್ದು ಇದೀಗ ಸಂಜಯ್ ದತ್ ಮತ್ತೆ ಸ್ಯಾಂಡಲ್ ವುಡ್ ಗೆ ಬರಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಕೆಜಿಎಫ್ ಸಿನಿಮಾದ ಬಳಿಕ ವಿಲನ್ ಪಾತ್ರಗಳಿಗೆ ಸಂಜಯ್ ದತ್ ರನ್ನು ಹೆಚ್ಚಾಗಿ ಆಫರ್ ಮಾಡಲಾಗುತ್ತಿದೆ. ಮೊದಲು ಬಾಲಿವುಡ್ ಸಿನಿಮಾಗಳಲ್ಲಿ ಕಾಣಿಸಿಕೊಳ್ತಿದ್ದ ಸಂಜಯ್ ದತ್ ಕೆಜಿಎಫ್ ಚಾಪ್ಟರ್ 2 ಬಳಿಕ ದಕ್ಷಿಣ ಭಾರತದ ಚಿತ್ರದಲ್ಲೂ ಡಿಮ್ಯಾಂಡ್ ಕ್ರಿಯೇಟ್ ಮಾಡಿದ್ದಾರೆ. ವಿಜಯ್ ದಳಪತಿ ನಟನೆಯ ಮುಂದಿನ ಸಿನಿಮಾದಲ್ಲಿ ವಿಲನ್ ಆಗಿ ಅಬ್ಬರಿಸಲು ಸಂಜಯ್ ದತ್ ಗೆ ಆಫರ್ ಮಾಡಿದ್ದು ಸಂಜಯ್ 10 ಕೋಟಿ ಡಿಮ್ಯಾಂಡ್ ಮಾಡಿದ್ದಾರೆ ಎನ್ನಲಾಗುತ್ತಿದೆ. ಈ ಮಧ್ಯೆ ಮತ್ತೆ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಡ್ತಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಆಕ್ಷನ್ ಪ್ರಿನ್ಸ್ ಧೃವ ಸರ್ಜಾ ಹಾಗೂ ಜೋಗಿ ಪ್ರೇಮ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ನಟಿಸಲು ಸಂಜಯ್ ದತ್ ರನ್ನು ಕರೆ ತರುವುದು ಬಹುತೇಕ ಖಚಿತವಾಗಿದೆಯಂತೆ. ಮೂಲಗಳ ಪ್ರಕಾರ ಕಥೆ ಕೇಳಿರೋ ಸಂಜಯ್ ದತ್ ಚಿತ್ರದಲ್ಲಿ ನಟಿಸಲು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎನ್ನಲಾಗುತ್ತಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಸಂಜಯ್ ದತ್ ಸದ್ಯದಲ್ಲೇ ಗಾಂಧಿನಗರಕ್ಕೆ ಬರಲಿದ್ದಾರೆ. ಧ್ರುವ-ಪ್ರೇಮ್ ಕಾಂಬಿನೇಷನ್ ಚಿತ್ರಕ್ಕೆ ಕೆವಿಎನ್ ಪ್ರೊಡಕ್ಷನ್ ಬಂಡವಾಳ ಹೂಡಿದ್ದು, ಏಪ್ರಿಲ್‌ ತಿಂಗಳಿನಿಂದಲೇ ಚಿತ್ರಕ್ಕೆ ಅಧಿಕೃತ ಚಾಲನೆ ಸಿಕ್ಕಿದೆ. ಅಕ್ಟೋಬರ್ ಮೊದಲ ವಾರದಲ್ಲಿ ಟೈಟಲ್ ಟೀಸರ್ ಅನ್ನು ಅನಾವರಣಗೊಳಿಸಲು ಪ್ರೇಮ್ ಸಿದ್ದತೆ ಮಾಡಿಕೊಳ್ತಿದ್ದಾರೆ. 1968-1978ರ ನಡುವೆ ನಡೆಯುವ ನೈಜ ಘಟನೆಯನ್ನು ಆಧರಿಸಿ ಕಥೆ ರೆಡಿಮಾಡಲಾಗಿದ್ದು ಚಿತ್ರಕ್ಕಾಗಿ ದೈತ್ಯಾಕಾರದ ಸೆಟ್‌ಗಳನ್ನು ನಿರ್ಮಿಸಲು ಚಿತ್ರತಂಡ ಮುಂದಾಗಿದೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now