ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ದೇವರೇ ರಿಷಬ್ ಶೆಟ್ಟಿ ಕೈಯಲ್ಲಿ ಇಂಥ ಅದ್ಭುತ ಸಿನಿಮಾ ಮಾಡಿಸಿದ್ದಾರೆ: ಕಾಂತಾರದ ಬಗ್ಗೆ ಮೆಚ್ಚಿ ಮಾತನಾಡಿದ ನಟ ಜಗ್ಗೇಶ್
ಇತ್ತೀಚಿನ ಚಿತ್ರ ಕಾಂತಾರ ವಿದೇಶಕ್ಕೆ ಬಂದ ಕಾರಣ ನೋಡಲಾಗಲಿಲ್ಲಾ. ಆದರೆ ನನ್ನ ಅಕ್ಕನ ಮಗ ಹಾಗೂ ನನ್ನ ಅನೇಕ ಚಿತ್ರ ‘ಗುರು’, ‘ಮೇಲುಕೋಟೆ ಮಂಜ’ ಚಿತ್ರದಲ್ಲಿ ಖಳನಟನಾಗಿ ಅಭಿನಯಿಸಿದ, ಇಂದು ಅಮೇರಿಕದ ಡೆನ್ವರ್ನಲ್ಲಿ ಒರ್ಯಾಕಲ್ ಸಂಸ್ಥೆಯಲ್ಲೇ ಶ್ರೇಷ್ಠ ಸ್ಥಾನದಲ್ಲಿದ್ದು, ಅವನ ಮನೆ ಹತ್ತಿರದಲ್ಲೇ ಮಾಲ್ ಇತ್ತು. ಅಲ್ಲಿ ‘ಕಾಂತಾರ’ ನೋಡುವ ಅವಕಾಶ ಸಿಕ್ಕಿತು ನೋಡಿ ಬಂದೆ.
ನಾನು ದಕ್ಷಿಣ ಕನ್ನಡದ ದೇವಾಲಯದ ಭಕ್ತ. ವರ್ಷಕ್ಕೆ ಒಂದು ಬಾರಿ ಪೊಳಲಿ, ಕಟೀಲು, ಉಡುಪಿ ಕೃಷ್ಣ, ಮೂಕಾಂಬಿಕೆ, ಕೊರಗಜ್ಜ, ಅಂಬಲಪಾಡಿ, ಉಡುಪಿ ರಾಯರ ಮಠ ದರ್ಶನ ಪಡೆವುದು ನನ್ನ 30ವರ್ಷದ ಅಭ್ಯಾಸ. ಇದು ನನ್ನ ಪ್ರಕಾರ ಶ್ರೇಷ್ಠ ದೇವಭೂಮಿ ಆಧ್ಯಾತ್ಮಿಕ ಅನುಭವಕ್ಕೆ ಇದು ಸಂತೃಪ್ತ ಭಾವ ಸಿಗುತ್ತದೆ. ಇಂಥ ನಾಡಿನಿಂದ ಎಂಥ ಅದ್ಭುತ ನಟ ನಿರ್ದೇಶಕ ರಿಷಭ್ ಶೆಟ್ಟಿ ಹುಟ್ಟಿಬಂದ, ಎಂಥ ಅದ್ಭುತ ಕೊಡುಗೆ ಈತ ಕನ್ನಡ ಚಿತ್ರರಂಗಕ್ಕೆ. ಕಡೆಯ 25 ನಿಮಿಷ ನಾನು ಎಲ್ಲಿರುವೆ ಮರೆತು ಹೋಯಿತು. ಚಿತ್ರ ನೋಡಿದ ಮೇಲೆ ಮೌನವಾಯಿತು ದೇಹ, ಮನಸ್ಸು. ಹೊರಬಂದಾಗ ಮಂತ್ರಾಲಯ ನರಸಿಂಹಚಾರ್ ವಾಟ್ಸ್ಯಾಪ್ ಕರೆಮಾಡಿ ರಾಯರ ದರ್ಶನ ಮಾಡಿಸಿದರು.
ನಂತರ ನನಗೆ ಅನ್ನಿಸಿದ್ದು ಇದು ರಿಷಬ್ ಮಾಡಿದ ಚಿತ್ರವಲ್ಲಾ. ಬದಲಿಗೆ ಆತನ ವಂಶೀಕರ ತಂದೆ ತಾಯಿಯ ಆಶೀರ್ವಾದ, ನಶಿಸುತ್ತಿರುವ ಆಧ್ಯಾತ್ಮಿಕ ಭಾವ ಮತ್ತೆ ಮನುಷ್ಯರಿಗೆ ನೆನಪಿಸಲು ದೇವರೆ ಬಂದು ಆತನ ಕೈಯಲ್ಲಿ ಇಂಥ ಅದ್ಭುತ ಸಿನಿಮ ಮಾಡಿಸಿದ್ದಾರೆ. ದೇವರು ನೂರ್ಕಾಲ ಆಯುಷ್ಯ ಆರೋಗ್ಯ ರಿಷಬನಿಗೆ ಕೊಟ್ಟು, ಕನ್ನಡ ಕಲಾರಂಗಕ್ಕೆ ಆತನ ಸೇವೆ ಇದೆ ರೀತಿ ಮುಂದುವರಿಯಲಿ ಎಂದು ನನ್ನ ಶುಭಹಾರೈಕೆ. ಕಾಂತಾರ ಸಿನಿಮಾ ಅಲ್ಲಾ ರೋಮಾಂಚನ ಅನುಭವ. ಇಡೀ ತಂಡಕ್ಕೆ ದೇವರು ಒಳ್ಳೆಯದು ಮಾಡಲಿ ಎಂದು ಜಗ್ಗೇಶ್ ಬರೆದುಕೊಂಡಿದ್ದಾರೆ.
