• January 1, 2026

ನಟ ಶ್ರೀವಿಷ್ಣು ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ತೆಲುಗು ನಟ ಶ್ರೀವಿಷ್ಣು ಆರೋಗ್ಯದಲ್ಲಿ ವ್ಯತ್ಯಾಸವಾಗಿದ್ದು ಹೈದರಾಬಾದ್ ನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಳೆದ ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಶ್ರೀವಿಷ್ಣು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಆದರೆ ನಿನ್ನೆ ರಾತ್ರಿಯಿಂದ ಮತ್ತೆ ವಿಪರೀತ ಜ್ವರ ಹೆಚ್ಚಾದ ಕಾರಣ ಶ್ರೀವಿಷ್ಣು ಅವರನ್ನು ಎಮರ್ಜೆನ್ಸಿ ವಾರ್ಡ್ ಗೆ ದಾಖಲಿಸಲಾಗಿದೆ. ಶ್ರೀವಿಷ್ಣು ಅವರಿಗೆ ಡೆಂಗ್ಯೂ ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ಲೇಟ್ ಲೇಟ್ಸ್ ಸಂಖ್ಯೆ ತುಂಬಾ ಕಮ್ಮಿಯಾಗಿದ್ದು, ವಿಷ್ಣು ಗಂಭೀರ ಸ್ಥಿತಿಯಲ್ಲಿದ್ದಾರೆ.ಸದ್ಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಪ್ರಾಣಕ್ಕೆ ಅಪಾಯವಿಲ್ಲ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. ಶ್ರೀವಿಷ್ಣು ನಟನೆಯ ಅಲ್ಲೂರಿ ಸಿನಿಮಾದ ಟ್ರೈಲರ್ ಇತ್ತೀಚೆಗಷ್ಟೇ ಬಿಡುಗಡೆ ಆಗಿದೆ. ಸದ್ಯದಲ್ಲೇ ಸಿನಿಮಾ ಬಿಡುಗಡೆ ಆಗಲಿದ್ದು ಸಿನಿಮಾದ ಕೆಲಸಗಳಲ್ಲಿ ಶ್ರೀವಿಷ್ಣು ತೊಡಗಿಕೊಂಡಿದ್ದರು. ಈ ಮಧ್ಯೆ ಆರೋಗ್ಯ ಬಿಗಡಾಯಿಸಿಕೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಶ್ರೀವಿಷ್ಣು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now