• March 20, 2026

ಬೆಂಕಿಗೆ ತುಪ್ಪ ಸುರಿಯೋ ಕೆಲಸ ಮಾಡಲ್ಲ: ಕಾಂತಾರ ಕುರಿತು ಚೇತನ್ ಹೇಳಿಕೆಗೆ ಉಪೇಂದ್ರ ಪ್ರತಿಕ್ರಿಯೆ

ರಿಷಬ್ ಶೆಟ್ಟಿ ನಟನೆಯ ಕಾಂತಾರ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ದೇಶ ವಿದೇಶದಲ್ಲಿ ಸದ್ದು ಮಾಡುತ್ತಿರುವ ಕಾಂತಾರ ಸಿನಿಮಾದ ಕುರಿತಾಗಿ ನಟ ಚೇತನ್ ಕುಮಾರ್ ವಿವಾದಾತ್ಮಕ ಹೇಳಿಕೆ ನೀಡಿದ್ದು ಇದೀಗ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಇದೀಗ ರಿಯಲ್ ಸ್ಟಾರ್ ಉಪೇಂದ್ರ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.   ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ತೊಡಗಿಕೊಂಡಿರುವ ನಟ ಉಪೇಂದ್ರ ಕಾಂತಾರ ಸಿನಿಮಾದ ಕುರಿತು ನಟ ಚೇತನ್ ನೀಡಿರುವ ಹೇಳಿಕೆಯ ಕುರಿತಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಚೇತನ್ ನೀಡಿರುವ ಹೇಳಿಕೆಯ ಕುರಿತು ನಾನು ಏನು ಹೇಳಲ್ಲ ಎಂದಿದ್ದಾರೆ.   ಈ ತರದ ಬೆಳವಣಿಗೆ ಅಸಹ್ಯ ಅನಿಸುತ್ತಿದೆ. ಬೆಂಕಿಗೆ ತುಪ್ಪ ಸುರಿಯೋ ಕೆಲಸ ನಾನು ಮಾಡಲ್ಲ. ಭೂತಾರಾಧನೆ ಅವರವರ ವೈಯಕ್ತಿಕ ನಂಬಿಕೆ. ನಾನು ಅದೇ ಊರಿನಿಂದ ಬಂದವನು. ನನಗೆ ಭೂತಾರಾಧನೆ ಬಗ್ಗೆ ವಿಶೇಷವಾದ ನಂಬಿಕೆ ಇದೆ ಜೊತೆಗೆ ನನ್ನ ತಂದೆ ಇವತ್ತಿಗೂ ನಾಗರಾದನೆಯನ್ನೂ ಮಾಡಿಕೊಂಡು ಬರುತ್ತಿದ್ದಾರೆ. ಅದು ತುಂಬಾ ನಂಬಿಕೆ ಇರೋ ಜಾಗ. ಆ ಬಗ್ಗೆ ಮಾತನಾಡಬಾರದು ಎಂದು ಚೇತನ್ ಹೇಳಿಕೆಗೆ ಉಪೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now