ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಮನೆಗೆ ಮಕ್ಕಳು ಬಂದ ಖುಷಿಯಲ್ಲಿರುವ ನಯನತಾರ, ವಿಘ್ನೇಶ್: ತನಿಖೆಗೆ ಆದೇಶಿಸಿದ ತಮಿಳುನಾಡು ಸರ್ಕಾರ
ಜೂನ್ ತಿಂಗಳಲ್ಲಿ ತಮಿಳುನಾಡಿನ ಮಹಾಬಲಿಪುರಂ ರೆಸಾರ್ಟ್ ನಲ್ಲಿ ವಿಘ್ನೇಶ್ ಶಿವನ್ ಹಾಗೂ ನಯನತಾರ ಅದ್ದೂರಿಯಾಗಿ ಹಸೆಮಣೆ ಏರಿದ್ದರು. ಆದರೆ ಮದುವೆಗೂ ಮೊದಲೇ ಈ ಜೋಡಿಗಳು ಬಾಡಿಗೆ ತಾಯಿಯಾಗುವ ಪ್ಲಾನ್ ಮಾಡಿದ್ದರು. ಆದರೆ ಕಳೆದ ವರ್ಷ ಡಿಸೆಂಬರ್ ತಿಂಗಳಲ್ಲೇ ಬಾಡಿಗೆ ತಾಯ್ತನ ನಿಯಂತ್ರಣ ಕಾಯ್ದೆಯನ್ನು ಜಾರಿ ಮಾಡಲಾಗಿದೆ.
ಬಾಡಿಗೆ ತಾಯ್ತನ ನಿಯಂತ್ರಣ ಕಾಯ್ದೆಯ ಪ್ರಕಾರ ಬಾಡಿಗೆ ತಾಯಿ ಆರೋಗ್ಯವಾಗಿರಬೇಕು, ಆಕೆಯ ವಯಸ್ಸು 21-35ರ ಅಂತರದಲ್ಲಿ ಇರಬೇಕು. ಒಂದೇ ಸಲ ಬಾಡಿಗೆ ತಾಯಿ ಆಗಲು ಸಾಧ್ಯ ಹಾಗೂ ವಾಣಿಜ್ಯ ಬಾಡಿಗೆ ತಾಯ್ತನದ ಮೇಲೆ ನಿರ್ಬಂಧ ಹೇರಲಾಗಿದೆ. ಆದರೆ ಇವುಗಳನ್ನು ನಯನತಾರ ಹಾಗೂ ವಿಘ್ನೇಶ್ ಶಿವನ್ ದಂಪತಿ ಗಾಳಿಗೆ ತೂರಿದ್ದಾರೆ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ತನಿಖೆಗೆ ಆದೇಶ ನೀಡಿದೆ.
