ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಜೂ.NTR ತೆಲುಗು ಚಿತ್ರರಂಗದ ರತ್ನ: ಅಮಿತ್ ಶಾ
ಜೂನಿಯರ್ ಎನ್ಟಿಆರ್ ಅವರೊಂದಿಗೆ ಕುಳಿತುಕೊಂಡು ಮಾತನಾಡುತ್ತಿರುವ ಫೋಟೋಗಳನ್ನು ಅಮಿತ್ ಶಾ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೇ ಬಹಳ ಪ್ರತಿಭಾವಂತ ನಟ ಮತ್ತು ನಮ್ಮ ತೆಲುಗು ಚಿತ್ರದ ರತ್ನವಾಗಿರು ಜೂನಿಯರ್ ಎನ್ಟಿಆರ್ ಜೊತೆಗೆ ಹೈದರಾಬಾದ್ನಲ್ಲಿ ಸಂಭಾಷಣೆ ನಡೆಸುತ್ತಿದ್ದೇನೆ ಎಂದು ಕ್ಯಾಪ್ಷನ್ನಲ್ಲಿ ಬರೆದುಕೊಂಡಿದ್ದಾರೆ. ಕೆಲವೇ ಗಂಟೆಗಳಲ್ಲಿ 14 ಸಾವಿರಕ್ಕೂ ಅಧಿಕ ಜನರು ಇದನ್ನು ರೀ-ಟ್ವೀಟ್ ಮಾಡಿದ್ದಾರೆ. ಅಲ್ಲದೆ ‘ನಿಮ್ಮ ಒಳ್ಳೆಯ ಮಾತುಗಳಿಗೆ ಧನ್ಯವಾದಗಳು. ನಿಮ್ಮನ್ನು ಭೇಟಿ ಮಾಡಿ ಮಾತನಾಡಿದ್ದಕ್ಕೆ ಖುಷಿ ಆಯಿತು’ ಎಂದು ಜ್ಯೂ. ಎನ್ಟಿಆರ್ ಟ್ವೀಟ್ ಮಾಡಿದ್ದಾರೆ.
ತೆಲುಗು ದೇಶಂ ಪಕ್ಷದ (ಟಿಡಿಪಿ) ಸಂಸ್ಥಾಪಕ ಎನ್ಟಿ ರಾಮರಾವ್ ಅವರ ಮೊಮ್ಮಗ ಆಗಿರುವ ನಟ ಜೂನಿಯರ್ ಎನ್ಟಿಆರ್ ಅವರನ್ನು ಬಿಜೆಪಿ ನಾಯಕರು ಭಾನುವಾರ ಸಂಜೆ ಅಮಿತ್ ಶಾ ಅವರೊಂದಿಗೆ ಔತಣಕೂಟಕ್ಕೆ ಆಹ್ವಾನಿಸಿದ್ದರು. ಜೂನಿಯರ್ ಎನ್ ಟಿ ಆರ್ ಗೆ ತೆಲುಗು ಚಿತ್ರರಂಗದಲ್ಲಿ ಸಾಕಷ್ಟು ಬೇಡಿಕೆ ಇದ್ದು ಇತ್ತೀಚೆಗಷ್ಟೇ ಜೂ.ಎನ್ ಟಿ ಆರ್ ನಟನೆಯ ಆರ್ ಆರ್ ಆರ್ ಸಿನಿಮಾ ಬಿಡುಗಡೆ ಆಗಿದೆ.
Had a good interaction with a very talented actor and the gem of our Telugu cinema, Jr NTR in Hyderabad.
— Amit Shah (@AmitShah) August 21, 2022
అత్యంత ప్రతిభావంతుడైన నటుడు మరియు మన తెలుగు సినిమా తారక రత్నం అయిన జూనియర్ ఎన్టీఆర్తో ఈ రోజు హైదరాబాద్లో కలిసి మాట్లాడటం చాలా ఆనందంగా అనిపించింది.@tarak9999 pic.twitter.com/FyXuXCM0bZ
