ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಗಂಧದ ಗುಡಿ ಕುರಿತು ಮೊದಲ ಭಾರಿಗೆ ಮೌನ ಮುರಿದ ಅಶ್ವಿನಿ ಪುನೀತ್ ರಾಜ್ ಕುಮಾರ್
ಇನ್ನೂ ಗಂಧದ ಗುಡಿ ಸಾಕ್ಷ್ಯಚಿತ್ರದ ಕುರಿತು ಮಾತನಾಡಿದ ಅಶ್ವೀನಿ ಪುನೀತ್ ರಾಜ್ ಕುಮಾರ್, ಗಂಧದಗುಡಿ ಅಪ್ಪಾಜಿ, ಶಿವಣ್ಣ ಮಾಡಿದ್ದು, ಅದರಲ್ಲಿ ಕಥೆ ಇತ್ತು, ಆದರೇ ಈ ಚಿತ್ರದಲ್ಲಿ ಜರ್ನಿನೇ ಸಿನಿಮಾ. ಚಿತ್ರದಲ್ಲಿ ಅವರು ಅವರಾಗೆ ಇದ್ದರು. ನನಗೆ ತುಂಬ ಹೆಮ್ಮೆ ಅನ್ನಿಸುತ್ತೆ. ನನ್ನ ಜೊತೆ ಟ್ರಕ್ಕಿಂಗ್ ಮಾಡಬೇಕೆಂದು ಅಪ್ಪು ಕಾಲ್ ಮಾಡಿದ್ರು. ನಾನು ಅವರ ತಂಡದ ಜೊತೆ ಟ್ರಕ್ಕಿಂಗ್ ಮಾಡಿದ್ದೆ. ಬಳಿಕ ಒಂದು ಸಣ್ಣ ಹಳ್ಳಿಯಲ್ಲಿ ಊಟ ಮಾಡಿಕೊಂಡು ಬಂದೆವು ಎಂದು ಗಂಧದಗುಡಿ ಚಿತ್ರದ ಚಿತ್ರೀಕರಣ ಸಮಯದ ಘಟನೆಗಳನ್ನು ಮೆಲುಕು ಹಾಕಿದರು.
ಗಂಧದ ಗುಡಿ ಪ್ರೀಮಿಯರ್ ಟಿಕೇಟ್ ಸೋಲ್ಡ್ ಔಟ್ ಬಗ್ಗೆ ಪ್ರತಿಕ್ರಿಯಿಸಿದ ಅಶ್ವೀನಿ, ‘ಇದು ನನಗೆ ಹೆಮ್ಮೆ ಕೊಟ್ಟಿರುವ ಪ್ರಾಜೆಕ್ಟ್. ಒಂದು ಕಡೆ ಬೇಸರ, ಇನ್ನೊಂದು ಕಡೆ ಖುಷಿ ಇದೆ. ಎಲ್ಲರೂ ಗಂಧದ ಗುಡಿ ನೋಡಿ, ಆಶೀರ್ವದಿಸಿ’ ಎಂದರು.
