ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಚಾಮುಂಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಅಶ್ವಿನಿ ಪುನೀತ್ ರಾಜ್ ಕುಮಾರ್
ಇಂದು ಬೆಳಗ್ಗೆ ಶ್ರೀರಂಗಪಟ್ಟಣದ ನಿಮಿಷಾಂಭ ದೇವಾಲಯಕ್ಕೆ ಭೇಟಿ ಪೂಜೆ ಸಲ್ಲಿಸಿ ಬಳಿಕ ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡದೇವತೆ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಗಂಧದ ಗುಡಿ ಚಿತ್ರದ ನಿರ್ದೇಶಕ ಅಮೋಘ ವರ್ಷ ಕೂಡ ಜೊತೆಗಿದ್ದರು.
ಮೈಸೂರಿನೊಂದಿಗೆ ಅಪ್ಪುಗೆ ವಿಶೇಷ ನಟಿಂದೆ. ಅಲ್ಲದೆ ಚಾಮುಂಡೇಶ್ವರಿಯ ಪರಮ ಭಕ್ತರಾಗಿದ್ದ ಅಪ್ಪು ಶೂಟಿಂಗ್ ಗಾಗಿ ಮೈಸೂರಿಗೆ ತೆರಳಿದ ವೇಳೆ ಚಾಮುಂಡಿ ತಾಯಿಯ ದರ್ಶನ ಪಡೆಯುತ್ತಿದ್ದರು. ಅಲ್ಲದೆ ಅಪ್ಪು ಅವರ ಶಕ್ತಿದಾಮ ಕೂಡ ಇರುವುದು ಮೈಸೂರಿನಲ್ಲೇ. ಹೀಗಾಗಿ ಮೈಸೂರಿಗೆ ಭೇಟಿ ನೀಡಿದ ಸಂದರ್ಭದಲ್ಲೆಲ್ಲಾ ಚಾಮುಂಡೇಶ್ವರಿ ತಾಯಿಯ ಆಶೀರ್ವಾದ ಪಡೆಯುತ್ತಿದ್ದರು. ಅಲ್ಲದೆ ಯಾವುದೇ ಹೊಸ ಚಿತ್ರ ಬಿಡುಗಡೆಯಾದಾಗಲು ಬರಿಗಾಲಿನಲ್ಲಿ ಚಾಮುಂಡಿ ಬೆಟ್ಟ ಹತ್ತಿ ದೇವಿ ದರ್ಶನ ಮಾಡುತ್ತಿದ್ದರು.
