ಬಿಗ್ ಬಾಸ್ ರಿಯಾಲಿಟಿ ಶೋ ಮೂಲಕ ಖ್ಯಾತಿ ಘಳಿಸಿ ರ್ಯಾಪರ್ ಚಂದನ್ ಶೆಟ್ಟಿ ಜೊತೆ ಸಂಸಾರಿಕ ಜೀವನಕ್ಕೆ ಕಾಲಿಟ್ಟ ನಿವೇದಿತಾ ಗೌಡ ಮಿಸೆಸ್ ಇಂಡಿಯಾ ಆಗಿ ಹೊರ ಹೊಮ್ಮಿದ್ದಾರೆ. ಕಳೆದ ಎರಡು ತಿಂಗಳಿನಿಂದ ಮಿಸೆಸ್ ಇಂಡಿಯಾ ಸ್ಪರ್ಧೆಗೆ ಭರ್ಜರಿ ತಯಾರಿ ನಡೆಸಿದ್ದ ನಿವೀ ಇದೀಗ ಗೆಲುವಿನ ನಗೆ ಬೀರಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟೀವ್ ಆಗಿರುವ ನಿವೇದಿತಾ ಗೌಡ ಅಭಿಮಾನಿಗಳ ಜೊತೆ ಅಪ್ ಡೇಟ್ ಗಳನ್ನ ಶೇರ್ ಮಾಡುತ್ತಿರುತ್ತಾರೆ. ರೀಲ್ಸ್ ಗಳನ್ನು ಮಾಡುತ್ತಲೇ ಪ್ರೇಕ್ಷಕರಿಗೆ ಮತ್ತಷ್ಟು ಹತ್ತಿರವಾದ […]readmore
ಯೋಗರಾಜ್ ಭಟ್ ನಿರ್ದೇಶನದ ಗಾಳಿಪಟ ಸಿನಿಮಾ ಬಿಡುಗಡೆ ಆಗೋಕೆ ಇನ್ನೂ ಕೆಲವೇ ದಿನಗಳು ಮಾತ್ರವೇ ಭಾಕಿ ಇದೆ. ಈ ಮಧ್ಯೆ ಚಿತ್ರತಂಡ ಒಂದೊಂದೇ ಹಾಡುಗಳನ್ನು ಬಿಡುಗಡೆ ಮಾಡಿದೆ. ಸದ್ಯ ಚಿತ್ರತಂಡ ರಿಲೀಸ್ ಮಾಡಿರುವ ದೇವ್ಲೆ ದೇವ್ಲೆ ಹಾಡು ದೊಡ್ಡ ಮಟ್ಟದಲ್ಲಿ ಹಿಟ್ ಆಗಿದ್ದು ಅಭಿಮಾನಿಗಳು ರೀಲ್ಸ್ ಮಾಡೋದ್ರಲ್ಲಿ ಬ್ಯುಸಿಯಾಗಿದ್ದಾರೆ. ಗಾಳಿಪಟ 2 ಸಿನಿಮಾದ ಮೂರನೇ ಹಾಡು ‘ದೇವ್ಲೆ ದೇವ್ಲೆ’ ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಕೇಳುಗರ ಮನ ಮುಟ್ಟಿದ್ದು ಹಿಟ್ ಲಿಸ್ಟ್ ಸೇರಿದೆ. ಜೊತೆಗೆ ಸೋಷಿಯಲ್ ಮೀಡಿಯಾದಲ್ಲಿ ರೀಲ್ಸ್ […]readmore
ಕಳೆದೆರಡು ದಿನಗಳಿಂದ ಕಿಚ್ಚ ಸುದೀಪ್ ಜ್ವರದಿಂದ ಬಳಲುತ್ತಿದ್ದಾರೆ. ಹೀಗಾಗಿ ಸುದೀಪ್ ಭಾಗವಹಿಸಬೇಕಿದ್ದ ಪ್ರೆಸ್ ಮೀಟ್ ಗಳು ಕ್ಯಾನ್ಸಲ್ ಆಗಿದೆ. ಪ್ರೆಸ್ ಮೀಟ್ ಕ್ಯಾನ್ಸಲ್ ಆಗಿರುವ ಬಗ್ಗೆ ಸುದೀಪ್ ಸೋಷಿಯಲ್ ಮೀಡಿಯಾದಲ್ಲಿ ಕ್ಷಮೆ ಯಾಚಿಸಿದ್ದಾರೆ. ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರುತ್ತಿದೆ. ಇದೇ ಜುಲೈ 28ರಂದು ಸಿನಿಮಾ ತೆರೆಗೆ ಬರುತ್ತಿದ್ದು ಸಿನಿಮಾದ ಪ್ರಚಾರ ಕಾರ್ಯದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ಬ್ಯಾಕ್ ಟು ಬ್ಯಾಕ್ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿರೋದ್ರಿಂದ ಸುದೀಪ್ ಆಯಾಸಗೊಂಡಿದ್ದು ಜ್ವರದಿಂದ ಬಳಲುತ್ತಿದ್ದಾರೆ. […]readmore
ಮಂಗಳೂರು ಚೆಲುವೆ ಅನುಷ್ಕಾ ಶೆಟ್ಟಿ ಸಿನಿ ಇಂಡಸ್ಟ್ರಿಗೆ ಎಂಟ್ರಿಕೊಟ್ಟು 17 ವರ್ಷ ಕಳೆದಿದೆ. ದಕ್ಷಿಣ ಭಾರತದ ಟಾಪ್ ನಟಿಯರಲ್ಲಿ ಒಬ್ಬರಾಗಿರುವ ಅನುಷ್ಕಾ ಶೆಟ್ಟಿ ವಿಭಿನ್ನ ಪಾತ್ರಗಳ ಮೂಲಕವೇ ಪ್ರೇಕ್ಷಕರ ಮನ ಗೆದ್ದ ನಟಿ. 17 ವರ್ಷಗಳ ಸಿನಿ ಪಯಣದ ಸಂಭ್ರಮವನ್ನು ಕೇಕ್ ಕಟ್ ಮಾಡುವ ರುದ್ರಮ್ಮದೇವಿ ಸಂಭ್ರಮಿಸಿದ್ದಾರೆ. ತೆಲುಗಿನ ಸೂಪರ್ ಸಿನಿಮಾದ ಮೂಲಕ ಸಿನಿ ಜರ್ನಿ ಆರಂಭಿಸಿದ ಅನುಷ್ಕಾ ಶೆಟ್ಟಿ ಹಲವು ಬಗೆಯ ಪಾತ್ರಗಳ ಮೂಲಕವೇ ಅಭಿಮಾನಿಗಳ ಮನಸೂರೆಗೊಂಡ ನಾಯಕಿ. ತೆಲುಗಿನ ಜೊತೆ ತಮಿಳು ಚಿತ್ರರಂಗದಲ್ಲೂ ಮಿಂಚಿದ […]readmore
ಕೊರೋನ ಹೊಡೆತಕ್ಕೆ ಸಿಲುಕಿ ಚಿತ್ರರಂಗ ಅನುಭವಿಸಿದ ಕಷ್ಟ ಅಷ್ಟಿಷ್ಟಲ್ಲ. ಅಂತಹ ಸಮಯದಲ್ಲಿ ಅಂದರೆ, ಕಳೆದವರ್ಷ ಸೆಪ್ಟೆಂಬರ್ ನಲ್ಲಿ ಬಿಡುಗಡೆಯಾದ ಚಿತ್ರ “ಲಂಕೆ” ಲೂಸ್ ಮಾದ ಯೋಗಿ ನಾಯಕನಾಗಿ ನಟಿಸಿ, ರಾಮ್ ಪ್ರಸಾದ್ ಎಂ.ಡಿ ನಿರ್ಮಿಸಿ, ನಿರ್ದೇಶಿಸಿರುವ “ಲಂಕೆ” ಚಿತ್ರ ಉತ್ತರ ಕರ್ನಾಟಕ ಭಾಗದ ಅಥಣಿ, ಜಮಖಂಡಿ ಮುಂತಾದ ಕಡೆ ಈಗಲೂ ಪ್ರದರ್ಶನ ಕಾಣುತ್ತಿದೆ. ಇದರ ನಡುವೆ ಇತ್ತೀಚೆಗೆ ಅಮೆಜಾನ್ ಪ್ರೈಮ್ ನಲ್ಲಿ ಈ ಚಿತ್ರ ಬಿಡುಗಡೆಯಾಗಿದೆ. ಅಲ್ಲೂ ನೋಡುಗರಿಂದ ಉತ್ತಮ ಪ್ರತಿಕ್ರಿಯೆ ದೊರಕುತ್ತಿದೆ. ಈಗಾಗಲೇ ಚಿತ್ರ 300 […]readmore
ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾನಿ ಮನೆಯಲ್ಲಿ ಸಂತಸ ಮನೆ ಮಾಡಿದೆ. ಮುದ್ದು ಮಗುವಿನ ಆಗಮನದಿಂದ ಸಖತ್ ಖುಷಿಯಾಗಿರುವ ಸಂಜನಾ ಮಗುವಿನ ಲಾಲನೆ ಪಾಲನೆಯಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಮಗ ಅಲಾರಿಕ್ ಜೊತೆ ಸಂಜನಾ ರೀಲ್ಸ್ ಮಾಡಿದ್ದು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ನಟಿ ಸಂಜನಾ ಗಲ್ರಾಣಿ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟೀವ್ ಆಗಿದ್ದಾರೆ. ಇತ್ತೀಚೆಗೆ ಮಗನ ಅದ್ದೂರಿ ನಾಮಕರಣ ಮಾಡಿರುವ ಸಂಜನಾ ಆಗಾಗ ರೀಲ್ಸ್ ಗಳನ್ನ ಮಾಡಿ ಸಾಮಾಜಿಕ ಜಾಲಾ ತಾಣಗಳಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಇದೀಗ […]readmore
ಕಳೆದೊಂದೆರಡು ದಿನಗಳಿಂದ ನಟಿ ನಿತ್ಯಾ ಮೆನನ್ ಮದುವೆಯ ವಿಚಾರ ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದೆ.ಮಲಯಾಳಂ ಸ್ಟಾರ್ ನಟನ ಜೊತೆ ನಿತ್ಯಾ ಹಸೆ ಮಣೆ ಏರಲಿದ್ದಾರೆ ಅನ್ನೋ ಮಾತುಗಳು ಕೇಳಿ ಬಂದಿತ್ತು. ಇದೀಗ ಈ ಬಗ್ಗೆ ನಟಿ ನಿತ್ಯಾ ಮೆನನ್ ಪ್ರತಿಕ್ರಿಯಿಸಿದ್ದು ನಾನು ಯಾವ ಸ್ಟಾರ್ ನಟನನ್ನು ವಿವಾಹವಾಗುತ್ತಿಲ್ಲ ಎಂದಿದ್ದಾರೆ. ನಿತ್ಯಾ ಮೆನನ್ ಸ್ಟಾರ್ ನಟನೊಂದಿದೆ ವಿವಾಹವಾಗುತ್ತಾರೆ ಅನ್ನೋ ಸುದ್ದಿ ಕೇಳಿ ಸಾಕಷ್ಟು ಮಂದಿ ಖುಷಿಯಾಗಿದ್ದರು. ಜೊತೆಗೆ ನಿತ್ಯಾ ಮೆನನ್ ಕೈ ಹಿಡಿಯಲಿರೋ ಆ ಸ್ಟಾರ್ ನಟ ಯಾರು ಅನ್ನೋ […]readmore
ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾಗಾಗಿ ಅಭಿಮಾನಿಗಳು ಕಾದು ಕೂತಿದ್ದಾರೆ. ಇನ್ನೆನ್ನೂ ಸಿನಿಮಾ ಬಿಡುಗಡೆ ಆಗೋಕೆ ಏಳೇ ಏಳು ದಿನಗಳು ಮಾತ್ರವೇ ಭಾಕಿ ಇದೆ. ಈ ಮಧ್ಯೆ ಚಿತ್ರತಂಡ ವಿಕ್ರಾಂತ್ ರೋಣನ ನಾಲ್ಕನೇ ಹಾಡನ್ನು ಬಿಡುಗಡೆ ಮಾಡಿದೆ. ಈಗಾಗ್ಲೆ ಬಿಡುಗಡೆ ಆಗಿರೋ ಸಿನಿಮಾದ ಟ್ರೈಲರ್ ಹಾಗೂ ಹಾಡುಗಳು ಯಾವ ಮಟ್ಟಿಗೆ ಸದ್ದು ಮಾಡಿದೆ ಅನ್ನೋದು ಗೊತ್ತೆ ಇದೆ. ಅದ್ರಲ್ಲೂ ರಾ ರಾ ರಕ್ಕಮ್ಮ ಹಾಡು ಸಣ್ಣ ಮಕ್ಕಳಿಂದ ಹಿಡಿದು ಮದುಕರವರೆಗೂ ಎಲ್ಲರ ಬಾಯಲ್ಲೂ ಗುನುಗುವಂತೆ ಮಾಡಿದೆ. […]readmore
ಕನ್ನಡ ಸಾಹಿತ್ಯ ಲೋಕದ ಹಿರಿಯ ಚಿಂತಕ, ವಿಮರ್ಶಕ ಹಾಗೂ ಜನಪರ ಹೋರಾಟಗಾರ ಜಿ .ರಾಜಶೇಖರ್(75) ನಿಧನರಾಗಿದ್ದಾರೆ. ಕಳೆದ ಕೆಲ ವರ್ಷಗಳಿಂದ ಶ್ವಾಸಕೋಶ ಸಂಬಂಧಿ ಸಮಸ್ಯೆಯಿಂದ ಜಿ.ರಾಜಶೇಖರ್ ಬಳಲುತ್ತಿದ್ದರು. ಇತ್ತೀಚೆಗೆ ಆರೋಗ್ಯ ಬಿಗಡಾಯಿಸಿದ್ದ ಕಾರಣ ನಿನ್ನೆ(ಜು20) ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ರಾತ್ರಿ 11.15ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಉಡುಪಿಯಲ್ಲಿ ಜನಿಸಿದ ರಾಜಶೇಖರ್ ಕೆಲ ಕಾಲ ಶಿಕ್ಷಕರಾಗಿ ದುಡಿದು ಬಳಿಕ ಎಲ್ ಐ ಸಿಯಲ್ಲಿ ಕೆಲಸ ಮಾಡುತ್ತಿದ್ದರು. ಸಾಹಿತ್ಯ-ಸಮಾಜ, ಸಾಂಸ್ಕೃತಿಕ, ರಾಜಕಾರಣ ಹಾಗೂ ಸಮಕಾಲೀನ ವಿದ್ಯಮಾನಗಳ […]readmore
ಸ್ಯಾಂಡಲ್ ವುಡ್ ನಲ್ಲಿ ರ್ಯಾಪ್ ಸಿಂಗರ್ ಗಳು ದಿನದಿಂದ ದಿನಕ್ಕೆ ಹೆಚ್ಚು ಗಮನ ಸೆಳೆಯುತ್ತಿದ್ದಾರೆ. ವಿಭಿನ್ನ ಕಾನ್ಸೆಪ್ಟ್ ಮೂಲಕ ಕೇಳುಗರನ್ನು ಎದುರುಗೊಳ್ಳುವ ಇವರು ತಮ್ಮದೇ ಆದ ಶೈಲಿಯ ಮೂಲಕ ಅಭಿಮಾನಿ ವರ್ಗವನ್ನು ಹೊಂದಿದ್ದಾರೆ. ಅಂತವರ ಪಟ್ಟಿಯಲ್ಲಿ ಒಬ್ಬರು ವಿವೇಕ್ ರಾಚಪ್ಪ. ಸದ್ಯ ಇವರು ಬರೆದು ಹಾಡಿರುವ ‘ಲೈಫ್ ಈಸ್ ಸಿಂಪಲ್’ ಸಾಂಗ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಯೂಟ್ಯೂಬ್ ನಲ್ಲಿ 5 ಲಕ್ಷಕ್ಕೂ ಹೆಚ್ಚು ವೀವ್ಸ್ ಪಡೆದುಕೊಂಡಿದೆ. ಎಲ್ಲರ ಮನ ಗೆದ್ದಿರುವ ಈ ಹಾಡಿಗೆ ಸಾಕಷ್ಟು ಮೆಚ್ಚುಗೆಯೂ […]readmore
