• June 19, 2026

karnatakaspecial.in

https://karnatakaspecial.in/

ರಾಮ ಈಸ್ ಜೆಂಟಲ್ ಮ್ಯಾನ್ ಹಾಡು ರಿಲೀಸ್..

ಆಪರೇಷನ್ ಅಲಮೇಲಮ್ಮ, ಕವಲುದಾರಿ ಸಿನಿಮಾ ಖ್ಯಾತಿಯ ರಿಷಿ ನಟನೆಯ ರಾಮನ ಅವತಾರ ಸಿನಿಮಾದ ಮೊದಲ ಹಾಡು ರಿಲೀಸ್ ಆಗಿದೆ. ನಾಗಾರ್ಜುನ್ ಶರ್ಮಾ ಸಾಹಿತ್ಯ ಬರೆದಿರುವ ರಾಮ ಈಸ್ ಜೆಂಟಲ್ ಮ್ಯಾನ್ ಎಂಬ ಸಿಂಗಿಂಗ್ ಮಸ್ತಿಗೆ ಅಭಿನಂದನ್ ಮಹಿಶಾಲೆ ಧ್ವನಿಯಾಗಿದ್ದು, ಜೂಡಾ ಸ್ಯಾಂಡಿ ಸಂಗೀತ ನೀಡಿದ್ದಾರೆ. ಟೈಟಲ್ ಕಂ ರೋಮ್ಯಾಂಟಿಕ್ ಹಾಡಾಗಿರುವ ರಾಮ ಈಸ್ ಜೆಂಟಲ್ ಮ್ಯಾನ್ ನಲ್ಲಿ ರಿಷಿ ತನ್ನ ಪ್ರೀತಿಯನ್ನು ನಾಯಕಿ ಶುಭ್ರಗೆ ವ್ಯಕ್ತಪಡಿಸುತ್ತಾ ಹೆಜ್ಜೆ ಹಾಕಿದ್ದಾರೆ. ಈ ಹಾಡಿನ ಚಿತ್ರೀಕರಣ ಸಾವನದುರ್ಗ ಮತ್ತು ಶಿವಗಂಗೆ […]Read More

IPL 2023 Final GT VS CSK Weather ಐಪಿಎಲ್ 2023 ಫೈನಲ್

73 ಪಂದ್ಯಗಳು, 59 ದಿನಗಳ ಬಳಿಕ ಇಂಡಿಯನ್ ಪ್ರೀಮಿಯರ್ ಲೀಗ್ 16ನೇ ಆವೃತ್ತಿ ಫೈನಲ್ (IPL 2023 Final) ಹಂತಕ್ಕೆ ಬಂದು ನಿಂತಿದೆ. ಇಂದು ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ (CSK vs GT) ನಡುವೆ ಐಪಿಎಲ್ 2023 ಫೈನಲ್​ನ ರೋಚಕ ಕಾದಾಟ ನಡೆಯಲಿದೆ. 16 ಆವೃತ್ತಿಯ ಐಪಿಎಲ್​ನಲ್ಲಿ ಸಿಎಸ್​ಕೆ ಇಂದು 10ನೇ ಬಾರಿ ಫೈನಲ್​ನಲ್ಲಿ ಕಣಕ್ಕಿಳಿದ ಸಾಧನೆ ಮಾಡಲಿದೆ. ಒಟ್ಟು 9 ಬಾರಿ ಫೈನಲ್ ಆಡಿದ್ದ Chennai ಸೂಪರ್ […]Read More

ನೂತನ ಸಂಸತ್ ಭವನ ಉದ್ಘಾಟನೆ

ಸೆಂಟ್ರಲ್​ ವಿಸ್ತಾದಲ್ಲಿ ನಿರ್ಮಾಣ ಮಾಡಲಾಗಿರುವ ಹೊಸ ಸಂಸತ್​ ಭವನವು ದೇಶದ ಜನರ ನಂಬಿಕೆ, ನಿರೀಕ್ಷೆಗಳಿಂದ ತುಂಬಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ನವದೆಹಲಿ: ಪ್ರಜಾಪ್ರಭುತ್ವದ ದೇಗುಲ ನೂತನ ಸಂಸತ್​ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ ಲೋಕಾರ್ಪಣೆ ಮಾಡಿ, ‘ಇದು ಭರವಸೆ ಮತ್ತು ದೇಶದ ಸಬಲೀಕರಣದ ತೊಟ್ಟಿಲಾಗಲಿ’ ಎಂದು ಆಶಿಸಿದ್ದಾರೆ.     ಭಾರತದ ಸಂಸತ್ತಿನ ಹೊಸ ಕಟ್ಟಡದ ಉದ್ಘಾಟನೆಯ ಬಳಿಕ ಟ್ವೀಟ್​ ಮಾಡಿರುವ ಪ್ರಧಾನಿ, ನಮ್ಮ ಹೃದಯ ಮತ್ತು ಮನಸ್ಸು ಹೆಮ್ಮೆ, ಭರವಸೆ […]Read More

ಮೇ ೨೯ರಿಂದ ಉದಯಟಿವಿಯಲ್ಲಿ ಮಹಾತಿರವುಗಳ ಹಬ್ಬ “ಉದಯ ದಶಮಿ” ಕನ್ಯಾದಾನದಲ್ಲಿ ನಟಿ ಸುಧಾರಾಣಿ

ಕಳೆದ ಎರಡೂವರೆ ದಶಕಗಳಿಂದ ಕನ್ನಡ ಕಿರುತೆರೆ ವೀಕ್ಷಕರನ್ನು ರಂಜಿಸುತ್ತಿರುವ ಉದಯ ಟಿವಿ, ವೈವಿಧ್ಯಮಯ ಧಾರಾವಾಹಿಗಳ ಮೂಲಕ ವೀಕ್ಷಕ ಹೃದಯಕ್ಕೆ ಇನ್ನಷ್ಟು ಹತ್ತಿರವಾಗುತ್ತಿದೆ. ಗೌರಿಪುರದ ಗಯ್ಯಾಳಿಗಳು, ಕನ್ಯಾದಾನ, ಅಣ್ಣತಂಗಿ, ಆನಂದರಾಗ, ಸುಂದರಿ, ರಾಧಿಕಾ, ಜನನಿ, ನಯನತಾರಾ, ಸೇವಂತಿ ಧಾರಾವಾಹಿಗಳ ಮೂಲಕ ಮನರಂಜನೆಯಲ್ಲಿ ನೈಜತೆಗೆ ಒತ್ತು ನೀಡುತ್ತಿದೆ.     ಇದೀಗ ಉದಯ ಟಿವಿಯ ಎಲ್ಲಾ ಧಾರಾವಾಹಿಗಳು ಒಟ್ಟಿಗೇ ಮಹಾತಿರುವುಗಳೊಂದಿಗೆ ವೀಕ್ಷಕರ ಮುಂದೆ ಬರುತ್ತಿವೆ. ಮೇ ೨೯ ರಿಂದ ಶುರುವಾಗುವ ʻಉದಯ ದಶಮಿʼ ಈ ಮಹಾತಿರುವುಗಳ ಹಬ್ಬ. ಇದು ಸಂಬಂಧಗಳ […]Read More

ಬಳ್ಳಾರಿ ನಗರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕೆ ಅನಿಲ್ ಲಾಡ್

ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಶಾಸಕ ಅನಿಲ್ ಲಾಡ್ ಜೆಡಿಎಸ್ ಸೇರ್ಪಡೆಯಾಗಿದ್ದು, 2013 ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಳ್ಳಾರಿ ನಗರ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರು. 2018 ರಲ್ಲಿ ಸೋಲು ಅನುಭವಿಸಿದ್ದರು. ಈ ಬಾರಿ ಕಾಂಗ್ರೆಸ್ ಭರತ್ ರೆಡ್ಡಿಗೆ ಟಿಕೆಟ್ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ಸೇರ್ಪಡೆಯಾಗಿರುವ ಅನಿಲ್ ಲಾಡ್ ಗೆ ಬಳ್ಳಾರಿ ನಗರ ಕ್ಷೇತ್ರದಿಂದ ಸ್ಪರ್ಧಿಸಲು ಜೆಡಿಎಸ್ ಬಿ ಫಾರಂ ಪಡೆದಿದ್ದಾರೆ.     ಮಾಜಿ ಶಾಸಕ ಅನಿಲ್ ಲಾಡ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. […]Read More

ವಿಭಿನ್ನ ಕಥಾಹಂದರ ಹೊಂದಿರುವ “ಬಿಸಿಲು ಕುದುರೆ” ಏಪ್ರಿಲ್ 21 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

” ಮಂಡ್ಯ”, “ಮುಂಗಾರು ಮಳೆ”, “ಗಾಳಿಪಟ” ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳಿಗೆ ಹಾಡು‌ ಬರೆದಿರುವ ಸಾಹಿತಿ ಹೃದಯಶಿವ ನಿರ್ದೇಶನದ “ಬಿಸಿಲು ಕುದುರೆ” ಚಿತ್ರ ಇದೇ ಏಪ್ರಿಲ್ 21 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಅದಕ್ಕೂ ಮುನ್ನ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ನಡೆಯಿತು.     ಕನ್ನಡ ಚಿತ್ರರಂಗದೊಂದಿಗೆ ನನಗೆ ಎರಡು ದಶಕಗಳ ನಂಟು. ಕನ್ನಡದ ಹಲವು ಚಿತ್ರಗಳಿಗೆ ಹಾಡು ಬರೆದಿದ್ದೇನೆ. ಕನ್ನಡದಲ್ಲಿ ಇದು ನನ್ನ ಮೊದಲ ನಿರ್ದೇಶನದ ಚಿತ್ರ. ಅರುಣ್ಯದಂಚಿನಲ್ಲಿ ತುಂಡುಭೂಮಿ ಹೊಂದಿರುವ ರೈತನ ಬವಣೆಯ […]Read More

ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ನನ್ನ ಸಂಪೂರ್ಣ ಬೆಂಬಲ: ಸುಮಲತಾ

ನಾನು ನನ್ನ ಸಂಪೂರ್ಣ ಬೆಂಬಲವನ್ನು ಪ್ರಧಾನಿ ನರೇಂದ್ರ ಮೋದಿಯ  ನೇತೃತ್ವದ ಸರ್ಕಾರಕ್ಕೆ ನೀಡುತ್ತೇನೆ ಎಂದು ಸಂಸದೆ ಸುಮಲತಾ ಅಧಿಕೃತವಾಗಿ ಘೋಷಿಸಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು ಪಕ್ಷೇತರ ಸದಸ್ಯೆ. ಈ ಜಿಲ್ಲೆಯಲ್ಲಿ ಸಾಕಷ್ಟು ಯೋಜನೆಗಳನ್ನು ನಾನು ಜಾರಿಗೆ ತಂದಿದ್ದೇನೆ. ಈ ಯೋಜನೆ ಜಾರಿಗೆ ತರಲು ಕೇಂದ್ರ ಸರ್ಕಾರವೇ ಕಾರಣ. ಈ ಕಾರಣಕ್ಕೆ ನಾನು ನರೇಂದ್ರ ಮೋದಿ ನೇತೃತ್ವದ ಸರ್ಕಾರಕ್ಕೆ ನೀಡುತ್ತೇನೆ ಎಂದು ಅಧಿಕೃತವಾಗಿ ತಿಳಿಸಿದ್ದಾರೆ. ಮಂಡ್ಯದ ಕಲುಷಿತ ರಾಜಕೀಯವನ್ನು ಸ್ವಚ್ಛಗೊಳಿಸಲು ನಾನು ಮೋದಿ ಅವರಿಗೆ ಬೆಂಬಲ ನೀಡುತ್ತೇನೆ. ನನ್ನ […]Read More

ವಿನೂತನ ಪ್ರೇಮರಾಗ “ಆನಂದರಾಗ” ಉದಯಟಿವಿಯಲ್ಲಿ ಮಾರ್ಚ್‌ ೧೩ ರಿಂದ ಸೋಮವಾರದಿಂದ ಶನಿವಾರ ರಾತ್ರಿ

ಪ್ರಸ್ತುತ ದಿನಗಳಲ್ಲಿ ಕಪ್ಪು-ಬಿಳುಪಿನ ಹೆಣ್ಣಿನ ಕಥೆಗಳು ಕಿರುತೆರೆಯಲ್ಲಿ ಸಹಜವಾಗಿದೆ. ಆದರೆ ಈಗ ಕಿರುತೆರೆ ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ಕಪ್ಪು ಹುಡುಗನ ಮನಸ್ಥಿತಿ, ಅವನಿಗಾಗುವ ಅವಮಾನ, ಖಿನ್ನತೆಯಿಂದ ಹೊರಬರುವ ಕಥೆ ತರಲಿದೆ ಉದಯ ಟಿವಿ. ದಪ್ಪ ದೇಹ ಮತ್ತು ಕಪ್ಪು ಮೈಬಣ್ಣ ಹೊಂದಿರುವ ಕಥಾನಾಯಕ ತನ್ನ ಮುಗ್ದತೆಯಿಂದ ಜನರ ಮನಸ್ಸನ್ನು ಗೆದ್ದು ವೀಕ್ಷಕರ ಮನೆ ಮಗನಾಗಲು ಬರುತ್ತಿದ್ದಾನೆ. ಇನ್ನೊಂದೆಡೆ  ಕಥಾನಾಯಕಿ ಅಪ್ಪನ ಗುರಿಯನ್ನು ತನ್ನ ಗುರಿಯನ್ನಾಗಿಸಿಕೊಂಡು ಐ.ಪಿ.ಎಸ್‌ ಆಗುವ ಕನಸ್ಸನ್ನು ಹೊತ್ತವಳು. ತನ್ನ ಮುಗುಳುನಗೆಯಿಂದಲೇ ಎಲ್ಲಾ ಸಮಸ್ಯೆ ಬಗೆಹರಿಸುವ […]Read More

ಪವರ್ ಸ್ಟಾರ್ ಅಭಿಮಾನಿಗಳಿಂದ 13 ಟೀಸರ್ ಬಿಡುಗಡೆ

ಕೆ.ನರೇಂದ್ರಬಾಬು ಅವರ ನಿರ್ದೇಶನದ 13 ಚಿತ್ರದ ಟೀಸರ್ ರಾಜ್ಯದ 32 ಜಿಲ್ಲೆಗಳಲ್ಲಿ ಏಕಕಾಲದಲ್ಲಿ ಬಿಡುಗಡೆಯಾಯಿತು. ಅಲ್ಲದೆ ದುಬೈ, ಸಿಂಗಪೂರ್ ಸೇರಿದಂತೆ ಅನೇಕ ದೇಶಗಳಲ್ಲಿ ಏಕಕಾಲದಲ್ಲಿ ಬಿಡುಗಡೆಯಾಗಿದೆ. ನಿನ್ನೆ ನಡೆದ ಸಮಾರಂಭದಲ್ಲಿ ವಿಶೇಷವಾಗಿ ಎಲ್ಲಾ ಜಿಲ್ಲೆಗಳಿಂದ ಆಗಮಿಸಿದ್ದ ಅಪ್ಪು ಅಭಿಮಾನಿಗಳೇ ಸೇರಿ 13 ಚಿತ್ರದ ಟೀಸರ್ ರಿಲೀಸ್ ಮಾಡಿದರು. ರಾಘವೇಂದ್ರ ರಾಜ್‌ಕುಮಾರ್‌, ಶ್ರುತಿ, ಪ್ರಮೋದ್ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿರುವ ‘13’ ಚಿತ್ರವನ್ನು ಯುವಿ ಪ್ರೊಡಕ್ಷನ್ ಅಡಿಯಲ್ಲಿ ಕೆ. ಸಂಪತ್‌ ಕುಮಾರ್‌, ಹೆಚ್.ಎಸ್. ಮಂಜುನಾಥ್‌, ಮಂಜುನಾಥಗೌಡ ಹಾಗೂ ಸಿ.ಕೇಶವಮೂರ್ತಿ […]Read More

ಯೋಗ ಉತ್ಸವದಲ್ಲಿ 3 ಹೊಸ ಗಿನ್ನೆಸ್ ವಿಶ್ವ ದಾಖಲೆ

ಫೆಬ್ರವರಿ 11, 2023 ರಂದು, ಅಕ್ಷರ ಯೋಗ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರವು ಮಂಡಲ ಯೋಗ ಉತ್ಸವದಲ್ಲಿ 3 ಹೊಸ ಗಿನ್ನೆಸ್ ವಿಶ್ವ ದಾಖಲೆಗಳನ್ನು ಸ್ಥಾಪಿಸಿತು.     ಅತಿ ಹೆಚ್ಚು ಜನರ ಭಾಗವಹಿಸಿ ಪ್ರದರ್ಶಿಸಿದ ದಾಖಲೆ ಇದಾಗಿದೆ ಹಲಸಾನ (90 ಸೆಕೆಂಡ್‌ಗಳು), ಉಸ್ಟ್ರಾಸನ (60 ಸೆಕೆಂಡುಗಳು), ಮತ್ತು ವಸಿಷ್ಟಾಸನ (45 ಸೆಕೆಂಡುಗಳು) . ಈ ಕಾರ್ಯಕ್ರಮದಲ್ಲಿ ಅಕ್ಷರ ಯೋಗ ಮಾಸ್ಟರ್ ಶಿಕ್ಷಕರಿಂದ ತರಬೇತಿ ಪಡೆದ ಪೊಲೀಸ್ ಅಧಿಕಾರಿಗಳು, ಹಿಂದುಳಿದ ಮತ್ತು ವಿಕಲ ಚೇತನ ಮಕ್ಕಳು ಸೇರಿದಂತೆ […]Read More

Phone icon
Call Now
Reach us!
WhatsApp icon
Chat Now