• June 19, 2026

karnatakaspecial.in

https://karnatakaspecial.in/

ಬೆಳ್ತಂಗಡಿಯಲ್ಲಿ ‘ಕರಿ ಹೈದ.. ಕರಿ ಅಜ್ಜ..’ ಚಿತ್ರಕ್ಕೆ ಚಾಲನೆ

ದ್ರತಿ ಕ್ರಿಯೇಷನ್ಸ್ ಮತ್ತು ಸಕ್ಸಸ್ ಫಿಲ್ಮ್ಸ್ ಬ್ಯಾನರ್ ಅಡಿ ತ್ರಿವಿಕ್ರಮ್ ಸಪಲ್ಯ ನಿರ್ಮಿಸುತ್ತಿರುವ , ಸುಧೀರ್ ಅತ್ತಾವರ್ ನಿರ್ದೇಶನದಲ್ಲಿ “ಕರಿ ಹೈದ….ಕರಿ ಅಜ್ಜ …”.ಸಿನೆಮಾದ ಮುಹೂರ್ತ ಸಮಾರಂಭವು ಅದ್ದೂರಿಯಾಗಿ ನೆರವೇರಿತು. ಬೆಳ್ತಂಗಡಿ ತಾಲೂಕಿನ ಬಳ್ಳಮಂಜದ ಇತಿಹಾಸ ಪ್ರಸಿದ್ಧ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಸ್ಥಳಿಯ ಶಾಸಕ ಶ್ರೀ ಹರೀಶ್ ಪೂಂಜ ರವರು ಕ್ಯಾಮರ ಚಾಲನೆ ಮಾಡುವುದರ ಮೂಲಕ ಅದ್ದೂರಿ ಚಾಲನೆ ನೀಡಿದರು.       ಮಾತ್ರಶ್ರೀ ಕಮಲ ಕೆ ಸಪಲ್ಯ ಆರಂಭ ಫಲಕ ತೋರಿಸಿದರು. ಇತ್ತೀಚಿನ ಹಲವಾರು […]Read More

‘ಸದ್ದು ವಿಚಾರಣೆ ನಡೆಯುತ್ತಿದೆ’ ನ. 25ರಂದು ತೆರೆಗೆ

ಎಂ. ಎಂ. ಸಿನಿಮಾಸ್ ಬ್ಯಾನರ್ ನಡಿ ಭಾಸ್ಕರ್ ಆರ್ ನೀನಾಸಂ ನಿರ್ದೇಶಿಸಿರುವ ಸದ್ದು ವಿಚಾರಣೆ ನಡೆಯುತ್ತಿದೆ ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ. ಇಂಟ್ರಸ್ಟಿಂಗ್ ಟ್ರೇಲರ್, ಚೆಂದದ ಹಾಡುಗಳ ಮೂಲಕ ಚಿತ್ರ ಪ್ರೇಮಿಗಳ ಮನಗೆದ್ದಿರುವ ಚಿತ್ರ ನವೆಂಬರ್ 25ಕ್ಕೆ ಪ್ರೇಕ್ಷಕರೆದುರು ಬರಲು ರೆಡಿಯಾಗಿದೆ.     ರಂಗಭೂಮಿ ಪ್ರತಿಭೆ ಭಾಸ್ಕರ್ ಆರ್ ನೀನಾಸಂ ನಿರ್ದೇಶನದ ಮೊದಲ ಸಿನಿಮಾವಿದು. ಚಿತ್ರಕ್ಕೆ ಅಶ್ವಿನಿ ಕೆ ಎನ್ ಕಥೆ ಬರೆದಿದ್ದು, ಭಾಸ್ಕರ್ ಆರ್ ನೀನಾಸಂ ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ನೈಜ ಘಟನೆಗಳಿಂದ ಸ್ಪೂರ್ತಿ […]Read More

ಮುದ್ದು ಮಗಳೊಂದಿಗೆ ಮನೆಗೆ ಆಗಮಿಸಿದ ಆಲಿಯಾ, ರಣ್ಬೀರ್

ಬಾಲಿವುಡ್ ಕ್ಯೂಟ್ ಕಪಲ್ಸ್ ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ಕುಟುಂಬದಲ್ಲಿ ಸಂತಸ ಮನೆ ಮಾಡಿದೆ. ಆಲಿಯಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಇದೀಗ ಆಲಿಯಾ ಭಟ್ ಮುದ್ದು ಮಗುವಿನೊಂದಿಗೆ ಮನೆಗೆ ಆಗಮಿಸಿದ್ದಾರೆ. ಸಾಕಷ್ಟು ವರ್ಷಗಳ ಕಾಲ ಡೇಟಿಂಗ್ ಮಾಡಿದ್ದ ರಣಬೀರ್ ಹಾಗೂ ಆಲಿಯಾ ಕಳೆದ ಏಪ್ರಿಲ್ 14ರಂದು ಗುರು ಹಿರಿಯರ ಸಮ್ಮುಖದಲ್ಲಿ ಹಸೆಮಣೆ ಏರಿದ್ದರು. ಮದುವೆಯಾದ ಎರಡು ತಿಂಗಳಲ್ಲಿ ಈ ಜೋಡಿಗಳು ಪೋಷಕರಾಗುತ್ತಿರುವ ಕುರಿತು ಮಾಹಿತಿ ನೀಡಿದ್ದರು. ಇದೀಗ ಆಲಿಯಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು […]Read More

ವ್ಯಾಕ್ಸಿನ್ ಮೇಲೆ ಸಿನಿಮಾ ಮಾಡಲು ಮುಂದಾದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ

ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಸದ್ಯ ತಮ್ಮ ಹೊಸ ಸಿನಿಮಾವನ್ನು ಘೋಷಿಸಿದ್ದಾರೆ.ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ಮುಂದಿನ ಸಿನಿಮಾ ವ್ಯಾಕ್ಸಿನ್ ವಾರ್ ಮೇಲೆ ಇರಲಿದ್ದು ಇದೇ ಕಾರಣಕ್ಕೆ ಚಿತ್ರಕ್ಕೆ ದಿ ವ್ಯಾಕ್ಸಿವ್ ವಾರ್ ಎಂದು ಟೈಟಲ್ ಇಡಲಾಗಿದೆ. ದಿ ವ್ಯಾಕ್ಸಿನ್  ವಾರ್ ಸಿನಿಮಾ ಹಿಂದಿ, ಕನ್ನಡ, ತಮಿಳು, ತೆಲುಗು ಸೇರಿದಂತೆ ಒಟ್ಟು 11 ಭಾಷೆಗಳಲ್ಲಿ ತೆರೆಗೆ ಬರಲಿದೆಯಂತೆ. ಕೊರೋನಾ ಸಮಯದಲ್ಲಿ ವ್ಯಾಕ್ಸಿನ್ ಏನೆಲ್ಲ ಆವಾಂತರ ಸೃಷ್ಟಿಸಿತ್ತು? ಈ ವ್ಯಾಕ್ಸಿನ್ ಏನೆಲ್ಲ ಕೆಲಸ ಮಾಡಿತ್ತು? ವ್ಯಾಕ್ಸಿನ್ ಮಾಫಿಯಾದ […]Read More

ಯುವರಾಜ್ ಕುಮಾರ್ ಚಿತ್ರದ ಬಗ್ಗೆ ಸಿಹಿ ಸುದ್ದಿ ಕೊಟ್ಟ ಸಂತೋಷ್ ಆನಂದ್ ರಾಮ್

ದೊಡ್ಮನೆ ಕುಡಿ ಯುವರಾಜ್‌ಕುಮಾರ್ ಚಿತ್ರರಂಗಕ್ಕೆ ಎಂಟ್ರಿಕೊಡಲು ಸಜ್ಜಾಗಿದ್ದಾರೆ. ಅಭಿಮಾನಿಗಳ ಆಸೆಯಂತೆ ಸಂತೋಷ್ ಆನಂದ್‌ರಾಮ್ ಹಾಗೂ ಯುವರಾಜ್ ಕುಮಾರ್ ಕಾಂಬಿನೇಷನ್‌ನ ಸಿನಿಮಾ ಬರೋದು ಕನ್ಪಾರ್ಮ್ ಆಗಿದ್ದು ಚಿತ್ರತಂಡದ ಕಡೆಯಿಂದ ಹೊಸ ಸುದ್ದಿಯೊಂದು ಹೊರ ಬಿದ್ದಿದೆ. ಯುವ ರಾಜ್ ಕುಮಾರ್ ಚಿತ್ರರಂಗಕ್ಕೆ ಎಂಟ್ರಿಕೊಡಲು ಭರ್ಜರಿಯಾಗಿಯೇ ತಯಾರಾಗಿದ್ದಾರೆ. ಈ ಹಿಂದೆ ` ರಣಧೀರ ಕಂಠೀರವ’ ಚಿತ್ರದ ಮೂಲಕ ಯುವ ಚಿತ್ರರಂಗಕ್ಕೆ ಎಂಟ್ರಿ ಕೊಡ್ತಾರೆ ಎನ್ನಲಾಗುತ್ತಿದೆ. ಆದರೆ ಇದೀಗ ಸಂತೋಷ್ ಆನಂದ್ ರಾಮ್ ಸಿನಿಮಾದ ಮೂಲಕ ಯುವ ಲಾಂಚ್ ಆಗ್ತಿದ್ದಾರೆ. ಯುವ ಹಾಗೂ […]Read More

ಯಂಗ್ ರೆಬೆಲ್ ಸ್ಟಾರ್ ಗೆ ಜೋಡಿಯಾದ ಕಾಂತಾರದ ಬೆಡಗಿ ಸಪ್ತಮಿ ಗೌಡ

ಕಾಂತಾರ ಸಿನಿಮಾದ ಬಳಿಕ ನಟಿ ಸಪ್ತಮಿ ಗೌಡಗೆ ಸಖತ್ ಡಿಮ್ಯಾಂಡ್ ಕ್ರಿಯೇಟ್ ಆಗಿದೆ. ಕನ್ನಡದ ಜೊತೆಗೆ ಪರಭಾಷೆಯಲ್ಲೂ ಸಪ್ತಮಿ ಗೌಡಗೆ ಆಫರ್ ಗಳು ಬರುತ್ತಿವೆ. ಸದ್ಯ ಸಪ್ತಮಿ ಗೌಡ ಯಂಗ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಗೆ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಕನ್ನಡದ ಖ್ಯಾತ ನಟ ಕೃಷ್ಣ ಸದ್ಯ ಅಭಿಷೇಕ್ ಅಂಬರೀಶ್ ನಟನೆಯ ಮುಂದಿನ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಚಿತ್ರಕ್ಕೆ ಕಾಳಿ ಎಂದು ಹೆಸರಿಡಲಾಗಿದ್ದು ಸಿನಿಮಾದ ಟೈಟಲ್ ಹಾಗೂ ಹಲವು ವಿಷಯಗಳ ಕುರಿತು ಕೃಷ್ಣ ಈಗಾಗಲೇ ಮಾಹಿತಿ […]Read More

ರಶ್ಮಿಕಾ ಮಂದಣ್ಣ ಟ್ರೋಲ್: ಕಿರಿಕ್ ಬೆಡಗಿಗೆ ಸಾಥ್ ನೀಡಿದ ಸ್ಯಾಂಡಲ್ ವುಡ್ ಕ್ವೀನ್

ಸ್ಯಾಂಡಲ್ ವುಡ್ ಸಿನಿಮಾ ರಂಗಕ್ಕೆ ಎಂಟ್ರಿಕೊಟ್ಟ ಆರಂಭದಿಂದಲೂ ನಟಿ ರಶ್ಮಿಕಾ ಮಂದಣ್ಣ ಟ್ರೋಲ್ ಗೆ ಒಳಗಾಗುತ್ತಿದ್ದಾರೆ. ಕನ್ನಡದ ಹುಡುಗಿ ಪರಭಾಷೆಯಲ್ಲಿ ಮಿಂಚುತ್ತಿದ್ದರು ಟ್ರೋಲಿಗರು ಮಾತ್ರ ಆಕೆಯನ್ನು ಟ್ರೋಲ್ ಮಾಡುವುದು ಬಿಟ್ಟಿಲ್ಲ. ಈ ಬಗ್ಗೆ ರಶ್ಮಿಕಾ ದೀರ್ಘವಾಗಿ ಬರೆದುಕೊಂಡು ನೋವು ತೋಡಿಕೊಂಡಿದ್ದರು. ಇದೀಗ ರಶ್ಮಿಕಾಗೆ ರಮ್ಯಾ ಸಾಥ್ ನೀಡಿದ್ದಾರೆ. ಯಾರೂ ಯಾರನ್ನೂ ಜಡ್ಜ್ ಮಾಡಬಾರದು. ಅವರ ಜೀವನ ಅವರಿಗೆ ಮಾತ್ರ ಗೊತ್ತಿರುತ್ತದೆ. ಟ್ರೋಲಿಂಗ್ ನಿಲ್ಲದ ಸಂಗತಿಯಾದರೂ, ಬೇರೆಯವರನ್ನು ನೀವು ಜಡ್ಜ್ ಮಾಡುವುದರಲ್ಲಿ ಅರ್ಥವಿಲ್ಲ. ಹಾಗಾಗಿ ಅವರ ಪಾಡಿಗೆ ಅವರನ್ನು […]Read More

ಕಾಪು ಮಾರಿಗುಡಿ ದೇವಸ್ಥಾನಕ್ಕೆ ನಟಿ ಜಯಪ್ರದಾ ಭೇಟಿ

ಜಿಲ್ಲೆಯ  ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಚಿತ್ರನಟಿ , ಮಾಜಿ ಲೋಕಸಭೆ ಹಾಗೂ ಹಾಲಿ ರಾಜ್ಯಸಭೆ ಸದಸ್ಯೆ ಜಯಪ್ರದಾ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಮಾರಿಯಮ್ಮ ಉಚ್ಚಂಗಿ ದೇವಿಯ ದರ್ಶನ ಪಡೆದು ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಮಾರಿಯಮ್ಮನ ದೇವಸ್ಥಾನವನ್ನು ವೀಕ್ಷಿಸಿದ ಜಯಪ್ರದಾ ಅವರಿಗೆ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀನಿವಾಸ ತಂತ್ರಿ ದೇವರಲ್ಲಿ ಪ್ರಾರ್ಥಿಸಿ ಪ್ರಸಾದ ನೀಡಿದರು. ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಜಯಪ್ರದಾ ಹರಕೆ ಹೊತ್ತಿದ್ದು ಹರಕೆ ತೀರಿಸಲು ಜಯಪ್ರದಾ ದೇವಸ್ಥಾನಕ್ಕೆ ಭೇಟಿ […]Read More

ಲಹರಿ ವೇಲು ವಿರುದ್ಧ ಕಿಡಿ ಕಾರಿದ ನಟಿ ರಮ್ಯಾ

ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಅನುಮತಿ ಇಲ್ಲದೆ ಕೆಜಿಎಫ್ 2 ಹಿಂದಿ ಚಿತ್ರದ ಸುಲ್ತಾನ ಹಾಡನ್ನು ಬಳಸಿದೆ ಎಂದು ಎಂಆರ್ ಟಿ ಮ್ಯೂಸಿಕ್ ಆರೋಪಿಸಿದೆ. ಎಂಆರ್‌ಟಿ ಸಂಗೀತ ಕಂಪನಿಯಿಂದ ನ್ಯಾಯಾಲಯಕ್ಕೆ ದಾವೆ ಹೂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ರಮ್ಯಾ ಲಹರಿ ಮ್ಯೂಸಿಕ್ ಸಂಸ್ಥೆಯ ಲಹರಿ ವೇಲು ವಿರುದ್ಧ ಕಿಡಿಕಾರಿದ್ದಾರೆ. ಎಂ ಆರ್ ಟಿ ಮ್ಯೂಸಿಕ್ ಕೆಜಿಎಫ್ 2 ಹಿಂದಿ ಹಾಡುಗಳು ಹಕ್ಕುಸ್ವಾಮ್ಯ ಹೊಂದಿದೆ. ಆದರೆ ಎಂ ಆರ್ ಟಿ ಮ್ಯೂಸಿಕ್ ನಿಂದ ಯಾವುದೇ […]Read More

ಹೆಂಡತಿಗೆ ಮೊಟ್ಟೆ ಕೂಡ ಬೇಯಿಸಲು ಬರಲ್ಲ: ನಿರ್ಮಾಪಕ ರವೀಂದರ್ ಅಳಲು

ಕಳೆದ ಕೆಲ ತಿಂಗಳ ಹಿಂದೆ ಹಸೆಮಣೆ ಏರಿದ್ದ ತಮಿಳು ನಿರ್ಮಾಪಕ ರವೀಂದರ್ ಹಾಗೂ ನಟಿ ಮಹಾಲಕ್ಷ್ಮೀ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಟ್ರೋಲ್ ಗೆ ಒಳಗಾಗಿದ್ದರು. ಮಿಸ್ ಮ್ಯಾಜ್ ಜೋಡಿ ಎಂದು ಸಾಕಷ್ಟು ಮಂದಿ ಟ್ರೋಲ್ ಮಾಡಿದ್ದರು. ಆದರೆ ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದ ರವೀಂದರ್ ಹಾಗೂ ಮಹಾಲಕ್ಷ್ಮೀ ಹೊಸ ಜೀವನವನ್ನು ಎಂಜಾಯ್ ಮಾಡುತ್ತಿದ್ದಾರೆ. ಮಹಾಲಕ್ಷ್ಮೀ ಕೈ ಹಿಡಿದ ಬಳಿಕ ರವೀಂದರ್ ಸೋಷಿಯಲ್ ಮೀಡಿಯಾದಲ್ಲಿ ಮತ್ತಷ್ಟು ಆಕ್ಟೀವ್ ಆಗಿದ್ದಾರೆ. ಆಗಾಗ ಕೆಲವು ಘಟನೆಗಳನ್ನು ಸಮಾಜಿಕ ಜಾಲಾ ತಾಣಗಳಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಇತ್ತೀಚೆಗೆ […]Read More

Phone icon
Call Now
Reach us!
WhatsApp icon
Chat Now