• June 19, 2026

karnatakaspecial.in

https://karnatakaspecial.in/

ಮಂಗಳೂರು ಸೆಂಟ್ರಲ್ ಮಾರ್ಕೆಟ್ನ ನೀಲನಕ್ಷೆಯಲ್ಲಿ 9 ಬೀಫ್ ಸ್ಟಾಲ್: ಬಿಜೆಪಿ ವಿರುದ್ಧ ಆಕ್ರೋಶ

ಮಂಗಳೂರು: ವಿವಾದದ ಕೇಂದ್ರ ಬಿಂದುವಾಗಿದ್ದ ಮಂಗಳೂರಿನ ಸೆಂಟ್ರಲ್ ಮಾರ್ಕೆಟ್ ಇದೀಗ  ಮತ್ತೆ ವಿವಾದದ ಮೂಲಕ ಸುದ್ದಿಯಾಗಿದೆ. ನೂತನವಾಗಿ ನಿರ್ಮಾಣ ಆಗುತ್ತಿರುವ ಮಾರುಕಟ್ಟೆಯಲ್ಲಿ ಅಧಿಕೃತ ಬೀಫ್ ಸ್ಟಾಲ್‌ಗೆ ನಗರ ಪಾಲಿಕೆ ಅವಕಾಶ ನೀಡಿರುವುದು ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ. ಬ್ರಿಟಿಷರ ಕಾಲದಿಂದ ಇದ್ದ ಮಂಗಳೂರಿನ ಸೆಂಟ್ರಲ್ ಮಾರ್ಕೆಟ್ ನವೀಕರಣಗೊಳಿಸಲು ಕಳೆದ ವರ್ಷ ನೆಲಸಮಗೊಳಿಸಲಾಗಿತ್ತು. ಆದರೆ ಈ ವೇಳೆ ಅಲ್ಲಿದ್ದ ಅಂಗಡಿ ಮಾಲಿಕರು ಸಾಕಷ್ಟು ವಿರೋಧ ವ್ಯಕ್ತಪಡಿಸಿ, ನ್ಯಾಯಾಲಯದ ಮೆಟ್ಟಿಲೇರಿದ್ದರು.  ಇದೀಗ ನಗರ ಪಾಲಿಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 114 ಕೋಟಿ […]Read More

ವಿದೇಶ ಪ್ರವಾಸದ ವೇಳೆ ಕಾಲು ಮುರಿದುಕೊಂಡು ಮನೆಗೆ ವಾಪಸ್ ಆದ ನಟಿ ತ್ರಿಷಾ

ಪೊನ್ನಿಯನ್ ಸೆಲ್ವರ್ ಸಕ್ಸಸ್ ಬಳಿಕ ನಟಿ ತ್ರಿಷಾ ಕೃಷ್ಣನ್ ವಿದೇಶ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಕಾಲು ಮುರಿದುಕೊಂಡ ಕಾರಣ ತ್ರಿಷಾ ವಿದೇಶ ಪ್ರಯಾಣದಿಂದ ವಾಪಸ್ ಆಗಿದ್ದು ಸದ್ಯ ಮನೆಯಲ್ಲಿ ರೆಸ್ಟ್ ತೆಗೆದುಕೊಳ್ಳುತ್ತಿದ್ದಾರೆ. ಈ ಬಗ್ಗೆ ತ್ರಿಷಾ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಕಾಲಿಗೆ ಬ್ಯಾಂಡೇಜ್ ಮಾಡಿರುವ ಫೋಟೋ ಹಂಚಿಕೊಂಡಿರುವ ತ್ರಿಷಾ ಅಪಘಾತವಾದ ಕಾರಣ ವೆಕೇಶನ್‌ನಿಂದ ವಾಪಸ್ ಬರಬೇಕಾಯಿತು ಎಂದಿದ್ದಾರೆ. ತ್ರಿಷಾಗೆ ಅಪಘಾತವಾದ ಸುದ್ದಿ ತಿಳಿದ ಅಭಿಮಾನಿಗಳು ಕಂಗಾಲಾಗಿದ್ದು ಆದಷ್ಟು ಬೇಗ ಚೇತರಿಸಿಕೊಳ್ಳಿ ಎಂದಿದ್ದಾರೆ. 2002ರಲ್ಲಿ ತೆರೆಕಂಡ ತಮಿಳಿನ […]Read More

ಕುಟುಂಬ ತೊರೆದು ಜೈನ ಸನ್ಯಾಸತ್ವ ಸ್ವೀಕರಿಸಲು ಮುಂದಾದ ಬಿಜೆಪಿ ಹಿರಿಯ ನಾಯಕಿ ಉಮಾ

ಬಿಜೆಪಿಯ ಹಿರಿಯ ನಾಯಕಿ ಉಮಾ ಭಾರತಿ ಅವರ ಟ್ವೀಟ್ ಒಂದು ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿದೆ. ನವೆಂಬರ್ 17ರಿಂದ ಎಲ್ಲಾ ಸಂಬಂಧಗಳನ್ನು ತ್ಯಜಿಸುತ್ತಿರುವುದಾಗಿ ಉಮಾ ಭಾರತಿ ಘೋಷಿಸಿದ್ದು ಇನ್ನು ಮುಂದೆ ದೀದಿ ಮಾ ಎಂದಷ್ಟೇ ಕರೆಸಿಕೊಳ್ಳುವುದಾಗಿ ಉಮಾ ಭಾರತಿ ಟ್ವೀಟ್ ಮಾಡಿದ್ದಾರೆ. ಕಳೆದ ಎರಡು ದಿನಗಳಿಂದ ಊಮಾ ಭಾರತಿ 27 ಸರಣಿ ಟ್ವೀಟ್ ಮಾಡಿದ್ದಾರೆ. ರಾಷ್ಟ್ರ ರಾಜಕೀಯದಲ್ಲಿ ಬಿಜೆಪಿ ಅಭಿವೃದ್ಧಿಯ ಗದ್ದುಗೆಗೇರಲು ಹಾಗೂ ರಾಮ ಮಂದಿರ ಚಳಿವಳಿಯಲ್ಲಿ ಮುಂಚೂಣಿಯಲ್ಲಿದ್ದ ನಾಯಕರಲ್ಲಿ ಒಬ್ಬರಾಗಿದ್ದ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಉಮಾ […]Read More

ನೋಯ್ಡಾದ ಟ್ವೀನ್ ಟವರ್ ಬಳಿಕ ಮತ್ತೊಂದು ಕಿಲ್ಲರ್ ಟವರ್ ಕೆಡುವಲು ಕೌಂಟ್ ಡೌನ್

ಅಕ್ರಮವಾಗಿ ತಲೆ ಎತ್ತಿರುವ ದೇಶದ ಭಾರೀ ಎತ್ತರದ ಬಿಲ್ಡಿಂಗ್ ಗಳನ್ನು ನೆಲಸಮ ಮಾಡಲು ಸರ್ಕಾರ ಮುಂದಾಗಿದೆ. ಈಗಾಗಲೇ ಆಗಸ್ಟ್ ಕೊನೆಯಲ್ಲಿ ನೋಯ್ಡಾದಲ್ಲಿದ್ದ ಭಾರೀ ಎತ್ತರದ ಸೂಪರ್‌ಟೆಕ್ ಅವಳಿ ಕಟ್ಟಡ ನೆಲಸಮದ ಬಳಿಕ ಇದೀಗ ಗುರುಗ್ರಾಮದ ಬೃಹತ್ ಕಟ್ಟಡವೊಂದು ನೆಲಸಮವಾಗಲು ಸಿದ್ದವಾಗಿದೆ. ಗುರುಗ್ರಾಮದಲ್ಲಿರುವ ಚಿಂಟೆಲ್ಸ್ ಪ್ಯಾರಾಡಿಸೊ ಸೊಸೈಟಿಯಲ್ಲಿರುವ ಬೃಹತ್ ಕಟ್ಟಡವೊಂದನ್ನು ಕೆಡವಲು ನಿರ್ಧರಿಸಲಾಗಿದೆ. ನೋಯ್ಡಾದ ಅವಳಿ ಕಟ್ಟಡಗಳನ್ನು ನೆಲಸಮಗೊಳಿಸಿದ ರೀತಿಯಲ್ಲಿಯೇ ಸ್ಫೋಟಕ ಹಾಗೂ ಯಂತ್ರಗಳನ್ನು ಬಳಸಿಕೊಂಡು ಚಿಂಟೆಲ್ಸ್ ಪ್ಯಾರಾಡಿಸೊ ಅಪಾರ್ಟ್ಮೆಂಟ್ ಸಂಕೀರ್ಣದಲ್ಲಿರುವ ಟವರ್ ಡಿ ಅನ್ನು ಶೀಘ್ರದಲ್ಲೇ ಕೆಡವಲು […]Read More

ನಟ ಝೈದ್ ಖಾನ್ ಜೊತೆ ಬನಾರಸ್ ಚಿತ್ರ ವೀಕ್ಷಿಸಿದ ಸಿದ್ದರಾಮಯ್ಯ

ಶಾಸಕ ಜಮೀರ್ ಅಹಮದ್ ಖಾನ್ ಪುತ್ರ ಝೈದ್ ಖಾನ್ ನಟನೆಯ ಬನಾರಸ್ ಸಿನಿಮಾ ಇತ್ತೀಚೆಗಷ್ಟೇ ರಿಲೀಸ್ ಆಗಿದೆ. ಅದ್ದೂರಿ ಬಜೆಟ್ ನಲ್ಲಿ ರೆಡಿಯಾದ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಕಂಡಿದ್ದು ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ನಟ ಝೈದ್ ಖಾನ್ ಜೊತೆ ಚಿತ್ರ ವೀಕ್ಷಿಸಿ ಚಿತ್ರದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಚಿತ್ರ ವೀಕ್ಷಿಸಿದ ಬಳಿಕ ಸಿದ್ದರಾಮಯ್ಯ ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಬರೆದುಕೊಂಡಿದ್ದಾರೆ. `ಝೈದ್ ಖಾನ್ ಹಾಗೂ ಸೋನಲ್‌ ಮಾಂಟೇರೋ ಅಭಿನಯದ […]Read More

ತಳುವಿನಲ್ಲೂ ತೆರೆಕಾಣಲಿದೆ ಕಾಂತಾರ ಚಿತ್ರ: ರಿಷಬ್ ಶೆಟ್ಟಿ

ಕನ್ನಡ ಭಾಷೆಯಲ್ಲಿ ತೆರೆಕಂಡ ಕಾಂತಾರ ಚಿತ್ರ ದೊಡ್ಟ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಬಾಕ್ಸ್ ಅಫೀಸ್ ನಲ್ಲಿ ಕೋಟಿ ಕೋಟಿ ಕಲೆಕ್ಷನ್ ಮಾಡುವ ಮೂಲಕ ಈ ಹಿಂದಿನ ಸಿನಿಮಾಗಳ ದಾಖಲೆಯನ್ನು ಕಾಂತಾರ ಮುರಿಯುತ್ತಿದೆ. ತುಳುನಾಡಿನ ಆರಾದ್ಯ ದೈವದ ಹಿನ್ನೆಲೆಯಲ್ಲಿ ಮೂಡಿ ಬಂದಿರುವ ಕಾಂತಾರ ಚಿತ್ರವನ್ನು ತುಳುವಿಗೂ ಡಬ್ ಮಾಡಬೇಕು ಎನ್ನುವುದು ನಿರ್ಮಾಪಕ ವಿಜಯ್ ಕಿರಗಂದೂರು ಆಸೆಯಂತೆ. ಹಾಗಾಗಿ ಈ ಸಿನಿಮಾವನ್ನು ತುಳುವಿಗೂ ಡಬ್ ಮಾಡಲು ಮುಂದಾಗಿದೆ ಚಿತ್ರತಂಡ. ಈ ಬಗ್ಗೆ ಧರ್ಮಸ್ಥಳದಲ್ಲಿ ಮಾತನಾಡಿದ ರಿಷಬ್ ಶೆಟ್ಟಿ, ‘ಕಾಂತಾರ ಸಿನಿಮಾವನ್ನು […]Read More

ಕಾಂತಾರ ನೋಡಿ ಪಂಜುರ್ಲಿ ರೀಲ್ಸ್ ಮಾಡಿದ್ದ ಯುವತಿ: ಧರ್ಮಸ್ಥಳ ಮಂಜುನಾಥ ಸ್ವಾಮಿಗೆ ತಪ್ಪು

ರಿಷಬ್ ಶೆಟ್ಟಿ ನಿರ್ದೆಶಿಸಿ ನಟಿಸಿರುವ ಕಾಂತಾರ ಸಿನಿಮಾ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಚಿತ್ರದಲ್ಲಿ ಬರುವ ದೈವದ ರೂಪ ಹಾಗೂ ಹಾಡುಗಳು ಜನರಿಗೆ ಸಖತ್ ಇಷ್ಟವಾಗಿತ್ತು. ಅಲ್ಲದೆ ದೈವದ ವೇಷ ಹಾಕಿ ರೀಲ್ಸ್ ಮಾಡುವುದು, ಚಿತ್ರದಲ್ಲಿ ಬರುವ ಓ ಎಂಬ ಶಬ್ದವನ್ನು ಕೂಗುವುದು ಮಾಡುತ್ತಿದ್ದರು. ಹೀಗೆ ಮಾಡುವುದು ದೇವರಿಗೆ ಅವಮಾನ ಮಾಡಿದಂತೆ, ಇದನ್ನೆಲ್ಲಾ ಮಾಡದಂತೆ ರಿಷಬ್ ಶೆಟ್ಟಿ ಮನವಿ ಮಾಡಿದ್ದರು. ಆದರೂ ಬೆಂಗಳೂರಿನ ಮೇಕಪ್ ಆರ್ಟೀಸ್ಟ್ ಶ್ವೇತಾ ರೆಡ್ಡಿ ದೈವದ ವೇಷ ಧರಿಸಿ ಭಾರೀ ವಿವಾದಕ್ಕೆ ಕಾರಣವಾಗಿದ್ದರು. […]Read More

ಡಾಲಿ ಧನಂಜಯ್ ಚಿತ್ರದ ಮೂಲಕ ನಟಿ ರಮ್ಯಾ ಕಂಬ್ಯಾಕ್

ಸಾಕಷ್ಟು ವರ್ಷಗಳ ಕಾಲ ಸಿನಿಮಾ ರಂಗದಿಂದ ದೂರವಿದ್ದ ಮೋಹಕ ತಾರೆ ರಮ್ಯಾ ಇತ್ತೀಚೆಗಷ್ಟೇ ಆ್ಯಪಲ್ ಬಾಕ್ಸ್ ಹೆಸರಿನ ನಿರ್ಮಾಣ ಸಂಸ್ಥೆ ಹುಟ್ಟುಹಾಕಿದ್ದರೆ. ಜೊತೆಗೆ ತಮ್ಮದೆ ಪ್ರೊಡಕ್ಷನ್ ಹೌಸ್ ನಲ್ಲಿ ಆರಂಭವಾಗಲಿರುವ ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರದ ಮೂಲಕ ಕಂಬ್ಯಾಕ್ ಮಾಡುವುದಾಗಿ ಹೇಳಿ ಅಭಿಮಾನಿಗಳಿಗೆ ಖುಷಿ ನೀಡಿದ್ದರು. ಆದರೆ ಇದೀಗ ರಮ್ಯಾ ಜಾಗಕ್ಕೆ ಮತ್ತೊಬ್ಬ ಎಂಟ್ರಿಯಾಗಿದೆ. ರಮ್ಯಾ ಕಂಬ್ಯಾಕ್ ಸುದ್ದಿ ಕೇಳಿ ಖುಷಿಯಾಗಿದ್ದ ಅಭಿಮಾನಿಗಳು ರಮ್ಯಾ ಚಿತ್ರದಲ್ಲಿ ನಟಿಸುತ್ತಿಲ್ಲ ಎಂಬ ಸುದ್ದಿ ಕೇಳಿ ಬೇಸರಗೊಂಡಿದ್ದರು. ಆದರೆ ಇದೀಗ […]Read More

ಎಬಿಡಿ ಭೇಟಿ ಮಾಡಿದ ನಟ ರಿಷಬ್ ಶೆಟ್ಟಿ

ಕಾಂತಾರ ಸಿನಿಮಾದ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಗುರುತಿಸಿಕೊಂಡಿರುವ ರಿಷಬ್ ಶೆಟ್ಟಿ ದೇಶ ವಿದೇಶದಲ್ಲೂ ಸಖತ್ ಸದ್ದು ಮಾಡುತ್ತಿದ್ದಾರೆ. ಸದ್ಯ ರಿಷಬ್ ಶೆಟ್ಟಿ ಕಾಂತಾರ ಸಕ್ಸಸ್ ಖುಷಿಯಲ್ಲಿದ್ದು ಈ ಮಧ್ಯೆ ದಕ್ಷಿಣ ಆಫ್ರಿಕಾ ಕ್ರಿಕೆಟ್‌ ತಂಡದ ಆಟಗಾರ ಎಬಿ ಡಿವಿಲಿಯರ್ಸ್‌ ಭೇಟಿ ಮಾಡಿದ್ದಾರೆ. ರಿಷಬ್ ಹಾಗೂ ಎಬಿ ಡಿವಿಲಿಯರ್ಸ್‌ ಭೇಟಿಯ ಫೋಟೋಗಳನ್ನು ಹೊಂಬಾಳೆ ಫಿಲ್ಮ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ಸಿನಿಮಾದ 360 ಡಿಗ್ರಿ ಹಾಗೂ ಕ್ರಿಕೆಟ್‌ನ 360 ಡಿಗ್ರಿ ಮುಖಾಮುಖಿಯಾಗಿದ್ದಾರೆ ಎಂದು ಹೊಂಬಾಳೆ ಫಿಲ್ಸ್ಂ ಟ್ವೀಟ್ […]Read More

ಇಂದು ಬನಾರಸ್ ಸಿನಿಮಾ ರಿಲೀಸ್: ಸಾವಿರಕ್ಕೂ ಅಧಿಕ ಥಿಯೇಟರ್ ಗಳಲ್ಲಿ ಝೈದ್ ಖಾನ್

ಶಾಸಕ ಜಮೀರ್ ಅಹಮದ್ ಖಾನ್ ಪುತ್ರ ಝೈದ್ ಖಾನ್ ನಟನೆಯ ಚೊಚ್ಚಲ ಚಿತ್ರ ಬನಾರಸ್ ಇಂದು ಸಖತ್ ಅದ್ದೂರಿಯಾಗಿ ತೆರೆಗೆ ಬರುತ್ತಿದೆ. ಸುಮಾರು ಒಂದು ಸಾವಿರ ಥಿಯೇಟರ್ ಗಳಲ್ಲಿ ಬನಾರಸ್ ತೆರೆಗೆ ಬರಲಿದ್ದು ಈ ಮೂಲಕ ಹೊಸ ನಟನ ಸಿನಿಮಾವೊಂದು ಇಷ್ಟು ದೊಡ್ಡ ಮಟ್ಟದಲ್ಲಿ ಬಿಡುಗಡೆ ಆಗಿ ಸದ್ದು ಮಾಡಲು ರೆಡಿಯಾಗಿದೆ ಜಯತೀರ್ಥ ನಿರ್ದೇಶನದಲ್ಲಿ ಮೂಡಿ ಬಂದಿರುವ ಬನಾರಸ್ ಸಿನಿಮಾ ಕನ್ನಡದ ಜೊತೆಗೆ ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಯಲ್ಲೂ ತೆರೆಗೆ ಬರುತ್ತಿದೆ. ಮೊದಲು ಕನ್ನಡ […]Read More

Phone icon
Call Now
Reach us!
WhatsApp icon
Chat Now