• June 19, 2026

karnatakaspecial.in

https://karnatakaspecial.in/

ಸ್ಟಂಟ್ ದೃಶ್ಯ ಮಾಡುವಾಗ ಕಾಲು ಮುರಿದುಕೊಂಡ ಟೈಗರ್ ಶ್ರಾಫ್: ವಿಡಿಯೋ ವೈರಲ್

ಸಿನಿಮಾ ರಿಯಲಿಸ್ಟಿಕ್ ಆಗಿ ಮೂಡಿ ಬರಬೇಕು ಅನ್ನೋ ಕಾರಣಕ್ಕೆ ಕಲಾವಿದರು ಸಾಕಷ್ಟು ಸಾಹಸಗಳಿಗೆ ಕೈ ಹಾಕುತ್ತಿದ್ದಾರೆ. ಅದೆಷ್ಟೋ ನಟ, ನಟಿಯರು ಡ್ಯೂಪ್ ಇಲ್ಲದೆ ಸ್ಟಂಟ್ ಮಾಡಲು ಹೋಗಿ ಕೈ ಕಾಲು ಮುರಿದುಕೊಂಡಿದ್ದು ಗೊತ್ತೆ ಇದೆ. ಇದೀಗ ಬಿಟೌನ್ ನಟ ಟೈಗರ್ ಶ್ರಾಫ್ ಸ್ಟಂಟ್ ಮಾಡವ ವೇಳೆ ಕಾಲು ಮುರಿದುಕೊಂಡಿದ್ದಾರೆ. ಇತ್ತೀಚೆಗಷ್ಟೇ ನಟಿ ಶಿಲ್ಪಾ ಶೆಟ್ಟಿ ಸ್ಟಂಟ್ ಮಾಡುವ ವೇಳೆ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದರು. ಘಟನೆ ನಡೆದು ಒಂದು ತಿಂಗಳಾಗುತ್ತ ಬಂದಿದ್ದರು ಇನ್ನೂ ಶಿಲ್ಪಾ ಶೆಟ್ಟಿ ಕಾಲು ಸಂಪೂರ್ಣವಾಗಿ […]Read More

ವಿರಾಟ್ ಕೊಹ್ಲಿಯ ಹೋಟೆಲ್ ರೂಮ್ ವಿಡಿಯೋ ಲೀಕ್: ಅಸಮಾಧಾನ ಹೊರ ಹಾಕಿದ ಅನುಷ್ಕಾ

ಟೀಂ ಇಂಡಿಯಾ ಮಾಜಿ ನಾಯಕ, ಕ್ರಿಕೆಟಿಗ ವಿರಾಟ್ ಕೊಹ್ಲಿ ಟಿ 20 ವಿಶ್ವಕಪ್ ಗಾಗಿ ಆಸ್ಟ್ರೇಲಿಯಾದಲ್ಲಿದ್ದು ಈ ವೇಳೆ ಕೊಹ್ಲಿಯ ಹೋಟಲೆ ರೂಂ ವಿಡಿಯೋ ವೈರಲ್ ಆಗಿದೆ. ತಮ್ಮ ಹೋಟೆಲ್ ರೂಂನ ವಿಡಿಯೋ ನೋಡಿ ಕೊಹ್ಲಿ ಅಸಮಾಧಾನ ಹೊರ ಹಾಕಿದ್ದು ಇದೀಗ ನಟಿ ಅನುಷ್ಕಾ ಶೆಟ್ಟಿ ಈ ಕುರಿತು ಕೆಂಡಾಮಂಡಲರಾಗಿದ್ದಾರೆ. ವಿರಾಟ್ ರೂಮಿನಲ್ಲಿ ಇಲ್ಲದ ವೇಳೆ ಅಭಿಮಾನಿಯೋರ್ವ ಹೋಟೆಲ್ ಕೊಠಡಿಯ ವೀಡಿಯೋ ಮಡಿ ಅದನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಆ ವಿಡಿಯೋವನ್ನು ಕೊಹ್ಲಿ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡು, […]Read More

ಅಪ್ಪುಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ: ಭಾವುಕರಾಗಿ ಪ್ರಶಸ್ತಿ ಸ್ವೀಕರಿಸಿದ ಪುನೀತ್ ಪತ್ನಿ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಸಿನಿಮಾ ರಂಗ ಮತ್ತು ಸಮಾಜ ಸೇವೆಯನ್ನು ಪರಿಗಣಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಿದರು. ಪುನೀತ್ ಪರವಾಗಿ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಈ ಪ್ರಶಸ್ತಿಯನ್ನು ಸ್ವೀಕರಿಸಿ ಭಾವುಕರಾದರು.  ಪ್ರಶಸ್ತಿ ಸ್ವೀಕರಿಸಿದ ಪತ್ನಿ ಅಶ್ವಿನಿ ಭಾವುಕರಾಗಿಯೇ ಎಲ್ಲರಿಗೂ ಧನ್ಯವಾದ ತಿಳಿಸಿದರು. ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತೊಮ್ಮೆ ಇಲ್ಲಿಯೇ ಹುಟ್ಟಿಬನ್ನಿ ಪುನೀತ್ ಎಂದು ಹೇಳಿದರು. ಪುನೀತ್ ಬಗ್ಗೆ ಮಾತನಾಡಿದ […]Read More

ರಾಜ್ಯೋತ್ಸವದಂದು ಗಡಿನಾಡಿನಲ್ಲಿ ಕನ್ನಡದ ಕಂಪು ಹರಡಿದ ‘ಬನಾರಸ್’ ಹೀರೋ

ಕರ್ನಾಟಕದ ಬಹುಭಾಗಗಳಲ್ಲಿ ಯಶಸ್ವಿಯಾಗಿ ರೋಡ್ ಶೋಗಳನ್ನು ನಡೆಸಿದ್ದ ಬನಾರಸ್ ಹೀರೋ ಝೈದ್ ಖಾನ್ ಇದೀಗ ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲಿ ಮಿಂದೇಳುತ್ತಿದ್ದಾರೆ. ವಿಶೇಷವೆಂದರೆ, ಸದಾ ಭಾಷೆ ಮತ್ತು ಗಡಿ ವಿವಾದದಿಂದ ಸದ್ದು ಮಾಡುವ ಬೆಳಗಾವಿಯ ನೆಲದಲ್ಲಿಯೇ ಕನ್ನಡ ರಾಜ್ಯೋತ್ಸವದಲ್ಲಿ ಭಾಗಿಯಾಗಿದ್ದಾರೆ. ಈ ನಿಮಿತ್ತವಾಗಿ ಬೆಳಗಾವಿಗೆ ಬಂದಿಳಿದ ಝೈದ್ ಖಾನ್ ಅವರಿಗೆ ಬೆಳಗಾವಿ ಸೀಮೆಯ ಕನ್ನಡಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಅದ್ದೂರಿ ಸ್ವಾಗತ ಕೋರಲಾಯ್ತು. ಈ ಸಂದರ್ಭದಲ್ಲಿ ಕನ್ನಡಪರ ಹೋರಾಟಗಾರರಾದ ಮನ್ಸೂರ್, ಕನ್ನಡ ರಕ್ಷಣಾ ವೇದಿಕೆಯ ರಾಜು ಕಲ್ಲೂರ್ ಮುಂತಾದವರು […]Read More

ಅಪ್ಪುಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ: ಕಾರ್ಯಕ್ರಮಕ್ಕೆ ಹೋಗಲ್ಲ ಎಂದ ಸಿದ್ದರಾಮಯ್ಯ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಸಮಾಜ ಸೇವೆಯನ್ನು ಗುರುತಿಸಿ ಇಂದು ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ವಿಧಾನ ಸೌದದ ಮೆಟ್ಟಿಲುಗಳ ಮೇಲೆ ನಡೆಯಲಿರುವ ಕಾರ್ಯಕ್ರಮಕ್ಕೆ ಸಾಕಷ್ಟು ಮಂದಿ ಗಣ್ಯರು ಭಾಗಿಯಾಗಲಿದ್ದಾರೆ. ಅಪ್ಪುಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಜೂನಿಯರ್ ಎನ್ ಟಿ ಆರ್ ವಿಶೇಷ ಅತಿಥಿಗಳಾಗಿ ಆಗಮಿಸುತ್ತಿದ್ದಾರೆ. ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರವಾಗಿ ನೀಡುತ್ತಿರುವ ಕರ್ನಾಟಕ ರತ್ನ ಪ್ರಶಸ್ತಿಯನ್ನು ಅಶ್ವಿನಿ ಪುನೀತ್ ರಾಜ್ ಕುಮಾರ್ […]Read More

ಅಪ್ಪುಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ: ಬೆಂಗಳೂರಿಗೆ ಬಂದಿಳಿಸಿದ ರಜನಿಕಾಂತ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಇಂದು ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಇಂದು ಸಂಜೆ 4 ಗಂಟೆಗೆ ವಿಧಾನ ಸೌಧದ ಮುಂಭಾಗದಲ್ಲಿ ನಡೆಯುವ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಜೂನಿಯರ್ ಎನ್ ಟಿ ಆರ್ ಹಾಗೂ ಸುಧಾಮೂರ್ತಿ ವಿಶೇಷ ಅತಿಥಿಯಾಗಿ ಭಾಗವಹಿಸುತ್ತಿದ್ದಾರೆ. ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಹಿನ್ನೆಲೆಯಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಈಗಾಗಲೇ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಿದ್ದಾರೆ. ವಿಮಾನ ನಿಲ್ದಾಣಕ್ಕೆ  ಭೇಟಿ ನೀಡಿದ ಆರೋಗ್ಯ ಸಚಿವ […]Read More

ದತ್ತಣ್ಣ, ಅವಿನಾಶ್, ಸಿಹಿ ಕಹಿ ಚಂದ್ರು ಸೇರಿ 67 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ

ಕನ್ನಡ ನಾಡು, ನುಡಿಗೆ ತಮ್ಮದೇ ಆದ ಕೊಡುಗೆ ನೀಡಿದವರಿಗೆ ಪ್ರತಿವರ್ಷ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಅಂತೆಯೇ ಈ ಬಾರಿಯೂ ಒಟ್ಟು  67 ಮಂದಿಗೆ ಪ್ರಶಸ್ತಿ ನೀಡಲಾಗುತ್ತಿದ್ದು ಹಿರಿಯ ನಟರಾದ ದತ್ತಣ್ಣ, ಸಿಹಿಕಹಿ ಚಂದ್ರು, ಅವಿನಾಶ್‌ ಅವರಿಗೂ ಪ್ರಶಸ್ತಿ ನೀಡಲಾಗುತ್ತಿದೆ. ಸಿನಿಮಾ ರಂಗದಲ್ಲಿನ ಸೇವೆಯನ್ನು ಪರಿಗಣಿಸಿ ಅವಿನಾಶ್‌ ಮತ್ತು ದತ್ತಣ್ಣ ಅವರಿಗೆ ಪ್ರಶಸ್ತಿ ನೀಡಲಾಗುತ್ತಿದೆ. ಇನ್ನೂ ಕಿರುತೆರೆ ವಿಭಾಗದಲ್ಲಿ ಸಿಹಿ ಕಹಿ ಚಂದ್ರು ಅವರಗೆ ಪ್ರಶಸ್ತಿ ನೀಡಲಾಗುತ್ತಿದೆ. ದತ್ತಣ್ಣ ಎಂಬ ಹೆಸರಿನೊಂದಿಗೆ ಖ್ಯಾತಿ ಪಡೆದಿರುವ ದತ್ತಾತ್ತೇಯ ಅವರು […]Read More

ನಟಿ ರಂಭಾ ಕಾರು ಭೀಕರ ಅಪಘಾತ : ಪುತ್ರಿಗೆ ಗಂಭೀರ ಗಾಯ, ಆಸ್ಪತ್ರೆಗೆ

ತೆಲುಗು ಚಿತ್ರದ ಮೂಲಕ ಸಿನಿಮಾ ರಂಗಕ್ಕೆ ಎಂಟ್ರಿಕೊಟ್ಟು ಬಹುಭಾಷಾ ನಟಿಯಾಗಿ ಗುರುತಿಸಿಕೊಂಡಿರುವ ಖ್ಯಾತ ನಟಿ ರಂಭಾ ಕಾರು ಭೀಕರ ಅಪಘಾತಕ್ಕೆ ತುತ್ತಾಗಿದೆ. ಕೆನಡಾದ ಟೊರೊಂಟೊದಲ್ಲಿ ಘಟನೆ ನಡೆದ್ದು ಅಪಘಾತದಲ್ಲಿ ರಂಭಾ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಗಂಭೀರವಾಗಿ ಗಾಯಗೊಂಡಿರುವ ರಂಭಾ ಮಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಂಭಾ, ಪತಿ ಇಂದ್ರಕುಮಾರ್ ಪದ್ಮನಾಥನ್ ಹಾಗೂ ಮೂವರು ಮಕ್ಕಳೊಂದಿಗೆ ಕೆನಡಾದ ಒಂಟಾರಿಯೊ ಪ್ರಾಂತ್ಯದ ರಾಜಧಾನಿ ಟೊರೊಂಟೊದಲ್ಲಿ ವಾಸವಾಗಿದ್ದಾರೆ. ಟೊರೊಂಟೊದ ಶಾಲೆಯಲ್ಲಿ ರಂಭಾ ಮಕ್ಕಳು ಓದುತ್ತಿದ್ದು ನಿತ್ಯ ರಂಭಾ ಅವರೇ ಹೋಗಿ […]Read More

ಅಮೀರ್ ಖಾನ್ ತಾಯಿ ಜೀನತ್ ಹುಸೇನ್ ಗೆ ಹೃದಯಾಘಾತಕ್ಕೆ

ಬಾಲಿವುಡ್ ಮಿಸ್ಟರ್ ಪರ್ಫೆಕ್ಷನಿಸ್ಟ್ ಅಮೀರ್ ಖಾನ್ ತಾಯಿ ಜೀನತ್ ಹುಸೇನ್ ಇತ್ತೀಚೆಗೆ ಹೃದಯಾಘಾತಕ್ಕೆ ಒಳಗಾಗಿದ್ದು ಸದ್ಯ ಚೇತರಿಸಿಕೊಂಡಿದ್ದಾರೆ. ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಜೀನತ್ ಆರೋಗ್ಯದಲ್ಲಿ ಕೊಂಚ ಸುಧಾರಣೆ ಕಂಡು ಬಂದಿದ್ದು ಇದೀಗ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದಾರೆ. ಇತ್ತೀಚೆಗೆ ದೀಪಾವಳಿ ಹಬ್ಬದ ಸಂದರ್ಭ ದಲ್ಲಿ ಜೀನತ್ ಅವರಿಗೆ ಹೃದಯಾಘಾತ ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ಸೇರಿಸಲಾಗಿತ್ತು. ವೈದ್ಯರ ಚಿಕಿತ್ಸೆಯ ಬಳಿಕ ಚೇತರಿಸಿಕೊಂಡಿರುವ ಜೀನತ್ ಹುಸೇನ್ ಸದ್ಯ ಮನೆಯಲ್ಲಿ ವೈದ್ಯರ ಸಲಹೆಯ ಮೇರೆಗೆ ವಿಶ್ರಾಂತಿ […]Read More

ಕಾಂತಾರ ನೋಡಿಲ್ಲ ಎಂದು ರಶ್ಮಿಕಾ ಮಂದಣ್ಣ: ನಿಯತ್ತಿಲ್ಲದ ಹುಡುಗಿ ಎಂದು ನೆಟ್ಟಿಗರು

ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಚಿತ್ರ ಬಿಡುಗಡೆ ಆಗಿ ತಿಂಗಳು ಕಳೆದಿದ್ರು ಸಾಕಷ್ಟು ಕಡೆಗಳಲ್ಲಿ ಇಂದಿಗೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಸಾಕಷ್ಟು ಮಂದಿ ಚಿತ್ರ ನೋಡಿ ಮೆಚ್ಚುಗೆ ಸೂಚಿಸಿದ್ದಾರೆ. ಇದೀಗ ರಶ್ಮಿಕಾ ಮಂದಣ್ಣ ಚಿತ್ರ ನೋಡಿಲ್ಲ ಎನ್ನುವ ಮೂಲಕ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಕಾಂತಾರ ಚಿತ್ರ ನೋಡಿ ಸೂಪರ್ ಸ್ಟಾರ್ ರಜನಿಕಾಂತ್ ರಿಷಬ್ ಶೆಟ್ಟಿಯನ್ನು ಕರೆದು ಸನ್ಮಾನಿಸಿದ್ದಾರೆ. ಅಲ್ಲದೆ ಕಂಗಾನ ರಣಾವತ್, ಪೂಜಾ ಹೆಗ್ಡೆ, ಅನುಷ್ಕಾ ಶೆಟ್ಟಿ, ಶಿಲ್ಪಾ […]Read More

Phone icon
Call Now
Reach us!
WhatsApp icon
Chat Now