ಕ್ರಿಕೆಟಿಗ ಮೊಹಮ್ಮದ್ ಶಮಿ ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ ಪ್ರಧಾನಿ!

ನವದೆಹಲಿ: ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಶೀಘ್ರ ಗುಣಮುಖರಾಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಹಾರೈಸಿದ್ದಾರೆ. ಎಕ್ಸ್ ಹ್ಯಾಂಡಲ್ನಲ್ಲಿ ಪೋಸ್ಟ್ ಮಾಡಿದ ಮೊಹಮ್ಮದ್ ಶಮಿ, ತಮ್ಮ ಹಿಮ್ಮಡಿಯ ಅಚಿಲ್ಲೆಸ್ ಸ್ನಾಯುವಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ತಿಳಿಸಿದ್ದರು. ಶಸ್ತ್ರಚಿಕಿತ್ಸೆಯ ನಂತರ ಶಮಿ ಎಕ್ಸ್ ನಲ್ಲಿ ಬರೆದಿದ್ದಾರೆ, “ನಾನು ನನ್ನ ಅಚಿಲ್ಲೆಸ್ ಸ್ನಾಯುವಿನ ಹಿಮ್ಮಡಿ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಿದ್ದೇನೆ. ಚೇತರಿಸಿಕೊಳ್ಳಲು ಸಮಯ ತೆಗೆದುಕೊಳ್ಳುತ್ತದೆ ಆದರೆ ನಾನು ನನ್ನ ಸ್ವಂತ ಕಾಲ ಮೇಲೆ ನಿಲ್ಲಲು ತುಂಬಾ ಎದುರು ನೋಡುತ್ತಿದ್ದೇನೆ ಅಂತಹೇಳಿದ್ದರು. […]readmore

PhonePe ಸ್ಮಾರ್ಟ್‌ಸ್ಪೀಕರ್‌ ತನ್ನ ಸೆಲೆಬ್ರಿಟಿ ವಾಯ್ಸ್‌ ಫೀಚರ್‌ಗಾಗಿ ನಟ ಕಿಚ್ಚ ಸುದೀಪ್ ಅವರನ್ನು

ಪ್ರಖ್ಯಾತ ಭಾರತೀಯ ನಟ, ಕಿಚ್ಚ ಸುದೀಪ್ ಅವರ ಸಹಯೋಗದೊಂದಿಗೆ ತನ್ನ ಸ್ಮಾರ್ಟ್‌ಸ್ಪೀಕರ್‌ಗಳಲ್ಲಿ ಮೊದಲ ಬಾರಿಗೆ ಸೆಲೆಬ್ರಿಟಿ ವಾಯ್ಸ್‌ ಫೀಚರ್‌ ಅನ್ನು ಬಿಡುಗಡೆ ಮಾಡುವುದಾಗಿ PhonePe ಇಂದು ಘೋಷಿಸಿತು. ಈ ಹೊಸ ಫೀಚರ್‌ನಿಂದ ಕರ್ನಾಟಕ ಚಲನಚಿತ್ರೋದ್ಯಮದ ಅಪ್ರತಿಮ ನಟ ಕಿಚ್ಚ ಸುದೀಪ್ ಅವರ ವಿಶಿಷ್ಠ ವಾಯ್ಸ್‌ನಲ್ಲಿ ಭಾರತದಾದ್ಯಂತ ಕನ್ನಡ ಮತ್ತು ಇಂಗ್ಲಿಷ್ ಎರಡರಲ್ಲೂ ಗ್ರಾಹಕರ ಪಾವತಿಗಳನ್ನು ಮೌಲ್ಯೀಕರಿಸಲು PhonePe ಸ್ಮಾರ್ಟ್‌ಸ್ಪೀಕರ್‌ಗಳಿಗೆ ಸಾಧ್ಯವಾಗಿಸುತ್ತದೆ. PhonePe ಸ್ಮಾರ್ಟ್‌ಸ್ಪೀಕರ್‌ ಅನ್ನು ಒಂದು ವರ್ಷದ ಹಿಂದೆ ಪ್ರಾರಂಭಿಸಲಾಯಿತು. ಅಂದಿನಿಂದ, ದೇಶದ 90% ಪೋಸ್ಟಲ್ ಕೋಡ್‌ಗಳಲ್ಲಿ […]readmore

ʻಮೈನಾʼ ಹಿರಿಯ ಜವಾಬ್ದಾರಿ ಹೊತ್ತ ಕಿರಿ ಮಗಳ ಕಥೆ ಫೆಬ್ರವರಿ 19 ರಿಂದ

ಕನ್ನಡ ಟೆಲಿವಿಷನ್‌ ಕ್ಷೇತ್ರದ ತಾಯಿಬೇರಿನಂತಿರುವ ಉದಯ ಟಿವಿ ತನ್ನ ವಿಭಿನ್ನ ಧಾರಾವಾಹಿಗಳ ಮೂಲಕ ವೀಕ್ಷಕರಿಗೆ ಮನರಂಜನೆ ಉಣಬಡಿಸುತ್ತಿದೆ. ಸಂಜೆ ೬ ರಿಂದ ರಾತ್ರಿ ೧೦ ಗಂಟೆಯವರೆಗೆ ಕನ್ಯಾದಾನ, ಗಂಗೆಗೌರಿ, ಅಣ್ಣತಂಗಿ, ಶಾಂಭವಿ, ಸೇವಂತಿ, ರಾಧಿಕಾ, ಜನನಿ, ಗೌರಿಪುರದ ಗಯ್ಯಾಳಿಗಳು ವೈವಿಧ್ಯಮಯ ನೈಜ ಕತೆಗಳಿಂದ ಜನಮನ ಗೆದ್ದಿವೆ. ಹೊಸ ಧಾರಾವಾಹಿ ʼಮೈನಾʼ ಈ ಸಾಲಿಗೆ ವಿಶಿಷ್ಟ ಸೇರ್ಪಡೆ. ಫೆಬ್ರುವರಿ ೧೯ ರಿಂದ ಪ್ರತಿದಿನ ರಾತ್ರಿ ೯ ಗಂಟೆಗೆ ʻಮೈನಾʼ ಉದಯ ಟಿವಿಯಲ್ಲಿ ಪ್ರಸಾರವಾಗಲಿದೆ. ಮೈಲಾರಕೋಟೆ ಮೈನಾ ಮನೆಗೆ ಕಿರಿಮಗಳು. […]readmore

ಬೆಂಗಳೂರಿನಲ್ಲಿ ಶ್ರೇಯಸ್ ಮೀಡಿಯಾ ಶಾಖೆ ಶುಭಾರಂಭ.

ದಕ್ಷಿಣ ಭಾರತದ ನಂಬರ್ 1 ಸಿನಿಮಾ ಪ್ರಚಾರ ಕಂಪನಿಯಾಗಿ ಹೊರಹೊಮ್ಮಿರುವ ಶ್ರೇಯಸ್ ಮೀಡಿಯಾ ಭಾರತದಲ್ಲಿ ತನ್ನ ಶಾಖೆಯನ್ನು ವಿಸ್ತರಿಸುತ್ತಿದೆ. ಹೈದ್ರಾಬಾದ್ ನಲ್ಲಿ ಯಶಸ್ವಿ ಕಾರ್ಯಕ್ರಮಗಳನ್ನು ಕೊಟ್ಟಿರುವ ಶ್ರೇಯಸ್ ಕಂಪನಿ, ಶ್ರೇಯಸ್ ಲೈವ್ ನಡಿ ಇದೀಗ ಬೆಂಗಳೂರಿನಲ್ಲಿಯೂ ಹೊಸ ವೆಂಚರ್ ಪ್ರಾರಂಭ ಮಾಡಿದೆ. ಸಿಲಿಕಾನ್ ಸಿಟಿಯಲ್ಲಿ ನಿನ್ನೆ ಶುಭಾರಂಭಗೊಂಡ ಶ್ರೇಯಸ್ ಮೀಡಿಯಾದ ಹೊಸ ಶಾಖೆಯನ್ನು ತೆಲುಗಿನ ಖ್ಯಾತ ನಿರ್ದೇಶಕ ಮಾರುತಿ ಉದ್ಘಾಟಿಸಿದರು. Biz-Bash ಸಹಯೋಗದೊಂದಿಗೆ ಶ್ರೇಯಸ್ ಕೆಲಸಕ್ಕೆ ಸಾಥ್ ಕೊಟ್ಟಿದೆ. ಬಳಿಕ ಮಾತನಾಡಿದ ನಿರ್ದೇಶಕ ಮಾರುತಿ, ಕಳೆದ 20 […]readmore

ಮೊಬೈಲ್‌ ಬಳಕೆದಾರರಿಗೆ ಭಾರತೀಯ ಟೆಲಿಕಾಂ ಕಂಪನಿಗಳು ಬಿಗ್‌ ಶಾಕ್‌!! ಶೇ. 20 ರಷ್ಟು

ಮೊಬೈಲ್‌ ಬಳಕೆದಾರರಿಗೆ ಭಾರತೀಯ ಟೆಲಿಕಾಂ ಕಂಪನಿಗಳು ಬಿಗ್‌ ಶಾಕ್‌ ನೀಡಿದ್ದು, ಶೀಘ್ರವೇ ಮೊಬೈಲ್‌ ಕರೆ/ಡೇಟಾ ಪ್ಯಾಕ್‌ ದರ ಹೆಚ್ಚಳ ಮಾಡಲು ನಿರ್ಧರಿಸಿದೆ ಎಂದು ವರದಿಯಾಗಿದೆ. ಭಾರತೀಯ ಟೆಲಿಕಾಂ ಕಂಪಿನಿಗಳು ಮೊಬೈಲ್‌ ಕರೆ, ಡೇಟಾ ಪ್ಯಾಕ್‌ ದರವನ್ನು ಶೇ. ಶೇ. 20 ರಷ್ಟು ಹೆಚ್ಚಳ ಮಾಡಲು ಮುಂದಾಗಿವೆ ಎಂದು ವರದಿಯಾಗಿದೆ. ಟೆಲಿಕಾಂ ಕಂಪನಿಗಳು ಎರಡು ವರ್ಷಗಳ ಬಳಿಕ ದರ ಹೆಚ್ಚಳಕ್ಕೆ ಮುಂದಾಗಿದ್ದು, ಟೆಲಿಕಾಂ ಉದ್ಯಮಕ್ಕೆ ಬೆಲೆ ಹೆಚ್ಚಳ ಅನಿವಾರ್ಯವಾಗಿದೆ. ವೋಡಾಫೋನ್‌ ಐಡಿಯಾ, ಏರ್‌ ಟೆಲ್‌, ಜಿಯೋ ಸೇರಿದಂತೆ ಇತರೆ […]readmore

PSI ಹುದ್ದೆಗೆ ಮರು ಪರೀಕ್ಷೆ ದಿನಾಂಕ, ಪರೀಕ್ಷೆಗೆ ಹಾಜರಾಗಲು ಮಾರ್ಗಸೂಚಿಗಳು ಪ್ರಕಟ

ಬೆಂಗಳೂರು : ಪೊಲೀಸ್ ಸಬ್ ಇನ್ಸ್ ಪೆಕ್ಟರ್ (ಸಿವಿಲ್) ನೇಮಕಾತಿ ಮರು ಪರೀಕ್ಷೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೇಳಾಪಟ್ಟಿ ಪ್ರಕಟಿಸಿದ್ದು, ಜನವರಿ 23ರಂದು ಪರೀಕ್ಷೆ ನಡೆಯಲಿದೆ. ಪರೀಕ್ಷೆ ಕೇಂದ್ರದಲ್ಲಿ ಅಭ್ಯರ್ಥಿಗಳು ಅನುಸರಿಸಬೇಕಾದ ನಿಯಮಗಳನ್ನ ಪ್ರಾಧಿಕಾರ ಹೊರಡಿಸಿದ್ದು, ಅವುಗಳ ಕಟ್ಟುನಿಟ್ಟು ಪಾಲನೆಗೆ ಸೂಚಿಸಿದೆ. ಅದ್ರಂತೆ, ಪರೀಕ್ಷೆ ಸಂಬಂಧಿಸಿದ ವೇಳಾಪಟ್ಟಿ ಮತ್ತು ಅಭ್ಯರ್ಥಿಗಳು ಅನುಸರಿಸಬೇಕಾದ ನಿಯಮಗಳು ಈ ಕೆಳಗಿನಂತಿವೆ. • ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳು ತಪಾಸಣೆಗೆ ಒಳಪಡುವ ಹಿನ್ನೆಲೆಯಲ್ಲಿ ಬೆಳಿಗ್ಗೆ 8.30 ಕ್ಕೆ ಸರಿಯಾಗಿ ನಿಗದಿತ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಲು […]readmore

Bombat Bhojana: ಮಕರ ಸಂಕ್ರಾಂತಿಯಿಂದ ನಾಲ್ಕನೇ ಆವೃತ್ತಿ ಆರಂಭ

ನಟ-ನಿರ್ದೇಶಕ ಸಿಹಿಕಹಿ ಚಂದ್ರು ಸ್ಟಾರ್ ಸುವರ್ಣದಲ್ಲಿ ನಡೆಸಿಕೊಡುತ್ತಿರುವ ‘ಬೊಂಬಾಟ್‍ ಭೋಜನ’ ಕಾರ್ಯಕ್ರಮವು ಇದೀಗ 1000 ಸಂಚಿಕೆಗಳನ್ನು ಪೂರೈಸಿದೆ. ಈ ಕಾರ್ಯಕ್ರಮದ ಮೂರನೇ ಆವೃತ್ತಿ ಇದೀಗ ಮುಗಿದಿದ್ದು, ಜನವರಿ 15ರಂದು ಮಕರ ಸಂಕ್ರಾಂತಿಯಂದು ನಾಲ್ಕನೇ ಆವೃತ್ತಿ ಆರಂಭವಾಗಲಿದೆ. ಮೂರನೇ ಸೀಸನ್‍ 1000 ಕಂತುಗಳನ್ನು ಮುಗಿಸಿರುವ ಹಾಗೂ ನಾಲ್ಕನೆಯ ಆವೃತ್ತಿ ಆರಂಭವಾಗಲಿರುವ ಈ ಹೊತ್ತಿನಲ್ಲಿ ಚಂದ್ರು ಸಂಭ್ರಮದ ಸಮಾರಂಭವೊಂದನ್ನು ಆಯೋಜಿಸಿದ್ದರು. ಆಪ್ತರು, ಮಿತ್ರರು ಮತ್ತು ವಾಹಿನಿಯವರನ್ನು ಆಮಂತ್ರಿಸಿ ಒಂದು ವಿಶೇಷ ಕಾರ್ಯಕ್ರಮವನ್ನು ಮಾಡಿ, ಬಂದವರಿಗೆ “ಬೊಂಬಾಟ್ ಭೋಜನ” ಹಾಕಿಸಿ ಕಾರ್ಯಕ್ರಮದ […]readmore

ಯುವಕನನ್ನು ಗ್ಯಾಂಗ್‌ರೇಪ್ ಎಸಗಿದ ಯುವತಿಯರು

ಯುವತಿಯರ ಮೇಲೆ ಅತ್ಯಾಚಾರ ಎನ್ನುವ ಸುದ್ದಿಗಳನ್ನು ಸದಾ ಕೇಳುತ್ತಿರುತ್ತಿವೆ. ಆದರೆ, ಯುವಕನನ್ನೇ ರಿವಾಲ್ವರ್‌ನಿಂದ ಬೆದರಿಸಿ ಅತ್ಯಾಚಾರವೆಸಗಿದ ಘಟನೆ ಬೆಳಕಿಗೆ ಬಂದು ಆಘಾತ ಮೂಡಿಸಿದೆ. ಮುಂದಿನ ದಿನಗಳಲ್ಲಿ ಯುವಕರು ಕೂಡಾ ಒಬ್ಬಂಟಿಯಾಗಿ ತಿರುಗಾಡಲು ಭಯಪಡಬೇಕಾಗಿ ಬರುವುದು ಎನ್ನುವ ಆತಂಕ ಎದುರಾಗಿದೆ. ದಕ್ಷಿಣ ಆಫ್ರಿಕಾದ ಪ್ರಿಟೋರಿಯಾದ ಪೊಲೀಸ್ ಠಾಣೆಯಲ್ಲೊಂದು ಒಂದು ವಿಲಕ್ಷಣ ಪ್ರಕರಣ ದಾಖಲಾಗಿದೆ. ಮೂವರು ಮಹಿಳೆಯರು ತನ್ನನ್ನು ಅಪಹರಿಸಿ ಪುನಃ ಪುನಃ ಅತ್ಯಾಚಾರವೆಸಗಿದರು ಮತ್ತು ನನ್ನ ವೀರ್ಯದ ಸ್ಯಾಂಪಲ್ ತೆಗೆದುಕೊಂಡು ಪರಾರಿಯಾದರು ಎಂದು ವ್ಯಕ್ತಿಯೊಬ್ಬ ಪೊಲೀಸರಲ್ಲಿ ದೂರು ನೀಡಿದ್ದಾನೆ. […]readmore

ವಿದ್ಯಾರ್ಥಿಗಳ ಬದುಕಿನ “ಜಸ್ಟ್ ಪಾಸ್” ಚಿತ್ರದ ಟೀಸರ್ ರೀಲೀಸ್

ರಾಯ್ಸ್ ಎಂಟರ್ ಟೈನ್ಮೆಂಟ್ ಲಾಂಛನದಲ್ಲಿ ಕೆ.ವಿ.ಶಶಿಧರ್ ನಿರ್ಮಿಸುತ್ತಿರುವ, ಕೆ.ಎಂ.ರಘು ನಿರ್ದೇಶನದಲ್ಲಿ ಶ್ರೀ ಹಾಗೂ ಪ್ರಣತಿ ನಾಯಕ- ನಾಯಕಿಯಾಗಿ ನಟಿಸಿರುವ “ಜಸ್ಟ್ ಪಾಸ್” ಚಿತ್ರದ ಟೀಸರ್ A2 music ಮೂಲಕ ಬಿಡುಗಡೆಯಾಗಿ,‌ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಜನಮನಸೂರೆಗೊಳ್ಳುತ್ತಿದೆ. ಈ ವಿಷಯವನ್ನು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಹಂಚಿಕೊಂಡರು. ನಾನು ನಮ್ಮ‌ಊರಿನ ಜಾತ್ರೆಗೆ ಹೋಗಿದಾಗ ನನ್ನ ಸ್ನೇಹಿತರೊಬ್ಬರು ಫೋನ್ ಮಾಡಿ ಮೈಸೂರಿನಲ್ಲಿ ನಿರ್ಮಾಪಕ ಶಶಿಧರ್ ಇದ್ದಾರೆ. ಅವರು ಚಿತ್ರ ನಿರ್ಮಾಣ ಮಾಡಲು ಹೊರಟಿದ್ದಾರೆ. ಕಥೆ ಹೇಳಬೇಕು ಬಾ ಎಂದರು. ನಾನು ಶಶಿಧರ್ […]readmore

ಉದಯ ಟಿವಿಯಲ್ಲಿ ಹೊಸ ಧಾರಾವಾಹಿ “ಗಂಗೆ ಗೌರಿ” ಡಿಸೆಂಬರ್‌ 11  ರಿಂದ ಸೋಮವಾರದಿಂದ

ಹೊಸ ಥರದ ಮತ್ತು ವಿಭಿನ್ನ ಕಥೆಯ ಮೂಲಕ ವೀಕ್ಷಕರ ಮನಗೆಲ್ಲುವಲ್ಲಿ ಉದಯ ಟಿವಿ ಯಾವಾಗಲೂ ಮುಂದು. ಈಗ ಅಕ್ಕ ತಂಗಿಯರ ಅಪೂರ್ವ ಬಾಂಧವ್ಯದ ಕಥೆ ಹೇಳುವ ʻಗಂಗೆ ಗೌರಿʼ ಧಾರಾವಾಹಿಯ ಮೂಲಕ ಜನರ ಮನರಂಜಿಸಲು ಉದಯ ಟಿವಿ ಸಜ್ಜಾಗಿದೆ. ಈಗಾಗಲೇ ಕನ್ಯಾದಾನ, ಆನಂದರಾಗ, ಅಣ್ಣತಂಗಿ, ಸೇವಂತಿ, ಜನನಿ, ರಾಧಿಕಾ, ಜನನಿ, ನಯನತಾರಾ, ಗೌರಿಪುರದ ಗಯ್ಯಾಳಿಗಳು ಇತ್ಯಾದಿ ಕೌಟುಂಬಿಕ ಧಾರವಾಹಿಗಳು ವೀಕ್ಷಕರ ಮನ ಗೆದ್ದಿವೆ. ಈಗ ʻಗಂಗೆ ಗೌರಿʼವಿಶೇಷ ನಿರೂಪಣಾ ಶೈಲಿಯೊಂದಿಗೆ ಟಿವಿ ಮನೋರಂಜನಾ ಲೋಕಕ್ಕೆ ಲಗ್ಗೆ ಇಡಲಿದೆ. […]readmore

Phone icon
Call Now
Reach us!
WhatsApp icon
Chat Now