ಜಯನಗರದಲ್ಲಿ ಅಡ್ವಾನ್ಸ್ಡ್ ಗ್ರೋಹೈರ್ & ಗ್ಲೋಸ್ಕಿನ್ ಕ್ಲಿನಿಕ್ ಶುಭಾರಂಭ

ಬೆಂಗಳೂರು: ಕೂದಲಿನ ಮರು ಬೆಳವಣಿಗೆ ಮತ್ತು ಚರ್ಮ ಚಿಕಿತ್ಸೆಯಲ್ಲಿ ಮುಂಚೂಣಿ ಸಂಸ್ಥೆಯಾಗಿರುವ ಅಡ್ವಾನ್ಸ್ಡ್ ಗ್ರೋಹೈರ್ & ಗ್ಲೋಸ್ಕಿನ್ ಕ್ಲಿನಿಕ್ ಜಯನಗರದಲ್ಲಿ 2023ರ ನವೆಂಬರ್​ 10ರದು ಶುಭಾರಂಭಗೊಂಡಿತು. ಸಂಸ್ಥೆಯು ಈ ಮಾಹಿತಿಯನ್ನು ಘೋಷಿಸಿದೆ. ಈ ಮಹತ್ವದ ಸಂದರ್ಭವು ಸ್ವಾಸ್ಥ್ಯ ಸೇವೆಗಳಿಗಾಗಿ ನಿರಂತರವಾಗಿ ಹೆಚ್ಚುತ್ತಿರುವ ಗ್ರಾಹಕರ ಬೇಡಿಕೆಯನ್ನು ಪೂರೈಸುವಲ್ಲಿ ಪ್ರಮುಖ ಹೆಜ್ಜೆಯಾಗಿದೆ. ಅಸಾಧಾರಣ ಸೇವೆ, ಅತ್ಯಾಧುನಿಕ ತಂತ್ರಜ್ಞಾನಗಳ ಮೂಲಕ ಕೂದಲಿನ ಮರು ಬೆಳವಣಿಗೆಗೆ ಅಗತ್ಯ ಪರಿಹಾರಗಳನ್ನು ಒದಗಿಸಲು ಸಮರ್ಪಿತವಾಗಿರುವ ಅಡ್ವಾನ್ಸ್ಡ್ ಗ್ರೋಹೈರ್ & ಗ್ಲೋಸ್ಕಿನ್ ಸಂಸ್ಥೆಯು, ಕ್ಲಿನಿಕಲ್ ಮತ್ತು ಕ್ಲಿನಿಕಲ್ […]readmore

ಮತ್ತೆ ಒಂದಾಯ್ತು ‘ಸೂರರೈ ಪೋಟ್ರು’ ಟೀ…ಸೂರ್ಯ 43ನೇ ಸಿನಿಮಾಗೆ ಸುಧಾ ಕೊಂಗರ ಆಕ್ಷನ್

ತಮಿಳಿನ ಖ್ಯಾತ ನಟ ಸೂರ್ಯ ಹಾಗೂ ನಿರ್ದೇಶಕಿ ಸುಧಾ ಕೊಂಗರ ಮತ್ತೊಮ್ಮೆ ಕೈ ಜೋಡಿಸಿದ್ದಾರೆ. ಕನ್ನಡಿಗ ಕ್ಯಾಪ್ಟನ್ ಗೋಪಿನಾಥ್ ಜೀವನ ಆಧಾರಿತ ಸಿನಿಮಾ ಸೂರರೈ ಪೋಟ್ರು ಮೂಲಕ ಸಂಚಲನ ಸೃಷ್ಟಿಸಿದ್ದ ಈ ಜೋಡಿ ಮಗದೊಮ್ಮೆ ಒಂದಾಗಿದ್ದಾರೆ. ಸೂರ್ಯ ನಟಿಸಲಿರುವ 43ನೇ ಸಿನಿಮಾಗೆ ಸುಧಾ ಕೊಂಗರ ಆಕ್ಷನ್ ಕಟ್ ಹೇಳ್ತಿದ್ದಾರೆ. ಸೂರರೈ ಪೋಟ್ರು ಸಿನಿಮಾ ಪ್ರೇಕ್ಷಕರು ಹಾಗೂ ವಿಮರ್ಷಕರಿಂದಲೂ ಭಾರೀ ಮೆಚ್ಚುಗೆ ಪಡೆದುಕೊಂಡಿತ್ತು. ಆಸ್ಕರ್ ರೇಸ್ ಗೂ ಇಳಿದಿದ್ದ ಈ ಚಿತ್ರ ಹಲವು ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿ ಬಾಚಿಕೊಂಡಿತ್ತು. ಅತ್ಯುತ್ತಮ […]readmore

ಲಾಯಲ್ ವರ್ಲ್ಡ್ ಮಾರ್ಕೆಟ್ ಎರಡನೇ ಶಾಖೆ ಬೆಂಗಳೂರಿನ ಹೆಬ್ಬಾಳದಲ್ಲಿ ಶುಭಾರಂಭ….ಅತಿ ದೊಡ್ಡ ಹೈಪರ್

ಲಾಯಲ್ ವರ್ಲ್ಡ್ ಮಾರ್ಕೆಟ್ ನ ಎರಡನೇ ಶಾಖೆ ಬೆಂಗಳೂರಿನ ಹೆಬ್ಬಾಳದ ಫೀನಿಕ್ಸ್ ಮಾಲ್ ಆಫ್ ಏಷ್ಯಾ ನಲ್ಲಿಂದು ಶುಭಾರಂಭಗೊಂಡಿದೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ ಲಾಯಲ್ ವರ್ಲ್ಡ್ ಮಾರ್ಕೆಟ್ ಗೆ ಚಾಲನೆ‌ ನೀಡಿದರು. ಈ ಸಂದರ್ಭದಲ್ಲಿಂದು ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್, ಶಾಸಕ ರಿಜ್ವಾನ್ ಅರ್ಷದ್ ಉಪಸ್ಥಿತರಿದ್ದರು. ದೈನಂದಿನ ಅಗತ್ಯ ವಸ್ತುಗಳ ಲಾಯಲ್ ವರ್ಲ್ಡ್ ಮಾರ್ಕೆಟ್ ಈಗಾಗಲೇ ಬೆಂಗಳೂರಿನ ವೈಟ್ ಫೀಲ್ಡ್ ಹಾಗೂ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಫೀನಿಕ್ಸ್ ಮಾಲ್ ಆಫ್ ಏಷ್ಯಾ ದಲ್ಲಿರುವ ಲಾಯಲ್ ವರ್ಲ್ಡ್ ಮಾರ್ಕೆಟ್ […]readmore

ಉದಯ ಟಿವಿಯಲ್ಲಿ ಹೊಸ ಧಾರಾವಾಹಿ “ಪ್ರೀತಿಯ ಅರಸಿ”” ಅಕ್ಟೋಬರ್ 16 ರಿಂದ ಪ್ರತಿದಿನ

ಕರ್ನಾಟಕದ ವೀಕ್ಷಕರ ಮನಗೆದ್ದ ಮೊದಲ ಚಾನಲ್‌ ಉದಯ ಟಿವಿ ೩ ದಶಕಗಳಿಂದ ವಿಭಿನ್ನ ರೀತಿಯ ಕಾರ್ಯಕ್ರಮಗಳನ್ನು ನೀಡುತ್ತಾ ಬಂದಿದೆ. ಹಾಗೆ ಇತ್ತೀಚಿಗಷ್ಟೆ ವಿಶಿಷ್ಟ ರೀತಿಯ ಕಥೆಯೊಂದಿಗೆ ಪ್ರಾರಂಭವಾದ ಶಾಂಭವಿ ಈಗಾಗಲೆ ಜನಮನ್ನಣೆ ಪಡೆದುಕೊಂಡಿದೆ. ಕನ್ಯಾದಾನ,ಆನಂದರಾಗ,ಅಣ್ಣ-ತಂಗಿ,ಸೇವಂತಿ,ಜನನಿ,ರಾಧಿಕಾ,ಗೌರಿಪುರದ ಗಯ್ಯಾಳಿಗಳು ಹೊಸ ರೀತಿಯ ಕಥಾಹಂದರದೊಂದಿಗೆ ವೀಕ್ಷಕರ ಪ್ರೀತಿಗೆ ಪಾತ್ರಗಳಾಗಿವೆ. ಈಗ ಇದೇ ಸಾಲಿಗೆ ಆಕ್ಟೋಬರ್‌ ೧೬ರಿಂದ ಪ್ರತಿದಿನ ರಾತ್ರಿ ೯ಕ್ಕೆ “ಪ್ರೀತಿಯ ಅರಸಿ” ಎಂಬ ಹೊಸ ಧಾರಾವಾಹಿ ಉದಯಟಿವಿಯಲ್ಲಿ ಪ್ರಸಾರವಾಗಲಿದೆ. ಅಪೂರ್ಣ ಮನಸ್ಸುಗಳ ಪರಿಪೂರ್ಣ ಪ್ರೇಮ ಕಥೆ ಪ್ರೀತಿಯ ಅರಸಿ. ಸಾಮಾನ್ಯವಾಗಿ […]readmore

ʻ2050 ರ ವೇಳೆಗೆ ಭಾರತದ GDP 10 ಪಟ್ಟು ಹೆಚ್ಚಾಗಲಿದೆʼ: HDFC ಬ್ಯಾಂಕ್

ಎಚ್‌ಡಿಎಫ್‌ಸಿ(HDFC) ಬ್ಯಾಂಕ್ ಅಧ್ಯಕ್ಷ ಅತಾನು ಚಕ್ರವರ್ತಿ ಭಾರತೀಯ ಆರ್ಥಿಕತೆಗೆ ಸಂಬಂಧಿಸಿದಂತೆ ದೊಡ್ಡ ಹೇಳಿಕೆ ನೀಡಿದ್ದಾರೆ. 2050 ರ ವೇಳೆಗೆ ಭಾರತದ ಜಿಡಿಪಿ ಸುಮಾರು 900 ಪ್ರತಿಶತದಷ್ಟು ಅಂದರೆ, 10 ಪಟ್ಟು ಹೆಚ್ಚಾಗುತ್ತದೆ ಮತ್ತು 30,000 ಬಿಲಿಯನ್ ಯುಎಸ್ ಡಾಲರ್ಗಳ ಆರ್ಥಿಕತೆಯಾಗಲಿದೆ ಎಂದು ಅವರು ಹೇಳಿದ್ದಾರೆ.   ನವದೆಹಲಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ. ಇದರೊಂದಿಗೆ ಭಾರತದ ತಲಾ ಆದಾಯದಲ್ಲಿ ಭಾರಿ ಏರಿಕೆಯಾಗುವ ಭರವಸೆಯನ್ನೂ ವ್ಯಕ್ತಪಡಿಸಿದ್ದಾರೆ. 2050ರ ವೇಳೆಗೆ ತಲಾ ಆದಾಯ ಎಷ್ಟಾಗಲಿದೆ ಅತಾನು ಚಕ್ರವರ್ತಿ […]readmore

ಪಿತೃ ಅಮಾವಾಸ್ಯೆ 2023: ದಿನಾಂಕ, ಸಮಯ, ಮಹತ್ವ – ಮಾಡಬೇಕಾದ ಮತ್ತು ಮಾಡಬಾರದ

ಅಮಾವಾಸ್ಯೆ ಹಿಂದೂ ಧರ್ಮದಲ್ಲಿ ಹೆಚ್ಚಿನ ಧಾರ್ಮಿಕ ಮತ್ತು ಆಧ್ಯಾತ್ಮಿಕ ಮಹತ್ವವನ್ನು ಹೊಂದಿದೆ. ಅಕ್ಟೋಬರ್ 14, 2023 ರಂದು ಬರುವ ಅಮಾವಾಸ್ಯೆಯನ್ನು ಸರ್ವ ಪಿತೃ ಅಮಾವಾಸ್ಯೆ ಎಂದು ಕರೆಯಲಾಗುತ್ತದೆ. ಈ ಅಮಾವಾಸ್ಯೆಯನ್ನು ಪೂರ್ವಜರು ಮತ್ತು ಪೂರ್ವಜರನ್ನು ಪೂಜಿಸಲು ಅರ್ಪಿಸಲಾಗಿದೆ. ಸರ್ವ ಪಿತೃ ಅಮಾವಾಸ್ಯೆಯನ್ನು ಮಹಾಲಯ ಅಮಾವಾಸ್ಯೆ ಎಂದೂ ಕರೆಯುತ್ತಾರೆ. ಈ ದಿನವು ಪಿತೃಪಕ್ಷದ ಅಂತ್ಯವನ್ನು ಸೂಚಿಸುತ್ತದೆ. ಈ ವರ್ಷ, ಅಶ್ವಿನಿ ಮಾಸದ ಅಮಾವಾಸ್ಯೆ ತಿಥಿಯಂದು ಸರ್ವ ಪಿತೃ ಪಕ್ಷದ ಅಮಾವಾಸ್ಯೆಯನ್ನು ಆಚರಿಸಲಾಗುವುದು. ಸರ್ವ ಪಿತೃ ಅಮಾವಾಸ್ಯೆ 2023: ದಿನಾಂಕ […]readmore

ಉದಯ ಟಿವಿಯಲ್ಲಿ ಅದ್ದೂರಿ ಹೊಸ ಧಾರಾವಾಹಿ “ಶಾಂಭವಿ”… ಸೇಪ್ಟಂಬರ್ ೧೧ ರಿಂದ ಸೋಮವಾರದಿಂದ

ಉದಯ ಟಿವಿ ಹೊಸ ಥರದ ಕಥೆಗಳ ಮೂಲಕ ಪುಟಾಣಿಗಳಿಂದ ವಯೋವೃದ್ಧರವರೆಗೆ ಜನಮನ ಗೆಲ್ಲುತ್ತಿದೆ. ವೈವಿಧ್ಯಮಯ ಧಾರಾವಾಹಿಗಳಲ್ಲಿ ಸಹಜತೆ, ಕೌತುಕಗಳ ಜೊತೆ ಸೃಜನಾತ್ಮಕ ವಿಷಯಗಳಿಂದ ವೀಕ್ಷಕರಿಗೆ ರಸದೌತಣ ನೀಡುತ್ತಿವೆ. ಕನ್ಯಾದಾನ, ಆನಂದರಾಗ, ಅಣ್ಣತಂಗಿ, ಸೇವಂತಿ, ಜನನಿ, ರಾಧಿಕಾ, ಗೌರಿಪುರದ ಗಯ್ಯಾಳಿಗಳು ಇತ್ಯಾದಿ ಕೌಟುಂಬಿಕ ಧಾರವಾಹಿಗಳಿಂದ ವೀಕ್ಷಕರನ್ನು ರಂಜಿಸುತ್ತಿರುವ ಉದಯ ಟಿವಿ ಈಗ ವಿನೂತನ ಶೈಲಿಯ ಅದ್ಭುತ ನಿರೂಪಣೆಯ ಅದ್ದೂರಿ ʻಶಾಂಭವಿʼ ಎಂಬ ಹೊಸ ಕಥಾನಕವನ್ನು ನಿಮ್ಮ ಮುಂದೆ ತರಲು ಸಜ್ಜಾಗುತ್ತಿದೆ. ʻಸಿಂಪಲ್ ಆಗಿ ಒಂದು ಲವ್ ಸ್ಟೋರಿʼ ಖ್ಯಾತಿಯ […]readmore

ಸಮಂತಾ-ವಿಜಯ್ ಖುಷಿ ಸಿನಿಮಾದ ಟ್ರೇಲರ್ ರಿಲೀಸ್

ವಿಜಯ್ ದೇವರಕೊಂಡ ಹಾಗೂ ಸಮಂತಾ ನಟನೆಯ ‘ಖುಷಿ’ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದೆ. ಕಾಶ್ಮೀರಕ್ಕೆ ಹೋಗುವ ಕ್ರಿಶ್ಚಿಯನ್ ಯುವಕ ವಿಪ್ಲವ್ ಹಾಗೂ ಮುಸ್ಲಿಂ ಯುವತಿ ಬೇಗಂ ಭೇಟಿಯಾಗುತ್ತದೆ. ಆಕೆಯನ್ನು ನೋಡಿ ನಾಯಕ ಪ್ರೀತಿಯಲ್ಲಿ ಬೀಳುತ್ತಾನೆ. ನಂತರ ಆಕೆ ಮುಸ್ಲಿಂ ಅಲ್ಲ ಬ್ರಾಹ್ಮಣ ಕುಟುಂಬದ ಯುವತಿ ಅನ್ನೋದು ಗೊತ್ತಾಗುತ್ತದೆ. ಅಂದರೆ ಇದು ಕ್ರಿಶ್ಚಿಯನ್ ಯುವಕ ಹಾಗೂ ಹಿಂದೂ ಯುವತಿಯ ಪ್ರೇಮಕಥೆ ಅನ್ನೋದು ಅರ್ಥವಾಗುತ್ತದೆ. ಇಬ್ಬರ ಮನೆಯಲ್ಲೂ ಮದುವೆಗೆ ಒಪ್ಪುವುದಿಲ್ಲ. ನಾಯಕಿಯ ತಂದೆಯಂತೂ ಇವರಿಬ್ಬರು ಮದುವೆ ಆದರೆ ಭಾರೀ ಸಮಸ್ಯೆಗಳಾಗುತ್ತದೆ ಎಂದು […]readmore

ಮನರಂಜನಾ ಕ್ಷೇತ್ರದತ್ತ ನನ್ಬನ್ ಗ್ರೂಪ್…ನನ್ಬನ್ ಎಂಟರ್ಟೈನ್ಮೆಂಟ್ ಶುರು

ಉದ್ಯಮ ವಲಯದಲ್ಲಿ ಭಾರೀ ಹೆಸರು ಮಾಡಿರುವ ನನ್ಬನ್ ಗ್ರೂಪ್ ಮನರಂಜನಾ ಲೋಕಕ್ಕೆ ಹೊಸ ಹೆಜ್ಜೆ ಇಟ್ಟಿದೆ. ನನ್ಬನ್ ಗ್ರೂಪ್ ವತಿಯಿಂದ ನನ್ಬನ್ ಎಂಟರ್ಟೈನ್ಮೆಂಟ್ ಎಂಬ ನಿರ್ಮಾಣ ಸಂಸ್ಥೆ ಪ್ರಾರಂಭವಾಗಿದೆ. ಆಗಸ್ಟ್ 3ರಂದು ಚೆನ್ನೈನಲ್ಲಿ ಅದ್ಧೂರಿಯಾಗಿ ನನ್ಬನ್ ಎಂಟರ್ಟೈನ್ಮೆಂಟ್ ಉದ್ಘಾಟನಾ ಕಾರ್ಯಕ್ರಮ ನೆರವೇರಿತು. ನನ್ಬನ್ ಗ್ರೂಪ್ ಮುಖ್ಯಸ್ಥ ನರೈನ್ ರಾಮಸ್ವಾಮಿ, ನನ್ಬನ್ ಗ್ರೂಪ್ ಸಹ ಸಂಸ್ಥಾಪಕ ಮಣಿವಣ್ಣನ್, ನನ್ಬನ್ ಗ್ರೂಪ್ ಸಂಸ್ಥಾಪಕ ಗೋಪಾಲ ಕೃಷ್ಣನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ನನ್ಬನ್ ಗ್ರೂಪ್ ಭಾರತದ ರಾಯಭಾರಿ ನಟ ಆರಿ ಅರ್ಜುನನ್ […]readmore

ಪ್ಯಾನ್ ಇಂಡಿಯಾ ಸಿನಿಮಾ ‘ಸ್ಪಾರ್ಕ್ ಲೈಫ್’ ಟೀಸರ್ ರಿಲೀಸ್

ಈಗಂತೂ ಪ್ಯಾನ್ ಇಂಡಿಯಾ ಸಿನಿಮಾಗಳ ಟ್ರೆಂಡ್ ಜೋರಾಗಿದೆ. ಎಲ್ಲಾ ವುಡ್ ಗಳಲ್ಲಿಯೂ ಸಾಲು ಸಾಲು ಪ್ಯಾನ್ ಇಂಡಿಯಾ ಚಿತ್ರಗಳು ಅನೌನ್ಸ್ ಆಗುತ್ತಲೇ ಇದೆ. ಅದರ ಮುಂದುವರೆದ ಭಾಗವಾಗಿ ತೆಲುಗಿನಲ್ಲಿ ಸ್ಪಾರ್ಕ್ ಲೈಫ್ ಎಂಬ ಸಿನಿಮಾ ತಯಾರಾಗ್ತಿದ್ದು, ಈ ಚಿತ್ರದ ಟೀಸರ್ ಬಿಡುಗಡೆಯಾಗಿದೆ. 2 ನಿಮಿಷ 2 ಸೆಕೆಂಡ್ ಒರುವ ಟೀಸರ್ ಕಂಪ್ಲೀಟ್ ಆಕ್ಷನ್ಸ್ ಗಳಿಂದ ಕೂಡಿದೆ. ಯುವ ಪ್ರತಿಭೆ ವಿಕ್ರಾಂತ್ ನಾಯಕನಾಗಿ ನಟಿಸಿದ್ದು, ಮೆಹ್ರೀನ್ ಫಿರ್ಜಾದಾ ಹಾಗೂ ರುಕ್ಸಾರ್ ಧಿಲ್ಲೋನ್ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ.   ಧಗಧಗಿಸುವ ಬೆಂಕಿ, […]readmore

Phone icon
Call Now
Reach us!
WhatsApp icon
Chat Now