• June 19, 2026

karnatakaspecial.in

https://karnatakaspecial.in/

ಕಾಂತಾರ ಭರ್ಜರಿ ಕಲೆಕ್ಷನ್: 100 ಕೋಟಿ ಕ್ಲಬ್ ಸೇರಿ ದಾಖಲೆ ಬರೆದ ರಿಷಬ್

ಕಾಂತಾರ ಸಿನಿಮಾ ಆರಂಭಿಸಿದಾಗ ಸ್ವತಃ ಚಿತ್ರತಂಡಕ್ಕೆ ಈ ಸಿನಿಮಾ ಈ ಮಟ್ಟಿಗಿನ ಸದ್ದು ಮಾಡುತ್ತದೆ ಎಂಬ ಊಹೆ ಚಿತ್ರತಂಡಕ್ಕೂ ಇರಲಿಲ್ಲ. ಕರಾವಳಿ ಭೂತ ಕೋಲದ ಹಿನ್ನೆಲೆಯಲ್ಲಿ ಮೂಡಿ ಬಂದಿರುವ ಚಿತ್ರವನ್ನ ಇದೀಗ ಪರಭಾಷೆಯ ಮಂದಿಯೂ ಮೆಚ್ಚಿಕೊಂಡಿದ್ದಾರೆ. ಸದ್ಯ ಈ ಸಿನಿಮಾ ನೂರು ಕೋಟಿ ಕ್ಲಬ್ ಸೇರುವ ಮೂಲಕ ದಾಖಲೆ ನಿರ್ಮಿಸಿದೆ. ಹೊಂಬಾಳೆ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾದ ಕಾಂತಾರ ಸಿನಿಮಾ ಕಳೆದ ಸೆ.30ರಂದು ತೆರೆಗೆ ಬಂದಿದೆ. ಸಿನಿಮಾ ಬಿಡುಗಡೆ ಆದ ದಿನದಿಂದಲೂ ಚಿತ್ರಮಂದಿರದಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿರುವ […]Read More

ನಾನು ನಗುತ್ತಿದ್ದೇನೆ ಎಂದರೆ ಅದು ನಿನಗಾಗಿ ಮಾತ್ರ: ನಟಿ ಮೇಘನಾ ರಾಜ್

ಇಂದು ಸ್ಯಾಂಡಲ್ ವುಡ್ ನಟ ಚಿರಂಜೀವಿ ಸರ್ಜಾರ ಹುಟ್ಟುಹಬ್ಬ. ಚಿರು ಹುಟ್ಟುಹಬ್ಬದ ಹಿನ್ನೆಲೆ ಪತ್ನಿ ಮೇಘನಾ ರಾಜ್ ಸೋಷಿಯಲ್ ಮೀಡಿಯಾದಲ್ಲಿ ಭಾವುಕವಾಗಿ ಬರೆದುಕೊಂಡಿದ್ದಾರೆ. ಜೊತೆಗೆ ಇಬ್ಬರು ಜೊತೆಗೆ ನಗು ನಗುತ್ತಿರುವ ಫೋಟೋವನ್ನು ಮೇಘನಾ ರಾಜ್ ಹಂಚಿಕೊಂಡಿದ್ದಾರೆ. ‘ನನ್ನ ಖುಷಿಗೆ ಹುಟ್ಟು ಹಬ್ಬದ ಶುಭಾಶಯಗಳು. ಇಂದು ನಾನು ನಗುತ್ತಿದ್ದೇನೆ ಅಂದರೆ, ಅದು ನಿನಗಾಗಿ ಮಾತ್ರ. ನನ್ನ ಆತ್ಮೀಯ ಪತಿ ಚಿರು.. ಐ ಲವ್ ಯೂ’ ಎಂದು ಮೇಘನಾ ರಾಜ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಸಿನಿಮಾ ರಂಗದಲ್ಲಿ ಒಬ್ಬರಿಗೊಬ್ಬರು ಪರಿಚಯವಾಗಿದ್ದ […]Read More

ಕೊಟ್ಟ ಮಾತು ಉಳಿಸಿಕೊಂಡ ಮೋಹಕತಾರೆ: ದಾವಣಗೆರೆಯಲ್ಲಿ ಬೆಣ್ಣೆ ದೋಸೆ ಸವಿದ ನಟಿ

ಸ್ಯಾಂಡಲ್ ವುಡ್ ಮೋಹಕ ತಾರೆ ನಟಿ ರಮ್ಯಾ ನಿನ್ನೆ ದಾವಣಗೆರೆಯಲ್ಲಿ ನಡೆದ ಡಾಲಿ ಧನಂಜಯ್ ನಟನೆಯ ಹೆಡ್ ಬುಷ್ ಚಿತ್ರದ ಪ್ರಿ ರಿಲೀಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ರಮ್ಯಾ, ನಾನು ದಾವಣಗೆರೆಗೆ ಬಂದಿದ್ದು, ಇಲ್ಲಿನ ಫೇಮಸ್ ಬೆಣ್ಣೆ ದೋಸೆಯನ್ನು ತಿಂದೇ ಹೋಗುತ್ತೇನೆ’ ಎಂದಿದ್ದರು. ಕೊಟ್ಟ ಮಾತನ್ನು ಉಳಿಸಿಕೊಂಡ ರಮ್ಯಾ ದಾವಣಗೆರೆಯಲ್ಲಿ ಬೆಣ್ಣೆ ದೋಸೆ ಸವಿದ್ದು ಸೂಪರ್ ಎಂದಿದ್ದಾರೆ. ದಾವಣಗೆರೆಯ ಡೆಂಟಲ್ ಕಾಲೇಜು ರಸ್ತೆಯಲ್ಲಿರುವ ಗುರು ಕೊಟ್ಟೂರೇಶ್ವರ ಬೆಣ್ಣೆ ದೋಸೆ ಹೋಟೆಲ್ ಗೆ ರಮ್ಯಾ ಹಾಗೂ ಚಿತ್ರದ […]Read More

ಡಾಲಿ ಧನಂಜಯ್ ಸಿನಿಮಾದಲ್ಲಿ ತಮಿಳು ನಟಿ ಪ್ರಿಯಾ ಭವಾನಿ ಶಂಕರ್ ನಟನೆ

ನಟ ಡಾಲಿ ಧನಂಜಯ್ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಿಗೆ ಬಣ್ಣ ಹಚ್ಚುತ್ತಿದ್ದಾರೆ. ಇತ್ತೀಚೆಗಷ್ಟೇ ಡಾಲಿ ನಟನೆಯ ಮಾನ್ಸೂನ್ ರಾಗ ಸಿನಿಮಾ ತೆರೆಕಂಡಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಇದೀಗ ಡಾಲಿ ಧನಂಜಯ್ ಹಾಗೂ ಸತ್ಯ ದೇವ ನಟನೆಯ ಸಿನಿಮಾ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಇದೀಗ ಸಿನಿಮಾ ತಂಡದ ಕಡೆಯಿಂದ ಹೊಸ ಅಪ್ ಡೇಟ್ ಸಿಕ್ಕಿದೆ. ಧನಂಜಯ್ ಹಾಗೂ ಸತ್ಯ ದೇವ್ ನಟನೆಯ 26ನೇ ಸಿನಿಮಾ ಸಾಕಷ್ಟು ಕುತೂಹಲ ಮೂಡಿಸಿದೆ. ಕನ್ನಡ ಹಾಗೂ ತೆಲುಗು ಭಾಷೆಯಲ್ಲಿ ಸಿನಿಮಾ ತಯಾರಾಗುತ್ತಿದ್ದು ಸದ್ಯದಲ್ಲೇ […]Read More

ಪುನೀತ್ ಪರ್ವ ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಡ್ರಸ್ ಕೋಟ್ ನಿಗದಿ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಕೊನೆಯ ಹಾಗೂ ಕನಸಿನ ಸಿನಿಮಾ ಗಂಧದ ಗುಡಿ ರಿಲೀಸ್ ಗೆ ಇನ್ನೂ ಕೆಲವೇ ಕೆಲವು ದಿನಗಳು ಮಾತ್ರವೇ ಭಾಕಿ ಇದೆ. ಅಪ್ಪು ಚಿತ್ರವನ್ನು ಕಣ್ಮುಂಬಿಕೊಳ್ಳಲು ಅಭಿಮಾನಿಗಳು ಕಾಯ್ತಿದ್ದಾರೆ. ಅದಕ್ಕೂ ಮುನ್ನ ದೊಡ್ಮನೆ ಕುಟುಂಬ ಚಿತ್ರದ ಪ್ರೀರಿಲೀಸ್ ಕಾರ್ಯಕ್ರಮ ಹಮ್ಮಿಕೊಂಡಿದೆ. ಗಂಧದ ಗುಡಿ ಸಿನಿಮಾ ಇದೇ ಅಕ್ಟೋಬರ್ 28ರಂದು ಬಿಡುಗಡೆ ಆಗಲಿದೆ. ಅದಕ್ಕೂ ಮೊದಲ ಬೆಂಗಳೂರಿನ ಅರಮನೆ ಮೈದಾನದಲ್ಲಿ ಚಿತ್ರದ ಪ್ರೀರಿಲೀಸ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸ್ವತಃ ಅಶ್ವೀನಿ ಪುನೀತ್ ರಾಜ್ […]Read More

ಠಾಣೆ ಸಿನಿಮಾದ ಪೋಸ್ಟರ್ ರಿಲೀಸ್ ಮಾಡಿದ ಧ್ರುವ ಸರ್ಜಾ

ಕಳೆದ ಹದಿನೈದು ವರ್ಷಗಳಿಂದ ರಂಗಭೂಮಿ ಕಲಾವಿದನಾಗಿ ಗುರುತಿಸಿಕೊಂಡು, ಸಾಕಷ್ಟು ಸಾಹಸ ನಿರ್ದೇಶಕರ ಜೊತೆ ಕೆಲಸ ಮಾಡಿರುವ ಪ್ರವೀಣ್ ಇದೀಗ ನಾಯಕನಾಗಿ ಸಿನಿಮಾ ರಂಗಕ್ಕೆ ಎಂಟ್ರಿಕೊಟ್ಟಿದ್ದಾರೆ. ಗಾಯತ್ರಿ ಎಂ ನಿರ್ಮಾಣದ ಭಗತ್ ರಾಜ್ ನಿರ್ದೇಶನದ ಠಾಣೆ ಚಿತ್ರದಲ್ಲಿ ಪ್ರವೀನ್ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಸದ್ಯ ಠಾಣೆ ಚಿತ್ರದ ಪೋಸ್ಟರ್ ರಿಲೀಸ್ ಮಾಡುವು ನಟ ಧ್ರುವ ಸರ್ಜಾ ಹೊಸಬರ ತಂಡಕ್ಕೆ ಸಾಥ್ ನೀಡಿದ್ದಾರೆ. ಪೋಸ್ಟರ್ ರಿಲೀಸ್ ಮಾಡಿದ ಬಳಿಕ ಮಾತನಾಡಿದ ಧ್ರುವ ಸರ್ಜಾ, ‘ಈ ಪೋಸ್ಟರ್ ನೋಡಿದರೆ ಇಡೀ ಚಿತ್ರ ನೋಡಿದ […]Read More

ರಿವೀಲ್ ಆಯ್ತು ಶಶಾಂಕ್, ಡಾರ್ಲಿಂಗ್ ಕೃಷ್ಣ ಕಾಂಬಿನೇಷನ್ ನ ಚಿತ್ರದ ಟೈಟಲ್

ಇತ್ತೀಚೆಗಷ್ಟೇ ನಿರ್ದೆಶಕ ಶಶಾಂಕ್ ಹಾಗೂ ನಟ ಡಾರ್ಲಿಂಗ್ ಕೃಷ್ಣ ಕಾಂಬಿನೇಷನ್ ನಲ್ಲಿ ಸಿನಿಮಾವೊಂದು ಸೆಟ್ಟೇರಿದೋ ಗೊತ್ತೆ ಇದೆ. ಇದೇ ಮೊದಲ ಭಾರಿಗೆ ಶಶಾಂಕ್ ಹಾಗೂ ಕೃಷ್ಣ ಒಂದಾಗ್ತಿರೋದ್ರಿಂದ ಗಾಂಧಿನಗರದಲ್ಲಿ ಸಾಕಷ್ಟು ಕ್ಯೂರಿಯಾಸಿಟಿ ಕ್ರಿಯೇಟ್ ಆಗಿದೆ. ಸದ್ಯ ಚಿತ್ರತಂಡ ಚಿತ್ರದ ಟೈಟಲ್ ರಿವೀಲ್ ಮಾಡಿದೆ. ನಟ ಡಾರ್ಲಿಂಗ್ ಕೃಷ್ಣ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ನಟಿಸ್ತಿದ್ದಾರೆ. ಇತ್ತ ನಿರ್ದೇಶಕ ಶಶಾಂಕ್ ಕೂಡ ಕೆಲ ವರ್ಷಗಳ ಬಳಿಕ ಮತ್ತೆ ಸ್ಯಾಂಡಲ್ ವುಡ್ ಗೆ ಕಂಬ್ಯಾಕ್ ಮಾಡಿದ್ದಾರೆ. ಇತ್ತೀಚೆಗೆ ಶಶಾಂಕ್ ನಿರ್ದೇಶನದ […]Read More

‘ಗಂಗಾರತಿ’ಯಲ್ಲಿ ಪಾಲ್ಗೊಂಡ ‘ಬನಾರಸ್’ ಜೋಡಿ ಝೈದ್, ಸೋನಾಲ್

ಝೈದ್ ಖಾನ್ ನಟನೆಯ ಬನಾರಸ್ ಸಿನಿಮಾ ಬಿಡುಗಡೆಗೆ ಇನ್ನೂ ಕೆಲ ದಿನಗಳು ಮಾತ್ರವೇ ಭಾಕಿ ಇದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಿನಿಮಾ ಬಿಡುಗಡೆ ಆಗುತ್ತಿದ್ದು ಇದೇ ಕಾರಣಕ್ಕೆ ಭರ್ಜರಿ ಚಿತ್ರದ ಪ್ರಚಾರದಲ್ಲಿ ತೊಡಗಿಕೊಂಡಿದೆ ಬನಾರಸ್ ಸಿನಿಮಾ ತಂಡ. ಸದ್ಯ ಹಿಂದಿ ಪ್ರಬಲವಾಗಿರುವ ಸ್ಥಳಗಳಲ್ಲಿ ಬನಾರಸ್ ತಂಡ ಪ್ರಚಾರದಲ್ಲಿ ತೊಡಗಿಕೊಂಡಿದೆ. ಶಾಸಕ ಜಮೀರ್ ಅಹಮದ್ ಪುತ್ರ ಝೈದ್ ಖಾನ್ ಇದೇ ಮೊದಲ ಭಾರಿಗೆ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟಿದ್ದಾರೆ. ಮೊದಲ ಸಿನಿಮಾದಲ್ಲೇ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಂಡಿರುವ ಝೈದ್ […]Read More

ಬಿಗ್ ಬಾಸ್ ವಿರುದ್ಧ ಮ್ಯಾಚ್ ಫಿಕ್ಸಿಂಗ್ ಆರೋಪ ಮಾಡಿದ ಆರ್ಯವರ್ಧನ್ ಗುರೂಜಿ: ಖಡಕ್

ಬಿಗ್ ಬಾಸ್ ಓಟಿಟಿ ಮೂಲಕ ಪ್ರೇಕ್ಷಕರ ಮನ ಗೆದ್ದ ಸಂಖ್ಯಾ ಶಾಸ್ತ್ರದ ಮೂಲಕ ಗುರುತಿಸಿಕೊಂಡ ಆರ್ಯವರ್ಧನ್ ಗುರೂಜಿ ಇದೀಗ ಬಿಗ್ ಬಾಸ್ ಟಿವಿ ಸೀಸನ್ ನಲ್ಲೂ ಸದ್ದು ಮಾಡ್ತಿದ್ದಾರೆ. ತಮ್ಮ ನೇರಾ ನೇರಾ ಮಾತಿನ ಮೂಲಕ ಉಳಿದ ಸ್ಪರ್ಧಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಆರ್ಯವರ್ಧನ್ ಗುರೂಜಿಯನ್ನು ಇದೀಗ ಸುದೀಪ್ ತರಾಟೆಗೆ ತೆಗೆದುಕೊಂಡಿದ್ದು ಖಡಕ್ ವಾರ್ನಿಂಗ್ ನೀಡಿದ್ದಾರೆ. ತಮಗೆ ಅನಿಸಿದ್ದನ್ನು ನೇರಾನೇರವಾಗಿ ಹೇಳುವ ಗುರೂಜಿ ಇದೀಗ್ ಬಿಗ್ ಬಾಸ್ ಮೇಲೆ ಮ್ಯಾಚ್ ಫಿಕ್ಸಿಂಗ್ ಆರೋಪ ಮಾಡಿದ್ದಾರೆ. ಈಗಾಗ್ಲೆ ಬಿಗ್ ಬಾಸ್ […]Read More

ಕಾಂತಾರ ಮೆಚ್ಚಿಕೊಂಡ ಕರಾವಳಿ ಚೆಲುವು ನಟಿ ಅನುಷ್ಕಾ ಶೆಟ್ಟಿ

ಎಲ್ಲಿ ನೋಡಿದ್ರು ರಿಷಬ್ ಶೆಟ್ಟಿಯ ಕಾಂತಾರ ಸಿನಿಮಾದ್ದೇ ಹವಾ. ಸಿನಿಮಾ ರಿಲೀಸ್ ಆಗಿ ಮೂರು ವಾರ ಕಳೆದಿದ್ರು ಇಂದಿಗೂ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಅಭಿಮಾನಿಗಳು ಮುಗಿಬಿದ್ದು ಥಿಯೇಟರ್ ನತ್ತ ಮುಖ ಮಾಡ್ತಿದ್ದಾರೆ. ಕಾಂತಾರ ಸಿನಿಮಾವನ್ನು ಕನ್ನಡಿಗರು ಮಾತ್ರವಲ್ಲ ಪರಭಾಷಾ ಮಂದಿಯೂ ಮಚ್ಚಿಕೊಂಡಿದ್ದಾರೆ. ಬೇರೆ ಬೇರೆ ಭಾಷಾಯ ಕಲಾವಿಧರು ಸಿನಿಮಾ ನೋಡ ಕಾಂತಾರಕ್ಕೆ ಫಿದಾ ಆಗಿದ್ದಾರೆ. ಅಲ್ಲದೆ ರಿಷಬ್ ಶೆಟ್ಟಿಯನ್ನು ಕೊಂಡಾಡುತ್ತಿದ್ದಾರೆ. ಈಗಾಗ್ಲೆ ಸಾಕಷ್ಟು ಮಂದಿ ಸಿನಿಮಾ ನೋಡಿ ಪ್ರತಿಕ್ರಿಯಿಸಿದ್ದಾರೆ. ಇದೀಗ ಮಂಗಳೂರು ಬೆಡಗಿ ನಟಿ ಅನುಷ್ಕಾ ಶೆಟ್ಟಿ […]Read More

Phone icon
Call Now
Reach us!
WhatsApp icon
Chat Now