• June 20, 2026

karnatakaspecial.in

https://karnatakaspecial.in/

‘ಜೂನಿಯರ್’ ಆದ ಜನಾರ್ದನ್ ರೆಡ್ಡಿ ಪುತ್ರ ಕಿರೀಟಿ: ಕೊನೆಗೂ ರಿವೀಲ್ ಆಯ್ತು ಮೊದಲ

ರಾಮಕಾರಣಿಗಳ ಮಕ್ಕಳು ಈಗಾಗ್ಲೆ ಸಿನಿಮಾ ರಂಗದಲ್ಲಿ ಸದ್ದು ಮಾಡಿರೋದು ಗೊತ್ತೆ ಇದೆ. ಇದೀಗ ಜನಾರ್ದನ್ ರೆಡ್ಡಿ ಪುತ್ರ ಕಿರೀಟಿ ಗಾಂಧಿನಗರಕ್ಕೆ ಗ್ರ್ಯಾಂಡ್ ಆಗಿ ಲಾಂಚ್ ಆಗಿದ್ದು ಸಿನಿಮಾದ ಶೂಟಿಂಗ್ ನಲ್ಲಿ ತೊಡಗಿಕೊಂಡಿದ್ದಾರೆ. ಕಿರಿಟಿ ನಟನೆಯ ಸಿನಿಮಾದ ಶೂಟಿಂಗ್ ಆರಂಭವಾಗಿ ಸಾಕಷ್ಟು ತಿಂಗಳುಗಳೆ ಕಳೆದಿದೆ. ಆದರೆ ಟೈಟಲ್ ಮಾತ್ರ ಯಾವುದು ಅನ್ನೋದು ಚಿತ್ರತಂಡ ರಿವೀಲ್ ಮಾಡಿರಲಿಲ್ಲ. ಇದೀಗ ಕಿರೀಟಿ ಹುಟ್ಟುಹಬ್ಬದ ಪ್ರಯುಕ್ತ ಟೈಟಲ್ ಅನಾವರಣ ಮಾಡಲಾಗಿದ್ದು ಇದೀಗ ಕಿರೀಟಿ ‘ಜೂನಿಯರ್’ ಆಗಿದ್ದಾರೆ. ಕಿರೀಟಿ ನಟನೆಯ ಸಿನಿಮಾದ ಶೂಟಿಂಗ್ ಆರಂಭವಾಗಿ […]Read More

ದೀಪಿಕಾ, ರಣವೀರ್ ದಾಂಪತ್ಯದಲ್ಲಿ ಬಿರುಕು: ಬಿರುಗಾಳಿ ಎಬ್ಬಿಸಿದ ಉಮೈರ್ ಟ್ವೀಟ್

ಕಳೆದ ಕೆಲ ದಿನಗಳ ಹಿಂದಷ್ಟೇ ಆಸ್ಪತ್ರೆಗೆ ದಾಖಲಾಗಿದ್ದ ನಟಿ ದೀಪಿಕಾ ಪಡುಕೋಣೆ ಇದೀಗ ಚೇತರಿಸಿಕೊಳ್ತಿದ್ದಾರೆ.ಸಿನಿಮಾಗಳ ಶೂಟಿಂಗ್ ನಿಂದ ಬಿಡುವು ಪಡೆದುಕೊಂಡು ಮನೆಯಲ್ಲಿ ದೀಪಿಕಾ ಪಡುಕೋಣೆ ವಿಶ್ರಾಂತಿ ಪಡೆದುಕೊಳ್ತಿದ್ದಾರೆ. ಈ ಮಧ್ಯೆ ದೀಪಿಕಾ ಹಾಗೂ ರಣವೀರ್ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್ ಒಂದು ಹೊರ ಬಿದ್ದಿದೆ. ಇದಕ್ಕೆಲ್ಲ ಕಾರಣ ಅದೊಂದು ಟ್ವೀಟ್. ಬಾಜಿರಾವ್ ಮಸ್ತಾನಿ, ರಾಮ್ ಲೀಲಾ, ಪದ್ಮಾವತ್ ನಂತಹ ಸೂಪರ್ ಹಿಟ್ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡ ಜೋಡಿ ದೀಪಿಕಾ ಪಡುಕೋಣೆ ಹಾಗೂ ರಣವೀರ್ ಸಿಂಗ್. ಬಳಿಕ ಈ […]Read More

“ಶ್ರೀಪ್ರಸನ್ನ ವೆಂಕಟದಾಸರು’ ಚಿತ್ರದ ಆಡಿಯೋ ರಿಲೀಸ್

ಕರ್ನಾಟಕದ ದಾಸ ಸಾಹಿತ್ಯ ಪರಂಪರೆಯಲ್ಲಿ ತಮ್ಮ ಕೀರ್ತನೆಗಳ ಮೂಲಕ, ಪ್ರಸಿದ್ಧರಾಗಿರುವ ದಾಸಶ್ರೇಷ್ಠರಲ್ಲಿ ಪ್ರಸನ್ನ ವೆಂಕಟದಾಸರು ಪ್ರಮುಖರು. ರಾಯಚೂರು ಮೂಲದ ಪ್ರಸನ್ನ ವೆಂಕಟದಾಸರ ಜೀವನ ಮತ್ತು ಸಾಧನೆ ಆಧಾರಿತವಾಗಿರುವ ಈ ಚಿತ್ರ, ‘ಶ್ರೀಪ್ರಸನ್ನ ವೆಂಕಟದಾಸರು’ ಎಂಬ ಹೆಸರಿನಲ್ಲಿ  ಬೆಳ್ಳಿತೆರೆಗೆ ಬರುತ್ತಿದೆ. ವಿಜಯ್ ಕೃಷ್ಣ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳ ಬಿಡುಗಡೆ ‌ಸಮಾರಂಭ ಇತ್ತೀಚಿಗೆ ನಡಯಿತು. ಹಾಸ್ಯ ಸಾಹಿತಿ ಗಂಗಾವತಿ ಪ್ರಾಣೇಶ್ , ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ, ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ […]Read More

ಹಂಟರ್ ಆಗಿ ಕನ್ನಡದಕ್ಕೆ ಎಂಟ್ರಿಕೊಟ್ಟ ಹಾಲಿವುಡ್, ಬಾಲಿವುಡ್ ನಟ ಕಬೀರ್ ಬೇಡಿ

ಅಂತರರಾಷ್ಟ್ರೀಯ  ಖ್ಯಾತಿಯ ಹಾಲಿವುಡ್ ಹಾಗೂ ಬಾಲಿವುಡ್ ನಟ ಕಬೀರ್ ಬೇಡಿ ಅವರು ಮೊಟ್ಟಮೊದಲ ಬಾರಿಗೆ  “ಹಂಟರ್” ( ನಿ: ವಿನಯ್) ಕನ್ನಡ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಹಾಲಿವುಡ್ ನಲ್ಲಿ ಹಲವಾರು ಸಿನಿಮಾಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದ ಕಬೀರ್ ಬೇಡಿ ಅಲ್ಲಿ ಜೇಮ್ಸ ಬಾಂಡ್, ಮೈಕಲ್ ಕೇನ್ ಮೊದಲಾದ ಖ್ಯಾತ ನಾಮರೊಂದಿಗೆ ಅಭಿನಯಿಸಿರುತ್ತಾರೆ.  ಇದೀಗ ನಿರ್ಮಾಪಕ  ತ್ರಿವಿಕ್ರಮ ಸಪಲ್ಯ ರವರು ನಮ್ಮ ಭಾಷೆಯ ಚಿತ್ರಕ್ಕೂ ಅವರನ್ನು ಪರಿಚಯಿಸಿರುವುದು ಚಿತ್ರದ ಕುತೂಹಲವನ್ನು ಹೆಚ್ಚಿಸಿದೆ.ಪ್ಯಾನ್ ಇಂಡಿಯಾ ಮಾದರಿಯ ಈ ಸಿನಿಮಾದಲ್ಲಿ ನಿರಂಜನ್ ಮತ್ತು […]Read More

ವಿಜಯ್ ದೇವರಕೊಂಡ, ರಶ್ಮಿಕಾ ಲವ್ ಬ್ರೇಕ್ ಅಪ್ ಮಾಡಿದ ಕರಣ್ ಜೋಹರ್

ನಟ ರಕ್ಷಿತ್ ಶೆಟ್ಟಿ ಜೊತೆ ಬ್ರೇಕ್ ಅಪ್ ಆದ ಬಳಿಕ ನಟಿ ರಶ್ಮಿಕಾ ಮಂದಣ್ಣ ವಿಜಯ್ ದೇವರಕೊಂಡ ಜೊತೆ ಡೇಟಿಂಗ್ ಮಾಡುತ್ತಿದ್ದಿದ್ದು ಎಲ್ಲರಿಗೂ ಗೊತ್ತಿದೆ. ಹೋಟೆಲ್, ಪಾರ್ಟಿ ಅಂತ ಕೈ ಕೈ ಹಿಡಿದು ಸುತ್ತಾಡಿದ್ದ ಜೋಡಿ ಹಕ್ಕಿಗಳು ಬಳಿಕ ಬ್ರೇಕ್ ಅಪ್ ಮಾಡಿಕೊಂಡು ನಾನೊಂದು ತೀರಾ ನೀನೊಂದು ತೀರಾ ಎನ್ನುತ್ತಿದ್ದಾರೆ. ಇದೀಗ ಈ ಜೋಡಿಯ ಬ್ರೇಕ್ ಅಪ್ ಗೆ ಕಾರಣ ಏನು ಅನ್ನೊ ಸುದ್ದಿಯೊಂದು ಬಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ದೂರ ದೂರವಾಗೋಕೆ […]Read More

ಮತ್ತಷ್ಟು ಹೆಚ್ಚಾಯ್ತು ನಟಿ ರಶ್ಮಿಕಾ ಮಂದಣ್ಣ ಕ್ರೇಜ್: ಹಠ ಹಿಡಿದು ಎದೆ ಮೇಲೆ

ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ಸಿನಿಮಾ ರಂಗಕ್ಕೆ ಎಂಟ್ರಿಕೊಟ್ಟ ನಟಿ ರಶ್ಮಿಕಾ ಮಂದಣ್ಣ ಮೊದಲ ಸಿನಿಮಾದಲ್ಲೇ ಸಾಕಷ್ಟು ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಸದ್ಯ ಬಾಲಿವುಡ್ ಚಿತ್ರರಂಗದಲ್ಲಿ ಬ್ಯುಸಿಯಾಗಿರೋ ರಶ್ಮಿಕಾ ಸ್ಟಾರ್ ನಟಿಯಾಗಿ ಮಿಂಚುತ್ತಿದ್ದಾರೆ. ರಶ್ಮಿಕಾ ಹೋದ ಕಡೆ, ಬಂದ ಕಡೆ ಎಲ್ಲಾ ಅಭಿಮಾನಿಗಳು ಆಕೆಯನ್ನು ನೋಡಲು ಮುಗಿ ಬೀಳುತ್ತಾರೆ. ಸದ್ಯ ರಶ್ಮಿಕಾರ ಹುಚ್ಚು ಅಭಿಮಾನಿಯೊಬ್ಬ ತನ್ನ ಎದೆ ಮೇಲೆ ಆಟೋಗ್ರಾಫ್ ಹಾಕಿ ಎದ್ದು ಹಠ ಹಿಡಿದು ಆಟೋಗ್ರಾಫ್ ಹಾಕಿಸಿಕೊಂಡಿದ್ದಾನೆ. ಪುಷ್ಪ ಸಿನಿಮಾದ ಬಳಿಕ ರಶ್ಮಿಕಾ ಅಭಿಮಾನಿಗಳ ಸಂಖ್ಯೆ ಮತ್ತಷ್ಟು […]Read More

ಗನ್ ಹಿಡಿದು ಫೀಲ್ಡ್ ಗೆ ಇಳಿದ ಯಶ್: ಮುಂದಿನ ಸಿನಿಮಾದ ಬಗ್ಗೆ ಹಿಂಟ್

ಯಶ್ ನಟನೆಯ ಕೆಜಿಎಫ್ ಸಿನಿಮಾದ ಬಳಿಕ ರಾಕಿ ಬಾಯ್ ಮುಂದಿನ ಸಿನಿಮಾ ಯಾವುದು ಅನ್ನೋ ಕುತೂಹಲ ಕ್ರಿಯೇಟ್ ಆಗಿದೆ. ರಾಕಿಂಗ್ ಸ್ಟಾರ್ ಮುಂದಿನ ಸಿನಿಮಾದ ಕುರಿತು ಸಾಕಷ್ಟು ಸುದ್ದಿಗಳು ಹರಿದಾಡುತ್ತಿದ್ದರು ಯಶ್ ಮಾತ್ರ ಯಾವುದಕ್ಕೂ ಉತ್ತರಿಸದೆ ಸೈಲೆಂಟ್ ಆಗಿದ್ದಾರೆ. ಇದೀಗ ರಾಕಿ ಬಾಯ್ ಗನ್ ಹಿಡಿದು ಫಿಲ್ಡ್ ಗೆ ಇಳಿದಿದ್ದು ಮುಂದಿನ ಸಿನಿಮಾದ ಸುಳಿವು ಕೊಟ್ಟಿದ್ದಾರೆ. ಕೆಜಿಎಫ್ ಸಿನಿಮಾದ  ಬಳಿಕ ಯಶ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳೋಕೆ ನಿರ್ದೇಶಕರು ತುದಿಗಾಲಲ್ಲಿ ನಿಂತಿದ್ದಾರೆ. ಪರಭಾಷೆಯ ಸ್ಟಾರ್ ನಿರ್ದೇಶಕರು ಯಶ್ […]Read More

ಮೇಘನಾ ರಾಜ್ ಸಿನಿಮಾಗೆ ಎಂಟ್ರಿಕೊಟ್ಟ ನಟ ಪ್ರಜ್ವಲ್ ದೇವರಾಜ್: ಪೊಲೀಸ್ ಪಾತ್ರದಲ್ಲಿ ಡೈನಾಮಿಕ್

ಕೆಲ ಸಮಯ ಸಿನಿಮಾ ರಂಗದಿಂದ ದೂರವಾಗಿದ್ದ ನಟಿ ಮೇಘನಾ ರಾಜ್ ಇತ್ತೀಚೆಗೆ ಹಿರಿತೆರೆಯ ಜೊತೆ ಕಿರುತೆರೆಯಲ್ಲೂ ಸಖತ್ ಬ್ಯುಸಿಯಾಗಿದ್ದಾರೆ. ಚಿರು ಗೆಳೆಯರ ಜೊತೆ ಕೈ ಜೋಡಿಸಿರೋ ಮೇಘನಾ ರಾಜ್ ಈಗಾಗ್ಲೆ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದು ಇದೀಗ ಚಿತ್ರತಂಡಕ್ಕೆ ಮತ್ತೊಬ್ಬ ನಾಯಕನ ಎಂಟ್ರಿಯಾಗಿದೆ. ಸಿನಿಮಾ ರಂಗದಲ್ಲಿ ಸಾಕಷ್ಟು ಮಂದಿಯ ಜೊತೆ ಉತ್ತಮ ಬಾಂದವ್ಯ ಹೊಂದಿದ್ದ ನಟ ಚಿರಂಜೀವಿ ಸರ್ಜಾ ನಿಧನ ಪ್ರತಿಯೊಬ್ಬರಿಗೂ ನುಂಗಲಾರದ ತುತ್ತಾಗಿತ್ತು. ಚಿರು ನಿಧನದ ಸಂದರ್ಭದಲ್ಲಿ ಗರ್ಭಿಣಿಯಾಗಿದ್ದ ಮೇಘನಾ ರಾಜ್ ಬಳಿಕ ಮಗನ ಆರೈಕೆಯಲ್ಲಿ ತೊಡಗಿಕೊಂಡರು. […]Read More

ಯುವ ದಸರಾದಲ್ಲಿ ಅಪ್ಪು ಹವಾ: ಪುನೀತ್ ನೆನೆದು ಕಣ್ಣೀರಿಟ್ಟ ಅಶ್ವಿನಿ

ವಿಶ್ವ ವಿಖ್ಯಾತ ಮೈಸೂರು ಯುವ ದಸರಾದ ಕಾರ್ಯಕ್ರಮ ಸಾಕಷ್ಟು ಅದ್ದೂರಿಯಾಗಿ ಆರಂಭಗೊಂಡಿದೆ. ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಹಾಗೂ ಕೇಂದ್ರಬಿಂದುವಾದ ಯುವ ದಸರಾ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಉದ್ಘಾಟನೆ ಮಾಡಿದರು. ಮೊದಲ ದಿನ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಮೀಸಲಿಟ್ಟಿದ್ದು ಅಪ್ಪು ನಮನ ಹೆಸರಿನಲ್ಲಿ ಜಿಲ್ಲಾಡಳಿತ ಕಾರ್ಯಕ್ರಮ ಆಯೋಜನೆ ಮಾಡಿದೆ. ಯುವ ದಸರಾ ವೇದಿಕೆಯಲ್ಲಿ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್, ಸಂಸದ […]Read More

‘ಗಜರಾಮ’ನಿಗೆ ಕ್ಲಾಪ್ ಮಾಡಿ ಶುಭ ಹಾರೈಸಿದ ಅಭಿಷೇಕ್ ಅಂಬರೀಶ್

ಡಿಂಗ್ರಿ ನಾಗರಾಜ್ ಪುತ್ರ ರಾಜವರ್ಧನ್ ಸದ್ಯ ಸಿನಿಮಾಗಳಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ಬಿಚ್ಚುಗತ್ತಿ ಸಿನಿಮಾದ ಬಳಿಕ ರಾಜವರ್ಧನ್ ಬ್ಯಾಕ್ ಟು ಬ್ಯಾಕ್ ಸಿನಿಮಾದಲ್ಲಿ ಬಣ್ಣ ಹಚ್ಚುತ್ತಿದ್ದು ಇದೀಗ ‘ಗಜರಾಮ’ ನಾಗಲು ರಾಜವರ್ಧನ್ ರೆಡಿಯಾಗಿದ್ದಾರೆ. ರಾಜವರ್ಧನ್ ನಟನೆಯ ಪ್ರಣಯಂ ಹಾಗೂ ಹಿರಣ್ಯ ಸಿನಿಮಾಗಳು ಇನ್ನಷ್ಟೇ ಬಿಡುಗಡೆ ಆಗಬೇಕಿದೆ. ಅದಕ್ಕೂ ಮುನ್ನ ರಾಜವರ್ಧನ್ ಮತ್ತೊಂದು ಸಿನಿಮಾದಲ್ಲಿ ತೊಡಗಿಕೊಂಡಿದ್ದಾರೆ. ರಾಜವರ್ಧನ್ ಸದ್ಯ ಗಜರಾಮ ಸಿನಿಮಾದಲ್ಲಿ ತೊಡಗಿಕೊಂಡಿದ್ದು ಈಗಾಗ್ಲೆ ಫಸ್ಟ್ ಲುಕ್ ಫೋಸ್ಟರ್ ಮೂಲಕ ಸಖತ್ ಕಿಕ್ ಕೊಟ್ಟಿದ್ದಾರೆ. ಸದ್ಯ ಗಜರಾಮ ಸಿನಿಮಾದ ಮುಹೂರ್ತ […]Read More

Phone icon
Call Now
Reach us!
WhatsApp icon
Chat Now