• June 13, 2026

karnatakaspecial.in

https://karnatakaspecial.in/

ಮಧುಸೂದನ್ ಹವಾಲ್ದಾರ್ ನಿರ್ದೇಶನದ ಶ್ರೀ ಪ್ರಸನ್ನವೆಂಕಟದಾಸರು ಜುಲೈ 7 ರಂದು ಬಿಡುಗಡೆ .

ಈ ಹಿಂದೆ ಶ್ರೀಜಗನ್ನಾಥದಾಸರು ಎಂಬ ಚಿತ್ರ ನಿರ್ಮಾಣ ಮಾಡಿ, ನಿರ್ದೇಶಿಸಿದ್ದ ಮಧುಸೂದನ್ ಹವಾಲ್ದಾರ್, ಈಗ ಕರ್ನಾಟಕದ ಮತ್ತೊಬ್ಬ ಶ್ರೇಷ್ಠ ಹರಿದಾಸರಾದ ಶ್ರೀಪ್ರಸನ್ನವೆಂಕಟದಾಸರ ಕುರಿತಾದ ಚಿತ್ರವನ್ನು ಮಾತಾಂಬುಜ ಮೂವೀಸ್ ಲಾಂಛನದಲ್ಲಿ ನಿರ್ಮಾಣ ಮಾಡಿ, ನಿರ್ದೇಶನವನ್ನೂ ಮಾಡಿದ್ದಾರೆ. ಚಿತ್ರ ಜುಲೈ 7 ರಂದು ಬಿಡುಗಡೆಯಾಗಲಿದೆ‌. ಈ ಕುರಿತು ಮಾಹಿತಿ ನೀಡಲು ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು. ಪ್ರಸನ್ನವೆಂಕಟದಾಸರ ವಂಶಸ್ಥರು ಹಾಗೂ ಜನಪ್ರಿಯ ಬರಹಗಾರರು ಆದ ರೇಖಾ ಕಾಖಂಡಕಿ ಅವರು ಬರೆದಿರುವ ಶ್ರೀಪ್ರಸನ್ನವೆಂಕಟದಾಸರ ಕುರಿತಾದ ಪುಸ್ತಕವನ್ನು ಆಧರಿಸಿ ಈ ಚಿತ್ರ ಮಾಡಿದ್ದೇನೆ‌. ಕಥೆ, ಚಿತ್ರಕಥೆ […]Read More

ಕೋಮಲ್ ಕುಮಾರ್ ನಾಯಕರಾಗಿ ನಟಿಸಿರುವ ನಮೋ ಭೂತಾತ್ಮ 2 ಚಿತ್ರದ ಟೀಸರ್ ಬಿಡುಗಡೆ

ಸಹಜ ಅಭಿನಯದ ಮೂಲಕ ಜನರ ಮನ ಗೆದ್ದಿರುವ ನಟ ಕೋಮಲ್ ಕುಮಾರ್ ನಾಯಕರಾಗಿ ನಟಿಸಿರುವ “ನಮೋ ಭೂತಾತ್ಮ 2 ” ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ನೃತ್ಯ ನಿರ್ದೇಶಕ ಮುರಳಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ನಟ ಧ್ರುವ ಸರ್ಜಾ ಟೀಸರ್ ಬಿಡುಗಡೆ ಮಾಡಿದರು. ಟೀಸರ್ ಬಿಡುಗಡೆ ಮಾಡಿ ಮಾತನಾಡಿದ ಧ್ರುವ ಸರ್ಜಾ, ನಾನು ಮೊದಲಿನಿಂದಲೂ ಕೋಮಲ್ ಅವರ ಅಭಿಮಾನಿ. ಅವರ ಅಭಿನಯದ ಎಲ್ಲಾ ಚಿತ್ರಗಳನ್ನು ನೋಡಿದ್ದೇನೆ. ಈ ಚಿತ್ರದ ಬಿಡುಗಡೆಗೂ ಕಾಯುತ್ತಿದ್ದೇನೆ. ಮುರಳಿ ಮಾಸ್ಟರ್ ಸಹ ನನ್ನ […]Read More

ಮತ್ತೆ ಒಂದಾಯ್ತು ‘ಅಲ ವೈಕುಂಠಪುರಮುಲೋ’ಜೋಡಿ…ಗುರು ಪೂರ್ಣಿಮೆಗೆ ಅಲ್ಲು ಅರ್ಜುನ್ ಹಾಗೂ ತ್ರಿವಿಕ್ರಮ್ ಪ್ಯಾನ್

ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಪುಷ್ಪ-2 ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ಪ್ರಾಜೆಕ್ಟ್ ಹೊರತುಪಡಿಸಿ ಬನ್ನಿ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ಒಪ್ಪಿಕೊಂಡಿದ್ದಾರೆ. ಅನಿಮಲ್ ಸಿನಿಮಾ ಖ್ಯಾತಿಯ ಸಂದೀಪ್ ರೆಡ್ಡಿ ವಂಗ ನಿರ್ದೇಶನದ ಟೀ-ಸೀರಿಸ್ ನಿರ್ಮಾಣ ಸಂಸ್ಥೆಯಲ್ಲಿ ಈ ಚಿತ್ರ ಮೂಡಿಬರಲಿದೆ. ಇದೀಗ ಅಲ್ಲು ಅರ್ಜುನ್ ತ್ರಿವಿಕ್ರಮ್ ಜೊತೆ ಕೈ ಜೋಡಿಸಿದ್ದಾರೆ.   ಟಾಲಿವುಡ್ ಹಿಟ್ ಜೋಡಿ ಅಲ್ಲು ಅರ್ಜುನ್ ಹಾಗೂ ತ್ರಿವಿಕ್ರಮ್ ಮತ್ತೆ ಒಂದಾಗಿದ್ದಾರೆ. ‘ಜುಲಾಯಿ’, ‘ಸನ್ ಆಫ್ ಸತ್ಯಮೂರ್ತಿ’, ‘ಅಲ ವೈಕುಂಠಪುರಮುಲೋ’ ಸಿನಿಮಾಗಳಂತಹ ಮೆಗಾ ಬ್ಲಾಕ್ […]Read More

ಸೆಪ್ಟೆಂಬರ್‌ನಲ್ಲಿ ‘ಚಂದ್ರಮುಖಿ 2’ ಬಿಡುಗಡೆ!

ಸೌತ್ ಸಿನಿ ದುನಿಯಾದ ಖ್ಯಾತ ನಿರ್ಮಾಣ ಸಂಸ್ಥೆ ಲೈಕಾ ಭತ್ತಳಿಕೆ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ಚಂದ್ರಮುಖಿ-2 ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಖ್ಯಾತ ನಿರ್ದೇಶಕ, ನಟ ಹಾಗೂ ಸ್ಟಾರ್ ಕೊರಿಯೋಗ್ರಾಫರ್ ರಾಘವ್ ಲಾರೆನ್ಸ್ ಹಾಗೂ ಬಾಲಿವುಡ್ ಬ್ಯೂಟಿ ಕಂಗನಾ ನಟನೆಯ ಈ ಚಿತ್ರ ಸೆಪ್ಟಂಬರ್ 19ರ ಗಣೇಶ್ ಚತುರ್ಥಿಗೆ ಸ್ಪೆಷಲ್ ಆಗಿ ವಿಶ್ವಾದ್ಯಂತ ತೆರೆಗಪ್ಪಳಿಸಲಿದೆ. ಖ್ಯಾತ ಹಿರಿಯ ನಿರ್ದೇಶಕ ಪಿ.ವಾಸು ನಿರ್ದೇಶನದ 65ನೇ ಚಿತ್ರ ಚಂದ್ರಮುಖ-2.     2005ರಲ್ಲಿ ಬಿಡುಗಡೆಯಾಗಿದ್ದ ಕ್ಲಾಸಿಕ್ ಸಿನಿಮಾ ಚಂದ್ರಮುಖಿ […]Read More

ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅವರ ಹುಟ್ಟುಹಬ್ಬಕ್ಕೆ ಬರಲಿದೆ ಬಹು ನಿರೀಕ್ಷಿತ “ಘೋಸ್ಟ್‌” ಚಿತ್ರದ

ಜುಲೈ 12, ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಶಿವಣ್ಣ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಘೋಸ್ಟ್” ಚಿತ್ರದ “BIG DADDY” ವಿಡಿಯೋ ಬಿಡುಗಡೆಯಾಗಲಿದೆ. “BIG DADDY” ವಿಡಿಯೋವನ್ನು ಅದ್ದೂರಿಯಾಗಿ ಬಿಡುಗಡೆ ಮಾಡಲು ನಿರ್ಮಾಪಕರು ನಿರ್ಧರಿಸಿದ್ದಾರೆ. ಕನ್ನಡ ಸೇರಿದಂತೆ ಮೂರು ಭಾಷೆಗಳಲ್ಲಿ ಈ ಚಿತ್ರ ಬರುತ್ತಿದೆ.   ಈಗಾಗಲೇ ಈ ಕುರಿತು “July 12 “BD”(BIG DADDY)” ಎಂಬ ಪೋಸ್ಟರ್ ಸಹ ಬಿಡುಗಡೆಯಾಗಿದೆ‌. ಈ ವಿಡಿಯೋ ಬಿಡುಗಡೆಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.   ಕನ್ನಡ […]Read More

ಬ್ರಿಟಿಷರನ್ನು ಗುಂಡಿಟ್ಟು ಕೊಂದ ‘ಶಾನುಭೋಗರ ಮಗಳು’

ಭುವನ್ ಫಿಲಂಸ್ ಲಾಂಛನದಲ್ಲಿ ತಯಾರಾಗುತ್ತಿರುವ, ಕೋಡ್ಲು ರಾಮಕೃಷ್ಣ ನಿರ್ದೇಶನದ “ಶಾನುಭೋಗರ ಮಗಳು” ಚಿತ್ರವು ಸ್ವತಂತ್ರ ಪೂರ್ವ ಕಾದಂಬರಿ ಆಧಾರಿತ ಚಿತ್ರವಾಗಿದ್ದು, ಇದರ ಲೇಖಕಿ: ಶ್ರೀಮತಿ. ಭಾಗ್ಯ ಕೆ ಮೂರ್ತಿ. ಚಿತ್ರದಲ್ಲಿ ಬ್ರಿಟಿಷರು, ಟಿಪ್ಪು ಸುಲ್ತಾನ್ ಹಾಗೂ ಮೈಸೂರಿನ ಮಹಾರಾಜರುಗಳೊಂದಿಗಿನ ಸನ್ನಿವೇಶಗಳು ಹೆಚ್ಚಿವೆ.   “ಶಾನುಭೋಗರ ಮಗಳ” ಪಾತ್ರ ನಿರ್ವಹಿಸುತ್ತಿರುವ ರಾಗಿಣಿ ಪ್ರಜ್ವಲ್ ನಾಲ್ಕಾರು ಬ್ರಿಟಿಷರನ್ನು ಗುಂಡಿಟ್ಟು ಸಾಯಿಸುವ ದೃಶ್ಯವನ್ನು ಇತ್ತೇಚಿಗೆ ಶ್ರೀರಂಗ ಪಟ್ಟಣ, ಮೇಲುಕೋಟೆ, ಕುಂತಿ ಬೆಟ್ಟದ ಸುತ್ತಮುತ್ತ ಚಿತ್ರೀಕರಿಸಲಾಯಿತು. ಟಿಪ್ಪು ಸುಲ್ತಾನ್ ಪಾತ್ರದಲ್ಲಿ ಕಿಶೋರ್ ಅಭಿನಯಿಸುತ್ತಿದ್ದು, […]Read More

ಕೋಟೆನಾಡಿನಲ್ಲಿ ಮೊದಲ ಹಂತದ ಚಿತ್ರೀಕರಣ ಮುಗಿಸಿದ ಮಾರ್ಗರೇಟ್ ಲವರ್ ಆಫ್ ರಾಮಾಚಾರಿ…ನಾಯಕನಾಗಿ ಅಭಿಲಾಷ್

ಯುವ ಪ್ರತಿಭೆ ಅಭಿಲಾಷ್ ಹಾಗೂ ಪಂಚತಂತ್ರ ಬ್ಯೂಟಿ ಸೋನಲ್ ಮೊಂಥೆರೋ ಜೋಡಿಯಾಗಿ ನಟಿಸಿರುತ್ತಿರುವ ‘ಮಾರ್ಗರೇಟ್ ಲವರ್ ಆಫ್ ರಾಮಾಚಾರಿ’ ಸಿನಿಮಾದ ಮೊದಲ ಹಂತದ ಚಿತ್ರೀಕರಣ ಯಶಸ್ವಿಯಾಗಿ ಮುಗಿಸಿದೆ. ಚಿತ್ರದುರ್ಗ ಸುತ್ತಮುತ್ತ ಕೋಟೆಯಲ್ಲಿ 21 ದಿನಗಳ ಕಾಲ ಶೂಟಿಂಗ್ ನಡೆಸಲಾಗಿದೆ. ಹೊಸತಂಡ ಎಂಬುದನ್ನು ಪರಿಗಣಿಸದೇ ನಿರ್ಮಾಪಕರಾದ ವನಿತಾ ಎಚ್.ಎನ್ ಸಾಕಷ್ಟು ಖರ್ಚು ಮಾಡಿದ್ದಾರೆ. ಚಿತ್ರೀಕರಣ ಸರಾಗವಾಗಿ ಸಾಗಲು, ಗ್ರಾಮಸ್ಥರೇ ಕಾರಣ. ಇಡೀ ಊರಿಗೆ ಊರೇ ಚಿತ್ರೀಕರಣಕ್ಕೆ ಸಹಕಾರ ನೀಡಿದೆ. ಬಹಳ ನೈಜ ದೃಶ್ಯಗಳನ್ನು ಸೆರೆಹಿಡಿಯಲಾಗಿದೆ.   ರಂಗಭೂಮಿ ಹಿನ್ನೆಲೆ […]Read More

ವಿಜಯ್ ಹುಟ್ಟುಹಬ್ಬಕ್ಕೆ ಡಬಲ್ ಗಿಫ್ಟ್ ಕೊಟ್ಟ ‘ಲಿಯೋ’ ಟೀಮ್ ಫಸ್ಟ್ ಲುಕ್ ಮತ್ತು

ತಮಿಳಿನ ಸ್ಟಾರ್ ನಟ ವಿಜಯ್ ಇಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂಭ್ರಮವನ್ನು ದ್ವಿಗುಣಗೊಳಿಸುವುದಕ್ಕೆ ‘ಲಿಯೋ’ ಚಿತ್ರತಂಡವು “ನಾ ರೆಡಿ” ಎಂಬ ಹಾಡಿನ ಪ್ರೋಮೋ ಜೊತೆಗೆ ಚಿತ್ರದಲ್ಲಿನ ವಿಜಯ್ ಅವರ ಫಸ್ಟ್ ಲುಕ್ ಪೋಸ್ಟರ್ ಸಹ ಬಿಡುಗಡೆ ಮಾಡಿದೆ. ‘ಮಾಸ್ಟರ್’ ನಂತರ ನಿರ್ದೇಶಕ ಲೋಕೇಶ್ ಕನಕರಾಜ್ ಮತ್ತು ವಿಜಯ್, ‘ಲಿಯೋ’ ಎಂಬ ಇನ್ನೊಂದು ಚಿತ್ರದಲ್ಲಿ ಜೊತೆಯಾಗಿ ಕೆಲಸ ಮಾಡುತ್ತಿದ್ದಾರೆ. ಈ ಚಿತ್ರವು ಕೆಲವು ತಿಂಗಳುಗಳ ಹಿಂದೆ ಚೆನ್ನೈನಲ್ಲಿ ಪ್ರಾರಂಭವಾಗಿತ್ತು. ಆದರೆ, ಇದುವರೆಗೂ ಚಿತ್ರತಂಡದವರು ಚಿತ್ರದಲ್ಲಿ ವಿಜಯ್ ಅವರ […]Read More

“ಶೀಲ” ಚಿತ್ರದಲ್ಲಿ ರಾಗಿಣಿ ದ್ವಿವೇದಿ. ಸಿನಿಮಾದ ಫಸ್ಟ್ ಲುಕ್ ಬಿಡುಗಡೆ‌.

ಕನ್ನಡದ ಖ್ಯಾತ ನಟಿ ರಾಗಿಣಿ ದ್ವಿವೇದಿ “ಶೀಲ” ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರ ಕನ್ನಡ ಹಾಗೂ ಮಲೆಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. “ಶೀಲ” ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಮಹಿಳಾ ಪ್ರಧಾನ ಚಿತ್ರವಾಗಿದೆ. ನನ್ನ ಪಾತ್ರ ಚೆನ್ನಾಗಿದೆ. ಸಮಾಜದಲ್ಲಿ ಎದುರಾಗುವ ಸಾಕಷ್ಟು ಸವಾಲುಗಳನ್ನು ಹೆಣ್ಣುಮಗಳೊಬ್ಬಳು ಹೇಗೆ ನಿಭಾಯಿಸುತ್ತಾಳೆ ಎಂಬುದು ಕಥಾಸಾರಾಂಶ‌. ಈ ಪ್ಯಾನ್ ಇಂಡಿಯಾ ಸಿನಿಮಾದ ಚಿತ್ರೀಕರಣ ಮುಕ್ತಾಯವಾಗಿದೆ. ಕೇರಳ ಹಾಗೂ ಕರ್ನಾಟಕದಲ್ಲಿ ಚಿತ್ರೀಕರಣ ನಡೆದಿದೆ. ಪ್ರಸ್ತುತ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಸದ್ಯದಲ್ಲೇ ಟ್ರೇಲರ್ ಬರಲಿದೆ ಎಂದು […]Read More

ಅಪ್ಪು ಕಪ್ ಸೀಸನ್-2 ಸ್ಯಾಂಡಲ್ವುಡ್ ಬ್ಯಾಡ್ಮಿಂಟನ್ ಲೀಗ್ ಲೋಗೋ ಅನಾವರಣ ಮಾಡಿದ ಪ್ರಕಾಶ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನೆನಪಿನಲ್ಲಿ ಆಯೋಜಿಸಲಾಗಿರುವ ಅಪ್ಪು ಕಪ್ ಸೀಸನ್-2 ಸ್ಯಾಂಡಲ್ ವುಡ್ ಬ್ಯಾಡ್ಮಿಂಟನ್ ಲೀಗ್ ಲೋಗೋ ಬಿಡುಗಡೆ ಸಮಾರಂಭ ಬೆಂಗಳೂರಿನಲ್ಲಿಂದು ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ನಲ್ಲಿ ನೆರವೇರಿದೆ. ಭಾರತೀಯ ಬ್ಯಾಡ್ಮಿಂಟನ್ ದಂತಕಥೆ ಪ್ರಕಾಶ್ ಪಡುಕೋಣೆ ಲೋಗೋ ಅನಾವರಣ ಮಾಡಿ ಆಟಗಾರರಿಗೆ ಶುಭಾಶಯ ಕೋರಿದರು. ಕಾರ್ಯಕ್ರಮದಲ್ಲಿ ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ಕಾರ್ಯದರ್ಶಿ ಪಿ.ರಾಜೇಶ್ ರೆಡ್ಡಿ, ವಾಣಿಜ್ಯಚಲನಚಿತ್ರ ಮಂಡಳಿ ಅಧ್ಯಕ್ಷರಾದ ಭಾ.ಮಾ.ಹರೀಶ್, ಹಿರಿಯ ಸಿನಿಮಾ ಪತ್ರಕರ್ತರಾದ ಸದಾಶಿವ ಶೆಣೈ ಉಪಸ್ಥಿತರಿದ್ದರು. ಬಳಿಕ ಪ್ರಕಾಶ್ ಪಡುಕೋಣೆ, ಪುನೀತ್ […]Read More

Phone icon
Call Now
Reach us!
WhatsApp icon
Chat Now