ಚಿತ್ರದುರ್ಗ: ಅಪ್ರಾಪ್ತೆಯರಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾದಿಪತಿ ಮುರುಘಾ ಶ್ರೀಗಳನ್ನು ಪೋಕ್ಸೋ ಕೇಸ್ ನಲ್ಲಿ ಶುಕ್ರವಾರದಿಂದ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಶ್ರೀಗಳನ್ನು ವಿಚಾರಣೆಗೆ ಒಳಪಡಿಸಿದ್ದು ಶ್ರೀಮಗಳು ಮಾತ್ರ ವಿಚಾರಣೆಗೆ ಸಹಕರಿಸದೆ ಆರೋಗ್ಯದ ನೆಪದಲ್ಲಿ ಆಸ್ಪತ್ರೆ ಸುತ್ತಾಟ ನಡೆಸುತ್ತಿದ್ದಾರೆ. ಮುರುಘ ಶ್ರೀಗಳ ಮೇಲಿನ ಆರೋಪಿಗಳನ್ನು ತಳ್ಳಿ ಹಾಕಿರುವ ಶ್ರೀಗಳು,ನನ್ನ ವಿರುದ್ಧ ಷಡ್ಯಂತ್ರ್ಯ ನಡೆದಿದೆ. ಬೇಕೆಂದು ಈ ಪ್ರಕರಣದಲ್ಲಿ ನನನ್ನು ಸಿಲುಕಿಸಿದ್ದಾರೆ ಎಂದು ಶ್ರೀಗಳು ಆರೋಪಿಸಿದ್ದಾರೆ. ವಿಚಾರಣೆ ಮಧ್ಯೆದಲ್ಲೇ […]readmore
ರಿಯಲ್ ಲೈಫ್ ನಲ್ಲಿ ಒಂದಾಗಿರುವ ಆಲಿಯಾ ಭಟ್ ಹಾಗೂ ರಣಬೀರ್ ಕಪೂರ್ ನಟನೆಯ ಬ್ರಹ್ಮಾಸ್ತ್ರ ತೆರೆಗೆ ಬರೋಕೆ ಇನ್ನೇನ್ನೂ ಕೆಲವೇ ಕೆಲವು ದಿನಗಳ ಮಾತ್ರವೇ ಭಾಕಿ ಇದೆ. ಈ ಹಿನ್ನೆಲೆಯಲ್ಲಿ ಇಡೀ ಚಿತ್ರತಂಡ ದೇಶದ ಪ್ರಮುಖ ನಗರಗಳಲ್ಲಿ ಅದ್ದೂರಿಯಾಗಿ ಚಿತ್ರದ ಪ್ರಮೋಷನ್ ಕೆಲಸಗಳನ್ನು ಮಾಡುತ್ತಿದೆ. ಬ್ರಹ್ಮಾಸ್ತ್ರ ತೆರೆಗೆ ಬರಲು ಕೆಲವೇ ದಿನಗಳು ಭಾಕಿ ಇರುವ ಹಿನ್ನೆಲೆಯಲ್ಲಿ ನಿನ್ನೆ ಚಿತ್ರತಂಡ ಹೈದರಾಬಾದ್ ನ ರಾಮೋಜಿ ಫಿಲಂ ಸಿಟಿಯಲ್ಲಿ ಚಿತ್ರದ ಪ್ರೀ ರಿಲೀಸ್ ಈವೆಂಟ್ ಹಮ್ಮಿಕೊಂಡಿತ್ತು. ಕಾರ್ಯಕ್ರಮಕ್ಕೆ ಜೂನಿಯರ್ ಎನ್ […]readmore
ಜನಾರ್ಧನ್ ರೆಡ್ಡಿ ಪುತ್ರ ಕಿರೀಟಿ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟಿರೋದು ಗೊತ್ತೇ ಇದೆ. ಟೀಸರ್ ನಿಂದಲೇ ಗಾಂಧಿನಗರದಲ್ಲಿ ಭರವಸೆ ಮೂಡಿಸಿರುವ ಕಿರೀಟಿ ಸದ್ಯ ಇನ್ನೂ ಹೆಸರಿಡದ ಚೊಚ್ಚಲ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಸಾಕಷ್ಟು ಅದ್ದೂರಿಯಾಗಿ ಮುಹೂರ್ತ ನೆರವೇರಿಸಿದ್ದ ಚಿತ್ರತಂಡ ಯಾವುದೇ ವಿರಾಮ ತೆಗೆದುಕೊಳ್ಳದೆ ಶೂಟಿಂಗ್ ನಲ್ಲಿ ತೊಡಗಿಕೊಂಡಿದೆ. ಈಗಾಗ್ಲೆ ಆಲ್ ಮೋಸ್ಟ್ ಚಿತ್ರದ ಚಿತ್ರೀಕರಣ ಮುಗಿದಿದ್ದು ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ಬ್ಯುಸಿಯಾಗಿದೆ. ಈ ಮಧ್ಯೆ ಸಿನಿಮಾ ತಂಡದಿಂದ ಮತ್ತೊಂದು ಸುದ್ದಿ ಹೊರ ಬಿದ್ದಿದೆ. ಕಿಕೀಟಿ ನಟನೆಯ […]readmore
ಗುಜರಾತ್ ನ ಜನಪ್ರಿಯ ಗಾಯಕಿ ವೈಶಾಲಿ ಬನ್ಸಾರ ಮೃತದೇಹ ಇತ್ತೀಚೆಗೆ ಅವರ ಕಾರಿನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿತ್ತು. ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದ ಪೊಲೀಸರಿಗೆ ಇದೀಗ ಅಘಾತಕಾರಿ ಮಾಹಿತಿಯೊಂದು ಸಿಕ್ಕಿದೆ. ವೈಶಾಲಿ ಅವರನ್ನು ಕೊಲೆ ಮಾಡಲಾಗಿದ್ದು ಸ್ನೇಹಿತೆಯೇ ಕೊಲೆ ಮಾಡಿದ್ದಾಳೆ ಎನ್ನುವುದು ತಿಳಿದು ಬಂದಿದೆ. ಮೃತ ವೈಶಾಲಿ ಫೇಸ್ ಬುಕ್ ಸ್ನೇಹಿತೆ ಬಬಿತ ಎನ್ನುವವಳು ವೈಶಾಲಿ ಅವರನ್ನು ಹಣಕ್ಕಾಗಿ ಕೊಲೆ ಮಾಡಿರುವುದು ತನಿಖೆಯಿಂದ ಬಯಲಾಗಿದೆ. ಮೃತ ಗಾಯಕಿ ವೈಶಾಲಿ ಹಾಗೂ ಸ್ನೇಹಿತ ಬಬಿತಾ ನಡುವೆ 25 ಲಕ್ಷ ರೂಪಾಯಿಯ […]readmore
ಬಿಗ್ ಬಾಸ್ ಖ್ಯಾತಿಯ ಶಶಿ ನಾಯಕನಾಗಿ ನಟಿಸಿರುವ “ಮೆಹಬೂಬ” ಚಿತ್ರಕ್ಕಾಗಿ ರಘುಶಾಸ್ತ್ರಿ ಅವರು ಬರೆದಿರುವ “ದೇವರು ದೇವರು” ಎಂಬ ಭಾವೈಕ್ಯತೆ ಸಾರುವ ಹಾಡು ಇತ್ತೀಚೆಗೆ ಬಿಡುಗಡೆಯಾಗಿದೆ. “ಸರಿಗಮಪ” ಖ್ಯಾತಿಯ ಮನೋಜವಂ ಆತ್ರೇಯ ಸುಮಧುರವಾಗಿ ಹಾಡಿರುವ ಈ ಗೀತೆಗೆ ಮ್ಯಾಥ್ಯೂಸ್ ಮನು ಸಂಗೀತ ನೀಡಿದ್ದಾರೆ. ಜಂಕಾರ್ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿರುವ ಈ ಹಾಡು ಅಪಾರ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದ್ದು, ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಸ್ಕಂದ ಎಂಟರ್ ಟೈನ್ ಮೆಂಟ್ ಲಾಂಛನದಲ್ಲಿ ಪ್ರಸನ್ನ ಶ್ರೀನಿವಾಸ್ ನಿರ್ಮಿಸುತ್ತಿರುವ ಈ ಚಿತ್ರವನ್ನು ಅನೂಪ್ […]readmore
ಗಮನ ಸೆಳೆಯುತ್ತಿದೆ ಪ್ರೇರಣಾ ಸರ್ಜಾ ಬೇಬಿ ಬಂಪ್ ಫೋಟೋಸ್ ಸ್ಯಾಂಡಲ್ ವುಡ್ ಪ್ರಿನ್ಸ್ ಧೃವಾ ಸರ್ಜಾ ಸಿಹಿ ಸುದ್ದಿಯೊಂದನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಧೃವಾ ಸರ್ಜಾ ತಂದೆಯಾಗುತ್ತಿದ್ದು ಮನೆಗೆ ಹೊಸ ಅತಿಥಿಯ ಆಗಮನದ ಸುದ್ದಿಯನ್ನು ಸಾಮಾಜಿಕ ಜಾಲಾ ತಾಣದ ಮೂಲಕ ತಿಳಿಸಿದ್ದಾರೆ. ಧೃವಾ ಪತ್ನಿ ಪ್ರೇರಣಾ 9ತಿಂಗಳ ತುಂಬು ಗರ್ಭಿಣಿಯಾಗಿದ್ದು ಇದೇ ತಿಂಗಳು ಮನೆಗೆ ಹೊಸ ಸದಸ್ಯರ ಆಗಮನವಾಗುತ್ತಿದೆ ನಾವು ಹೊಸ ಜೀವನದ ಹೊಸ ಹಂತವನ್ನು ಪ್ರವೇಶಿಸುತ್ತಿದ್ದೇವೆ, ದೈವಿಕ ಪುಣಾಣಿ ಬೇಗ ಬರಲಿ ಎಂದು ಬರೆದುಕೊಂಡಿದ್ದಾರೆ. 2019ರಲ್ಲಿ […]readmore
ದಿನಗಳು ಉರುಳಿದಂತೆ ಚರ್ಮ ಸುಕ್ಕಾಗಬಹುದು. ಮುಖಕಾಂತಿ ಕುಗ್ಗಬಹುದು. ಸೌಂದರ್ಯದ ಮಾಸಬಹುದು. ಆದರೆ ಸೌಂದರ್ಯ ವೃದ್ಧಿ ಎಂಬ ಉದ್ಯಮ ಕ್ಷೇತ್ರದ ಚೆಲುವು ಕುಂದುವುದಿಲ್ಲ. ಅದು ವರ್ಷದಿಂದ ವರ್ಷಕ್ಕೆ ತನ್ನ ಹೊಳಪನ್ನು ಹೆಚ್ಚಿಸಿಕೊಳ್ಳುತ್ತಲೇ ಸಾಗಿದೆ. ದಿನದಿಂದ ದಿನಕ್ಕೆ ಹೊಸ ಮೆರುಗು ಪಡೆದುಕೊಳ್ಳುತ್ತಿರುವ ಈ ಸೌಂದರ್ಯ ರಕ್ಷಣೆ ಸಾಮಗ್ರಿಗಳ ತಯಾರಿಕೆ ಮತ್ತು ಮಾರಾಟದ ಕ್ಷೇತ್ರ ತನ್ನದೇ ಬ್ರ್ಯಾಂಡ್ ಸೃಷ್ಟಿಸಿರುವ ಬ್ಯೂಟಿ ಅಂಡ್ ಬಿಯಾಂಡ್ ಎರಡನೇ ಶಾಪ್ ಈಗ ಬೆಂಗಳೂರಿನ ಹೆಚ್ ಎಸ್ ಆರ್ ಲೇಔಟ್ ನಲ್ಲಿ ಆರಂಭವಾಗಿದೆ. ಮೇಕಪ್, ಸುಗಂಧ ದ್ರವ್ಯ, […]readmore
‘ಕ್ವಾಟ್ಲೆ’ ಸಿನಿಮಾ ಮೂಲಕ ನಿರ್ದೇಶಕಿಯಾಗಿ ಚಿತ್ರರಂಗಕ್ಕೆ ಪರಿಚಿತರಾಗಿದ್ದ ಜೆ ಚಂದ್ರಕಲಾ(JCK) ಸಾರಥ್ಯದಲ್ಲಿ ತಯಾರಾಗಿರುವ ಆಶಿಕಿ ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಈಗಾಗಲೇ ಸೆನ್ಸಾರ್ ಪಾಸಾಗಿರುವ ಈ ಚಿತ್ರದ ಟ್ರೇಲರ್ ಅನಾವರಣಗೊಂಡಿದೆ. ಪ್ರೇಮಕಾವ್ಯ ಹೊತ್ತು ಬಂದಿರುವ ಟ್ರೇಲರ್ ಝಲಕ್ ನಲ್ಲಿ ಅದ್ಭುತ ನಿರೂಪಣೆ, ಕಣ್ಣಿಗೆ ಮುದ ನೀಡುವ ಲೋಕೇಷನ್ಸ್, ತಾರಾಬಳಗದ ಅಭಿನಯ ಎಲ್ಲವೂ ಸೊಗಸಾಗಿ ಮೂಡಿ ಬಂದಿದೆ. ಟ್ರೇಲರ್ ಬಿಡುಗಡೆ ಮಾಡುವ ಮೂಲಕ ಪ್ರಚಾರ ಕಾರ್ಯಕ್ಕೆ ಮುನ್ನುಡಿ ಬರೆದಿರುವ ಆಶಿಕಿ ಬಳಗ ಇದೇ 14ರಂದು ಆಡಿಯೋ ಬಿಡುಗಡೆಗೆ ಮಾಡಲು […]readmore
ರಿಯಲ್ ಸ್ಟಾರ್ ಉಪೇಂದ್ರ ಏನೇ ಮಾಡಿದ್ರು ಡಿಫರೆಂಟ್ ಆಗಿ ಮಾಡ್ತಾರೆ. ಉಪ್ಪಿ ನಟನೆಯ ಸಿನಿಮಾವಾಗಿರ್ಲಿ, ನಿರ್ದೇಶನದ ಚಿತ್ರವೇ ಆಗಿರ್ಲಿ ಡಿಫರೆಂಟ್ ಆಗಿ ತೆಗೆಯೋದ್ರಲ್ಲಿ ಉಪ್ಪಿ ಎತ್ತಿದ ಕೈ. ಸದ್ಯದಲ್ಲೇ ಉಪೇಂದ್ರ ಬರ್ತಡೇ ಇದ್ದು ಈ ಹಿನ್ನೆಲೆಯಲ್ಲಿ ಉಪ್ಪಿ ಡಿಫರೆಂಟ್ ಟಾಸ್ಕ್ ಒಂದನ್ನು ಅಭಿಮಾನಿಗಳಿಗೆ ನೀಡಿದ್ದಾರೆ. ಉಪ್ಪಿ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟೀವ್ ಆಗಿದ್ದಾರೆ. ಇದೇ ಸೆಪ್ಟೆಂಬರ್ 18ರಂದು ಉಪ್ಪಿ ಬರ್ತಡೇ ಇದ್ದು ಈ ಕುರಿತಾಗಿ ರಿಯಲ್ ಸ್ಟಾರ್ ಟ್ವಿಟರ್ ಖಾತೆಯಲ್ಲಿ ಘೋಷಣೆಯೊಂದನ್ನು ಮಾಡಿದ್ದಾರೆ. ಉಪ್ಪಿ ಬರ್ತಡೇಯಂದು ಅಭಿಮಾನಿಗಳನ್ನು […]readmore
ಕಳೆದ ಎರಡು ದಿನಗಳ ಹಿಂದೆ ತಿರುಪತಿಯಲ್ಲಿ ಹಸೆಮಣೆ ಏರಿದ ತಮಿಳು ನಟಿ ಮಹಾಲಕ್ಷ್ಮೀ ಹಾಗೂ ನಿರ್ಮಾಪಕ ರವೀಂದರ್ ಚಂದ್ರಶೇಖರನ್ ಸಖತ್ ಟ್ರೋಲ್ ಗೆ ಒಳಗಾಗುತ್ತಿದ್ದಾರೆ. ಈ ನವ ಜೋಡಿಗಳನ್ನು ನೋಡಿ ನೆಟ್ಟಿಗರು ನಾನಾ ರೀತಿಯಲ್ಲಿ ಕಾಮೆಂಟ್ ಮಾಡುತ್ತಿದ್ದಾರೆ. ಆದ್ರೆ ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದ ಜೋಡಿ ಹಕ್ಕಿಗಳು ಹೊಸ ಜೀವನವನ್ನು ಎಂಜಾಯ್ ಮಾಡುತ್ತಿದ್ದಾರೆ. ನಟಿ ಹಾಗೂ ನಿರೂಪಕಿಯಾಗಿರುವ ಮಹಾಲಕ್ಷ್ಮೀ ಸಾಕಷ್ಟು ಸುಂದರವಾಗಿದ್ದು ಸಖತ್ ಸ್ಲೀಮ್ ಆಗಿದ್ದಾರೆ. ಆದರೆ ಮಹಾಲಕ್ಷ್ಮೀ ಕೈ ಹಿಡಿದಿರುವ ವರ ರವೀಂದರ್ ಮಹಾಲಕ್ಷ್ಮೀಗಿಂತ ನಾಲ್ಕು ಪಟ್ಟು […]readmore
