ನೂತನ ಶ್ರೀರ್ಷಿಕೆ ಹೊಂದಿರುವ ’ಧ್ರುವ 369’ ಚಿತ್ರದ ಮುಹೂರ್ತ ಸಮಾರಂಭವು ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಬಾ.ಮಾ.ಹರೀಶ್ ಆಗಮಿಸಿ ತಂಡಕ್ಕೆ ಶುಭ ಹಾರೈಸಿದರು. ರಮೇಶ್ಭಟ್ ಕ್ಲಾಪ್ ಮಾಡಿದರೆ, ’ಟಕ್ಕರ್’ ಖ್ಯಾತಿಯ ನಟ ಮನೋಜ್ಕುಮಾರ್ ಕ್ಯಾಮಾರ ಆನ್ ಮಾಡಿದರು. ಅಚಿಂತ್ಯ: ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮಾಡುತ್ತಿರುವ ಮಂಗಳೂರಿನ ಶ್ರೀಕೃಷ್ಣ ಕಾಂತಿಲ ಗ್ರಾಫಿಕ್ಸ್ ಡಿಸೈನರ್ ಹಾಗೂ ಉದ್ಯಮಿಯಾಗಿ ಗುರುತಿಸಿಕೊಂಡಿದ್ದಾರೆ. ಕಥೆ ಬರೆದು ನಿರ್ದೇಶನ ಮಾಡುತ್ತಿರುವ ಶಂಕರ್ನಾಗ್.ಎಸ್.ಎಸ್. ಅವರಿಗೆ ಎರಡನೇ ಅವಕಾಶ. ಆರೋಗ್ಯದಲ್ಲಿ […]readmore
ಹೈದರಾಬಾದ್: ತೆಲುಗು ಚಿತ್ರರಂಗದ ಖ್ಯಾತ ನಟ ಜೂನಿಯರ್ ಎನ್ ಟಿ ಆರ್ ರನ್ನು ಭೇಟಿ ಮಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ತೆಲುಗು ಚಿತ್ರರಂಗದಲ್ಲಿ ನೀವೊಂದು ರತ್ನ ಎಂದು ಹಾಡಿ ಹೊಗಳಿದ್ದಾರೆ. ಅಲ್ಲದೆ ಈ ಸಂದರ್ಭದಲ್ಲಿ ತೆಗೆದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಅಭಿಮಾನಿಗಳು ಜೂನಿಯರ್ ಎನ್ ಟಿ ಆರ್ ವ್ಯಕ್ತಿತ್ವವನ್ನು ಕೊಂಡಾಡಿದ್ದಾರೆ. ಕೆಲಸದ ನಿಮಿತ್ತ ಅಮಿತ್ ಶಾ ಅವರು ತೆಲಂಗಾಣಕ್ಕೆ ಬಂದಿದ್ದಾರೆ. ಈ ವೇಳೆ ಜೂನಿಯರ್ ಎನ್ ಟಿ ಆರ್ ರನ್ನು ಭೇಟಿ ಮಾಡಿದ್ದು, […]readmore
ನಟ ರಣವೀರ್ ಸಿಂಗ್ ಇತ್ತೀಚೆಗೆ ಜನಪ್ರಿಯ ಮ್ಯಾನಜೀನ್ ಪೇಪರ್ ಗಾಗಿ ನಗ್ನ ಫೋಟೋಶೂಟ್ ಮಾಡಿಸಿಕೊಂಡು ದೊಡ್ಡ ಸುದ್ದಿಯಾಗಿದ್ದಾರೆ. ರಣವೀರ್ ನಗ್ನ ಫೋಟೋ ಶೂಟ್ ಗೆ ಸಾಕಷ್ಟು ನೆಗೆಟೀವ್ ಕಾಮೆಂಟ್ ಬಂದಿದ್ದು ಈ ಬಗ್ಗೆ ದೂರ ದಾಖಲಾಗಿದೆ. ಆದರೆ ಪ್ರಕರಣದ ವಿಚಾರಣೆಗೆ ಹಾಜರಾಗಲು ರಣವೀರ್ ಸಿಂಗ್ ಹಿಂದೇಟು ಹಾಕಿದ್ದಾರೆ. ಇಂದು (ಆಗಸ್ಟ್ 22) ಮುಂಬೈ ಪೊಲೀಸರ ರಣವೀರ್ ಸಿಂಗ್ ವಿಚಾರಣೆಗೆ ಒಳಪಡಬೇಕು. ಆದರೆ ಕೆಲವೊಂದು ಕಾರಣಗಳನ್ನು ನೀಡಿ ವಿಚಾರಣೆಯಿಂದ ತಪ್ಪಿಸಿಕೊಂಡಿದ್ದಾರೆ. ವಿಚಾರಣೆಗೆ ಹಾಜರಾಗಲು ರಣವೀರ್ ಸಿಂಗ್ ಎರಡು ವಾರಗಳ […]readmore
ಜೀ ಕನ್ನಡದಲ್ಲಿ ಪ್ರಸಾರವಾಗುವ ಖ್ಯಾತ ಜೊತೆ ಜೊತೆಯಲಿ ಧಾರಾವಾಹಿಯಲ್ಲಿ ಇನ್ನು ಮುಂದೆ ಆರ್ಯವರ್ಧನ್ ಪಾತ್ರಧಾರಿ ಅನಿರುದ್ಧ್ ಇರುವುದಿಲ್ಲ ಎಂದು ವಾಹಿನಿ ಸ್ಪಷ್ಟ ಪಡಿಸಿದೆ. ಈ ಮಧ್ಯೆ ಅನಿರುದ್ಧ್ ಅವಕಾಶ ನೀಡಿದರೆ ಧಾರಾವಾಹಿಯಲ್ಲಿ ನಟಿಸುವುದಾಗಿ ಹೇಳಿದ್ದಾರೆ. ಆದರೆ ಇದಕ್ಕೆ ಧಾರಾವಾಹಿ ತಂಡ ಸುತಾರಾಂ ಒಪ್ಪುವುದು ಅನುಮಾನ ಎಂಬಂತಾಗಿದೆ. ಧಾರಾವಾಹಿಯಿಂದ ಕೈ ಬಿಟ್ಟಿರುವ ಬೆನ್ನಲ್ಲೆ ಪ್ರತಿಕ್ರಿಯೆ ನೀಡಿರುವ ಅನಿರುದ್ಧ್ ನಾಲ್ಕು ಗೋಡೆ ಮಧ್ಯೆ ಜಗಳವಾಡಿರೋದು ಬೀದಿಗೆ ತರಬಾರದು ಎಂದು ಬೇಸರ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅನಿರುದ್ಧ್, ನಾನು ಕೆಲಸ ಮಾಡ್ತಿರೋ […]readmore
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿ 10 ತಿಂಗಳಾಗಿದೆ. ಆದರೆ ಇಂದಿಗೂ ಲಕ್ಷಾಂತರ ಅಭಿಮಾನಿಗಳ ಮನಸ್ಸಲ್ಲಿ ಅಪ್ಪು ಅಮರರಾಗಿದ್ದಾರೆ. ಅಪ್ಪು ಹೆಸರನ್ನು ಜೀವಂತವಾಗಿಡುವ ಕೆಲಸವನ್ನು ಅವರ ಅಭಿಮಾನಿಗಳು ಮಾಡ್ತಿದ್ದಾರೆ. ಇದೀಗ ನಟ ಶಿವರಾಜ್ ಕುಮಾರ್ ಮಗುವೊಂದಕ್ಕೆ ಅಪ್ಪು ಹೆಸರನ್ನು ನಾಮಕರಣ ಮಾಡಿದ್ದಾರೆ. ಅಭಿಮಾನಿಗಳು ಅಪ್ಪು ಅವರನ್ನು ನಟ ಶಿವರಾಜ್ ಕುಮಾರ್ ಅವರಲ್ಲಿ ಕಾಣುತ್ತಿದ್ದಾರೆ. ಅಲ್ಲದೆ ಅಪ್ಪು ಅವರು ಬಿಟ್ಟು ಹೋಗಿರುವ ಕೆಲಸಗಳನ್ನು ಶಿವರಾಜ್ ಕುಮಾರ್ ಮುಂದುವರೆಸಿಕೊಂಡು ಹೋಗ್ತಿದ್ದಾರೆ. ಮೈಸೂರಿನ ಮಕ್ಕಳ ಜವಬ್ದಾರಿಯನ್ನು ಶಿವಣ್ಣ ದಂಪತಿಗಳು ನಡೆಸಿಕೊಂಡು […]readmore
ಇಸ್ಲಮಾಬಾದ್: ‘ಬುಲ್ಬುಲ್-ಎ-ಪಾಕಿಸ್ತಾನ’ ಎಂದೇ ಖ್ಯಾತರಾಗಿದ್ದ ಪಾಕಿಸ್ತಾನದ ಹಿರಿಯ ಗಾಯಕಿ ನಯ್ಯಾರ ನೂರ್ ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ 71 ವರ್ಷದ ನಯ್ಯಾರ ನೂರ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಯ್ಯಾರ ಮೃತಪಟ್ಟಿದ್ದಾರೆ. ಈ ಬಗ್ಗೆ ನಯ್ಯಾರ ಅವರ ಸೋದರಳಿಯ ರಾಣಾ ಜೈದಿ ಟ್ವಿಟ್ಟರ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ನನ್ನ ಪ್ರೀತಿಯ ಚಿಕ್ಕಮ್ಮ ನಯ್ಯಾರ ನೂರ್ ಅವರ ನಿಧನವನ್ನು ನಾನು ಭಾರವಾದ ಹೃದಯದಿಂದ ಘೋಷಿಸುತ್ತೇನೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಸುಮಧುರ ಕಂಠಕ್ಕಾಗಿ […]readmore
ಸಿನಿಮಾ ರಂಗಕ್ಕೂ ರಾಜಕೀಯಕ್ಕೂ ಅವಿನಾಭಾವ ಸಂಬಂಧ. ಈಗಾಗ್ಲೆ ಬಣ್ಣದ ಬದುಕಿನ ಸಾಕಷ್ಟು ಮಂದಿ ರಾಜಕೀಯಕ್ಕೆ ಎಂಟ್ರಿಕೊಟ್ಟು ಸದ್ದು ಮಾಡಿದ್ದಾರೆ. ಇದೀಗ ಬಹುಭಾಷಾ ನಟಿ ತ್ರಿಷಾ ರಾಜಕೀಯಕ್ಕೆ ಎಂಟ್ರಿಕೊಡ್ತಾರೆ ಎಂಬ ಸುದ್ದಿ ತಮಿಳು ನಾಡಿನಲ್ಲಿ ಸಂಚಲನ ಮೂಡಿಸಿದೆ. ಮುಂದಿನ ದಿನಗಳಲ್ಲಿ ತ್ರಿಷಾ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎನ್ನಲಾಗುತ್ತಿದೆ. ತ್ರಿಷಾರ ಈ ನಡೆ ಚರ್ಚೆಗೆ ಕಾರಣವಾಗಿದೆ. ತಮಿಳು ಸಿನಿಮಾ ರಂಗದ ಸಾಕಷ್ಟು ನಟ, ನಟಿಯರು ರಾಜಕೀಯ ರಂಗದಲ್ಲಿ ಹೆಸರು ಮಾಡಿದ್ದಾರೆ. ಅಲ್ಲದೆ ತಮಿಳು ನಾಡಿನಲ್ಲಿ ಅತಿ ಹೆಚ್ಚು ಬಾರಿ ಮುಖ್ಯ […]readmore
ಕ್ರೇಜಿಸ್ಟಾರ್ ರವಿಚಂದ್ರನ್ ನಟನೆಯ ನೀಲಕಂಠ, ಹೂ, ದರ್ಶನ್ ನಟನೆಯ ಇಂದ್ರ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿರುವ ಬಹುಭಾಷಾ ನಟಿ ನಮಿತಾ ಕೃಷ್ಣ ಜನ್ಮಾಷ್ಟಮಿ ದಿನದಂದು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಈ ವಿಷಯವನ್ನು ಸ್ವತಃ ನಮಿತಾ ಸೋಷಿಯಲ್ ಮೀಡಿಯಾದ ಮೂಲಕ ಬಹಿರಂಗ ಪಡಿಸಿದ್ದಾರೆ. ಪತಿ ಹಾಗೂ ಮಕ್ಕಳ ಜೊತೆಗಿರುವ ಪೋಟೋವನ್ನೂ ನಮಿತಾ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. 2017ರಲ್ಲಿ ಚೆನ್ನೈ ಮೂಲಕ ವೀರೇಂದ್ರ ಚೌಧರಿ ಜೊತೆ ಹಸೆ ಮಣೆ ಏರಿದ್ದ ನಮಿತಾ ನಾಲ್ಕು ವರ್ಷಗಳ ಬಳಿಕ ಮುದ್ದು ಮಕ್ಕಳಿಗೆ […]readmore
ಶಿವ 143 ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಸಿನಿ ರಂಗಕ್ಕೆ ಹೊಸ ಹಾಗೂ ಭರವಸೆಯ ನಾಯಕನ ಎಂಟ್ರಿಯಾಗಿದೆ. ಡಾ.ರಾಜ್ ಕುಮಾರ್ ಮೊಮ್ಮಗ, ನಟ ರಾಮ್ ಕುಮಾರ್ ಪುತ್ರ ಧೀರೇನ್ ರಾಮ್ ಕುಮಾರ್ ಮೊದಲ ಸಿನಿಮಾದಲ್ಲೇ ಸಾಕಷ್ಟು ಭರವಸೆ ಮೂಡಿಸಿದ್ದಾರೆ. ಈಗಾಗ್ಲೆ ಬಿಡುಗಡೆ ಆಗಿರೋ ಶಿವ 143 ಸಿನಿಮಾದ ಟ್ರೈಲರ್ ಹಾಗೂ ಹಾಡುಗಳು ಸಾಕಷ್ಟು ಸದ್ದು ಮಾಡಿದ್ದು ಆಗಸ್ಟ್ 26ಕ್ಕೆ ಸಿನಿಮಾ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಅಂದಹಾಗೆ ಶಿವ 143 ಸಿನಿಮಾ ಆರಂಭವಾಗಿ ಬಹಳ ಸಮಯವೇ ಕಳೆದು ಹೋಗಿದೆ. ಆದರೆ […]readmore
ಕ್ರೇಜಿಸ್ಟಾರ್ ರವಿಚಂದ್ರನ್ ಕುಟುಂಬದಲ್ಲಿ ಮದುವೆ ಸಂಭ್ರಮ ಶುರುವಾಗಿದೆ. ಇಂದಿನಿಂದ ಮೂರು ದಿನಗಳ ಕಾಲ ಬೆಂಗಳೂರಿನ ಅರಮನೆ ಮೈದಾನದಲ್ಲಿ ಮದುವೆ ಸಮಾರಂಭ ನಡೆಯಲಿದೆ. ಒಟ್ಟು ಮೂರು ದಿನಗಳ ಕಾಲ ವಿವಿಧ ಶಾಸ್ತ್ರಗಳನ್ನು ಕುಟುಂಬ ಹಮ್ಮಿಕೊಂಡಿದೆ. ಇವತ್ತು ಈಗಾಗಲೇ ಅರಿಶಿನ ಮತ್ತು ಮೆಹಂದಿ ಶಾಸ್ತ್ರಗಳು ಮುಗಿದಿದ್ದು, ಸಂಜೆ ವಧುವಿನ ಕಡೆಯಿಂದ ಆರತಕ್ಷತೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇಂದು ಸಂಜೆ ವಧುವಿನ ಕಡೆಯಿಂದ ಹಮ್ಮಿಕೊಂಡಿರುವ ಆರತಕ್ಷತೆ ಕಾರ್ಯಕ್ರಮಕ್ಕೆ ಕೇವಲ ಆಪ್ತರಿಗಷ್ಟೇ ಆಹ್ವಾನ ನೀಡಲಾಗಿದೆ. ಆಗಸ್ಟ್ 21 ರಂದು ಮದುವೆ ಶಾಸ್ತ್ರಗಳು ನಡೆಯಲಿದ್ದು, ಮನೋರಂಜನ್ […]readmore
