• June 21, 2026

karnatakaspecial.in

https://karnatakaspecial.in/

10ಕೋಟಿ ಆಫರ್ ರಿಜೆಕ್ಟ್ ಮಾಡಿದ ನಟ ಅಲ್ಲು ಅರ್ಜುನ್

ಟಾಲಿವುಡ್ ಸೂಪರ್ ಸ್ಟಾರ್ ಅಲ್ಲು ಅರ್ಜುನ್ ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದಾರೆ. ಅದರಲ್ಲೂ  ‘ಪುಷ್ಪ: ದಿ ರೈಸ್’ ಚಿತ್ರದ ಬಳಿಕ ಅಲ್ಲು ಅರ್ಜುನ್ ಅವರ ಫ್ಯಾನ್ ಮತ್ತಷ್ಟು ಹೆಚ್ಚಿದೆ. ಸ್ಟಾರ್ ನಟ ಅಲ್ಲು ಅರ್ಜುನ್ ಗೆ ಜಾಹೀರಾತು ಕ್ಷೇತ್ರದಲ್ಲೂ ಸಾಕಷ್ಟು ಬಹುಬೇಡಿಕೆಯಿದೆ. ಕೈತುಂಬಾ ಹಣ ಬರುತ್ತೆ ಅಂದರೆ ಸೆಲೆಬ್ರಿಟಿಗಳು ಜಾಹಿರಾತುಗಳಲ್ಲಿ ನಟಿಸಲು ಹಿಂದೆ ಮುಂದೆ ನೋಡಲ್ಲ. ಆದರೆ ಅಲ್ಲು ಅರ್ಜುನ್ 10 ಕೋಟಿ ರೂಪಾಯಿ ಆಫರ್ ನ ನಿರಾಯಾಸವಾಗಿ ನಿರಾಕರಿಸಿದ್ದಾರೆ. ಸದ್ಯ ಅಲ್ಲು ಅರ್ಜುನ್ ಬ್ರ್ಯಾಂಡ್ ಎಂಡೋರ್ಸ್‌ಮೆಂಟ್‌ಗಳಿಗೆ 7.5 […]Read More

ಸ್ಯಾಂಡಲ್ ವುಡ್ ಹಿರಿಯ ನಿರ್ಮಾಪಕ ನರ್ಗೀಸ್ ಬಾಬು ನಿಧನ

ಸ್ಯಾಂಡಲ್ ವುಡ್ ನ ಖ್ಯಾತ ನಿರ್ಮಾಪಕ ನರ್ಗೀಸ್ ಬಾಬು ನಿನ್ನೆ ಇಹಲೋಕ ತ್ಯಜಿಸಿದ್ದಾರೆ. ವಯೋಸಹಜ ಸಮಸ್ಯೆಯಿಂದ ಬಳಲುತ್ತಿದ್ದ ನರ್ಗೀಸ್ ಅವರು ಅದಕ್ಕಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ನಾಲ್ಕು ದಶಕಗಳಿಂದ ಕನ್ನಡ ಚಿತ್ರರಂಗದಲ್ಲಿ ನರ್ಗೀಸ್ ಬಾಬು ಸಕ್ರಿಯರಾಗಿದ್ದರು. ಡಿಸ್ಟ್ರಿಬ್ಯೂಟರ್‌, ಪ್ರೊಡಕ್ಷನ್ ಕಂಟ್ರೋಲರ್, ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್, ಪ್ರೊಡ್ಯೂಸರ್ ಆಗಿ ಕನ್ನಡ ಸಿನಿಮಾರಂಗದಲ್ಲಿ ನರ್ಗೀಸ್ ಬಾಬು ಗುರುತಿಸಿಕೊಂಡಿದ್ದರು. 2014ರಲ್ಲಿ ರಿಲೀಸ್ ಆದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ರಮ್ಯಾ […]Read More

ಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ನಿಧನ: ಕಂಬನಿ ಮಿಡಿದ ಗಣ್ಯರು

ಬೆಂಗಳೂರು: ಖ್ಯಾತ ಗಾಯಕ, ವಕೀಲ ಶಿವಮೊಗ್ಗ ಸುಬ್ಬಣ್ಣ ನಿನ್ನೆ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಶಿವಮೊಗ್ಗ ಸುಬ್ಬಣ್ಣ ನಿಧನಕ್ಕೆ ಮುಖ್ಯಮಂತ್ರಿಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಬಿಎಸ್ ಎಸ್ ಯಡಿಯೂರಪ್ಪ, ಹೆಚ್ ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. ಸಂಗೀತ ಕುಟುಂಬದ ಹಿನ್ನೆಲೆಯಿಂದ ಬಂದ ಸುಬ್ಬಣ್ಣ ಅವರು ಸುಗಮ ಸಂಗೀತ ಹಾಗೂ ಚಲನಚಿತ್ರಗಳಲ್ಲಿ ಹಾಡುವ ಮೂಲಕ ತಮ್ಮದೇ ಛಾಪು ಮೂಡಿದ್ದರು. 1979ರಲ್ಲಿ ತೆರೆಕಂಡ ಕಾಡು ಕುದುರೆ ಸಿನಿಮಾದ ಕಾಡು ಕುದುರೆ […]Read More

ವಿಮಾನದೊಳಗೆ ಸಿಗರೇಟ್ ಸೇದುತ್ತಾ ವಿಡಿಯೋ ಮಾಡಿದ ವ್ಯಕ್ತಿ: ಸಿಂಧಿಯಾಗೆ ಕ್ಲಾಸ್ ತೆಗೆದುಕೊಂಡ ನೆಟ್ಟಿಗರು

ನವದೆಹಲಿ: ವಿಮಾನದಲ್ಲಿ ಪ್ರಯಾಣಿಸ ಬೇಕು ಅಂದ್ರೆ ಕೆಲವೊಂದು ರೂಲ್ಸ್ ಗಳಿರುತ್ತವೆ. ಅದನ್ನು ಪ್ರಯಾಣಿಕರು ಚಾಚು ತಪ್ಪದೆ ಪಾಲಿಸಬೇಕಾಗುತ್ತದೆ. ಆದ್ರೆ ಇಲ್ಲೊಬ್ಬ ವ್ಯಕ್ತಿ ರೂಲ್ಸ್ ಬ್ರೇಕ್ ಮಾಡಿದ ಕಾರಣಕ್ಕೆ ಇದೀಗ ತೊಂದರೆಗೆ ಸಿಲುಕಿದ್ದಾನೆ.   ಸ್ಪೈಸ್‍ಜೆಟ್ ವಿಮಾನದೊಳಗೆ ವ್ಯಕ್ತಿಯೋರ್ವ ಸಿಗರೇಟ್ ಸೇದಿರುವ ವೀಡಿಯೋ ಸದ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾಗೆ ಟ್ಯಾಗ್ ಮಾಡಿ ಟೀಕೆ ವ್ಯಕ್ತಪಡಿಸಿದ್ದಾರೆ, ಸದ್ಯ ಜ್ಯೋತಿರಾದಿತ್ಯ ಸಿಂಧಿಯಾ ಪ್ರತಿಕ್ರಿಯಿಸಿದ್ದು ಸಿಗರೇ           ಟು ಸೇದಿದ […]Read More

ನಟ ಸೂರ್ಯ, ನಿರ್ದೇಶಕ ಜ್ಞಾನವೇಲ್ ವಿರುದ್ಧ ದಾಖಲಾದ FIR ರದ್ದು

ಚೆನ್ನೈ: ತಮಿಳು ಸ್ಟಾರ್ ನಟ ಸೂರ್ಯ ನಟನೆಯ ಸೂಪರ್ ಹಿಟ್ ಜೈಭೀಮ್ ಸಿನಿಮಾದಲ್ಲಿ ವಣ್ಣಿಯಾರ್ ಸಮುದಾಯವನ್ನು ತಪ್ಪಾಗಿ ಬಿಂಬಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧ ಪಟ್ಟಂತೆ ನಟ ಸೂರ್ಯ ಮತ್ತು ನಿರ್ದೇಶಕ ಜ್ಞಾನವೇಲ್ ರಾಜ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಮದ್ರಾಸ್ ಹೈಕೋರ್ಟ್ ರದ್ದುಪಡಿಸಿದೆ. ಜೈಭೀಮ್ ಸಿನಿಮಾದಲ್ಲಿ ಮಣ್ಣಿಯಾರ್ ಸಮುದಾಯದ ಭಾವನೆಗಳಿಗೆ ಧಕ್ಕೆ ತರಲಾಗಿದೆ ಎಂದು ಆರೋಪಿಸಿ ಚೆನ್ನೈ ಮೂಲದ ವಕೀಲ ಕೆ.ಸಂತೋಷ್ ಎಂಬುವವರು ಮೆಟ್ರೋಪಾಲಿಯನ್ ಮ್ಯಾಜಿಸ್ಟ್ರೇಟ್ ಮೆಟ್ಟಿಲೇರಿದ್ದರು. ಬಳಿಕ ಸೂರ್ಯ ಹಾಗೂ ಜ್ಞಾನವೇಲ್ ರಾಜು ಅರ್ಜಿ ಸಲ್ಲಿಸಿದ್ದು, ಅರ್ಜಿ […]Read More

‘ಗಾಳಿಪಟ 2’ ಪ್ರೀಮಿಯರ್ ಗೆ ಭರ್ಜರಿ ರೆಸ್ಪಾನ್ಸ್: ರಿಲೀಸ್ ಗೂ ಮೊದಲೇ ಸದ್ದು

ಬೆಂಗಳೂರು: ನಾಳೆ ಸ್ಯಾಂಡಲ್ ವುಡ್ ನಲ್ಲಿಎರಡು ಬಹು ನಿರೀಕ್ಷಿತ ಸಿನಿಮಾಗಳು ತೆರೆಗೆ ಬರ್ತಿದೆ. ಒಂದು ಕ್ರೇಜಿಸ್ಟಾರ್ ರವಿಚಂದ್ರನ್ ನಟನೆಯ ರವಿಬೋಪಣ್ಣ ಮತ್ತೊಂದು ಯೋಗರಾಜ್ ಭಟ್ ನಿರ್ದೇಶನದ ಗಾಳಿಪಟ 2 ಸಿನಿಮಾ. ಈ ಹಿನ್ನೆಲೆಯಲ್ಲಿ ಇಂದು ಭಟ್ಟರ ತಂಡ ಪ್ರೀಮಿಯರ್ ಶೋ ಆಯೋಜಿಸಿದ್ದು ಸಿನಿ ರಂಗದ ಸಾಕಷ್ಟು ಗಣ್ಯರು ಸಿನಿಮಾ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಂದಹಾಗೆ ಈಗಾಗ್ಲೆ ಬಿಡುಗಡೆ ಆಗಿರೋ ಗಾಳಿಪಟ 2 ಚಿತ್ರದ ಟ್ರೈಲರ್ ಹಾಗೂ ಹಾಡುಗಳು ಪ್ರೇಕ್ಷಕರ ಮನ ಗೆದ್ದಿದ್ದು ಸಿನಿಮಾ ನೋಡೋಕೆ ತುದಿಗಾಲಲ್ಲಿ ನಿಂತಿದ್ದಾರೆ. […]Read More

ಪ್ರಧಾನಿ ಮೋದಿಗೆ ರಾಖಿ ಕಟ್ಟಿದ ಮಕ್ಕಳು

ಇಂದು ಎಲ್ಲೆಡೆ ರಾಖಿ ಹಬ್ಬದ ಸಂಭ್ರಮ. ಸಹೋದರಿಯರು ತಮ್ಮ ಸಹೋದರರಿಗೆ ರಾಖಿ ಕಟ್ಟಿ ಸಂಭ್ರಮಿಸುತ್ತಾರೆ. ಅಂತೆಯೇ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ನಿವಾಸದಲ್ಲಿ ರಕ್ಷಬಂಧನವನ್ನು ಆಚರಿಸಿದ್ದು, ಈ ವೇಳೆ ತಮ್ಮ ನಿವಾಸದ ಸಿಬ್ಬಂದಿಯ ಹೆಣ್ಣುಮಕ್ಕಳು ಮೋದಿಗೆ ರಾಖಿ ಕಟ್ಟಿದರು. ಮೋದಿ ಮನೆಯಲ್ಲಿ ನಡೆದ ರಕ್ಷಾ ಬಂಧನ ಕಾರ್ಯಕ್ರಮದಲ್ಲಿ ಸಾಕಷ್ಟು ಮಂದಿ ಮೋದಿಗೆ ರಕ್ಷಾಬಂಧನ ಕಟ್ಟಿ ಶುಭ ಹಾರೈಸಿದ್ದಾರೆ. ಮೋದಿ ಕಚೇರಿಯಲ್ಲಿ ಕೆಲಸ ಮಾಡುವ ಕಸ ಗುಡಿಸುವ, ತೋಟಗಾರರು, ಚಾಲಕರು ಸೇರಿದಂತೆ ಇನ್ನಿತರೆ ಕೆಲಸ ಮಾಡುವ ಸಿಬ್ಬಂದಿಯ […]Read More

ರಾಕಿಂಗ್ ಸ್ಟಾರ್ ಮನೆಯಲ್ಲಿ ರಾಖಿ ಹಬ್ಬದ ಸಂಭ್ರಮ

ಇಂದು ಎಲ್ಲೆಡೆ ರಾಖಿ ಹಬ್ಬದ ಸಂಭ್ರಮ.  ಅಕ್ಕ, ತಂಗಿಯರು ತಮ್ಮ ಸಹೋದರನಿಗೆ ರಾಖಿ ಕಟ್ಟಿ ಆಶೀರ್ವಾದ ಪಡೆದುಕೊಳ್ಳುತ್ತಾರೆ. ಅಂತೆಯೇ ನ್ಯಾಷನಲ್ ಸ್ಟಾರ್ ಯಶ್ ಮನೆಯಲ್ಲೂ ರಾಖಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಪ್ರತಿ ವರ್ಷದಂತೆ ಈ ವರ್ಷ ಕೂಡ ಯಶ್ ಸಹೋದರಿ ನಂದಿಗೆ ಅಣ್ಣನಿಗೆ ರಾಖಿ ಕಟ್ಟಿ ಸಂಭ್ರಮಿಸಿದ್ದಾರೆ. ಇದರ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಸಹೋದರ್ ಯಶ್ ಗೆ ಆರತಿ ಬೆಳಗಿ, ತಿಲಕವಿಟ್ಟು,ರಾಖಿ ಕಟ್ಟಿ ಖುಷಿ ಪಟ್ಟಿದ್ದಾರೆ. ಸಹೋದರಿ ರಾಖಿ ಕಟ್ಟಿದ ಫೋಟೋಗಳನ್ನು ಯಶ್ ಸೋಷಿಯಲ್ […]Read More

ಧನ್ವೀರ್ ಗೌಡನಿಗೆ ಜೋಡಿಯಾದ ರೀಷ್ಮಾ ನಾಣಯ್ಯ

ಪ್ರೇಮ್ ನಿರ್ದೇಶನದ ಏಕ್ ಲವ್ ಯಾ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ಕೊಡಗಿನ ಬೆಡಗಿ ರೀಷ್ಮಾ ನಾಣಯ್ಯ ಸಾಲು ಸಾಲು ಸಿನಿಮಾಗಳಲ್ಲಿ ಅವಕಾಶ ಗಿಟ್ಟಿಸಿಕೊಳ್ತಿದ್ದಾರೆ. ಮೊದಲ ಚಿತ್ರದಲ್ಲೇ ಭರವಸೆ ಮೂಡಿಸಿದ ರೀಷ್ಮಾ ಇದೀಗ ದನ್ವೀರ್ ಗೆ ಜೋಡಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಬೈ ಟು ಲವ್ ಸಿನಿಮಾದ ಬಳಿಕ ದನ್ವೀರ್ ಮಾವನ ಸಿನಿಮಾದಲ್ಲಿ ನಟಿಸುತ್ತಿದ್ದ ಭರದಿಂದ ಚಿತ್ರೀಕರಣ ನಡೆಯುತ್ತಿದೆ. ಶಂಕರ್ ರಾಮನ್ ನಿರ್ದೇಶನದ ಮಾವನ ಸಿನಿಮಾಗೆ ಇದೀಗ ರೀಷ್ಮಾ ನಾಣಯ್ಯ ಎಂಟ್ರಿಕೊಟ್ಟಿದ್ದಾರೆ. ಈಗಾಗ್ಲೆ ರೀಷ್ಮಾ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. […]Read More

ಲೈಂಗಿಕ ಸಂಪರ್ಕ ಬಯಸಿ ಬರುವ ಹೆಣ್ಣುಮಕ್ಕಳ ಬಗ್ಗೆ ಎಚ್ಚರವಿರಲಿ: ಶಕ್ತಿಮಾನ್ ಖ್ಯಾತಿಯ ಮುಖೇಶ್

ಸೋಷಿಯಲ್ ಮೀಡಿಯಾದಲ್ಲಿ ಹುಡುಗಿಯರನ್ನು ಬಳಸಿಕೊಂಡು ಹನಿಟ್ರ್ಯಾಪ್ ಮಾಡುವವರ ಸಂಖ್ಯೆ ಹೆಚ್ಚುತ್ತಿದ್ದು ಅಂಥವರ ಬಗ್ಗೆ ಹುಡುಗರು ಎಚ್ಚರಿಕೆಯಿಂದ ಇರುವಂತೆ ಶಕ್ತಿಮಾನ್ ಖ್ಯಾತಿಯ ಮುಖೇಶ್ ಸಲಹೆ ನೀಡಿದ್ದಾರೆ. ಇನ್​ಸ್ಟಾಗ್ರಾಮ್​, ಫೇಸ್​ಬುಕ್​ ಸೇರಿದಂತೆ ಹಲವು ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಹುಡುಗಿಯರ ಫೋಟೋಗಳನ್ನು ಹಾಕಲಾಗಿರುತ್ತದೆ. ಹುಡುಗಿಯರ ಬೆತ್ತಲೆ ದೇಹ ನೋಡಬೇಕಾದರೆ ಹಣ ಪೇ ಮಾಡಿ ವಿಡಿಯೋ ಕಾಲ್ ಮಾಡಿ ಎಂದು ಆ ಖಾತೆಗಳಲ್ಲಿ ಬರೆಯಲಾಗಿರುತ್ತದೆ. ಈ ರೀತಿಯ ಜನರನ್ನು ನಂಬಲೇಬಾರದು. ಅಲ್ಲದೆ ಲೈಂಗಿಕ ಸಂಪರ್ಕ ಹೊಂದಬೇಕು ಎಂದು ಬರುವ ಹುಡುಗಿಯರನ್ನು ನಂಬಲೇ ಬೇಡಿ […]Read More

Phone icon
Call Now
Reach us!
WhatsApp icon
Chat Now