• June 21, 2026

karnatakaspecial.in

https://karnatakaspecial.in/

ಸ್ಟಂಟ್ ಮಾಡುವ ವೇಳೆ ಅವಘಡ: ಕಾಲು ಮುರಿದುಕೊಂಡ ಶಿಲ್ಪಾ ಶೆಟ್ಟಿ

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಸಿನಿಮಾ ಶೂಟಿಂಗ್ ಸಂದರ್ಭದಲ್ಲಿ ಪೆಟ್ಟು ಮಾಡಿಕೊಂಡಿದ್ದಾರೆ. ಸ್ಟಂಟ್ಸ್ ಮಾಡುವ ವೇಳೆ ಈ ಅವಘಡ ಸಂಭವಿಸಿದ್ದು ಸದ್ಯ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಬಿಟೌನ್ ಬ್ಯೂಟಿ ನಟಿ ಶಿಲ್ಪಾ ಶೆಟ್ಟಿ ಇಂದಿಗೂ ಬೇಡಿಕೆ ಉಳಿಸಿಕೊಂಡಿದ್ದಾರೆ. ರಿಯಾಲಿಟಿ ಶೋ ಜೊತೆಗೆ ಸಿನಿಮಾಗಳಲ್ಲೂ ಶಿಲ್ಪಾ ಬ್ಯುಸಿಯಾಗಿದ್ದಾರೆ. ಸದ್ಯ ಶಿಲ್ಪಾ ಶೆಟ್ಟಿ, ಹೊಸ ಪ್ರಾಜೆಕ್ಟ್ `ಇಂಡಿಯನ್ ಪೊಲೀಸ್ ಫೋರ್ಸ್’ ವೆಬ್ ಸಿರೀಸ್‌ನ ಚಿತ್ರೀಕರಣದ ಸಂದರ್ಭದಲ್ಲಿ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದು ಚಿಕಿತ್ಸೆ ಪಡೆದಿದ್ದಾರೆ. ಕಾಲಿಗೆ ಬ್ಯಾಡೇಜ್ ಹಾಕಿಕೊಂಡು ವೀಲ್ ಚೇರ್ ಮೇಲೆ […]Read More

ಕನ್ನಡದ ಬಿಗ್ ಬಾಸ್ ಮನೆಯಲ್ಲಿ ಶುರವಾಯ್ತು ಲವ್ ಕಹಾನಿ

ಕನ್ನಡದ ಬಿಗ್ ಬಾಸ್ ಓಟಿಟಿ ಆರಂಭವಾಗಿ ಕೆಲ ದಿನಗಳೇ ಕಳೆದು ಹೋಗಿದೆ. ಇದುವರೆಗೂ ತಮ್ಮ ಜೀವನದ ಘಟನೆಗಳನ್ನು ಸ್ಪರ್ಧಿಗಳು ಮೆಲುಕು ಹಾಕಿ ಕಣ್ಣೀರು ಹಾಕಿದ್ದರು. ಇದೀಗ ದೊಡ್ಮನೆ ಒಳಗೆ ಲವ್ವಿ ಡವ್ವಿ ಶುರುವಾಗಿದೆ. ದೊಡ್ಮನೆ ಒಳಗೆ ನಟ ರಾಕೇಶ್ ಹಾಗೂ ಸ್ಪೂರ್ತಿ ಗೌಡ ದಿನಕಳೆದಂತೆ ಹತ್ತಿರವಾಗುತ್ತಿದ್ದು ಈ ವಿಚಾರ ಸಾಕಷ್ಟು ಸುದ್ದಿಯಾಗುತ್ತಿದೆ. ಬಿಗ್ ಬಾಸ್ ಮನೆ ಕಾಲಿಟ್ಟ ವಾರದೊಳಗೆ ಇಬ್ಬರ ಮಧ್ಯೆ ಪ್ರೀತಿ ಹುಟ್ಟಿಕೊಂಡಿರೋದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಬಿಗ್ ಬಾಸ್ ಮನೆಯಲ್ಲಿ ರಾಕೇಶ್ ಹಾಗೂ ಸ್ಪೂರ್ತಿ […]Read More

ರಿಲೀಸ್ ಗೆ ರೆಡಿಯಾದ ಹೊಸಬರ ‘ಧಮ್’ ಸಿನಿಮಾ

ಕಿಚ್ಚ ಸುದೀಪ್ ನಟನೆಯ 2002ರಲ್ಲಿ ತೆರೆಗೆ ಬಂದ ಧಮ್ ಸಿನಿಮಾ ಸೂಪರ್ ಹಿಟ್ ಆಗಿತ್ತು. ಇದೀಗ ಅದೇ ಹೊಸರಿನಲ್ಲಿ ಹೊಸಬರ ತಂಡವೊಂದು ಸಿನಿಮಾವನ್ನು ಕಂಪ್ಲೀಟ್ ಮಾಡಿದೆ. ಈಗಾಗ್ಲೆ ಚಿತ್ರದ ಟ್ರೈಲರ್ ಹಾಗೂ ಹಾಡುಗಳು ಪ್ರೇಕ್ಷಕರ ಮನ ಗೆಲ್ಲುವಲ್ಲಿ ಸಕ್ಸಸ್ ಆಗಿದೆ. ಅಂದಹಾಗೆ ಈ ಸಿನಿಮಾಗೆ ಮೊದಲು ಸಂಚಾರಿ ವಿಜಯ್ ರನ್ನು ಹಿರೋ ಆಗಿ ಆಯ್ಕೆ ಮಾಡಿಕೊಳ್ಳುವ ಕುರಿತು ಮಾತುಕತೆ ನಡೆದಿದ್ದು. ಆದರೆ ಸಂಚಾರಿ ವಿಜಯ್ ಅವರ ದಿಡೀರ್ ನಿಧನದ ಹಿನ್ನೆಲೆಯಲ್ಲಿ ಶ್ರೀಜಿತ್ ನಾಯಕನಾಗಿ ನಟಿಸಿದ್ದಾರೆ. ವಿಆರ್ ಆರ್ […]Read More

ರಾಕಿಂಗ್ ಸ್ಟಾರ್ ಯಶ್ ನನ್ನ ಫೇವರಿಟ್ ನಟ ಎಂದ ನಾಗಚೈತನ್ಯ

ಟಾಲಿವುಡ್ ನಟ ನಾಗಚೈತನ್ಯ ಇದೇ ಮೊದಲ ಭಾರಿಗೆ ಬಿಟೌನ್ ಗೆ ಎಂಟ್ರಿಕೊಟ್ಟಿದ್ದಾರೆ. ಅಮೀರ್ ಖಾನ್ ನಟನೆಯ ಲಾಲ್ ಸಿಂಗ್ ಚಡ್ಡಾ ಚಿತ್ರದಲ್ಲಿ ನಾಗಚೈತನ್ಯ ಬಣ್ಣ ಹಚ್ಚಿದ್ದು ಇಂದು ಸಿನಿಮಾ ಸಾಕಷ್ಟು ಅದ್ದೂರಿಯಾಗಿ ರಿಲೀಸ್ ಆಗಿದೆ. ಲಾಲ್ ಸಿಂಗ್ ಚಡ್ಡಾ ಸಿನಿಮಾದ ಪ್ರಯುಕ್ತ ಮಾಧ್ಯಮಗಳ ಜೊತೆ ಮಾತನಾಡಿದ ನಾಗಚೈತನ್ಯ ಸಾಕಷ್ಟು ಇಂಟ್ರೆಸ್ಟಿಂಗ್ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ಇದೀಗ ನಾಗ ಚೈತನ್ಯ ಕನ್ನಡದ ಸ್ಟಾರ್, ಪ್ಯಾನ್ ಇಂಡಿಯಾ ಹೀರೋ ರಾಕಿಂಗ್ ಸ್ಟಾರ್ ಯಶ್ ಬಗ್ಗೆ ಮಾತನಾಡಿದ್ದಾರೆ.  ಆಂಗ್ಲ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ನಾಗ […]Read More

ಮನಸೂರೆಗೊಳ್ಳುತ್ತಿದೆ “ಮೇಡ್ ಇನ್ ಬೆಂಗಳೂರು” ಹಾಡು

……….ನಾನಾ ಊರುಗಳಿಂದ ನಾನಾ ಭಾಷೆಗಳನ್ನಾಡುವ ಜನ ಹಲವು ಕಾಲಗಳಿಂದ ಬೆಂಗಳೂರಿನಲ್ಲಿದ್ದಾರೆ. ಅಂತಹ ಬೆಂಗಳೂರಿನ ಕುರಿತಾಗಿ ಬರುತ್ತಿರುವ ಚಿತ್ರ “ಮೇಡ್ ಇನ್ ಬೆಂಗಳೂರು”. ಈ ಚಿತ್ರದ ” ಬನ್ನಿರೆ ಬೆಂಗಳೂರಿಗೆ” ಎಂಬ ಹಾಡನ್ನು ಖ್ಯಾತ ನಿರ್ದೇಶಕ ಭಗವಾನ್ ಬಿಡುಗಡೆ ಮಾಡಿದರು. ಚಿತ್ರದ ಪೋಸ್ಟರ್ ಹೆಸರಾಂತ ಪಿ ಆರ್ ಓ ಸುಧೀಂದ್ರ ವೆಂಕಟೇಶ್ ಅವರಿಂದ ಅನಾವರಣವಾಯಿತು. ಈ ಹಾಡನ್ನು ಹನ್ನೊಂದು  ಭಾಷೆಗಳನ್ನು ಬಳಸಿ ರಚಿಸಲಾಗಿದೆ.  ಜನಪ್ರಿಯ ಗಾಯಕರಾದ  ಶ್ರೀಹರ್ಷ ಎಂ.ಆರ್, ಕಂಬದ ರಂಗಯ್ಯ,  ರೋಹಿತ್ ಭಟ್, ಮದ್ವೇಶ್ ಭಾರದ್ವಾಜ್, ಮೇಘ […]Read More

11ರ ಹರೆಯದ ಬಾಲಕನ ‘ಮಿಥ್ಯ’ ಕಥೆ ಹೇಳಲು ಹೊರಟ ರಕ್ಷಿತ್ ಶೆಟ್ಟಿ

ಚಿತ್ರರಂಗ ಎಂದರೆ ಎಲ್ಲ ರೀತಿಯ ಸಿನಿಮಾಗಳನ್ನೂ ಮಾಡಬೇಕು. ಹೊಸ ಶೈಲಿಯ ಕಥೆಗಳನ್ನು, ಹೊಸ ಆಲೋಚನೆಗಳನ್ನು ಬರಮಾಡಿಕೊಳ್ಳಬೇಕು. ಹೊಸ ಯೋಚನೆಗಳಿರುವ ಕಥೆಗಾರರನ್ನು ಚಿತ್ರರಂಗದಲ್ಲಿ ತೊಡಗಿಸಿಕೊಳ್ಳುವಂತೆ ಮಾಡಬೇಕು. ಈ ನಿಟ್ಟಿನಲ್ಲಿ ಪರಂವಃ ಸ್ಟುಡಿಯೋಸ್​ ಹೆಜ್ಜೆ ಇಟ್ಟಿದ್ದು, ‘ಮಿಥ್ಯ’ ಅಂಥದ್ದೊಂದು ವಿನೂತನ ಪ್ರಯತ್ನವಾಗಲಿದೆ. ‘ಮಿಥ್ಯ’, ರಕ್ಷಿತ್​ ಶೆಟ್ಟಿ ನಿರ್ಮಾಣದ ಹೊಸ ಚಿತ್ರ. ಈ ಚಿತ್ರದ ಮೂಲಕ ಸುಮಂತ್​ ಭಟ್​ ಸ್ವತಂತ್ರ ನಿರ್ದೇಶಕರಾಗಿ ಕಾಲಿಡುತ್ತಿದ್ದಾರೆ. ತಮ್ಮ ಮೊದಲ ಪ್ರಯತ್ನದಲ್ಲೇ 11 ವರ್ಷದ ಬಾಲಕನ ಕಥೆಯನ್ನು ಹೇಳುವುದಕ್ಕೆ ಹೊರಟಿದ್ದಾರೆ. ಅವನ ನೋವು ಮತ್ತು ವಿಮೋಚನೆಯ […]Read More

ಗೃಹಸ್ಥಾಶ್ರಮಕ್ಕೆ ಕಾಲಿಟ್ಟ ‘ಕಮಲಿ’ ಖ್ಯಾತಿಯ ಅಂಕಿತಾ

ಕಿರುತೆರೆಯ ಜನಪ್ರಿಯ ಧಾರವಾಹಿ `ಕಮಲಿ’ ಖ್ಯಾತಿಯ ನಿಂಗಿ ಅಲಿಯಾಸ್ ಅಂಕಿತಾ ಇಂದು ಸುಹಾಸ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಹಿಂದೆ ಎಂಗೇಜ್ ಮೆಂಟ್ ಫೋಟೋ ಹಂಚಿಕೊಂಡಿದ್ದ ಅಂಕಿತಾ ಇಂದು ಗುರುಹಿರಿಯರ ಸಮ್ಮುಖದಲ್ಲಿ ಹಸೆಮಣೆ ಏರಿದ್ದಾರೆ. ಅಂಕಿತಾ ಮದುವೆಯಲ್ಲಿ ಕಮಲಿ ಧಾರವಾಹಿ ತಂಡ ಭಾಗಿಯಾಗಿದ್ದು ನವ ಜೋಡಿಗಳಿಗೆ ಶುಭ ಹಾರೈಸಿದ್ದಾರೆ. ಕಳೆದ ವರ್ಷ ನಿಶ್ಚಿತಾರ್ಥ ಮಾಡಿಕೊಂಡಿದ್ದ ಜೋಡಿ ಇಂದು ಅದ್ದೂರಿಯಾಗಿ ಗೃಹಸ್ಥಾಶ್ರಮಕ್ಕೆ ಕಾಲಿಟ್ಟಿದ್ದಾರೆ. ಕೆನಡಾದಲ್ಲಿ ನೆಲೆಸಿರುವ ಸುಹಾಸ್ ಫೋಟೋಗ್ರಾಫರ್ ಆಗಿ ಕೆಲಸ ಮಾಡುತ್ತಿದ್ದಾರೆ. ನವ ಜೋಡಿಗಳಿಗೆ ಕಿರುತೆರೆ […]Read More

ಖ್ಯಾತ ಹಾಸ್ಯ ನಟನಿಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಹಾಸ್ಯ ಪಾತ್ರಗಳ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಿದ್ದ ಹಾಸ್ಯ ನಟ ರಾಜು ಶ್ರೀವಾಸ್ತವ್ ಅವರಿಗೆ ಹೃದಯಾಘಾತವಾಗಿದೆ. ಜಿಮ್ ಮಾಡುತ್ತಿದ್ದ ವೇಳೆ ಹೃದಯಾಘಾತವಾಗಿ ಕುಸಿದು ಬಿದ್ದಿದ್ದು ಸದ್ಯ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ದಕ್ಷಿಣ ದೆಹಲಿಯಲ್ಲಿರುವ ಜಿಮ್‌ ಒಂದರಲ್ಲಿ ರಾಜು ವರ್ಕೌಟ್ ಮಾಡುತ್ತಿದ್ದರು. ಈ ವೇಳೆ ಹೃದಘಾತವಾಗಿದ್ದು ಸ್ಥಳದಲ್ಲೇ ಕುಸಿದು ಬಿದಿದ್ದಾರೆ. ತಕ್ಷಣವೇ ಅಲ್ಲಿದ್ದವರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ರಾಜು ಆರೋಗ್ಯ ಸುಧಾರಿಸುತ್ತಿರುವ ಬಗ್ಗೆ ವೈದ್ಯರು ಮಾಹಿತಿ ನೀಡಿದ್ದಾರೆ. ಇತ್ತೀಚೆಗೆ ಸಾಕಷ್ಟು ನಟರಿಗೆ ಹೃದಯಾಘಾತವಾಗುತ್ತಿದೆ. ಇದು ಅಭಿಮಾನಿಗಳ […]Read More

ರಾಜ್ ಬಿ ಶೆಟ್ಟಿ ಸಿನಿಮಾದ ಮೂಲಕ ಮೋಹಕ ತಾರೆ ರಮ್ಯಾ ಕಂಬ್ಯಾಕ್

ಸ್ಯಾಂಡಲ್ ವುಡ್ ಮೋಹಕ ತಾರೆ ರಮ್ಯಾ ಚಿತ್ರರಂಗದಿಂದ ದೂರವಾಗಿ ಸಾಕಷ್ಟು ವರ್ಷಗಳೆ ಕಳೆದಿದೆ. ಈ ಮಧ್ಯೆ ರಮ್ಯಾ ಕಂಬ್ಯಾಕ್ ಗೆ ಅಭಿಮಾನಿಗಳು ಕಾದು ಕೂತಿದ್ದಾರೆ. ಸದ್ಯ ಗಾಂಧಿನಗರದಲ್ಲಿ ರಮ್ಯಾ ಕುರಿತಾದ ಹೊಸ ಸುದ್ದಿಯೊಂದು ಹರಿದಾಡುತ್ತಿದ್ದು, ಈ ಸುದ್ದಿ ನಿಜವಾಗಲಿ ಅಂತಿದ್ದಾರೆ ಅಭಿಮಾನಿಗಳು. ರಮ್ಯಾ ಸಿನಿಮಾಗಳಿಂದ ದೂರವಾಗಿದ್ರೂ ಸಿನಿಮಾ ರಂಗದವರ ಜೊತೆ ಉತ್ತಮ ಸಂಬಂಧ ಹೊಂದಿದ್ದಾರೆ. ಆಗಾಗ ಶೂಟಿಂಗ್ ಸ್ಪಾಟ್ ಗೆ ಭೇಟಿ ನೀಡುತ್ತಿರುತ್ತಾರೆ. ಜೊತೆಗೆ ಉತ್ತಮ ಸಿನಿಮಾಗಳು ಬಂದಾಗ ಸೋಷಿಯಲ್ ಮೀಡಿಯಾದಲ್ಲಿ ಪ್ರಶಂಸೆ ವ್ಯಕ್ತಪಡಿಸ್ತಾರೆ. ರಮ್ಯಾ ಮತ್ತೆ […]Read More

ಮೊಬೈಲ್ ನಂಬರ್ ಹಂಚಿಕೊಂಡ ಬಿಗ್ ಬಾಸ್ ಬೆಡಗಿ ಸೋನು ಗೌಡ

ಬಿಗ್ ಬಾಸ್ ಮನೆಯೊಳಗೆ ಕಾಲಿಟ್ಟಿರುವ ಸೋಷಿಯಲ್ ಮೀಡಿಯಾ ಸ್ಟಾರ್ ಸೋನು ಗೌಡ ದಿನಕ್ಕೊಂದರಂತೆ ಸುದ್ದಿಯಾಗ್ತಿದ್ದಾರೆ.  ಸಾಕಷ್ಟು ವಿರೋಧಗಳ ನಡುವೆಯೂ ದೊಡ್ಮನೆಯಲ್ಲಿ ಸೋನು ಸದ್ದು ಮಾಡ್ತಿದ್ದಾರೆ. ಇದೀಗ ಸೋನು ಶ್ರೀನಿವಾಸ್ ಗೌಡ ತಮ್ಮ ಮೊಬೈಲ್ ನಂಬರ್ ಅನ್ನು ರಿವೀಲ್ ಮಾಡಿದ್ದಾರೆ. ಸಾಮಾನ್ಯವಾಗಿ ಸೆಲೆಬ್ರಿಟಿಗಳು ತಮ್ಮ ಮೊಬೈಲ್ ನಂಬರ್ ಯಾರೊಂದಿಗೂ ಹಂಚಿಕೊಳ್ಳುವುದಿಲ್ಲ. ಆದ್ರೆ ಸೋನು ತಮ್ಮ ನಂಬರ್ ಹಂಚಿಕೊಂಡ ಅಚ್ಚರಿ ಮೂಡಿಸಿದ್ದಾರೆ. ಅಂದಹಾಗೆ ಸೋನು ಗೌಡ ಸೋಷಿಯಲ್ ಮೀಡಿಯಾದಲ್ಲಿ 8 ಲಕ್ಷ ಫಾಲೋವರ್ ಗಳನ್ನು ಹೊಂದಿದ್ದಾರೆ. ಸಾಮಾಜಿಕ ಜಾಲಾ ತಾಣದಲ್ಲಿ […]Read More

Phone icon
Call Now
Reach us!
WhatsApp icon
Chat Now