• June 21, 2026

karnatakaspecial.in

https://karnatakaspecial.in/

ಅಂದು ತಾವಾಡಿದ ಮಾತಿಗೆ ಇಂದು ಕ್ಷಮೆ ಯಾಚಿಸಿದ ಅಮೀರ್ ಖಾನ್

ಬಾಲಿವುಡ್ ಸೂಪರ್ ಸ್ಟಾರ್ ಅಮೀರ್ ಖಾನ್ ನಟನೆಯ ಲಾಲ್ ಸಿಂಗ್ ಚಡ್ಡಾ ಸಿನಿಮಾ ಬಿಡುಗಡೆಗೆ ಸಿದ್ದವಾಗಿದೆ. ಆಗಸ್ಟ್ 11ರಂದು ಸಿನಿಮಾ ತೆರೆಗೆ ಬರುತ್ತಿದ್ದು ಸಿನಿಮಾವನ್ನು ಬಾಯ್ ಕಾಟ್ ಮಾಡುವಂತೆ ಸೋಷಿಯಲ್ ಮೀಡಿಯಾದಲ್ಲಿ ಆಂದೋಲನೆ ಶುರುವಾಗಿದೆ. ಈ ಸಿನಿಮಾ ಬಿಡುಗಡೆಗೆ ಒಂದು ದಿನ ಭಾಕಿ ಇರುವಾಗ ಅಂದು ತಾವಾಡಿದ ಮಾತಿಗೆ ಅಮೀರ್ ಖಾನ್ ಕ್ಷಮೆ ಯಾಚಿಸಿದ್ದಾರೆ. ಅಂದು  ಅಮೀರ್ ಖಾನ್ ಆಡಿದ ಮಾತಿನಿಂದ ಅವರ ಸಿನಿಮಾಗಳನ್ನು ಬಾಯ್ ಕಾಟ್ ಮಾಡುವಂತೆ ಅಭಿಯಾನ ಶುರುವಾಗಿದೆ. ಅಂದು ಅಮೀರ್ ಈ ದೇಶದಲ್ಲಿ […]Read More

ಪತಿ ಮಾಡಿದ ಯಡವಟ್ಟು ಕೆಲಸದಿಂದ ಆಸ್ಪತ್ರೆಗೆ ದಾಖಲಾದ ನಯನತಾರಾ

ಲೇಡಿ ಸೂಪರ್ ಸ್ಟಾರ್ ನಯನತಾರಾ ಮದುವೆಯ ಬಳಿಕ ಮತ್ತೆ ಮತ್ತೆ ಸುದ್ದಿಯಾಗ್ತಿದ್ದಾರೆ. ಮದುವೆಯಾಗಿ ಕೆಲ ತಿಂಗಳು ಕಳೆಯುವುದರೊಳಗೆ ನಯನತಾರಾ ಆಸ್ಪತ್ರೆಗೆ ದಾಖಲಾಗಿದ್ದು ಇದಕ್ಕೆಲ್ಲಾ ಪತಿ ವಿಘ್ನೇಶ್ ಮಾಡಿದ ಯಡವಟ್ಟೇ ಕಾರಣ ಎನ್ನಲಾಗುತ್ತಿದೆ. ಹೊಸ ದಂಪತಿ ನಯನತಾರಾ ಹಾಗೂ ವಿಘ್ನೇಶ್ ಸದಾ ಒಂದಲ್ಲ ಒಂದು ವಿಷಯಕ್ಕೆ ಸುದ್ದಿಯಾಗ್ತಿದ್ದಾರೆ. ಮದುವೆಯ ಆರಂಭದಲ್ಲಿ ಕೆಲವೊಂದು ಸಮಸ್ಯೆಗಳನ್ನು ಮಾಡಿಕೊಂಡಿದ್ದ ದಂಪತಿಗಳು ಬಳಿಕ ಹೊಸ ಮನೆ ಖರೀದಿಸಿ ಸುದ್ದಿಯಾಗಿದ್ದರು. ಆದ್ರೆ ಇದೀಗ ನಯನತಾರಾ ಆಸ್ಪತ್ರೆಗೆ ದಾಖಲಾಗಿರೋದು ಚಿತ್ರರಂಗದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಮುದ್ದಿನ ಪತ್ನಿಗಾಗಿ […]Read More

‘ಶುರುವಾಗಿದೆ’ ಹಾಡು ಬಿಡುಗಡೆ ಮಾಡಿದ ‘1975’ ಸಿನಿಮಾ ತಂಡ

ಒನ್ ಲವ್ ಟೂ ಸ್ಟೋರಿ ಸಿನಿಮಾ ಮೂಲಕ ನಿರ್ದೇಶಕರಾಗಿ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ವಸಿಷ್ಠ ಬಂಟನೂರು ಸಾರಥ್ಯದಲ್ಲಿ ತಯಾರಾಗಿರುವ 1975 ಸಿನಿಮಾ ಬಿಡುಗಡೆಗೆ ಸಜ್ಜಾಗಿ ನಿಂತಿದೆ. ಕ್ರೈಮ್ ಥ್ರಿಲ್ಲರ್ ಕಂಥಾಹಂದರವಿರುವ ಈ ಸಿನಿಮಾದಲ್ಲಿ ಚಕ್ರವರ್ತಿ ಚಂದ್ರಚೂಡ್, ಜಯ್ ಶೆಟ್ಟಿ, ಮಾನಸ, ವೆಂಕಟೇಶ್ ಪ್ರಸಾದ್ ಸೇರಿದಂತೆ ಹಲವು ಪ್ರತಿಭಾನ್ವಿತ ಬಳಗವಿದೆ. ಆರಂಭದಿಂದಲೂ ನಿರೀಕ್ಷೆಯಲ್ಲಿ ಹೆಚ್ಚಿಸಿರುವ 1975 ಸಿನಿಮಾದ ಶುರುವಾಗಿದೆ ಎಂಬ ಹಾಡು ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆಷ್ಟೇ ಚಾಮರಾಜಪೇಟೆಯ ಕಲಾವಿದರ ಸಂಘದಲ್ಲಿ ಜರುಗಿತು. ವಸಿಷ್ಠ ಬಂಟನೂರು ಮಾತನಾಡಿ, 1975 […]Read More

“ಲೈನ್ ಮ್ಯಾನ್” ಆಗಿ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ತೆಲುಗು ನಟ

“ಭಿನ್ನ” ದಂತಹ ವಿಭಿನ್ನ ಚಿತ್ರ ನಿರ್ಮಾಣ ಮಾಡಿದ್ದ ಪರ್ಪಲ್ ರಾಕ್ ಸಂಸ್ಥೆಯಿಂದ ಇತ್ತೀಚೆಗೆ “ಡಿಯರ್ ಸತ್ಯ” ಚಿತ್ರ ಸಹ ನಿರ್ಮಾಣವಾಗಿತ್ತು. ಈಗ ಸಂಸ್ಥೆಯ ಮೂರನೇ ಕಾಣಿಕೆಯಾಗಿ  “ಲೈನ್ ಮ್ಯಾನ್” ಚಿತ್ರ ಆರಂಭವಾಗಿದೆ. ಚಾಮರಾಜನಗರದ ಚಂದಕವಾಡಿಯಲ್ಲಿರುವ ಶ್ರೀ ಲಕ್ಷ್ಮೀ ದೇವಿ ದೇವಸ್ಥಾನದಲ್ಲಿ ಇತ್ತೀಚೆಗೆ ಈ ಚಿತ್ರದ ಮುಹೂರ್ತ ಸಮಾರಂಭ ನಡೆಯಿತು. ಚಾಮರಾಜನಗರ ಜಿಲ್ಲಾ ಪೊಲೀಸ್ ಅಧೀಕ್ಷಕರಾದ  ಶ್ರೀ ಶಿವಕುಮಾರ್ ಆರಂಭ ಫಲಕ ತೋರುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದರು. ಯತೀಶ್ ವೆಂಕಟೇಶ್, ಗಣೇಶ್ ಪಾಪಣ್ಣ, ಶ್ರೀನಿವಾಸ್ ಬಿಂಡಿಗನವಿಲೆ ಹಾಗೂ […]Read More

ಭಗವಾನ್ ಶ್ರೀ ನಿತ್ಯಾನಂದ ಸಿನಿಮಾ ತಂಡಕ್ಕೆ ಸಾಥ್ ನೀಡಿದ ಅವಧೂತ ವಿನಯ್ ಗುರೂಜಿ

ಕನ್ನಡದಲ್ಲೀಗ ವಿಭಿನ್ನ ಶೀರ್ಷಿಕೆಯ ಹೊಸ ಹೊಸ ಸಿನಿಮಾಗಳು‌ ಬಂದಿವೆ. ಬರ್ತಿವೆ. ಈಗ The endless one ಭಗವಾನ್ ಶ್ರೀನಿತ್ಯಾನಂದ ಎಂಬ ಹೆಸರಿನ ಹೊಸ ಸಿನಿಮಾವೊಂದು ಬರ್ತಿದೆ. ಇವತ್ತು ಬೆಂಗಳೂರಿನಲ್ಲಿರುವ ಅವಧೂತ ವಿನಯ್ ಗುರೂಜಿ ಆಶ್ರಮದಲ್ಲಿ ವಿನಯ್ ಗುರೂಜಿ ಚಿತ್ರದ ಮೋಷನ್ ಪೋಸ್ಟರ್ ಹಾಗೂ ಟೈಟಲ್ ರಿವೀಲ್ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ವಿನಯ್ ಗುರೂಜೀ ಮಾತನಾಡಿ, ಭಗವಾನ್ ಹೆಸರಿನಲ್ಲಿ ಕಿರುಚಿತ್ರಗಳಷ್ಟೇ ಬಂದಿದೆ. ಈಗ ಅವರ ವಿಚಾರಗಳನ್ನು ಒಳಗೊಂಡ ಭಗವಾನ್ ಶ್ರೀ ನಿತ್ಯಾನಂದ ಸಿನಿಮಾ ಬರ್ತಿದೆ. ಭಗವಾನ್ ನಲ್ಲಿ […]Read More

ತಮಿಳುನಾಡು ರಾಜ್ಯಪಾಲರನ್ನು ಭೇಟಿಯಾದ ರಜನಿಕಾಂತ್: ರಾಜಕೀಯ ಎಂಟ್ರಿ ಬಗ್ಗೆ ಸೂಪರ್ ಸ್ಟಾರ್ ಹೇಳಿದ್ದೇನು

ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯಕ್ಕೆ ಎಂಟ್ರಿಕೊಡ್ತಾರೆ ಅನ್ನೋ ಸುದ್ದಿ ಸಾಕಷ್ಟು ಸಮಯದಿಂದ ಹರಿದಾಡುತ್ತಿದೆ. ಆದರೆ ತಲೈವ ಮಾತ್ರ ಕೈಯಲ್ಲಿ ಸಾಕಷ್ಟು ಸಿನಿಮಾಗಳನ್ನ ಇಟ್ಟುಕೊಂಡು ಅವುಗಳ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ರಾಜಕೀಯ ಎಂಟ್ರಿಯ ಬಗ್ಗೆ ಸ್ವತಃ ಸೂಪರ್ ಸ್ಟಾರ್ ಸ್ಪಷ್ಟನೆ ನೀಡಿದ್ದಾರೆ. 71 ವಯಸ್ಸಿನ ರಜನಿಕಾಂತ್ ಕೈಯಲ್ಲಿ ಸಾಕಷ್ಟು ಸಿನಿಮಾಗಳಿವೆ. ಈ ಮಧ್ಯೆ ಇತ್ತೀಚೆಗೆ ತಲೈವನ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದ್ದು ಅಭಿಮಾನಿಗಳನ್ನು ಚಿಂತಿತರನ್ನಾಗಿ ಮಾಡಿದೆ. ಈ ಮಧ್ಯೆ ರಜನಿ ಮತ್ತೆ ರಾಜಕೀಯದಲ್ಲಿ ಆಕ್ಟೀವ್ […]Read More

ಹಸೆಮಣೆ ಏರಲು ಸಜ್ಜಾದ ಕೀರ್ತಿ ಸುರೇಶ್: ಮಹಾನಟಿಯ ಕೈ ಹಿಡಿಯಲಿರೋ ವರ ಯಾರು

ಸೌತ್ ಸಿನಿ ರಂಗದಲ್ಲಿ ಖ್ಯಾತಿ ಘಳಿಸಿರುವ ಸ್ಟಾರ್ ಮಹಾನಟಿ ಕೀರ್ತಿ ಸುರೇಶ್ ಇದೀಗ ಹಸೆ ಮಣೆ ಏರೋಕೆ ರೆಡಿಯಾಗಿದ್ದಾರೆ. ಖ್ಯಾತಿ ಉದ್ಯಮಿ ಜೊತೆ ಕೀರ್ತಿ ಮದುವೆಯಾಗುತ್ತಿದ್ದಾರೆ ಎಂಬ ಸುದ್ದಿ ಟಾಲಿವುಡ್ ಅಂಗಳಲ್ಲಿ ಹರಿದಾಡುತ್ತಿದೆ. ಸಾಮಾನ್ಯವಾಗಿ ಸೋಷಿಯಲ್ ಮೀಡಿಯಾದಲ್ಲಿ ನಟಿಯರ ಮದುವೆಯ ವಿಚಾರಗಳು ಆಗಾಗ ಸುದ್ದಿಯಾಗುತ್ತಿರುತ್ತವೆ. ಇದೀಗ ಕೀರ್ತಿ ಸುರೇಶ್ ಮದುವೆಯ ಸುದ್ದಿಯೊಂದು ಸಾಮಾಜಿಕ ಜಾಲಾ ತಾಣದಲ್ಲಿ ಸಖತ್ ವೈರಲ್ ಆಗಿದೆ. ತಂದೆ-ತಾಯಿಗಳು ನಿಶ್ಚಯಿಸಿದ ಹುಡುಗನೊಂದಿಗೆ ಕೀರ್ತಿ ಹಸೆಮಣೆ ಏರಲು ನಿರ್ಧರಿಸಿದ್ದಾರಂತೆ. ಸದ್ಯದಲ್ಲೇ ಅಧಿಕೃತ ಘೋಷಣೆ ಮಾಡಲಿದ್ದಾರೆ ಎನ್ನಲಾಗುತ್ತಿದೆ. […]Read More

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಗ್ ಬಾಸ್6 ವಿನ್ನರ್ ಶಶಿಕುಮಾರ್

ಬಿಗ್ ಬಾಸ್ ಮನೆಯಲ್ಲಿ ಮಾರ್ಡನ್ ರೈತ ಎಂದೇ ಖ್ಯಾತಿ ಘಳಿಸಿದ್ದ ಶಶಿ ಕುಮಾರ್ ಗುರು ಹಿರಿಯರ ಸಮ್ಮುಖದಲ್ಲಿ ಹೊಸ ಬಾಳಿಗೆ ಅಡಿ ಇಟ್ಟಿದ್ದಾರೆ. ಬಿಗ್ ಬಾಸ್ 6 ವಿನ್ನರ್ ಶಶಿಕುಮಾರ್ ಸಿನಿಮಾದಲ್ಲೂ ಕಾಣಿಸಿಕೊಂಡಿದ್ದು ಇದೀಗ ಸ್ವಾತಿ ಎಂಬುವವರ ಜೊತೆ ಶಶಿ ಹಸೆ ಮಣೆ ಏರಿದ್ದಾರೆ. ಶಶಿ ಕುಮಾರ್ ಹಾಗೂ ಸ್ವಾತಿ ಅವರ ವಿವಾಹ ಮಹೋತ್ಸವ ಆಗಸ್ಟ್ 6 ಮತ್ತು 7 ರಂದು ಅದ್ಧೂರಿಯಾಗಿ ನೆರವೇರಿದೆ. ಬೆಂಗಳೂರಿನ ಕನ್ವೆನ್ಷನ್ ಸೆಂಟರ್‌ವೊಂದರಲ್ಲಿ ಶಶಿ ಕುಮಾರ್ ಹಾಗೂ ಸ್ವಾತಿ ಅವರ ಕಲ್ಯಾಣ […]Read More

ಮದುವೆಯಾದ ವ್ಯಕ್ತಿಯ ಜೊತೆ ರಿಲೇಶನ್ ಶಿಪ್ ನಲ್ಲಿದ್ದೆ: ಜಯಶ್ರೀ ಆರಾಧ್ಯ

ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ಸ್ಪರ್ಧಿಗಳ ಒಬ್ಬೊಬ್ಬರ ಲೈಫ್ ಒಂದೊಂದು ಥರ. ಅತ್ತ ನಟಿ ಸಾನ್ಯಾ ಅಯ್ಯರ್ ತಂದೆಯಿಂದಲೇ ಮೋಸ ಹೋಗಿದ್ದರೆ ಇತ್ತ ಅರ್ಜುನ್ ರಮೇಶ್ ತಾನು ಎಷ್ಟು ಜನರ ಜೊತೆ ಫ್ಲರ್ಟ್ ಮಾಡಿದ್ದೇನೆ ಎಂದೇ ಗೊತ್ತಿಲ್ಲ ಎಂದಿದ್ದಾರೆ. ಇದೀಗ ಮತ್ತೊಬ್ಬ ಬಿಗ್ ಬಾಸ್ ಸ್ಪರ್ಧಿ ಜಯಶ್ರೀ ಆರಾಧ್ಯ ತಾವು ಮದುವೆಯಾದ ವ್ಯಕ್ತಿಯಜೊತೆ ರಿಲೇಷನ್ ಶಿಪ್ ನಲ್ಲಿದ್ದೆ ಎಂಬುದನ್ನು ಹೇಳಿಕೊಂಡಿದ್ದಾರೆ. ಬಿಗ್ ಬಾಸ್ ಕಂಟೆಸ್ಟೆಂಟ್ ಗಳಿಗೆ ನಾನು ಯಾರು ಎಂಬ ಟಾಸ್ಕ್ ನೀಡಿದೆ. ಇದರ ಅನುಸಾರ ಸ್ಪರ್ಧಿಗಳು […]Read More

ಎಷ್ಟು ಜನರ ಜೊತೆ ಫ್ಲರ್ಟ್ ಮಾಡಿದ್ದೇನು ಎಂದು ನನಗೆ ಗೊತ್ತಿಲ್ಲ: ಅರ್ಜುನ್ ರಮೇಶ್

ಕನ್ನಡದ ಬಿಗ್ ಬಾಸ್ ಓಟಿಟಿ ಆರಂಭವಾಗಿದ್ದು ದೊಡ್ಮನೆ ಒಳಗೆ ಸ್ಪರ್ಧಿಗಳು ತಮ್ಮ ರಿಯಲ್ ಲೈಫ್ ಕುರಿತು ಹೇಳಿಕೊಳ್ಳುತ್ತಿದ್ದಾರೆ. ಈಗಾಗ್ಲೆ ಸಾಕಷ್ಟು ಮಂದಿ ತಮ್ಮ ಜೀವನದ ಕಹಿ ಹಾಗೂ ಸಿಹಿ ಘಟನೆಯನ್ನು ಹೇಳಿಕೊಂಡು ಕಣ್ಣೀರು ಹಾಕಿದ್ದಾರೆ. ಇದೀಗ ಬಿಗ್ ಬಾಸ್ ಸ್ಪರ್ಧಿ ಅರ್ಜುನ್ ರಮೇಶ್ ತಮ್ಮ ಜೀವನದ ಅಚ್ಚರಿಯ ವಿಷಯವೊಂದನ್ನು ಹಂಚಿಕೊಂಡಿದ್ದಾರೆ. ರಾಜಕೀಯ ಹಾಗೂ ನಟನೆ ಎರಡರಲ್ಲೂ ಆಕ್ಟೀವ್ ಆಗಿರುವ ಅರ್ಜುನ್ ರಮೇಶ್ ಅವರಿಗೆ ಇಬ್ಬರು ಹೆಂಡತಿಯರು. ಇದನ್ನು ಅರ್ಜುನ್ ಮೊದಲೇ ಹೇಳಿಕೊಂಡಿದ್ದರು. ಅಚ್ಚರಿ ಎಂದರೆ ಅರ್ಜುನ್ ರಮೇಶ್ […]Read More

Phone icon
Call Now
Reach us!
WhatsApp icon
Chat Now