• June 4, 2026

ಸ್ಯಾಂಡಲ್ ವುಡ್ ಗೂ ಬಂತು ಬಾಯ್ಕಾಟ್ ಬಿಸಿ: ಶಾಸಕ ಜಮೀರ್ ಪುತ್ರ ಝೈದ್ ಖಾನ್ ಚಿತ್ರಕ್ಕೆ ವಿರೋಧ

ಇದುವರೆಗೂ ಬಾಲಿವುಡ್ ಸಿನಿಮಾಗಳಿಗೆ ತಟ್ಟಿದ್ದ ಬಾಯ್ಕಾಟ್ ಬಿಸಿ ಇದೀಗ ಸ್ಯಾಂಡಲ್ ವುಡ್ ಗೂ ಎಂಟ್ರಿಕೊಟ್ಟಿದೆ. ಶಾಸಕ ಜಮೀರ್ ಪುತ್ರ ಝೈದ್ ಖಾನ್ ನಟನೆಯ ಬನಾರಸ್ ಸಿನಿಮಾ ತೆರೆಗೆ ಬರಲು ಸಿದ್ದವಾಗಿದೆ. ಆದರೆ ಇದೀಗ ಸಿನಿಮಾವನ್ನು ಬಾಯ್ಕಾಟ್ ಮಾಡುವಂತೆ ಸೋಷಿಯಲ್ ಮೀಡಿಯಾದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಕಳೆದ ಕೆಲ ದಿನಗಳಿಂದ ಶಾಸಕ ಜಮೀರ್ ಖಾನ್ ದೊಡ್ಡ ಮಟ್ಟದಲ್ಲಿ ಸುದ್ದಿಯಾಗ್ತಿದ್ದಾರೆ. ಚಾಮರಾಜ ಪೇಟೆಯ ಈದ್ಗಾ ಮೈದನಾದ ಬಗ್ಗೆ ಹಾಗೂ ಸಿಎಂ ಸಿದ್ದರಾಮಯ್ಯ ಪರವಾಹಿ ಬಹಿರಂಗ ಹೇಳಿಕೆ ನೀಡಿ ಸುದ್ದಿಯಾಗಿದ್ದ ಜಮೀರ್ ಈ ಬಾರಿ ಮಗನ ಸಿನಿಮಾದ ಕುರಿತಾಗಿ ಸುದ್ದಿಯಾಗ್ತಿದ್ದಾರೆ. ಇದೇ ಮೊದಲ ಬಾರಿಗೆ ಸಿನಿಮಾ ರಂಗಕ್ಕೆ ಎಂಟ್ರಿಕೊಟ್ಟಿರುವ ಝೈದ್ ಪುತ್ರನ ಸಿನಿಮಾಗೆ ಬಾಯ್ಕಾಟ್ ಬಿಸಿ ತಾಗಿದೆ. ಬನಾರಸ್ ಚಿತ್ರದ ವಿರುದ್ಧ ಹಿಂದೂಪರ ಸಂಘಟನೆಗಳು ಇದೀಗ #boycottBanaras ಟ್ರೆಂಡ್ ಆರಂಭಿಸಿದ್ದು, ಚಿತ್ರ ಹಿಂದೂ ವಿರೋಧಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಆರೋಪಿಸಿದ್ದಾರೆ. ಅಂತೆಯೇ ಸಾಮಾಜಿಕ ಜಾಲತಾಣಗಳಲ್ಲಿ ಗಣೇಶ ಹಬ್ಬಕ್ಕೆ ಶುಭ ಕೋರುವ ಶಾಸಕರು, ಅತ್ತ ದೆಹಲಿಯಲ್ಲಿ ಖ್ಯಾತ ಕಪಿಲ್ ಸಿಬಲ್ ರನ್ನು ಭೇಟಿ ಮಾಡಿ ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ನಡೆಸದಂತೆ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಹಾಕಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಇತ್ತೀಚೆಗೆ ಬನಾರಸ್ ಚಿತ್ರತಂಡ ಬಿಡುಗಡೆ ಮಾಡಿದ್ದ ಪೋಸ್ಟರ್ ಮತ್ತು ಚಿತ್ರಗಳಲ್ಲೂ ಹಿಂದೂಗಳ ಭಾವನೆಗೆ ಧಕ್ಕೆಯಾಗಿದೆ ಎಂದು ಆರೋಪಿಸಲಾಗಿದೆ.ಜಯತೀರ್ಥ ನಿರ್ದೇಶನದ ಬನಾರಸ್ ಸಿನಿಮಾ ಇದೇ ಸೆಪ್ಟೆಂಬರ್ 4ರಂದು ಕನ್ನಡ, ತೆಲುಗು,ಹಿಂದಿ ಸೇರಿದಂತೆ ವಿವಿಧ ಭಾಷೆಗಳಲ್ಲಿ ತೆರೆ ಕಾಣಲಿದೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now