• January 2, 2026

ಸೀರೆ ಬಿಚ್ಚಿ ಹೊಡಿತಿನಿ ಎಂದ ನಟ ಸ್ನೇಹಿತ್: ಮಹಿಳೆಯಿಂದ ದೂರು ದಾಖಲು

ಅಪ್ಪು ಪಪ್ಪು ಸಿನಿಮಾ ಖ್ಯಾತಿಯ, ಖ್ಯಾತ ನಿರ್ಮಾಪಕರ ಸೌಂದರ್ಯ ಜಗದೀಶ್ ಪುತ್ರ ನಟ ಸ್ನೇಹಿತ್ ಮತ್ತೆ ಸುದ್ದಿಯಾಗಿದ್ದಾರೆ. ಈ ಹಿಂದೆ ಎದುರು ಮನೆ ಮಹಿಳೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಕಿರಿಕ್ ಮಾಡಿಕೊಂಡಿದ್ದ ಸ್ನೇಹಿತ್ ವಿರುದ್ಧ ಇದೀಗ ಮತ್ತೊಂದು ಪ್ರಕರಣ ದಾಖಲಾಗಿದೆ. ಈ ಹಿಂದೆ ಸ್ನೇಹಿತ್ ಎದುರು ಮನೆಯ ಮಹಿಳೆಗೆ ಅವಾಚ್ಯ ಪದಗಳಿಂದ ನಿಂದಿಸಿದರು ಹಾಗೂ ಕೊಲೆ ಬೆದರಿಕೆ ಹಾಕಿದರು ಎಂಬ ಕಾರಣಕ್ಕೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು, ಇದೀಗ ಮತ್ತೆ ಸ್ನೇಹಿತ್ ವಿರುದ್ಧ ಪ್ರಕರಣ ದಾಖಲಾಗಿದೆ. ಸೆಪ್ಟಂಬರ್ 24ರಂದು ಸ್ನೇಹಿತ್ ಎದುರು ಮನೆಯ ಮಹಿಳೆ ಅನ್ನಪೂರ್ಣ ತನ್ನ ಪತಿಯೊಂದಿಗೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ವೇಗವಾಗಿ ಜಾಗ್ವಾರ್ ಕಾರಿನಲ್ಲಿ  ಬಂದ ಸ್ನೇಹಿತ್, ಮಹಿಳೆಯ ಕಾರಿಗೆ ಡಿಕ್ಕಿ ಹೊಡೆಯುವಂತೆ ಮಾಡಿದ್ದಾನೆ. ಇದರಿಂದ ಗಾಬರಿಗೊಂಡ ಅನ್ನಪೂರ್ಣ ಮತ್ತು ಅವರ ಪತಿ ಈ ವಿಚಾರಕ್ಕೆ ಪ್ರಶ್ನಿಸಿದ್ದಾರೆ. ಇದರಿಂದ ಕೋಪಗೊಂಡ ಸ್ನೇಹಿತ್ ಮಹಿಳೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಈ ವಿಚಾರಕ್ಕೆ ಮಹಿಳೆ ಹಾಗೂ ಸ್ನೇಹಿತ್ ನಡುವೆ ಗಲಾಟೆ ನಡೆದಿದೆ. ಈ ವೇಳೆ ಸ್ನೇಹಿತ್ ಅನ್ನಪೂರ್ಣ ಅವರಿಗೆ ಸೀರೆ ಬಿಚ್ಚಿ ಹೊಡಿತಿನಿ, ಇಲ್ಲಿಂದ ಹೋಗ್ತಾ ಇರು ಎಂದಿದ್ದಾನೆ. ಜೊತೆಗೆ ಮಹಿಳೆಯ ಪತಿಗೆ ಕಾರಿನಲ್ಲೇ ಹಲ್ಲೆ, ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ದಾಖಲಿಸಲಾಗಿದೆ. ಈ ಸಂಬಂಧ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಹಿಂದೆ ಕಾರು ಪಾರ್ಕಿಂಗ್ ವಿಚಾರಕ್ಕೂ ಸ್ನೇಹಿತ್ ಮೇಲೆ ಎಫ್ ಐ ಆರ್ ದಾಖಲಾಗಿತ್ತು. ಬಳಿಕ ನಿರ್ಮಾಪಕರ ಮಧ್ಯಸ್ಥಿಕೆ ಬಳಿಕ ರಾಜಿ ಸಂದಾನ ಮಾಡಲಾಗಿತ್ತು.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now