ಕಳೆದ ನಾಲ್ಕು ತಿಂಗಳ ಹಿಂದೆ ನಿರ್ದೇಶಕ ವಿಘ್ನೇಶ್ ಶಿವನ್ ಕೈ ಹಿಡಿದ ನಟಿ ನಯನತಾರಾ ಇದೀಗ ಬಾಡಿಗೆ ತಾಯಿಯ ಮೂಲಕ ಅವಳಿ ಗಂಡು ಮಕ್ಕಳನ್ನು ಪಡೆದಿದ್ದಾರೆ. ತಾವು ಫೋಷಕರಾಗುತ್ತಿರುವ ಕುರಿತು ವಿಘ್ನೇಶ್ ಶಿವನ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಮನೆಗೆ ಮಕ್ಕಳು ಬಂದ ಖುಷಿಯಲ್ಲಿರುವ ದಂಪತಿಗಳಿಗೆ ತಮಿಳು ನಾಡು ಸರ್ಕಾರ ಶಾಕ್ ನೀಡಿದೆ. ಬಾಡಿಗೆ ತಾಯ್ತನದ ಕುರಿತು ಸರಕಾರವು ಹಲವು ನಿಯಮಗಳನ್ನು ರೂಪಿಸಿದೆ. ಈ ನಿಯಮಗಳನ್ನು ನಯನತಾರಾ ಮತ್ತು ವಿಘ್ನೇಶ್ ಶಿವನ್ ಗಾಳಿಗೆ ತೂರಿದ್ದಾರೆ ಎನ್ನಲಾಗುತ್ತಿದೆ. ಹಾಗಾಗಿ ತಮಿಳು […]readmore
ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಎದೆನೋವಿನ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಸುದ್ದಿ ಅಭಿಮಾನಿಗಳನ್ನು ಆತಂಕಕ್ಕೆ ಈಡು ಮಾಡಿತ್ತು. ಹಂಸಲೇಖ ಆದಷ್ಟು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳೂ ಪ್ರಾರ್ಥಿಸಿದಿದ್ದು. ಅಲ್ಲದೆ ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಟ್ವೀಟ್ ಮೂಲಕ ಆದಷ್ಟು ಬೇಗ ಗುಣಮುಖರಾಗಿ ಎಂದು ಹಾರೈಸಿದ್ದು ಅಭಿಮಾನಿಗಳನ್ನು ಸಹಜವಾಗಿಯೇ ಗಭರಿಗೊಳಿಸಿತ್ತು. ಇಂದು ಮುಂಜಾನೆ ಹಂಸಲೇಖ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂಬ ಸುದ್ದಿ ಹರಿದಾಡಿತ್ತು. ಹಂಸಲೇಖ ಆರೋಗ್ಯದ ಸುದ್ದಿ ಕಾಳ್ಗಿಚ್ಚಿನಂತೆ […]readmore
ಪುನೀತ್ ರಾಜ್ ಕುಮಾರ್ ನೆನಪಿನಲ್ಲಿ ಆಯೋಜಿಸಿರುವ ‘ಅಪ್ಪು ಕಪ್’ ಸ್ಯಾಂಡಲ್ ವುಡ್ ಬ್ಯಾಡ್ಮಿಂಟನ್ ಲೀಗ್ ನ ಲೋಗೋ, ಜರ್ಸಿ, ಥೀಮ್ ಸಾಂಗ್ ಲಾಂಚ್ ಉದ್ಘಾಟನಾ ಸಮಾರಂಭ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಿನ್ನೆ ನೆರವೇರಿದೆ. ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಆಟಗಾರರಿಗೆ ಶುಭಾಶಯ ಕೋರಿದರು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಸಚಿವ R. ಅಶೋಕ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭಾಗಿಯಾಗಿದ್ದರು. ಅಪ್ಪು […]readmore
ಲಕ್ನೋ: ಸಮಾಜವಾದಿ ಪಕ್ಷದ ವರಿಷ್ಠ ಹಾಗೂ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಇಂದು ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಹರ್ಯಾಣದ ಗುರುಗ್ರಾಮ್ ನ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮುಲಾಯಂ ಸಿಂಗ್ ಯಾದವ್ (82) ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮುಲಾಯಂ ಸಿಂಗ್ ಯಾದವ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ಜನಸಾಮಾನ್ಯರ ಸಮಸ್ಯೆಗಳಿಗೆ ಮುಲಾಯಂ ಸಿಂಗ್ ಯಾದವ್ ಕಿವಿಗೊಡುತ್ತಿದ್ದರು. ಅತ್ಯಂತ ತಳಮಟ್ಟದಿಂದ ಮುಲಾಯಂ ಸಿಂಗ್ ಯಾದವ್ ಅವರು ಬೆಳೆದುಬಂದಿದ್ದರು. ಜಯಪ್ರಕಾಶ್ ನಾರಾಯಣ್ ಮತ್ತು […]readmore
ಬೆಂಗಳೂರಿನಲ್ಲಿ ಭಾನುವಾರ ರಾತ್ರಿ ಅದ್ದೂರಿಯಾಗಿ ಫಿಲ್ಮ್ ಫೇರ್ ಪ್ರಶಸ್ತಿ ಪ್ರಧಾನ ಸಮಾರಂಭ ನಡೆದಿದ್ದು ಕನ್ನಡ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಯ ಕಲಾವಿದರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. 67ನೇ ಸಾಲಿನ ಫಿಲ್ಮ್ಫೇರ್ ಸಮಾರಂಭ ಮಾದಾವರ ಬಳಿಯ ಬಿಐಇಸಿ ಮೈದಾನದಲ್ಲಿ ನಡೆಯಿತು. ಝಗಮಗಿಸುವ ವೇದಿಕೆ ಮೇಲೆ ಅನೇಕ ಮನರಂಜನಾ ಕಾರ್ಯಕ್ರಮಗಳು ನಡಿದ್ದು, ನಟಿಯಾರಾದ ಪೂಜಾ ಹೆಗ್ಡೆ, ಮೃಣಾಲ್ ಠಾಕೂರ್, ಕೃತಿ ಶೆಟ್ಟಿ ಸೇರಿದಂತೆ ಸಾಕಷ್ಟು ಕಲಾವಿದರು ಡ್ಯಾನ್ಸ್ ಮಾಡಿದರು. ಈ ವೇಳೆ ಕನ್ನಡದಲ್ಲಿ ನಟ ಡಾಲಿ ಧನಂಜಯ್ ಗೆ ಬಡವ […]readmore
ಆಕಾಶ ದ್ವೀಪ ಧಾರವಾಹಿ ಮೂಲಕ ಖ್ಯಾತಿ ಘಳಿಸಿದ ನಟಿ ದಿವ್ಯಾ ಶ್ರೀಧರ್ ವೈವಾಹಿಕ ಜೀವನ ಬೀದಿಗೆ ಬಿದ್ದಿದೆ. ಪತಿ ಅಮ್ಜದ್ ಖಾನ್ ವಿರುದ್ಧ ದಿವ್ಯಾ ಶ್ರೀಧರ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಇಬ್ಬರು ಗಂಡ, ಹೆಂಡತಿಯರು ಆರೋಪ, ಪ್ರತ್ಯಾರೋಪ ಮಾಡುತ್ತಿದ್ದು ಇದೀಗ ಪತಿಯ ಜೊತೆಗೆ ದಿವ್ಯಾ ಶ್ರೀಧರ್ ಗಲಾಟೆ ಮಾಡುತ್ತಿರುವ ವಿಡಿಯೋ ನಟ ಅಮ್ಜದ್ ಖಾನ್ ವೈರಲ್ ಮಾಡಿದ್ದಾರೆ. ಸಹನಟ ಅಮ್ಜದ್ ಖಾನ್ ನನ್ನು ಪ್ರೀತಿಸಿ ಮದುವೆಯಾಗಿದ್ದ ದಿವ್ಯಾ ಶ್ರೀಧರ್ ಪತಿಯ ವಿರುದ್ಧ ತಿರುಗಿ ಬಿದ್ದಿದ್ದಾರೆ. ಪತಿಯಿಂದ ಹಲ್ಲೆಗೊಳಗಾದ […]readmore
ಕನ್ನಡದ ಜೊತೆಗೆ ಪರಭಾಷೆಯ ಸಿನಿಮಾಗಳಿಗೂ ಬಂಡವಾಳ ಹೂಡುತ್ತಿರುವ ಖ್ಯಾತ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂ ಬ್ಯಾನರ್ ಅಡಿಯಲ್ಲಿ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ಸೆಟ್ಟೇರಿದೆ. ಪವನ್ ಕುಮಾರ್ ನಿರ್ದೇಶನದ ಫಹಾದ್ ಫಾಸಿಲ್ ನಟನೆಯ ಧೂಮಂ ಚಿತ್ರದ ಮುಹೂರ್ತ ಸಮಾರಂಭ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ. ಇತ್ತೀಚೆಗಷ್ಟೇ ಫಹಾದ್ ಫಾಸಿಲ್ ಹಾಗೂ ಪವನ್ ಕುಮಾರ್ ಜೊತೆ ಸಿನಿಮಾ ಮಾಡುತ್ತಿರುವುದಾಗಿ ಹೊಂಬಾಳೆ ಸಂಸ್ಥೆ ಟ್ವೀಟರ್ ಖಾತೆ ಮೂಲಕ ತಿಳಿಸಿತ್ತು. ಇದೀಗ ಚಿತ್ರಕ್ಕೆ ಅಧಿಕೃತ ಚಾಲನೆ ಸಿಕ್ಕಿದೆ. ಚಿತ್ರದ ಮೊದಲ ದೃಶ್ಯಕ್ಕೆ ವಿಜಯ್ […]readmore
ವಿಜಯ್ ಕಿರಗಂದೂರು ಒಡೆತನದ ಹೊಂಬಾಳೆ ಬ್ಯಾನರ್ ಅಡಿಯಲ್ಲಿ ಮತ್ತೊಂದು ಸಿನಿಮಾ ಘೋಷಣೆಯಾಗಿದೆ. ಪರಭಾಷೆಯ ಸಿನಿಮಾಗಳಿಗೆ ಬಂಡವಾಳ ಹೂಡುತ್ತಿರುವ ಹೊಂಬಾಳೆ ಬ್ಯಾನರ್ ಅಡಿಯಲ್ಲಿ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ಘೋಷಣೆಯಾಗಿತ್ತು. ಸೂರ್ಯ ನಟನೆಯ ‘ಸುರರೈ ಪೋಟ್ರು’ ಸಿನಿಮಾ ಸೂಪರ್ ಹಿಟ್ ಆದ ಬೆನ್ನಲ್ಲೇ ನಿರ್ದೆಶಕಿ ಸುಧಾ ಕೊಂಗರ ಜೊತೆ ಸಿನಿಮಾ ಮಾಡುವುದಾಗಿ ಹೊಂಬಾಳೆ ಸಂಸ್ಥೆ ಘೋಷಿಸಿತ್ತು. ಆದರೆ ನಟ ಯಾರು ಅನ್ನೋದನ್ನು ಮಾತ್ರ ಕನ್ಪಾರ್ಮ್ ಮಾಡಿರಲಿಲ್ಲ. ಇದೀಗ ಈ ಕುರಿತಾಗಿ ಚರ್ಚೆ ಶುರುವಾಗಿದೆ. ಇತ್ತೀಚೆಗೆ ರಿಷಬ್ ಶೆಟ್ಟಿ ನಟಿಸಿ, […]readmore
ಮದುವೆಯಾದ ನಾಲ್ಕೇ ನಾಲ್ಕು ತಿಂಗಳಿಗೆ ಕಾಲಿವುಡ್ ಲೇಡಿ ಸೂಪರ್ ಸ್ಟಾರ್ ನಯನತಾರಾ ಹಾಗು ನಿರ್ದೇಶಕ ವಿಘ್ನೇಶ್ ಶಿವನ್ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಬಾಡಿಗೆ ತಾಯಿಯ ಮೂಲಕ ಅವಳಿ ಮಕ್ಕಳಿಗೆ ವಿಘ್ನೇಶ್ ಶಿವನ್ ಹಾಗೂ ನಯನತಾರಾ ದಂಪತಿ ಪಾಲಕರಾಗಿದ್ದಾರೆ. ಕಳೆದ ಕೆಲ ತಿಂಗಳ ಹಿಂದಷ್ಟೇ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದ ವಿಘ್ನೇಶ್ ಶಿವನ್ ನಯನತಾರ ನನ್ನ ಮಕ್ಕಳ ತಾಯಿಯಾಗಲಿದ್ದಾರೆ ಎಂದು ಬರೆದುಕೊಂಡಿದ್ದರು. ಆ ಬಳಿಕ ಜೂನ್ 9ರಂದು ಮಹಾಬಲೀಪುರಂನ ರೆಸಾರ್ಟ್ ಒಂದಲ್ಲಿ ಈ ಜೋಡಿ ಸಾಕಷ್ಟು ಅದ್ದೂರಿಯಾಗಿ […]readmore
ಬೆಂಗಳೂರು: ಸ್ಯಾಂಡಲ್ವುಡ್ನ ಹಿರಿಯ ನಟ ಲೋಹಿತಾಶ್ವ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಅವರನ್ನು ಬೆಂಗಳೂರಿನ ಸಾಗರ್ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಮಾರಸ್ವಾಮಿ ಲೇಔಟ್ ನಲ್ಲಿರುವ ಸಾಗರ್ ಅಪೋಲೋ ಆಸ್ಪತ್ರೆಗೆ ದಾಖಲಿಸಿದ್ದು ತೀವ್ರ ನಿಗಾ ಘಟಕದಲ್ಲಿ ಲೋಹಿತಾಶ್ವ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಲೋಹಿತಾಶ್ವ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ನಟ ಲೋಹಿತಾಶ್ವ ಖ್ಯಾತ ಖಳ ನಟ ಶರತ್ ಲೋಹಿತಾಶ್ವ ಅವರ ತಂದೆಯಾಗಿದ್ದು ಲೋಹಿತಾಶ್ವ ಕನ್ನಡದ ಸಾಕಷ್ಟು ಸಿನಿಮಾಗಳಿಗೆ ಬಣ್ಣ ಹಚ್ಚಿದ್ದಾರೆ.readmore
